<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>guidelines Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/guidelines/feed/" rel="self" type="application/rss+xml" />
	<link>https://www.justkannada.in/tag/guidelines/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 16 Jun 2026 07:33:04 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>guidelines Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/guidelines/</link>
	<width>32</width>
	<height>32</height>
</image> 
	<item>
		<title>ನೀಟ್ ಮರು ಪರೀಕ್ಷೆ:  ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ನಿರ್ದೇಶನ</title>
		<link>https://www.justkannada.in/neet-mandya-dc-guidelines/</link>
		
		<dc:creator><![CDATA[prashanth]]></dc:creator>
		<pubDate>Tue, 16 Jun 2026 07:33:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[DC]]></category>
		<category><![CDATA[guidelines]]></category>
		<category><![CDATA[mandya]]></category>
		<category><![CDATA[neet]]></category>
		<category><![CDATA[re-examination]]></category>
		<guid isPermaLink="false">https://www.justkannada.in/?p=156110</guid>

					<description><![CDATA[<p>ಮಂಡ್ಯ,ಜೂನ್,16,2026 (www.justkannada.in): ನೀಟ್ ಮರು ಪರೀಕ್ಷೆಯು ಜೂನ್ 21ರಂದು  ನಡೆಯಲಿದ್ದು, ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಪಾರದರ್ಶಕ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ ಅವರು ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿಸಿ ಡಾ.ಕುಮಾರ, ಜಿಲ್ಲೆಯಲ್ಲಿ ನಡೆಯುವ ನೀಟ್ ಪರೀಕ್ಷೆಗೆ 1958 ವಿದ್ಯಾರ್ಥಿಗಳು ಹಾಜರಾಗಲಿದ್ದು, 4 ಪರೀಕ್ಷೆ ಕೇಂದ್ರಗಳಾದ ಪಿ. ಇ.ಎಸ್ ಇಂಜಿನಿಯರಿಂಗ್ ಕಾಲೇಜು  ಮಂಡ್ಯ, ಪಿ.ಇ.ಎಸ್ ವಿಜ್ಞಾನ [&#8230;]</p>
<p>The post <a href="https://www.justkannada.in/neet-mandya-dc-guidelines/">ನೀಟ್ ಮರು ಪರೀಕ್ಷೆ:  ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ನಿರ್ದೇಶನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಜೂನ್,16,2026 (<a href="http://www.justkannada.in">www.justkannada.in</a>):</strong> ನೀಟ್ ಮರು ಪರೀಕ್ಷೆಯು ಜೂನ್ 21ರಂದು  ನಡೆಯಲಿದ್ದು, ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಪಾರದರ್ಶಕ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ ಅವರು ನಿರ್ದೇಶನ ನೀಡಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿಸಿ ಡಾ.ಕುಮಾರ, ಜಿಲ್ಲೆಯಲ್ಲಿ ನಡೆಯುವ ನೀಟ್ ಪರೀಕ್ಷೆಗೆ 1958 ವಿದ್ಯಾರ್ಥಿಗಳು ಹಾಜರಾಗಲಿದ್ದು, 4 ಪರೀಕ್ಷೆ ಕೇಂದ್ರಗಳಾದ ಪಿ. ಇ.ಎಸ್ ಇಂಜಿನಿಯರಿಂಗ್ ಕಾಲೇಜು  ಮಂಡ್ಯ, ಪಿ.ಇ.ಎಸ್ ವಿಜ್ಞಾನ ಕಲಾ ಮತ್ತು ವಾಣಿಜ್ಯ ಕಾಲೇಜು ಮಂಡ್ಯ, ಸರ್ಕಾರಿ ಮಹಿಳಾ ಕಾಲೇಜು ಮಂಡ್ಯ ಹಾಗೂ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು( ಕಲ್ಲು ಕಟ್ಟಡ) ಮಂಡ್ಯ ಈ ಪರೀಕ್ಷಾ ಕೇಂದ್ರಗಳಲ್ಲಿ  ನೀಟ್ ಪರೀಕ್ಷೆ ನಡೆಯಲ್ಲಿದೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಪರೀಕ್ಷೆ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದಂತಹ ಮೂಲಸೌಕರ್ಯ ವ್ಯವಸ್ಥೆಗಳು ಇರುವುದನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮುಂಚಿತವಾಗಿ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು ಎಂದರು.<img decoding="async" class="aligncenter size-full wp-image-104312" src="https://www.justkannada.in/wp-content/uploads/2023/03/cet.jpg" alt="" width="500" height="278" srcset="https://www.justkannada.in/wp-content/uploads/2023/03/cet.jpg 500w, https://www.justkannada.in/wp-content/uploads/2023/03/cet-300x167.jpg 300w" sizes="(max-width: 500px) 100vw, 500px" /></p>
<p>ಪರೀಕ್ಷೆ ನಡೆಯುವ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.</p>
<p>ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯಲ್ಲಿ ಯಾವುದೇ ಲೋಪಗಳು ಕಂಡುಬಾರದಂತೆ, ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ಹಾಗೂ ವಿವಿಧ ಇಲಾಖೆಗಳು ಪರೀಕ್ಷೆಯ ಅವಧಿಯಲ್ಲಿ ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಶೋಭಾರಾಣಿ, ಮಂಡ್ಯ ಉಪ ವಿಭಾಗಧಿಕಾರಿ ಶಿವಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: NEET, re-examination, Mandya, DC, guidelines</p>
<p>The post <a href="https://www.justkannada.in/neet-mandya-dc-guidelines/">ನೀಟ್ ಮರು ಪರೀಕ್ಷೆ:  ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ನಿರ್ದೇಶನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇನ್ಮುಂದೆ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ: ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ</title>
		<link>https://www.justkannada.in/minister-ishwar-khandre-30/</link>
		
		<dc:creator><![CDATA[prashanth]]></dc:creator>
		<pubDate>Fri, 17 Apr 2026 05:54:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[guidelines]]></category>
		<category><![CDATA[Ishwar Khandre]]></category>
		<category><![CDATA[minister]]></category>
		<category><![CDATA[treks]]></category>
		<guid isPermaLink="false">https://www.justkannada.in/?p=153825</guid>

					<description><![CDATA[<p>ಬೆಂಗಳೂರು,ಏಪ್ರಿಲ್,17,2026 (www.justkannada.in) : ಇತ್ತೀಚೆಗೆ ಚಿಕ್ಕಮಗಳೂರಿನ ಮಾಣಿಕ್ಯಧಾರದ ಬಳಿಕ ಕೇರಳ ಮೂಲದ ಬಾಲಕಿ ಸಾವನ್ನಪ್ಪಿದ ಬೆನ್ನಲ್ಲೆ ಇದೀಗ ಇನ್ಮುಂದೆ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ರಾಜ್ಯದಲ್ಲಿ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ ಮೊಟ್ಟ ಮೊದಲ ಬಾರಿಗೆ ಚಾರಣಕ್ಕೆ ಹೋಗುವವರಿಗೆ ಎಸ್ ಒಪಿ ರಿಲೀಸ್ ಮಾಡಲಾಗಿದೆ. ಬಳಿಕ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ  ರಾಜ್ಯದಲ್ಲಿ 44 ಚಾರಣ ಪಾಯಿಂಟ್ ಗಳು ಚಾಲ್ತಿಯಲ್ಲಿವೆ. ಕಡ್ಡಾಯವಾಗಿ ಎಸ್ ಒಪಿ ಜಾರಿಗೆ ತರಲು [&#8230;]</p>
<p>The post <a href="https://www.justkannada.in/minister-ishwar-khandre-30/">ಇನ್ಮುಂದೆ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ: ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,17,2026 (www.justkannada.in) :</strong> ಇತ್ತೀಚೆಗೆ ಚಿಕ್ಕಮಗಳೂರಿನ ಮಾಣಿಕ್ಯಧಾರದ ಬಳಿಕ ಕೇರಳ ಮೂಲದ ಬಾಲಕಿ ಸಾವನ್ನಪ್ಪಿದ ಬೆನ್ನಲ್ಲೆ ಇದೀಗ ಇನ್ಮುಂದೆ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ರಾಜ್ಯದಲ್ಲಿ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ ಮೊಟ್ಟ ಮೊದಲ ಬಾರಿಗೆ ಚಾರಣಕ್ಕೆ ಹೋಗುವವರಿಗೆ ಎಸ್ ಒಪಿ ರಿಲೀಸ್ ಮಾಡಲಾಗಿದೆ.</p>
<p>ಬಳಿಕ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ  ರಾಜ್ಯದಲ್ಲಿ 44 ಚಾರಣ ಪಾಯಿಂಟ್ ಗಳು ಚಾಲ್ತಿಯಲ್ಲಿವೆ. ಕಡ್ಡಾಯವಾಗಿ ಎಸ್ ಒಪಿ ಜಾರಿಗೆ ತರಲು ಸೂಚನೆ ನೀಡಿದ್ದೇವೆ. ಚಾರಣಿಗರ ಮೊಬೈಲ ಗೆ ಟ್ರ್ಯಾಕಿಂಗ್ ಆಫ್ ಅಳವಡಿಕೆ ಮಾಡುತ್ತೇವೆ.   10 ಚಾರಣಿಗರಿಗೆ ಒಬ್ಬ ಗೈಡ್ ಲೈನ್ ಇರಬೇಕು.  ಚಾರಣಕ್ಕೆ ಹೋಗುವವರು ಆನ್ ಲೈನ್ ನಲ್ಲಿ ಬುಕ್ ಮಾಡಬೇಕು.   10 ಮಂದಿಗೆ ಒಬ್ಬ ಗೈಡ್ ಲೈನ್  ಕೊಟ್ಟ ನಂತರ ಚಾರಣಕ್ಕೆ ಅವಕಾಶ ನೀಡಲಾಗುತ್ತದೆ.  ಒಮ್ಮೆ 150 ಮಂದಿ ಮಾತ್ರ ಚಾರಣಕ್ಕೆ ಹೋಗಬೇಕು.  150 ಮಂದಿಯ ತಂಡ ವಾಪಸ್  ಬಂದ ಬಳಿಕ ಮತ್ತೊಂದು ತಂಡ ಹೋಗಬೇಕು.   ಕಟ್ಟುನಿಟ್ಟಾಗಿ ಎಸ್ ಒಪಿ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.</p>
<p>Key words: Guidelines, treks, Minister, Ishwar Khandre</p>
<p>The post <a href="https://www.justkannada.in/minister-ishwar-khandre-30/">ಇನ್ಮುಂದೆ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ: ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೊಸ ವರ್ಷಾಚರಣೆಗೆ ಮಾರ್ಗಸೂಚಿ : ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ, ಡಿಜೆ ಬಳಕೆಗೆ ನಿರ್ಬಂಧ</title>
		<link>https://www.justkannada.in/new-year-celebration-3/</link>
		
