<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>khadi - national flag- Flag Satyagraha Committee Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/khadi-national-flag-flag-satyagraha-committee/feed/" rel="self" type="application/rss+xml" />
	<link>https://www.justkannada.in/tag/khadi-national-flag-flag-satyagraha-committee/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 08 Aug 2022 11:51:29 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>khadi - national flag- Flag Satyagraha Committee Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/khadi-national-flag-flag-satyagraha-committee/</link>
	<width>32</width>
	<height>32</height>
</image> 
	<item>
		<title>ರಾಷ್ಟ್ರಧ್ವಜದಿಂದ ಖಾದಿಯನ್ನೇಕೆ ಕಿತ್ತು ಹಾಕಿದಿರಿ..? ಪ್ರಧಾನಿ ನರೇಂದ್ರ ಮೋದಿಗೆ ಹತ್ತು ಪ್ರಶ್ನೆಗಳನ್ನಾಕಿದ ಧ್ವಜ ಸತ್ಯಾಗ್ರಹ ಸಮಿತಿ.</title>
		<link>https://www.justkannada.in/khadi-national-flag-flag-satyagraha-committee-questions-pm-modi/</link>
		
		<dc:creator><![CDATA[JK Desk]]></dc:creator>
		<pubDate>Mon, 08 Aug 2022 11:51:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[khadi - national flag- Flag Satyagraha Committee]]></category>
		<category><![CDATA[PM Modi]]></category>
		<category><![CDATA[questions]]></category>
		<guid isPermaLink="false">https://www.justkannada.in/?p=94668</guid>

					<description><![CDATA[<p>ಮೈಸೂರು,ಆಗಸ್ಟ್,17,2022(www.justkannada.in):  ಹರ್ ಘರ್ ತಿರಂಗಾ ಯಾತ್ರೆಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಧ್ವಜ ಸತ್ಯಾಗ್ರಹ ಸಮಿತಿ ಸಂಚಾಲಕ ಕಾಳಚನ್ನೇಗೌಡ ಹಲವು ಪ್ರಶ್ನೆಗಳನ್ನ ಕೇಳಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿರುವ ಧ್ವಜ ಸತ್ಯಾಗ್ರಹ ಸಮಿತಿ ಸಂಚಾಲಕ ಕಾಳಚನ್ನೇಗೌಡ ಅವರು ಹರ್ ಘರ್ ತಿರಂಗಾ ಅಭಿಯಾನದ ಬಗ್ಗೆ ಟೀಕಿಸಿದರು. ಈ ಸಂಬಂಧ ಪ್ರಧಾನಿ ಮೋದಿಗೆ ಹಾಕಿರುವ ಹತ್ತು ಪ್ರಶ್ನೆಗಳು ಹೀಗಿವೆ. 1.ರಾಷ್ಟ್ರಧ್ವಜದಿಂದ ಖಾದಿಯನ್ನೇಕೆ ಕಿತ್ತು ಹಾಕಿದಿರಿ? 2.ಸರಕಾರಿ ಕಛೇರಿಗಳ ಮೂಲಕ, [&#8230;]</p>
