<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>magadi Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/magadi/feed/" rel="self" type="application/rss+xml" />
	<link>https://www.justkannada.in/tag/magadi/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 13 Sep 2024 12:58:13 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>magadi Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/magadi/</link>
	<width>32</width>
	<height>32</height>
</image> 
	<item>
		<title>ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ: ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cooperation-development-magadi-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Fri, 13 Sep 2024 12:58:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[cooperation]]></category>
		<category><![CDATA[development]]></category>
		<category><![CDATA[magadi]]></category>
		<guid isPermaLink="false">https://www.justkannada.in/?p=129233</guid>

					<description><![CDATA[<p>ರಾಮನಗರ, ಸೆಪ್ಟೆಂಬರ್, 13,2024 (www.justkannada.in): ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ  ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ [&#8230;]</p>
<p>The post <a href="https://www.justkannada.in/cooperation-development-magadi-cm-siddaramaiah/">ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ: ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ, ಸೆಪ್ಟೆಂಬರ್, 13,2024 (www.justkannada.in):</strong> ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ  ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.</p>
<p>ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ ಎಂದರು.</p>
<p>ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದು ಪ್ರಾಧಿಕಾರವನ್ನೂ ರಚನೆ ಮಾಡಲಾಯಿತು.  ಇದರ ಉದ್ದೇಶ ಕೆಂಪೇಗೌಡರನ್ನು ಎಲ್ಲರೂ ಸ್ಮರಿಸಬೇಕು ಎನ್ನುವುದಾಗಿತ್ತು. ಒಕ್ಕಲಿಗರ ನಾಯಕರು ಎಂದು ಹೇಳಿಕೊಳ್ಳುವವರು ಇದನ್ನು ಮಾಡಲಿಲ್ಲ.  ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದ್ದು, ಅವರ ಜಯಂತ್ಯೋತ್ಸವವನ್ನು ಆಚರಿಸುವುದು ಸರ್ಕಾರದ ಕರ್ತವ್ಯ ಎಂದು ಭಾವಿಸಿ 2016-17 ರಲ್ಲಿ ಆಚರಣೆಗೆ ತಂದಿದ್ದು ನಮ್ಮ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.</p>
<p><strong>ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ</strong></p>
<p>ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಮೇಲೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ. ಹಾಗಾದರೆ ಅಭಿವೃದ್ಧಿ ಕೆಲಸಗಳಿಗೆ 120 ಕೋಟಿ ರೂ.ಗಳನ್ನು ಅನುದಾನವನ್ನು ಏಕೆ ಮೀಸಲಿಡಲಾಗಿದೆ ಎಂದು ಪ್ರಶ್ನಿಸಿದರು. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ.  ಹಾಲಿಗೆ ಬೆಲೆ ಏರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದರು, ರೈತರಿಗೆ ಹಣ ಸೇರಬೇಡವೇ? ರೈತರಿಗೆ ಇದನ್ನು ಪ್ರಶ್ನಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು.  ಹಾಲಿಗೆ 5.೦೦ ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಏನೂ ಮಾಡದೇ ರೈತರ ಮಕ್ಕಳು ,ಮಣ್ಣಿನ ಮಕ್ಕಳು ಎನ್ನುತ್ತಾರೆ ಎಂದು ಕುಟುಕಿದರು.</p>