		<dc:creator><![CDATA[mahesh]]></dc:creator>
		<pubDate>Mon, 29 Dec 2025 14:40:33 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamundi Hills banned]]></category>
		<category><![CDATA[DJ use restricted.]]></category>
		<category><![CDATA[for New Year celebrations]]></category>
		<category><![CDATA[guidelines]]></category>
		<category><![CDATA[in Mysore Entry]]></category>
		<guid isPermaLink="false">https://www.justkannada.in/?p=149637</guid>

					<description><![CDATA[<p>&#160; ಮೈಸೂರು, ಡಿ.೨೯,೨೦೨೫: ನಗರದ ಚಾಮುಂಡಿ ಬೆಟ್ಟಕ್ಕೆ ಡಿ. 31ರ ರಾತ್ರಿ 7 ಗಂಟೆಯಿಂದ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ ಪೊಲೀಸ್‌ ಆಯುಕ್ತರು. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಆಯುಕ್ತೆ ಸೀಮಾ ಲಟ್ಕರ್‌ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದ ರೀತಿ‌ ಬಿಗಿ ಪೊಲೀಸ್ ಬಂದೋಬಸ್ತ್ . ಹೊಸ ವರ್ಷಚರಣೆಗೆ 4 ಡಿಸಿಪಿ, 7ಎಸಿಪಿ, 29 ಇನ್ಸ್ಪೆಕ್ಟರ್ , 55 ಸಬ್ ಇನ್ಸ್ಪೆಕ್ಟರ್,103 ಎಎಸ್ಐ,761 ಪುರುಷ ಪೊಲೀಸ್, 154 ಮಹಿಳಾ ಪೊಲೀಸರು ಸೇರಿದಂತೆ [&#8230;]</p>
<p>The post <a href="https://www.justkannada.in/new-year-celebration-3/">ಹೊಸ ವರ್ಷಾಚರಣೆಗೆ ಮಾರ್ಗಸೂಚಿ : ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ, ಡಿಜೆ ಬಳಕೆಗೆ ನಿರ್ಬಂಧ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಡಿ.೨೯,೨೦೨೫: ನಗರದ ಚಾಮುಂಡಿ ಬೆಟ್ಟಕ್ಕೆ ಡಿ. 31ರ ರಾತ್ರಿ 7 ಗಂಟೆಯಿಂದ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ ಪೊಲೀಸ್‌ ಆಯುಕ್ತರು.</p>
<p>ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಆಯುಕ್ತೆ ಸೀಮಾ ಲಟ್ಕರ್‌ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದಾರೆ.</p>
<p>ಯಾವುದೇ ಅಹಿತಕರ ಘಟನೆಗಳು ನಡೆಯದ ರೀತಿ‌ ಬಿಗಿ ಪೊಲೀಸ್ ಬಂದೋಬಸ್ತ್ . ಹೊಸ ವರ್ಷಚರಣೆಗೆ 4 ಡಿಸಿಪಿ, 7ಎಸಿಪಿ, 29 ಇನ್ಸ್ಪೆಕ್ಟರ್ , 55 ಸಬ್ ಇನ್ಸ್ಪೆಕ್ಟರ್,103 ಎಎಸ್ಐ,761 ಪುರುಷ ಪೊಲೀಸ್, 154 ಮಹಿಳಾ ಪೊಲೀಸರು ಸೇರಿದಂತೆ ಒಟ್ಟು 1113 ಪೊಲೀಸರ ನಿಯೋಜನೆ.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೆಚ್ಚು ಜನ ಸೇರುವ ಸ್ಥಳಗಳಲ್ಲಿ  ಹೆಚ್ಚಿನ ಸಿಸಿ ಕ್ಯಾಮರಾ ಆಳವಡಿಸಿವುದಕ್ಕೆ ಮುಂದಾದ ಖಾಕಿ ಪಡೆ. ನಗರ ವ್ಯಾಪ್ತಿಯಲ್ಲಿ ಡಿಜೆ ಬಳಸವುದಕ್ಕೆ ನಿರ್ಬಂಧ ಹೇರಿಕೆ. ಡಿ. 31 ರಾತ್ರಿಯಿಂದ ಬೆಳಗ್ಗೆಯ ವರೆಗೂ ಚಾಮುಂಡಿ ಪಡೆ, 112 ಸೇರಿಂದತೆ ನಗರದ ಎಲ್ಲಾ ಕಡೆ ಪೊಲೀಸರ ಗಸ್ತು. ಮುನ್ನೆಚ್ಚರಿಕೆ ಕ್ರಮವಾಗಿ ನಗರ ಹೊರ ಭಾಗದಲ್ಲಿ ಎಲ್ಲಾ ಕಡೆ ಚೆಕ್ ಪೊಸ್ಟ್ ನಿರ್ಮಾಣ.</p>
<p><strong>ಪೊಲೀಸರ ಮಾರ್ಗಸೂಚಿ ಹೀಗಿದೆ..</strong></p>
<p><img loading="lazy" decoding="async" class="alignnone size-full wp-image-148905" src="https://www.justkannada.in/wp-content/uploads/2025/12/police-2.jpg" alt="" width="500" height="291" srcset="https://www.justkannada.in/wp-content/uploads/2025/12/police-2.jpg 500w, https://www.justkannada.in/wp-content/uploads/2025/12/police-2-300x175.jpg 300w, https://www.justkannada.in/wp-content/uploads/2025/12/police-2-150x87.jpg 150w" sizes="auto, (max-width: 500px) 100vw, 500px" /></p>
<ol>
<li>ಸಾರ್ವಜನಿಕರಿಗೆ ಶುಭ ಕೋರುವ ನೆಪದಲ್ಲಿ ಕೀಟಲೆ/ಅಸಭ್ಯವಾಗಿ ವರ್ತಿಸುವುದನ್ನು ತಡೆಯಲು ನಗರದಲ್ಲಿ ಪೊಲೀಸ್ ನಿರೀಕ್ಷಕರುಗಳು ನೇತೃತ್ವದಲ್ಲಿ ಠಾಣಾವಾರು ವಿಶೇಷ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದೆ. ಸದರಿ ಕಾರ್ಯಪಡೆಗಳು ಕಾರ್ಯನಿರತವಾಗಿದ್ದು ಅಂತವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು.</li>
<li>ಮಹಿಳೆಯರ ರಕ್ಷಣೆಯ ಹಿತದೃಷ್ಟಿಯಿಂದ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ಸುರಕ್ಷತಾ ಪಿಂಕ್ ಗರುಡಾ ( ಚಾಮುಂಡಿ ಪಡೆ) ಪಡೆಗಳು ಗಸ್ತಿನಲ್ಲಿರುತ್ತದೆ.</li>
<li>ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶ್ವಾನದಳ ಮತ್ತು ವಿಧ್ವಂಸಕ ಕೃತ್ಯ ತಡೆ ತಂಡದಿಂದ ತಪಾಸಣೆ ನಡೆಸಲಾಗುವುದು.</li>
<li>ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ ಕಣ್ಣಾವಲು ನಿರ್ವಹಿಸಲಾಗುತ್ತದೆ.</li>
<li>ಹೊಸವರ್ಷಾಚರಣೆ ನೆಪದಲ್ಲಿ ವಾಹನಗಳನ್ನು ವೀಲಿಂಗ್ (wheeling) ಮತ್ತು ಡ್ರಾಗ್ ರೇಸ್ ಮಾಡುವುದನ್ನು ಹಾಗೂ ಕರ್ಕಶ ಶಬ್ದ ಮಾಡುವುದನ್ನು ತಡೆಗಟ್ಟಲು ಸಂಚಾರ ಪೊಲೀಸರು ಒಳಗೊಂಡ ಕ್ಷಿಪ್ರ ಕಾರ್ಯಪಡೆಗಳನ್ನು ರಚಿಸಲಾಗಿದೆ. ಸದರಿ ಪಡೆಯು ಮೈಸೂರು ನಗರದ ಎಲ್ಲಾ ಪ್ರದೇಶಗಳಲ್ಲಿ ಚಾಲನೆಯಲ್ಲಿರುತ್ತದೆ, ಕಾನೂನು ಉಲ್ಲಂಘಿಸುವ ಪ್ರಕರಣಗಳು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು.</li>
<li>ಅತಿವೇಗವಾಗಿ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವವರ ಮತ್ತು ಕಿಡಿಗೇಡಿಗಳ ಬಗ್ಗೆ ನಿಗಾವಹಿಸಲು ಚೆಕ್‌ ಪೋಸ್ಟ್‌ಗಳನ್ನು ತೆರೆಯುವುದರ ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 112 ವಾಹನ, ಹೈವೇ ಪೆಟ್ರೋಲ್ ವಾಹನಗಳನ್ನು ನಿಯೋಜಿಸಲಾಗುವುದು.</li>
<li>ಬಲೂನ್‌ ಗಳಿಗೆ ಅನಧಿಕೃತ ಸಿಲಿಂಡರ್‌ಗಳ ಮೂಲಕ ಯಾವುದೇ ರೀತಿಯ ಅನಿಲ ತುಂಬಿ ಮಾರಾಟ ಮಾಡುವುದು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.</li>
<li>ಡಿ.ಜೆ. ಬಳಸುವುದನ್ನು ನಿಷೇಧಿಸಲಾಗಿದ್ದು, ಈ ಬಗ್ಗೆ ಶಬ್ದ ಮಾಲಿನ್ಯ ಪರಿಶೀಲನಾ ಅಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದ್ದು, ಡಿ.ಜೆ. ಬಳಸುವುದು ಕಂಡು ಬಂದರೆ ಕೂಡಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.</li>
<li>ಮೈಸೂರು ನಗರದಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಸರಹದ್ದಿನ ಆಗಮನ ಮತ್ತು ನಿರ್ಗಮನ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆದು ನಿಗಾವಹಿಸಲಾಗಿದೆ.</li>
<li>ಸಾರ್ವಜನಿಕರು ಯಾವುದೇ ರೀತಿಯ ತೊಂದರೆಯಾದಲ್ಲಿ ಪೊಲೀಸ್ ಕಂಟ್ರೋಲ್ ರೂಂ. ದೂರವಾಣಿ ಸಂಖ್ಯೆ: 0821-2418339 ಅಥವಾ 0821-2418139 ಅಥವಾ 112 ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ.</li>
</ol>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>31-12-2025 ರ ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯನ್ನು ಆಚರಿಸುವ ನಗರದ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹೋಂ ಸ್ಟೇ, ಸರ್ವಿಸ್ ಅಪಾರ್ಟ್‌ಮೆಂಟ್, ಅಪಾರ್ಟ್‌ಮೆಂಟ್ ಅಸೋಸಿಯೇಷನ್, ಮಾಲ್ಸ್ ಮತ್ತು ಸಂಘಸಂಸ್ಥೆಗಳು ಪೊಲೀಸ್ ಆಯುಕ್ತರ ಕಛೇರಿಯಿಂದ ಅನುಮತಿ ಪಡೆದು ಮಧ್ಯರಾತ್ರಿ 01-00 ಗಂಟೆಯೊಳಗೆ ಕಡ್ಡಾಯವಾಗಿ ಮುಕ್ತಾಯಗೊಳಿಸುವುದು. ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸುವುದು.</p>