<p>The post <a href="https://www.justkannada.in/khadi-national-flag-flag-satyagraha-committee-questions-pm-modi/">ರಾಷ್ಟ್ರಧ್ವಜದಿಂದ ಖಾದಿಯನ್ನೇಕೆ ಕಿತ್ತು ಹಾಕಿದಿರಿ..? ಪ್ರಧಾನಿ ನರೇಂದ್ರ ಮೋದಿಗೆ ಹತ್ತು ಪ್ರಶ್ನೆಗಳನ್ನಾಕಿದ ಧ್ವಜ ಸತ್ಯಾಗ್ರಹ ಸಮಿತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,17,2022(www.justkannada.in): </strong> ಹರ್ ಘರ್ ತಿರಂಗಾ ಯಾತ್ರೆಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಧ್ವಜ ಸತ್ಯಾಗ್ರಹ ಸಮಿತಿ ಸಂಚಾಲಕ ಕಾಳಚನ್ನೇಗೌಡ ಹಲವು ಪ್ರಶ್ನೆಗಳನ್ನ ಕೇಳಿದ್ದಾರೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿರುವ ಧ್ವಜ ಸತ್ಯಾಗ್ರಹ ಸಮಿತಿ ಸಂಚಾಲಕ ಕಾಳಚನ್ನೇಗೌಡ ಅವರು ಹರ್ ಘರ್ ತಿರಂಗಾ ಅಭಿಯಾನದ ಬಗ್ಗೆ ಟೀಕಿಸಿದರು. ಈ ಸಂಬಂಧ ಪ್ರಧಾನಿ ಮೋದಿಗೆ ಹಾಕಿರುವ ಹತ್ತು ಪ್ರಶ್ನೆಗಳು ಹೀಗಿವೆ.</p>
<p>1.ರಾಷ್ಟ್ರಧ್ವಜದಿಂದ ಖಾದಿಯನ್ನೇಕೆ ಕಿತ್ತು ಹಾಕಿದಿರಿ?</p>
<p>2.ಸರಕಾರಿ ಕಛೇರಿಗಳ ಮೂಲಕ, ಬ್ಯಾಂಕು, ಮುನಿಸಿಪಾಲಿಟಿ ಅಥವಾ ಇತರೆ ಸ್ವಾಯತ್ತ ಸಂಸ್ಥೆಗಳ ಮೂಲಕ, ವಿದೇಶಿವಸ್ತ್ರ ಹಾಗೂ ಸಿಂಥೆಟಿಕ್ ವಸ್ತ್ರದಿಂದ ತಯಾರಾದ ಧ್ವಜಗಳನ್ನೇಕೆ ಬಲವಂತದಿಂದ ಮಾರಾಟ ಮಾಡಿಸುತ್ತಿದ್ದೀರಿ?</p>
<p>3.ಅವು ಅಲ್ಲಲ್ಲಿ ಹರಿದಿದೆ, ಹಾಳಾಗಿವೆ, ಅಳತೆ ತಪ್ಪಿವೆ, ಆಕಾರ ತಪ್ಪಿವೆ, ಅಶೋಕಚಕ್ರವು ಎತ್ತೆತ್ತಲೋ ಹೊರಳಿದೆ, ಚಕ್ರದ ಕೀಲುಗಳ ಸಂಖ್ಯೆ ಏರುಪೇರಾಗಿವೆ ಎಂಬ ಸಂಗತಿಯು ತಮ್ಮ ಗಮನಕ್ಕೆ ಬಂದಿಲ್ಲವೆ? ಇಂತಹ ಬಾವುಟಗಳ ಭ್ರಷ್ಟ ಉತ್ಪಾದಕರನ್ನು ಶಿಕ್ಷಿಸುವ ಬದಲು ಭ್ರಷ್ಟಗೊಂಡ ಬಾವುಟಗಳನ್ನೇ ಅಧಿಕೃತವಾಗಿ ಮಾರಾಟ ಮಾಡುವುದು ಭ್ರಷ್ಟಾಚಾರವಲ್ಲವೆ?</p>
<p>4.ನಮ್ಮ ಧ್ವಜ ಅಹಿಂಸೆಯ ದ್ಯೋತಕವಾದದ್ದು. ಶಾಂತಿಪ್ರಿಯ ಅಶೋಕನ ಲಾಂಛನ ಹಾಗೂ ಅಹಿಂಸಾತ್ಮಕ ಖಾದಿಬಟ್ಟೆಗಳು ಅದರಲ್ಲಿ ಅಂತರ್ಗತವಾಗಿವೆ. ಹೀಗಿರುವಾಗ, ಸ್ವಾತಂತ್ರ್ಯದ ಅಮೃತಮಹೋತ್ಸವದ ಬಾವುಟ ಕಾರ್ಯಕ್ರಮವನ್ನು ಯುದ್ಧಭೂಮಿಯೊಂದರಿಂದ ಉದ್ಘಾಟಿಸಿ, ಭಾರತವು ಹಿಂಸಾವಾದಿ ದೇಶವೆಂಬ ಸಂಕೇತವನ್ನೇಕೆ ಜಗತ್ತಿಗೆ ಸಾರುತ್ತಿದ್ದೀರಿ?</p>