<p><img loading="lazy" decoding="async" class="alignnone size-full wp-image-127740" src="https://www.justkannada.in/wp-content/uploads/2024/08/mandya-police.jpg" alt="" width="500" height="281" srcset="https://www.justkannada.in/wp-content/uploads/2024/08/mandya-police.jpg 500w, https://www.justkannada.in/wp-content/uploads/2024/08/mandya-police-300x169.jpg 300w, https://www.justkannada.in/wp-content/uploads/2024/08/mandya-police-150x84.jpg 150w" sizes="auto, (max-width: 500px) 100vw, 500px" /></p>
<p>ಯಾವುದೇ ಪ್ರಕರಣಗಳು ಸಂಭವಿಸಿದ್ದಲ್ಲಿ ಸದರಿ ಪ್ರಕರಣಗಳನ್ನು ಪತ್ತೆ ಹಚ್ಚಲು ಸಹಕಾರಿಯಾಗುವಂತೆ ಸಾರ್ವಜನಿಕರು ತಮ್ಮ ಅಂಗಡಿ, ಮನೆ ಇತ್ಯಾದಿ ಸ್ಥಳಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದು.</p>
<p>ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ತಮ್ಮ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರುವಂತೆ ಧ್ವನಿವರ್ಧಕವನ್ನು ಅಳವಡಿಸಿಕೊಂಡು ಶಬ್ದವು ಕಾನೂನಿನ ಅಡಿಯಲ್ಲಿ ನಿರ್ಧಿಷ್ಟ ಪಡಿಸಿರುವ ಡೆಸಿಬಲ್‌ಗಳನ್ನು ಮೀರದಂತೆ ಕಡಿಮೆ ಧ್ವನಿಯಲ್ಲಿ ಕಾರ್ಯಕ್ರಮವನ್ನು ನಡೆಸಬೇಕು ಹಾಗೂ ಪೊಲೀಸ್ ಅನುಮತಿ ಪಡೆಯಬೇಕು.</p>
<p>ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ, ಮಾದಕ ವಸ್ತುಗಳ ಸೇವನೆ, ಜೂಜಾಟ ನಡೆಸುವುದನ್ನು ನಿಷೇಧಿಸಿದ್ದು, ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರನ್ನು ಬಲವಂತವಾಗಿ ನಿಲ್ಲಿಸಿ ಅವರ ಇಚ್ಚೆಗೆ ವಿರುದ್ಧವಾಗಿ ಶುಭ ಕೋರುವ ನೆಪದಲ್ಲಿ ಕಿರಿಕಿರಿ ಉಂಟುಮಾಡಿದ್ದಲ್ಲಿ ಕಾನೂನು ರೀತ್ಯಾ ಕ್ರಮ ವಹಿಸಲಾಗುವುದು.</p>
<p><img loading="lazy" decoding="async" class="alignnone size-full wp-image-110688" src="https://www.justkannada.in/wp-content/uploads/2023/08/mysore-palace.jpg" alt="" width="500" height="194" srcset="https://www.justkannada.in/wp-content/uploads/2023/08/mysore-palace.jpg 500w, https://www.justkannada.in/wp-content/uploads/2023/08/mysore-palace-300x116.jpg 300w" sizes="auto, (max-width: 500px) 100vw, 500px" /></p>
<p>ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ದಿನಾಂಕ 31-12-2025 ರ ರಾತ್ರಿ 7-00 ಗಂಟೆ ನಂತರ ಚಾಮುಂಡಿಬೆಟ್ಟಕ್ಕೆ ಉತ್ತನಹಳ್ಳಿ ಕ್ರಾಸ್ ಗೇಟ್, ದೈವಿವನ ಗೇಟ್, ಚಾಮುಂಡಿಬೆಟ್ಟ ಪಾದದ ಗೇಟ್, ಲಲಿತಮಹಲ್ ಗೇಟ್ ಮೂಲಕ ಪ್ರವೇಶವನ್ನು ನಿರ್ಭಂದಿಸಲಾಗಿದೆ. ತಾವರೆಕಟ್ಟೆ ಗೇಟ್ ಮುಖಾಂತರ ದಿನಾಂಕ 31-12-2025 ರ ರಾತ್ರಿ 8-00 ಗಂಟೆ ನಂತರ ಪ್ರವೇಶವನ್ನು ನಿರ್ಭಂಧಿಸಲಾಗಿದೆ. ಚಾಮುಂಡಿಬೆಟ್ಟಕ್ಕೆ ಯಾವುದೇ ರೀತಿಯ ಊಟ, ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ರಾತ್ರಿ 9-00 ಗಂಟೆ ನಂತರ ಸಾರ್ವಜನಿಕರು ಚಾಮುಂಡಿಬೆಟ್ಟದಿಂದ ವಾಪಸ್ಸು ಬರುವಂತೆ ಸೂಚಿಸಲಾಗಿದೆ. ಇದು ಚಾಮುಂಡಿ ಬೆಟ್ಟದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ವಾಸಿಸುವವರಿಗೆ ಅನ್ವಯಿಸುವುದಿಲ್ಲ. ಚಾಮುಂಡಿಬೆಟ್ಟದಿಂದ ರಾತ್ರಿ 9-00 ಗಂಟೆ ನಂತರ ವಾಪಸ್ಸು ಬರುವವರು ತಾವರೆಕಟ್ಟೆ ದ್ವಾರದ ಮುಖಾಂತರ ಬರುವಂತೆ ಸೂಚಿಸಲಾಗಿದೆ.</p>
<p>ನಿರ್ಜನ ರಸ್ತೆ/ಪ್ರದೇಶ, ಪಾರ್ಕ್, ರಿಂಗ್ ರಸ್ತೆ, ಹೈವೇ ರಸ್ತೆಗಳಲ್ಲಿ ವಾಹನಗಳಲ್ಲಿ ಕುಳಿತು ಮದ್ಯಪಾನ ಮಾಡುವವರ ವಿರುದ್ಧ ಕಾನೂನು ರೀತ್ಯಾ ಪ್ರಕರಣ ದಾಖಲು ಮಾಡಲಾಗುವುದು.</p>
<p>ಸೋಷಿಯಾಲ್ ಮೀಡಿಯಾ ಮೂಲಕ ಹೊಸ ವರ್ಷಾಚರಣೆ ಸಂಬಂಧ ಸಾರ್ವಜನಿಕರಿಗೆ ಆತಂಕ ಮೂಡಿಸುವ ಪೋಸ್ಟ್‌ಗಳನ್ನು ಮತ್ತು ಅಪಪ್ರಚಾರ ಪೋಸ್ಟ್‌ಗಳನ್ನು ಹಾಕಿದ್ದಲ್ಲಿ ಸದರಿಯವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು.</p>
<p>ಹೊಸ ವರ್ಷದ ಸಂಬಂಧ ಸಾಮಾಜಿಕ ಜಾಲಾತಾಣಗಳ ಮೂಲಕ ಉಡುಗೊರೆ ನೀಡುವ / ಉಡುಗೊರೆ ಬಂದಿರುವ ನೆಪದಲ್ಲಿ ಕಳುಹಿಸುವ ಯಾವುದೇ ಅಪರಿಚಿತ ಲಿಂಕ್ ಗಳಿಗೆ ಮರುಳಾಗಿ ಡಿಜಿಟಲ್ ಮೋಸಕ್ಕೆ ಒಳಗಾಗದಂತೆ ಎಚ್ಚರಿಕೆ ವಹಿಸುವುದು.</p>
<p>key words: Guidelines, for New Year celebrations, in Mysore Entry, Chamundi Hills banned, DJ use restricted.</p>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>SUMMARY:</strong></p>
<p>Guidelines for New Year celebrations in Mysore: Entry to Chamundi Hills banned, DJ use restricted</p>
<p><img loading="lazy" decoding="async" class="alignnone size-full wp-image-98596" src="https://www.justkannada.in/wp-content/uploads/2022/10/chamundi-hill.jpg" alt="" width="500" height="333" srcset="https://www.justkannada.in/wp-content/uploads/2022/10/chamundi-hill.jpg 500w, https://www.justkannada.in/wp-content/uploads/2022/10/chamundi-hill-300x200.jpg 300w" sizes="auto, (max-width: 500px) 100vw, 500px" /></p>
<p>Tight police deployment to prevent any untoward incident. A total of 1113 police personnel including 4 DCPs, 7 ACPs, 29 Inspectors, 55 Sub Inspectors, 103 ASIs, 761 male policemen, 154 female policemen have been deployed for the New Year celebrations.</p>
<p>Khaki force to install more CCTV cameras in crowded places. Restriction on using DJs in the city limits. Chamundi force, 112 personnel patrolling all over the city from the night of 31st till morning. Check posts constructed everywhere on the outskirts of the city as a precautionary measure.</p>
<p>The post <a href="https://www.justkannada.in/new-year-celebration-3/">ಹೊಸ ವರ್ಷಾಚರಣೆಗೆ ಮಾರ್ಗಸೂಚಿ : ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ, ಡಿಜೆ ಬಳಕೆಗೆ ನಿರ್ಬಂಧ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾರ್ವಜನಿಕ ಗಣೇಶೋತ್ಸವಕ್ಕೆ ಸೆಸ್ಕ್‌ನಿಂದ ಸುರಕ್ಷತಾ ಮಾರ್ಗಸೂಚಿ: ಈ ಮುನ್ನೆಚ್ಚರಿಕೆಗಳು ಅಗತ್ಯ</title>
		<link>https://www.justkannada.in/cesc-ganesh-festival/</link>
		
		<dc:creator><![CDATA[prashanth]]></dc:creator>
		<pubDate>Mon, 25 Aug 2025 08:05:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[CESC]]></category>
		<category><![CDATA[Ganesh festival]]></category>
		<category><![CDATA[guidelines]]></category>
		<category><![CDATA[safety]]></category>
		<guid isPermaLink="false">https://www.justkannada.in/?p=144477</guid>

					<description><![CDATA[<p>ಮೈಸೂರು, ಆಗಸ್ಟ್,25, 2025 (www.justkannada.in):  ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ವತಿಯಿಂದ ಸಾರ್ವಜನಿಕ ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂಘ-ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದೆ. ಹಬ್ಬದ ಆಚರಣೆ ವೇಳೆ ಸಂಭ್ರಮದ ಜತೆಗೆ ಸುರಕ್ಷತೆಗೂ ಆದ್ಯತೆ ನೀಡಬೇಕಿದೆ. ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ನಡೆಸುವವರು ಸೂಕ್ತ ಮುನ್ನೆಚ್ಚರಿಕೆವಹಿಸಬೇಕಿದೆ. ಆ ಮೂಲಕ ಹಬ್ಬದ ಆಚರಣೆ ಸಂದರ್ಭದಲ್ಲಿ ಯಾವುದೇ ಅನಾಹುತಗಳು ಸಂಭವಿಸದಂತೆ [&#8230;]</p>
<p>The post <a href="https://www.justkannada.in/cesc-ganesh-festival/">ಸಾರ್ವಜನಿಕ ಗಣೇಶೋತ್ಸವಕ್ಕೆ ಸೆಸ್ಕ್‌ನಿಂದ ಸುರಕ್ಷತಾ ಮಾರ್ಗಸೂಚಿ: ಈ ಮುನ್ನೆಚ್ಚರಿಕೆಗಳು ಅಗತ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಆಗಸ್ಟ್,25, 2025 (<a href="http://www.justkannada.in">www.justkannada.in</a>):</strong>  ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ವತಿಯಿಂದ ಸಾರ್ವಜನಿಕ ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂಘ-ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದೆ. <img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹಬ್ಬದ ಆಚರಣೆ ವೇಳೆ ಸಂಭ್ರಮದ ಜತೆಗೆ ಸುರಕ್ಷತೆಗೂ ಆದ್ಯತೆ ನೀಡಬೇಕಿದೆ. ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ನಡೆಸುವವರು ಸೂಕ್ತ ಮುನ್ನೆಚ್ಚರಿಕೆವಹಿಸಬೇಕಿದೆ. ಆ ಮೂಲಕ ಹಬ್ಬದ ಆಚರಣೆ ಸಂದರ್ಭದಲ್ಲಿ ಯಾವುದೇ ಅನಾಹುತಗಳು ಸಂಭವಿಸದಂತೆ ನಿಗಾವಹಿಸಬೇಕಿದೆ.</p>
<p>ಆದ್ದರಿಂದ ಗಣೇಶೋತ್ಸವ ಆಚರಣೆಗೆ ಅನಧಿಕೃತವಾಗಿ ವಿದ್ಯುತ್ ಲೈನ್‌ ಗಳಿಗೆ ಹುಕ್ ಹಾಕಿ ಸಂಪರ್ಕ ಪಡೆಯದೆ, ಸೆಸ್ಕ್‌ ಉಪ ವಿಭಾಗೀಯ ಅಥವಾ ಶಾಖಾ ಕಚೇರಿಗೆ ತೆರಳಿ ಅನುಮತಿ ಪಡೆದು ಸಂಪರ್ಕ ಪಡೆಯಬೇಕು. ಗಣಪತಿ ಪ್ರತಿಷ್ಠಾಪಿಸುವ ಸ್ಥಳದ ಸುತ್ತಮುತ್ತ ಯಾವುದೇ ವಿದ್ಯುತ್ ಮಾರ್ಗಗಳು ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ವಿದ್ಯುತ್ ಲೈನ್‌ ಕೆಳಗೆ ಅಥವಾ ಅಕ್ಕಪಕ್ಕದಲ್ಲಿ ಗಣಪತಿ ಪೆಂಡಾಲ್/ಮಂಟಪಗಳನ್ನು ಹಾಕದೆ, ಸುರಕ್ಷತೆಯ ಅಂತರ ಕಾಯ್ದುಕೊಂಡು ಪೆಂಡಾಲ್/ಮಂಟಪಗಳನ್ನು ಹಾಕಬೇಕು.</p>
<p>ಮಳೆಗಾಲ ಇರುವುದರಿಂದ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕಿದ್ದು, ವಿದ್ಯುತ್ ಕಂಬಗಳು, ವಿದ್ಯುತ್ ಪರಿವರ್ತಕ(ಟಿ.ಸಿ)ಗಳಿಗೆ ಬ್ಯಾನರ್, ಫಲಕಗಳನ್ನು ಕಟ್ಟಬಾರದು. ಗಣೇಶನ ವಿಗ್ರಹ ವಿಸರ್ಜನೆ ವೇಳೆ ವಿದ್ಯುತ್ ತಂತಿಗಳಿಗೆ ತಾಗುವ ರೀತಿಯಲ್ಲಿ ಎತ್ತರದ ಧ್ವಜಗಳು, ಕಟೌಟ್‌ ಗಳನ್ನು ಕಟ್ಟಬಾರದು. ಗಣಪತಿ ವಿಸರ್ಜನಾ ಮೆರವಣೆಗೆ ನಡೆಯುವ ಬೀದಿಗಳಲ್ಲಿ ವಿದ್ಯುತ್ ಲೈನ್‌ಗಳ ಅಡಚಣೆ ಇದ್ದಲ್ಲಿ ಸಂಬಂಧಪಟ್ಟ ಸೆಸ್ಕ್‌ ಕಚೇರಿಯ ಗಮನಕ್ಕೆ ತಂದು, ವಿದ್ಯುತ್ ಪೂರೈಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕ್ರಮವಹಿಸಬೇಕಿದೆ. ವಿದ್ಯುತ್‌ ಸಂಬಂಧಿಸಿದ ಯಾವುದೇ ಸಹಾಯ ಅಥವಾ ಮಾಹಿತಿಗೆ 1912 ಸಂಪರ್ಕಿಸಬೇಕಿದೆ.</p>
<p>ಗ್ರಾಹಕರು ಹಾಗೂ ಸಾರ್ವಜನಿಕರ ಸೇವೆಗೆ ಸೆಸ್ಕ್‌ ಸದಾ ಸನ್ನದ್ಧವಿರಲಿದೆ. ಈ ನಿಟ್ಟಿನಲ್ಲಿ ಸುರಕ್ಷಿತವಾಗಿ ಗಣೇಶೋತ್ಸವ ಆಚರಿಸಲು ಗಣೇಶ ಮಂಡಳಿಗಳು ಸೆಸ್ಕ್‌ ವತಿಯಿಂದ ಅಗತ್ಯ ಸಹಕಾರ ಪಡೆದು ಸುರಕ್ಷಿತ ರೀತಿಯಲ್ಲಿ ಹಬ್ಬದ ಆಚರಣೆ ಮಾಡಬೇಕಿದೆ ಎಂದು ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>
<p>Key words: CESC, safety, guidelines , Ganesh festival</p>
<p>The post <a href="https://www.justkannada.in/cesc-ganesh-festival/">ಸಾರ್ವಜನಿಕ ಗಣೇಶೋತ್ಸವಕ್ಕೆ ಸೆಸ್ಕ್‌ನಿಂದ ಸುರಕ್ಷತಾ ಮಾರ್ಗಸೂಚಿ: ಈ ಮುನ್ನೆಚ್ಚರಿಕೆಗಳು ಅಗತ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ: ಕೇಂದ್ರದ ಮಾರ್ಗಸೂಚಿ ಅನ್ವಯ ತೆಗೆದುಕೊಂಡ ನಿರ್ಧಾರ-ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-193/</link>
		