<p>5.ಸಿಂಥೆಟಿಕ್ ಬಾವುಟಗಳ ಉದ್ಪಾದನೆ, ಆಯತ, ವಿತರಣೆಗೆಂದು ತಮ್ಮ ಸರಕಾರವು ಎಷ್ಟು ಪ್ರಮಾಣದ ತೆರಿಗೆ ಹಣವನ್ನು ಖರ್ಚು ಮಾಡಿದೆ? ಇತ್ತ ಖಾದಿ ಹಾಗೂ ಗ್ರಾಮೋದ್ಯೋಗದ ಉದ್ಪಾದನೆ, ಆಯಾತ, ವಿತರಣೆಯನ್ನೇ ಹೆಚ್ಚುಕಡಿಮೆ ಸ್ಥಗಿತಗೊಳಿಸಿರುವ ತಮ್ಮ ಸರಕಾರವು ಇದೇ ಹಣವನ್ನು ಗ್ರಾಮೋದ್ಯೋಗದ ಪುನಶ್ಚೇತನಕ್ಕಾಗಿ ಖರ್ಚು ಮಾಡಬಹುದಿತ್ತಲ್ಲವೇ? ಬಡವರ ಪರವಾದ ಕಾರ್ಯಕ್ರಮವಲ್ಲವೇ ಸ್ವದೇಶಿ?<img decoding="async" class="aligncenter size-full wp-image-94669" src="https://www.justkannada.in/wp-content/uploads/2022/08/dassdf.jpg" alt="" width="500" height="333" srcset="https://www.justkannada.in/wp-content/uploads/2022/08/dassdf.jpg 500w, https://www.justkannada.in/wp-content/uploads/2022/08/dassdf-300x200.jpg 300w" sizes="(max-width: 500px) 100vw, 500px" /></p>
<p>6.ಭಾರತದ ರಾಷ್ಟ್ರಧ್ವಜವು ಚೀನಾದಿಂದ ನಿರ್ಮಾಣಗೊಂಡು ಅಧಿಕೃತವಾಗಿ ಮಾರಾಟಗೊಳ್ಳುತ್ತಿದೆ ಎಂಬ ಸುದ್ಧಿ ನಿಜವೇ?</p>
<p>7.ರಾಷ್ಟ್ರಧ್ವಜವನ್ನು ಕೆಳಗಿಳಿಸುವ ಅಗತ್ಯವಿಲ್ಲ. ಮಳೆಯಿರಲಿ, ಬಿಸಿಲಿರಲಿ, ಹಗಲಿರಲಿ, ರಾತ್ರಿಯಿರಲಿ, ಧ್ವಜವು ಹರಿದಿರಲಿ, ಮಲಿನವಾಗಿರಲಿ, ಕಂಬಕ್ಕೆ ಜೋತು ಬಿದ್ದಿರಬೇಕು ಎಂದು ಧ್ವಜನಿಯಮವನ್ನು ತಾವು ತಿದ್ದಿರುವುದು ಸರಿಯೇ?</p>
<p>8.ಹರ್-ಘರ್-ತಿರಂಗ ಎಂಬುದು, ವಿದೇಶಿಯರೇ ದೇಶಬಿಟ್ಟು ತೊಲಗಿ ಎಂಬ ಸ್ವದೇಶಿ ಚಳುವಳಿಯ ಕೂಗಾಗಿತ್ತು. ಪವಿತ್ರ ಆರ್ಥಿಕಥೆ ಹಾಗೂ ಸ್ವದೇಶಿ ಉತ್ದಾದನೆಗಳನ್ನು ಕಡೆಗಣಿಸಿರುವ ತಮ್ಮ ಸರಕಾರವು ಹರ್-ಘರ್-ತಿರಂಗ ಎಂದು ಕೂಗುವುದು ವಿಪರ್ಯಾಸವಲ್ಲವೆ?</p>
<p>9.ಸರಕಾರದ ಅಧೀನದಲ್ಲಿರುವ ಖಾದಿ ಸಂಸ್ಥೆಯು ಶುದ್ಧ ಖಾದಿಬಾವುಟವನ್ನು ಸಾಮಾನ್ಯರ ಕೈಗೆಟುಕದಂತಹ, ಅತಿ ದುಬಾರಿಬೆಲೆಗೆ ಮಾರುತ್ತಿರುವುದು ಸರಿಯೆ?</p>
<p>10.ಕಲೆ ಹಾಗೂ ಸಾಹಿತ್ಯಗಳಿಗೆ ಸಂಬಂಧಿಸಿದ ಅಕಾಡೆಮಿಗಳು ಸರಕಾರದ ಕಾರ್ಯಕ್ರಮವನ್ನು ಬೆಂಬಲಿಸುವಂತೆ ಸಾಹಿತಿ ಕಲಾವಿದರುಗಳ ಮೇಲೆ ಬಲವಂತ ಹೇರುತ್ತಿರುವುದು ತಮ್ಮ ಗಮನಕ್ಕೆ ಬಂದಿಲ್ಲವೇ? ಇವೆಲ್ಲಾ ಪ್ರಶ್ನೆಗಳಿಗೆ ಉತ್ತರಿಸುವಂತೆ ಪ್ರಧಾನಿ ಮೋದಿಗೆ  ಕಾಳಚನ್ನೇಗೌಡ ಆಗ್ರಹಿಸಿದ್ದಾರೆ.</p>
<p>Key words:  khadi &#8211; national flag- Flag Satyagraha Committee &#8211; questions –PM Modi.</p>
<p>The post <a href="https://www.justkannada.in/khadi-national-flag-flag-satyagraha-committee-questions-pm-modi/">ರಾಷ್ಟ್ರಧ್ವಜದಿಂದ ಖಾದಿಯನ್ನೇಕೆ ಕಿತ್ತು ಹಾಕಿದಿರಿ..? ಪ್ರಧಾನಿ ನರೇಂದ್ರ ಮೋದಿಗೆ ಹತ್ತು ಪ್ರಶ್ನೆಗಳನ್ನಾಕಿದ ಧ್ವಜ ಸತ್ಯಾಗ್ರಹ ಸಮಿತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