		<dc:creator><![CDATA[prashanth]]></dc:creator>
		<pubDate>Sat, 21 Jun 2025 05:40:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Centre.]]></category>
		<category><![CDATA[CM Siddaramaiah]]></category>
		<category><![CDATA[Decision]]></category>
		<category><![CDATA[guidelines]]></category>
		<category><![CDATA[housing]]></category>
		<category><![CDATA[Minorities]]></category>
		<category><![CDATA[Reservation]]></category>
		<guid isPermaLink="false">https://www.justkannada.in/?p=141773</guid>

					<description><![CDATA[<p>ಬೆಂಗಳೂರು,ಜೂನ್,21,2025 (www.justkannada.in): ರಾಜ್ಯ ಸರ್ಕಾರ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳ ಮೀಸಲಾತಿಯನ್ನ 10% ರಿಂದ 15%ಕ್ಕೆ ಏರಿಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು ಈ ಕುರಿತು ಬಿಜೆಪಿ ಸೇರಿ ರಾಜ್ಯಾದ್ಯಂತ ಕೇಳಿಬಂದಿರುವ ಟೀಕೆಗಳ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಪಸಂಖ್ಯಾತರಿಗೆ ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದುಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ತೆಗೆದುಕೊಂಡ ನಿರ್ಧಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ [&#8230;]</p>
<p>The post <a href="https://www.justkannada.in/cm-siddaramaiah-193/">ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ: ಕೇಂದ್ರದ ಮಾರ್ಗಸೂಚಿ ಅನ್ವಯ ತೆಗೆದುಕೊಂಡ ನಿರ್ಧಾರ-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,21,2025 (<a href="http://www.justkannada.in">www.justkannada.in</a>):</strong> ರಾಜ್ಯ ಸರ್ಕಾರ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳ ಮೀಸಲಾತಿಯನ್ನ 10% ರಿಂದ 15%ಕ್ಕೆ ಏರಿಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು ಈ ಕುರಿತು ಬಿಜೆಪಿ ಸೇರಿ ರಾಜ್ಯಾದ್ಯಂತ ಕೇಳಿಬಂದಿರುವ ಟೀಕೆಗಳ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅಲ್ಪಸಂಖ್ಯಾತರಿಗೆ ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದುಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ತೆಗೆದುಕೊಂಡ ನಿರ್ಧಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.</p>
<p>ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್‌, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ಒಂದು ನಿರ್ಣಯವನ್ನು ಕೈಗೊಂಡಿದೆ.  ಇದು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ (2019)ರ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನವಾಗಿದೆ.</p>
<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಸ್ಥೆಗಳಲ್ಲಿ ಸಾಧ್ಯವಿರುವ ಎಲ್ಲ ಅವಕಾಶಗಳನ್ನು ಬಳಕೆ ಮಾಡಿಕೊಂಡು ಅಲ್ಪಸಂಖ್ಯಾತ ಸಮುದಾಯಗಳಿಗೆ 15% ಭೌತಿಕ ಹಾಗೂ ಆರ್ಥಿಕ ಗುರಿಯನ್ನು ಸಾಧಿಸಬೇಕೆಂದು ಈ ಕಾರ್ಯಕ್ರಮ ಸ್ಪಷ್ಟವಾಗಿ ನಿರ್ದೇಶಿಸುತ್ತದೆ.</p>
<p>ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದಲೇ ನೀಡಲಾದ ಮಾರ್ಗಸೂಚಿಗಳಾಗಿದ್ದು, ಹಲವು ವರ್ಷಗಳಿಂದ ಜಾರಿಯಲ್ಲಿದೆ. ಇದೊಂದು ಅಸಂವಿಧಾನಿಕ ಅಥವಾ ತುಷ್ಟೀಕರಣ ನೀತಿಯಾಗಿದ್ದರೆ, ಈ ನಿಯಮವನ್ನು ಪಾಲನೆ ಮಾಡುವಂತೆ ಕೇಂದ್ರ ಸರ್ಕಾರ ಯಾಕೆ ಎಲ್ಲ ರಾಜ್ಯಗಳಿಗೆ ತಿಳಿಸಿದೆ? ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಂತಹ ಕೇಂದ್ರ ಸರ್ಕಾರದ ಕಾರ್ಯಕ್ರಮದಲ್ಲಿ ಯಾಕೆ ಇದನ್ನು ಅನುಷ್ಠಾನ ಮಾಡಲಾಗುತ್ತಿದೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.</p>
<p>ನಮ್ಮ ನಿರ್ಣಯವು ವಸತಿ ಹಂಚಿಕೆಯಲ್ಲಿ ಹೆಚ್ಚುವರಿ ಮೀಸಲಾತಿಯನ್ನು ಇಡೀ ರಾಜ್ಯಕ್ಕೆ ಅನ್ವಯಿಸುವಂತದ್ದಲ್ಲ, ಕೇವಲ ನಿರ್ದಿಷ್ಟ ಸವಾಲುಗಳಿಗೆ ಮಾತ್ರ ಸೀಮಿತವಾಗಿದೆ. ಅಲ್ಪಸಂಖ್ಯಾತ ಜನಸಂಖ್ಯೆಯು 10% ಗಿಂತ ಕಡಿಮೆಯಿರುವ ಹಲವು ಪಂಚಾಯತಿಗಳಲ್ಲಿ ನಿಗದಿಪಡಿಸಲಾದ 10% ಮೀಸಲಾತಿಯ ಅವಕಾಶವು ಸದ್ಬಳಕೆಯಾಗುತ್ತಿರಲಿಲ್ಲ, ಹೀಗಾಗಿ ನಿಗದಿಪಡಿಸಲಾದ ಗುರಿಯನ್ನು ತಲುಪಲು ಮತ್ತು ಲೋಪದೋಷಗಳನ್ನು ತಡೆಯಲು ಇಂತಹ ಪಂಚಾಯತಿಗಳಿಂದ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಿರುವ ಕಡೆಗೆ ಗರಿಷ್ಠ 15% ಮಿತಿಗೆ ಒಳಪಟ್ಟು ಮರುಹಂಚಿಕೆ ಮಾಡಲಾಗಿದೆ.</p>
<p>ಇದು ಕೇವಲ ಆಡಳಿತಾತ್ಮಕ ದೃಷ್ಟಿಯಿಂದ ಸಾಮಾನ್ಯ ವರ್ಗದಲ್ಲಿ ಮಾಡಿಕೊಂಡ ಹೊಂದಾಣಿಕೆಯಾಗಿದ್ದು, ಇದರಿಂದ ಎಸ್.ಸಿ, ಎಸ್‌,ಟಿ ಅಥವಾ ಒಬಿಸಿ ವರ್ಗಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಇದು ಕಾನೂನು ಇಲಾಖೆಯ ವಿಸ್ತೃತ ಪರಾಮರ್ಶೆಯ ನಂತರ ಕೈಗೊಂಡ ತೀರ್ಮಾನವಾಗಿದ್ದು, ಇದು ಕಾನೂನಾತ್ಮಕವಾಗಿಯೂ ಸಮರ್ಪಕವಾಗಿದೆ.</p>
<p>ಬಿಜೆಪಿಯವರ ಟೀಕೆಗಳು ಕೇವಲ ದುರುದ್ದೇಶದ ಹಾಗೂ ರಾಜಕೀಯ ಪ್ರೇರಿತವಾಗಿದೆ. ರಾಷ್ಟ್ರ ಮಟ್ಟದಲ್ಲಿ 15% ಮೀಸಲಾತಿಯನ್ನು ಜಾರಿಗೊಳಿಸಿರುವ ಅದೇ ಪಕ್ಷವು ಇಂದು ಕರ್ನಾಟಕದಲ್ಲಿ ತೆಗೆದುಕೊಂಡಿರುವ ಅದೇ ಕೇಂದ್ರದ ನೀತಿಯ ಮೂಲ ತತ್ವಗಳನ್ನೊಳಗೊಂಡ ನಿರ್ಣಯವನ್ನು ಟೀಕಿಸುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ವಿರೋಧವಿದ್ದರೆ ಅವರದೇ ಕೇಂದ್ರ ಸರ್ಕಾರವು ಈ ಮಾರ್ಗಸೂಚಿಗಳನ್ನು ಯಾಕೆ ಮುಂದುವರೆಸಿಕೊಂಡು ಹೋಗುತ್ತಿದೆ ಎಂಬುದನ್ನು ಮೊದಲು ವಿವರಿಸಲಿ.ಬೇರೆ ರಾಜ್ಯಗಳೂ ಅದನ್ನೇ ಪಾಲಿಸಬೇಕು ಎಂದೇಕೆ ಕೇಂದ್ರವು ಬಯಸುತ್ತಿದೆ ಎಂಬುದನ್ನು ವಿವರಿಸಲಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.</p>
<p>ಈ ರೀತಿಯ ವ್ಯವಸ್ಥಿತ ಅಪಪ್ರಚಾರದ ಹಿಂದೆ ಕೋಮು ವಿವಾದವನ್ನು ಸೃಷ್ಟಿಸುವ ಹುನ್ನಾರವಲ್ಲದೆ ಬೇರೇನು ಇಲ್ಲ. ಇದು ರಾಜ್ಯದ ಬಡವರು ಮತ್ತು ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆತ್ತುವ ಪ್ರಯತ್ನದ ದಿಕ್ಕು ತಪ್ಪಿಸುವ ಕುತಂತ್ರವಾಗಿದೆ.  ನಮ್ಮ ಈ ನಿರ್ಧಾರದಿಂದ ಪ್ರಸಕ್ತ ವರ್ಷ ಒಂದರಲ್ಲೇ ಸುಮಾರು 34,000 ಅಲ್ಪಸಂಖ್ಯಾತ ಕುಟುಂಬಗಳಿಗೆ ಲಾಭವಾಗಲಿದೆ. ಆ ಪೈಕಿ ಹೆಚ್ಚಿನವರು ಭೂರಹಿತರು ಮತ್ತು ಮನೆಗಳ ತುರ್ತು ಅಗತ್ಯತೆ ಇರುವವರಾಗಿದ್ದಾರೆ. ಅಲ್ಪಸಂಖ್ಯಾತ ಅರ್ಜಿದಾರರು ಇಲ್ಲದ ಪಂಚಾಯತಿಗಳಲ್ಲಿನ ಉಪಯೋಗವಾಗದೆ ಉಳಿದ ವಸತಿ ಹಂಚಿಕೆಗಳನ್ನು ಅತಿ ಅಗತ್ಯವಿರುವೆಡೆಗೆ ಮರುಹಂಚಿಕೆ ಮಾಡುವ ಕ್ರಮವಾಗಿದೆ.  ಯಾವುದೇ ತಾಂತ್ರಿಕ ಕಾರಣಗಳಿಂದ ಯಾವೊಂದು ಮನೆಯು ನಿರ್ಮಾಣಗೊಳ್ಳದೆ ಬಾಕಿ ಉಳಿಯಬಾರದು ಎಂಬುದನ್ನು ಇದು ಖಚಿತಪಡಿಸುತ್ತದೆ. ಸಾಂವಿಧಾನಿಕ ಅವಕಾಶಗಳ ಮಿತಿಗೆ ಒಳಪಟ್ಟ ಈ ಪ್ರಯತ್ನವು ಸಮಾನತೆ, ದಕ್ಷತೆ ಮತ್ತು ಸಂಪನ್ಮೂಲದ ಸದ್ಭಳಕೆಯ ಉಪಯುಕ್ತ ಮಾದರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.</p>
<p>ಕರ್ನಾಟಕದಲ್ಲಿ ಸರ್ವರನ್ನು ಒಳಗೊಂಡ ಅಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರ ಒತ್ತುಕೊಡುತ್ತಿದೆ. ಬಿಜೆಪಿಯು ಹರಡುತ್ತಿರುವ ದ್ವೇಷಪೂರಿತ ಮತ್ತು ವಿಭಜನಕಾರಿ ರಾಜಕಾರಣವನ್ನು ನಾವು ತಿರಸ್ಕರಿಸುತ್ತೇವೆ. ನಮ್ಮ ಆಡಳಿತ ಮಾದರಿಯು ನ್ಯಾಯ, ಸಮಾನತೆ ಮತ್ತು ಸಹಾನುಭೂತಿಯ ಆಶಯಗಳನ್ನು ಹೊಂದಿದೆ. ಜಾತಿ ಅಥವಾ ಧರ್ಮದ ಭೇದವಿಲ್ಲದೆ ಪ್ರತಿಯೊಂದು ಬಡ ಕುಟುಂಬಕ್ಕೆ ತಲುಪುವಂತಹ ಯೋಜನೆಗಳನ್ನು ಜಾರಿ ಮಾಡುವುದನ್ನು ನಾವು ಮುಂದುವರಿಸುತ್ತೇವೆ.</p>
<p>ಬಿಜೆಪಿ ನಾಯಕರು ತಿರುಚಿದ ಮಾಹಿತಿ ಹರಡಿ ಕೋಮು ಬಣ್ಣ ಬಳಿಯುವ ಮೂಲಕ ಬಡವರ ಉದ್ಧಾರದ ಕಾರ್ಯಗಳಿಗೆ ಅಡ್ಡಿಯಾಗದೆ, ಬಡತನ ರೇಖೆಗಿಂತ ಕೆಳಗಿರುವ ಜನರನ್ನು ಮೇಲೆತ್ತುವ ನಿಟ್ಟಿನಲ್ಲಿ ತಮ್ಮ ಸಂಕುಚಿತ ರಾಜಕೀಯವನ್ನು ಬದಿಗೊತ್ತಿ ನಮ್ಮ ಬೆಂಬಲಕ್ಕೆ ನಿಲ್ಲಲಿ ಎಂದು ನಾವು ಒತ್ತಾಯಿಸುತ್ತಿದ್ದೇವೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Housing, reservation, minorities, Decision, Centre,  guidelines, CM Siddaramaiah</p>
<p>The post <a href="https://www.justkannada.in/cm-siddaramaiah-193/">ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ: ಕೇಂದ್ರದ ಮಾರ್ಗಸೂಚಿ ಅನ್ವಯ ತೆಗೆದುಕೊಂಡ ನಿರ್ಧಾರ-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ</title>
		<link>https://www.justkannada.in/corona-guidelines/</link>
		
		<dc:creator><![CDATA[prashanth]]></dc:creator>
		<pubDate>Sat, 31 May 2025 07:17:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Corona]]></category>
		<category><![CDATA[Government school]]></category>
		<category><![CDATA[guidelines]]></category>
		<category><![CDATA[Increase...]]></category>
		<guid isPermaLink="false">https://www.justkannada.in/?p=140930</guid>

					<description><![CDATA[<p>ಬೆಂಗಳೂರು,ಮೇ,31,2025 (www.justkannada.in):  ಬೇಸಿಗೆ ರಜೆ ಮುಗಿದು ವಿದ್ಯಾರ್ಥಿಗಳು ಶಾಲೆಗಳು ಆರಂಭವಾಗಿದ್ದು, ಈ ಮಧ್ಯೆ ರಾಜ್ಯದಲ್ಲಿ ದಿನೇ ದಿನೇ ಕೊವಿಡ್  ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಾಜ್ಯ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್​ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೋವಿಡ್​ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ [&#8230;]</p>
<p>The post <a href="https://www.justkannada.in/corona-guidelines/">ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,31,2025 (<a href="http://www.justkannada.in">www.justkannada.in</a>): </strong> ಬೇಸಿಗೆ ರಜೆ ಮುಗಿದು ವಿದ್ಯಾರ್ಥಿಗಳು ಶಾಲೆಗಳು ಆರಂಭವಾಗಿದ್ದು, ಈ ಮಧ್ಯೆ ರಾಜ್ಯದಲ್ಲಿ ದಿನೇ ದಿನೇ ಕೊವಿಡ್  ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಾಜ್ಯ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್​ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.</p>
<p>ವಿದ್ಯಾರ್ಥಿಗಳಲ್ಲಿ ಕೋವಿಡ್​ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗ್ರತಾ ಕ್ರಮ ಪಾಲಿಸಬೇಕು. ಹಾಗೇ ⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>ಶಾಲೆಗಳಿಗೆ ಬಿಡುಗಡೆ ಮಾಡಿದ ಮಾರ್ಗಸೂಚಿ ಅಂಶಗಳು ಈ ಕೆಳಕಂಡಂತಿದೆ..</p>
<p>ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.</p>
<p>⁠ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.</p>
<p>⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗ್ರತಾ ಕ್ರಮ ಪಾಲಿಸಬೇಕು.</p>
<p>⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.</p>
<p>ಎರಡು ದಿನಗಳ ಹಿಂದೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದರು.</p>
<p>Key words: increase, Corona, government school, Guidelines</p>
<p>The post <a href="https://www.justkannada.in/corona-guidelines/">ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೋವಿಡ್ ಪ್ರಕರಣ ಹೆಚ್ಚಳ: ಮಾರ್ಗಸೂಚಿ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ</title>
		<link>https://www.justkannada.in/increase-covid-cases/</link>
		
		<dc:creator><![CDATA[prashanth]]></dc:creator>
		<pubDate>Sat, 24 May 2025 06:43:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[covid-cases]]></category>
		<category><![CDATA[guidelines]]></category>
		<category><![CDATA[Increase...]]></category>
		<category><![CDATA[state government]]></category>
		<guid isPermaLink="false">https://www.justkannada.in/?p=140628</guid>

					<description><![CDATA[<p>ಬೆಂಗಳೂರು,ಮೇ,24,2025 (www.justkannada.in):   ದೇಶದಲ್ಲಿ ಮತ್ತೆ ಕೊರೊನಾ ಹಾವಳಿ ಲಗ್ಗೆ ಇಡುತ್ತಿದ್ದು, ರಾಜ್ಯದಲ್ಲೂ 35 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ದೆಹಲಿ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಕಂಡು ಬಂದಿದ್ದು ಅಲ್ಲಿನ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿಯೂ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, 35 ಸಕ್ರಿಯ ಕೋವಿಡ್ ‍ಪ್ರಕರಣ ಕಂಡು ಬಂದಿದೆ.  ಈ ಪೈಕಿ ಬೆಂಗಳೂರಿನಲ್ಲಿಯೇ 32 ಸಕ್ರಿಯ ಪ್ರಕರಣಗಳು [&#8230;]</p>
<p>The post <a href="https://www.justkannada.in/increase-covid-cases/">ಕೋವಿಡ್ ಪ್ರಕರಣ ಹೆಚ್ಚಳ: ಮಾರ್ಗಸೂಚಿ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,24,2025 (<a href="http://www.justkannada.in">www.justkannada.in</a>): </strong>  ದೇಶದಲ್ಲಿ ಮತ್ತೆ ಕೊರೊನಾ ಹಾವಳಿ ಲಗ್ಗೆ ಇಡುತ್ತಿದ್ದು, ರಾಜ್ಯದಲ್ಲೂ 35 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದೆಹಲಿ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಕಂಡು ಬಂದಿದ್ದು ಅಲ್ಲಿನ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿಯೂ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, 35 ಸಕ್ರಿಯ ಕೋವಿಡ್ ‍ಪ್ರಕರಣ ಕಂಡು ಬಂದಿದೆ.  ಈ ಪೈಕಿ ಬೆಂಗಳೂರಿನಲ್ಲಿಯೇ 32 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗೃತಾ ಕ್ರಮ, ಮಾರ್ಗಸೂಚಿ ಬಿಡುಗಡೆ ಮಾಡಿದೆ.</p>
<p>ಮಕ್ಕಳು, ವೃದ್ಧರು, ಆರೋಗ್ಯ ಸಮಸ್ಯೆಯಿಂದ ಬಳಲುವವರು ಮಾಸ್ಕ್ ಧರಿಸುವುದು ಹಾಗೂ ಕೈಗಳ ನೈರ್ಮಲ್ಯ ಕಾಪಾಡುವುದು ಮುಖ್ಯ. ನೆಗಡಿ, ಕೆಮ್ಮು, ಜ್ವರದಂತಹ ಆರೋಗ್ಯ ಸಮಸ್ಯೆ ಕಂಡುಬಂದಲ್ಲಿ ನಿರ್ಲಕ್ಷ್ಯ ಬೇಡ. ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಗರ್ಭಿಣಿಯರು, ಮಕ್ಕಳು, ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಜನದಟ್ಟಣೆ ಪ್ರದೇಶಗಳಲ್ಲಿ ಫೇಸ್ ಮಾಸ್ಕ್ ಧರಿಸಿ ಓಡಾಡುವಂತೆ ಸೂಚಿಸಲಾಗಿದೆ.</p>
<p>ಸಾರ್ವಜನಿಕರು ನಿಯಮಿತವಾಗಿ ಹ್ಯಾಂಡ್ ಸ್ಯಾನಟೈಸರ್ ಬಳಸಬೇಕು. ಉಸಿರಾಟದ ಸಮಸ್ಯೆಯಿರುವವರು ಸಕಾಲದಲ್ಲಿ ಚಿಕಿತ್ಸೆ ಪಡೆಯಬೇಕು. ಸಂಭಾವ್ಯ ಅಪಾಯ ತಡೆಗಟ್ಟಲು ಕೋವಿಡ್-19 ಪರೀಕ್ಷೆಗಳನ್ನು ತಕ್ಷಣವೇ ಮಾಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ.</p>
<p>Key words: Increase, Covid cases,  State government, guidelines</p>
<p>The post <a href="https://www.justkannada.in/increase-covid-cases/">ಕೋವಿಡ್ ಪ್ರಕರಣ ಹೆಚ್ಚಳ: ಮಾರ್ಗಸೂಚಿ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್</title>
		<link>https://www.justkannada.in/guidelines-safety-women-doctors-ministerdr-sharan-prakash-patil/</link>
		
		<dc:creator><![CDATA[prashanth]]></dc:creator>
		<pubDate>Fri, 23 Aug 2024 12:40:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dr Sharan Prakash Patil]]></category>
		<category><![CDATA[guidelines]]></category>
		<category><![CDATA[minister]]></category>
		<category><![CDATA[safety]]></category>
		<category><![CDATA[women doctors]]></category>
		<guid isPermaLink="false">https://www.justkannada.in/?p=128246</guid>

					<description><![CDATA[<p>ಬೆಂಗಳೂರು ಆಗಸ್ಟ್ 23,2024 (www.justkannada.in):  ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿ ನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ ವೈದ್ಯರ ಸುರಕ್ಷತೆಗಾಗಿ ಸ್ವಯಂಪ್ರೇರಿತವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲು ಚಿಂತನೆ ನಡೆಸಿದೆ. ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ  ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್  ಅವರು ವೈದ್ಯಕೀಯ ಶಿಕ್ಷಣ ನಿರ್ದೇಶಕರರಾದ ಡಾ. ಸುಜಾತ ರಾಥೋಡ್ ಅವರಿಗೆ  ಮಹಿಳಾ ವೈದ್ಯರ ಸುರಕ್ಷತೆಯ [&#8230;]</p>
<p>The post <a href="https://www.justkannada.in/guidelines-safety-women-doctors-ministerdr-sharan-prakash-patil/">ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಆಗಸ್ಟ್ 23,2024 (<a href="http://www.justkannada.in">www.justkannada.in</a>):</strong>  ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿ ನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ ವೈದ್ಯರ ಸುರಕ್ಷತೆಗಾಗಿ ಸ್ವಯಂಪ್ರೇರಿತವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲು ಚಿಂತನೆ ನಡೆಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ  ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್  ಅವರು ವೈದ್ಯಕೀಯ ಶಿಕ್ಷಣ ನಿರ್ದೇಶಕರರಾದ ಡಾ. ಸುಜಾತ ರಾಥೋಡ್ ಅವರಿಗೆ  ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳು/ಪಾಲುದಾರರನ್ನು ಸಂಪರ್ಕಿಸಿ  ಸಮಗ್ರವಾದ ಮಾರ್ಗಸೂಚಿಯನ್ನು ರಚಿಸುವಂತೆ ಸೂಚಿಸಿದರು.</p>
<p>ಡಾ. ರಾಥೋಡ್ ಅವರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಎಲ್ಲಾ ನಿರ್ದೇಶಕರುಗಳು, ಸರ್ಕಾರಿ  ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ವೈದ್ಯರ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚಿಸಲು ನಿರ್ದೇಶನ ನೀಡಿದರು. ಇದರೊಂದಿಗೆ ಖಾಸಗಿ ಆಸ್ಪತ್ರೆಗಳು, ಮಹಿಳಾ ವೈದ್ಯರು ಇನ್ನಿತರೆ ಪಾಲುದಾರರೊಂದಿಗೆ ಸಮಾಲೋಚಿಸಿ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿ ವಿಶೇಷವಾಗಿ ಮಹಿಳಾ ವೈದ್ಯರ ಸುರಕ್ಷತೆಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ರೂಪಿಸುವಂತೆ ಒತ್ತಿಹೇಳಿದರು.</p>
<p>ಈ ಹಿನ್ನೆಲೆಯಲ್ಲಿ ಮಹಿಳಾ ವೈದ್ಯರ ಸುರಕ್ಷತೆಗಾಗಿ ವೈದ್ಯಕೀಯ ಸಮುದಾಯದ ಸಲಹೆ ಸೂಚನೆಗಳಂತೆ ರಾಜ್ಯ ಸರ್ಕಾರವು ಶೀಘ್ರವೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ. ಈ ಮಾರ್ಗಸೂಚಿಗಳು ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಅನ್ವಯವಾಗುತ್ತವೆ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಮಾಧ್ಯಮಕ್ಕೆ ತಿಳಿಸಿದರು.</p>
<p>ಕೊಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ 31 ವರ್ಷದ ವೈದ್ಯೆ ಮೇಲೆ ನಡೆದ ಅತ್ಯಾಚಾರವನ್ನು ತೀವ್ರವಾಗಿ ಖಂಡಿಸಿದ, ಸ್ವತಃ  ವೈದ್ಯರಾದ ಡಾ. ಪಾಟೀಲ್ ಅವರು ವೃತ್ತಿಪರ ಮಹಿಳೆಯರ ಮೇಲಾಗುವ ದೌರ್ಜನ್ಯವನ್ನು ಸರ್ಕಾರ ಸಹಿಸುವುದಿಲ್ಲ, ಮತ್ತು ಮಹಿಳಾ ವೈದ್ಯರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನುತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.</p>
<p>&nbsp;</p>
<p>Key words: Guidelines, safety, women doctors, Minister,Dr. Sharan Prakash Patil</p>
<p>The post <a href="https://www.justkannada.in/guidelines-safety-women-doctors-ministerdr-sharan-prakash-patil/">ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜ.13ರ ಕೆ-ಸೆಟ್ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ</title>
		<link>https://www.justkannada.in/k-set-exam-jan-13-kea-guidelines-announced/</link>
		
		<dc:creator><![CDATA[prashanth]]></dc:creator>
		<pubDate>Thu, 04 Jan 2024 06:59:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[announced]]></category>
		<category><![CDATA[guidelines]]></category>
		<category><![CDATA[Jan 13]]></category>
		<category><![CDATA[K-SET exam]]></category>
		<category><![CDATA[KEA]]></category>
		<guid isPermaLink="false">https://www.justkannada.in/?p=117556</guid>

					<description><![CDATA[<p>ಬೆಂಗಳೂರು,ಜನವರಿ,4,2024(www.justkannada.in): ಜನವರಿ 13 ರಂದು ನಡೆಯಲಿರುವ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಕರ್ನಾಟಕ ಪರೀಕ್ಷೆ ಪ್ರಾಧಿಕಾರ(KEA) ವಸ್ತ್ರ ಸಂಹಿತೆ, ಮಾರ್ಗಸೂಚಿಯನ್ನ ಪ್ರಕಟಿಸಿದೆ. ಜನವರಿ 13 ರಂದು ಬೆಳಗ್ಗೆ 10 ರಿಂದ 11 ಮತ್ತು ಮಧ್ಯಾಹ್ನ 12 ರಿಂದ 2 ಗಂಟೆಯವರೆಗೆ ಕೆ-ಸೆಟ್ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಸರಳ ಉಡುಪು ಧರಿಸಿ ಬರುವಂತೆ ಸೂಚನೆ ನೀಡಿದೆ. ಅಭ್ಯರ್ಥಿಗಳು KEA  ವೆಬ್ ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ ಲೋಡ್‌ ಕೊಳ್ಳಲು ಅವಕಾಶ ನೀಡಲಾಗಿದ್ದು, ಅಭ್ಯರ್ಥಿಗಳು ಪರೀಕ್ಷಾ [&#8230;]</p>
<p>The post <a href="https://www.justkannada.in/k-set-exam-jan-13-kea-guidelines-announced/">ಜ.13ರ ಕೆ-ಸೆಟ್ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,4,2024(www.justkannada.in): </strong>ಜನವರಿ 13 ರಂದು ನಡೆಯಲಿರುವ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಕರ್ನಾಟಕ ಪರೀಕ್ಷೆ ಪ್ರಾಧಿಕಾರ(KEA) ವಸ್ತ್ರ ಸಂಹಿತೆ, ಮಾರ್ಗಸೂಚಿಯನ್ನ ಪ್ರಕಟಿಸಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜನವರಿ 13 ರಂದು ಬೆಳಗ್ಗೆ 10 ರಿಂದ 11 ಮತ್ತು ಮಧ್ಯಾಹ್ನ 12 ರಿಂದ 2 ಗಂಟೆಯವರೆಗೆ ಕೆ-ಸೆಟ್ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಸರಳ ಉಡುಪು ಧರಿಸಿ ಬರುವಂತೆ ಸೂಚನೆ ನೀಡಿದೆ.</p>
<p>ಅಭ್ಯರ್ಥಿಗಳು KEA  ವೆಬ್ ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ ಲೋಡ್‌ ಕೊಳ್ಳಲು ಅವಕಾಶ ನೀಡಲಾಗಿದ್ದು, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಪ್ರವೇಶ ಪತ್ರದ ಜೊತೆಗೆ ಆಧಾರ್‌ ಕಾರ್ಡ್‌ ಸೇರಿದಂತೆ ಯಾವುದೇ ಸರ್ಕಾರದ ಮಾನ್ಯತೆಯ ಗುರುತಿನ ಚೀಟಿ ತರಬೇಕು.<img loading="lazy" decoding="async" class="aligncenter size-full wp-image-117557" src="https://www.justkannada.in/wp-content/uploads/2024/01/kea.jpg" alt="" width="500" height="281" srcset="https://www.justkannada.in/wp-content/uploads/2024/01/kea.jpg 500w, https://www.justkannada.in/wp-content/uploads/2024/01/kea-300x169.jpg 300w" sizes="auto, (max-width: 500px) 100vw, 500px" /></p>
<p>ಪರೀಕ್ಷೆಗೆ ಹಾಜರಾಗುವ ಪುರುಷ ಅಭ್ಯರ್ಥಿಗಳು ಪಾಲಿಸಬೇಕಾದ ನಿಯಮ..</p>
<p>ಅರೆತೋಳಿನ ಅಂಗಿ, ಹೆಚ್ಚಿನ ಚೇಬುಗಳಿಲ್ಲದ ಸರಳ ಪ್ಯಾಂಟ್‌ ಧರಿಸಿ ಬರುವುದು ಕಡ್ಡಾಯ.</p>
<p>ಪರೀಕ್ಷೆ ವೇಳೆ ಬೆಲ್ಟ್‌, ಶೂಗಳನ್ನು ನಿಷೇಧಿಸಲಾಗಿದೆ. ಕಂಠಾಭರಣ, ಕಿವಿಯೋಲೆ, ಉಂಗುರ ಮತ್ತು ಕೈ ಗಡಿಯಾರ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನ  ತರುವಂತಿಲ್ಲ.</p>
<p>ಮಹಿಳಾ ಅಭ್ಯರ್ಥಿಗಳು ಪಾಲಿಸಬೇಕಾದ ನಿಯಮ ಹೀಗಿದೆ&#8230;</p>
<p>ಹೂ, ಬ್ರೂಚ್‌, ಬಟನ್‌, ಪೂರ್ಣ ತೋಳಿನ ರವಿಕೆ/ವಸ್ತ್ರ ಇರುವ ಉಡುಪು ಮತ್ತು ಜೀನ್ಸ್‌ ಪ್ಯಾಂಟ್‌ ಹಾಗೂ ಶೂ, ದಪ್ಪ ಸೋಲ್‌ ನ ಚಪ್ಪಲಿ ಧರಿಸಿ ಬರುವಂತಿಲ್ಲ.</p>
<p>ಪೆನ್‌ ಡ್ರೈವ್‌, ಕೈಗಡಿಯಾರ, ಮೈಕ್ರೋ ಫೋನ್‌ ಸೇರಿ ಎಲೆಕ್ಟ್ರಾನಿಕ್‌ ವಸ್ತುಗಳನ್ನು ತರುವಂತಿಲ್ಲ. ಆದರೆ ಮಂಗಳಸೂತ್ರ, ಕಾಲುಂಗುರ ಧರಿಸಲು ಪ್ರಾಧಿಕಾರ ಅವಕಾಶ ನೀಡಿದೆ.</p>
<p>Key words: K-SET exam- Jan 13- KEA- Guidelines &#8211; announced</p>
<p>The post <a href="https://www.justkannada.in/k-set-exam-jan-13-kea-guidelines-announced/">ಜ.13ರ ಕೆ-ಸೆಟ್ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೋವಿಡ್ ಆತಂಕ ಹಿನ್ನೆಲೆ ಕಟ್ಟೆಚ್ಚರ: ಸಿಎಂ ಜೊತೆ ಚರ್ಚಿಸಿ ಮಾರ್ಗಸೂಚಿ ಬಿಡುಗಡೆ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್.</title>
		<link>https://www.justkannada.in/covid-discuss-cm-guidelines-health-minister-dr-k-sudhakar/</link>
		
		<dc:creator><![CDATA[JK Desk]]></dc:creator>
		<pubDate>Wed, 21 Dec 2022 08:22:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[Covid -Discuss]]></category>
		<category><![CDATA[Dr K Sudhakar]]></category>
		<category><![CDATA[guidelines]]></category>
		<category><![CDATA[health minister]]></category>
		<guid isPermaLink="false">https://www.justkannada.in/?p=101375</guid>

					<description><![CDATA[<p>ಬೆಳಗಾವಿ,ಡಿಸೆಂಬರ್,21,2022(www.justkannada.in):  ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೋನಾ ಹೆಚ್ಚುತ್ತಿದ್ದು, ರಾಜ್ಯದಲ್ಲೂ ಕೋವಿಡ್ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ  ಸಿಎಂ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚಿಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಸಚಿವ ಸುಧಾಕರ್, ಈಗಾಗಲೇ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆಯಲಾಗಿದೆ.  ರಾಜ್ಯದಲ್ಲಿ 3ನೇ ಡೋಸ್ ಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ನಿನ್ನೆ ಮುಖ್ಯಕಾರ್ಯದರ್ಶಿ ಜೊತೆ ಸಭೆ ನಡೆಸಿದ್ದೇನೆ.  ಮುಂದಿನ ಕ್ರಮಗಳ ಬಗ್ಗೆ ಸಭೆ [&#8230;]</p>
<p>The post <a href="https://www.justkannada.in/covid-discuss-cm-guidelines-health-minister-dr-k-sudhakar/">ಕೋವಿಡ್ ಆತಂಕ ಹಿನ್ನೆಲೆ ಕಟ್ಟೆಚ್ಚರ: ಸಿಎಂ ಜೊತೆ ಚರ್ಚಿಸಿ ಮಾರ್ಗಸೂಚಿ ಬಿಡುಗಡೆ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,21,2022(<a href="http://www.justkannada.in">www.justkannada.in</a>):</strong>  ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೋನಾ ಹೆಚ್ಚುತ್ತಿದ್ದು, ರಾಜ್ಯದಲ್ಲೂ ಕೋವಿಡ್ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ  ಸಿಎಂ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚಿಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಇಂದು ಮಾತನಾಡಿದ ಸಚಿವ ಸುಧಾಕರ್, ಈಗಾಗಲೇ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆಯಲಾಗಿದೆ.  ರಾಜ್ಯದಲ್ಲಿ 3ನೇ ಡೋಸ್ ಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ನಿನ್ನೆ ಮುಖ್ಯಕಾರ್ಯದರ್ಶಿ ಜೊತೆ ಸಭೆ ನಡೆಸಿದ್ದೇನೆ.  ಮುಂದಿನ ಕ್ರಮಗಳ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗುತ್ತದೆ ಎಂದರು.<img loading="lazy" decoding="async" class="aligncenter size-full wp-image-101376" src="https://www.justkannada.in/wp-content/uploads/2022/12/sudhakar.jpg" alt="" width="500" height="300" srcset="https://www.justkannada.in/wp-content/uploads/2022/12/sudhakar.jpg 500w, https://www.justkannada.in/wp-content/uploads/2022/12/sudhakar-300x180.jpg 300w" sizes="auto, (max-width: 500px) 100vw, 500px" /></p>
<p>ಜಿನೋಮಿಕ್ ಟೆಸ್ಟ್ ಗೆ ಸೂಚಿಸಿದ್ದೇನೆ. ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುತ್ತದೆ.  ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ 3ನೇ ಡೋಸ್ ಲಸಿಕೆ ಪಡೆಯದವರ ಬಗ್ಗೆಯೂ ನಿಗಾ ವಹಿಸುತ್ತೇವೆ ಎಂದು ಸಚಿವ ಸುಧಾಕರ್ ತಿಳಿಸಿದರು.</p>
<p>Key words:  Covid -Discuss &#8211; CM – guidelines-Health Minister -Dr. K. Sudhakar</p>
<p>The post <a href="https://www.justkannada.in/covid-discuss-cm-guidelines-health-minister-dr-k-sudhakar/">ಕೋವಿಡ್ ಆತಂಕ ಹಿನ್ನೆಲೆ ಕಟ್ಟೆಚ್ಚರ: ಸಿಎಂ ಜೊತೆ ಚರ್ಚಿಸಿ ಮಾರ್ಗಸೂಚಿ ಬಿಡುಗಡೆ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