<p><strong>ಮೋದಿಯವರ 10 ವರ್ಷದ ಅವಧಿಯಲ್ಲಿ ದೇಶದ ಸಾಲ 182 ಲಕ್ಷ ಕೋಟಿಗೆ ತಲುಪಿದೆ</strong></p>
<p>ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ರಾಜ್ಯದ ಸುಮಾರು 1.20 ಲಕ್ಷ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಗ್ಯಾರಂಟಿಗಳ ಮೂಲಕ ಒದಗಿಸಲಾಗುತ್ತಿದೆ.  ದೇಶದ ಸ್ವಾತಂತ್ರ್ಯಕ್ಕೆ ದುಡಿದ ನೆಹರೂರವರು ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು  ನಾಯಕರು ದೇಶಕ್ಕಾಗಿ ದುಡಿದಿದ್ದಾರೆ. ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ  ಎಂದು ಈ ಬಾರಿ ಮೋದಿಯವರಿಗೆ ವೋಟು ನೀಡಲಾಗಿದೆಯೇ ಎಂದು  ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.</p>
<p>ಭಾರತದ  ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ. ಹಿಂದೆ 53.11 ಲಕ್ಷ ಕೋಟಿ ಇದ್ದ ಸಾಲದ ಮೊತ್ತ ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂ.ಗೆ ತಲುಪಿದೆ. ಗರೀಬಿ ಹಠಾವೋ, ಆಹಾರಸ್ವಾವಲಂಬನೆಯಂತಹ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಿದೆ ಎಂದರು.</p>
<p><strong>ಎಸ್ ಸಿ ಎಸ್ ಪಿ / ಟಿಎಸ್ ಪಿ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ</strong></p>
<p>ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಅನುದಾನವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಸುಳ್ಳು ನುಡಿದರು. ಆದರೆ 89.62 ಕೋಟಿ ಮೊತ್ತದ ಅವ್ಯವಹಾರವಾಗಿದ್ದು, ಅದರಲ್ಲಿ 56 ಕೋಟಿ ವಸೂಲು ಮಾಡಲಾಗಿದೆ. ಆದರೂ ಅಭಿವೃದ್ಧಿ ನಿಗಮಕ್ಕೆ ಈ ಮುಂಚೆ ನಿಗದಿಪಡಿಸಿರುವಂತೆ ಅನುದಾನವನ್ನು ನೀಡಿ, ಸಮುದಾಯದ ಅಭಿವೃದ್ಧಿಗೆ ಬಳಸಲಾಗುವುದು. ಎಸ್ ಸಿ ಎಸ್ ಪಿ / ಟಿಎಸ್ ಪಿ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಈ ರೀತಿಯ ಜನಪರ ಕಾನೂನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ  ಜನಸಂಖ್ಯೆಗೆ ಅನುಗುಣವಾಗಿ ಅವರ ಅಭಿವೃದ್ದಿಗೆ ಪ್ರತ್ಯೇಕ ಅನುದಾನ ನೀಡುವ ಕಾನೂನು  ಜಾರಿ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದರು.</p>
<p><strong>ಮೋದಿಯವರು ಬಂಡವಾಳಶಾಹಿಗಳ ಪರ</strong></p>
<p>ಬಿಜೆಪಿಯವರು ಬಡವರ ಹಾಗೂ ರೈತರ ವಿರೋಧಿಗಳಾಗಿದ್ದಾರೆ. ಬಿಜೆಪಿಯವರು ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿದರು. ಮೋದಿಯವರು ಬಂಡವಾಳಶಾಹಿಗಳ ಪರವಾಗಿದ್ದಾರೆ. ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಹಳಷ್ಟು ಹಗರಣಗಳು ನಡೆದಿವೆ.  ಸುಳ್ಳು ಹೇಳುವ ಬಿಜೆಪಿ ಪಕ್ಷವನ್ನು ನಂಬಬೇಡಿ ಎಂದು ಜನರಿಗೆ ತಿಳಿಸಿದರು.</p>
<p>ಕಾಂಗ್ರೆಸ್ ಸರ್ಕಾರ ಸದಾ ಬಡಜನರ ಪರವಾಗಿದೆ. ಶಕ್ತಿ ಯೋಜನೆಯಡಿ 3.50 ಕೋಟಿ ಜನ ಉಚಿತವಾಗಿ ಪ್ರಯಾಣಿಸಿದ್ದು, ಇದುವರೆಗೆ 287 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ನಾನು ಬಡವರ ಏಳಿಗೆಗಾಗಿಯೇ ಅಧಿಕಾರದಲ್ಲಿರುವುದು ಎಂದು ತಿಳಿಸಿರುವುದು. ಸರ್ಕಾರ ಹಾಲು ಉತ್ಪಾದಕರ , ದಲಿತರ, ಅಲ್ಪಸಂಖ್ಯಾತರ, ಬಡವರ ಪರವಾಗಿರಲಿದೆ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ.ರಾಜ್ಯದ ಜನರ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.</p>
<p>Key words: cooperation, development, Magadi, CM Siddaramaiah</p>
<p>The post <a href="https://www.justkannada.in/cooperation-development-magadi-cm-siddaramaiah/">ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ: ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಲಿಂಡರ್ ಸ್ಪೋಟ: ಮೂವರು ಬಾಲಕರಿಗೆ ಗಂಭೀರ ಗಾಯ&#8230;</title>
		<link>https://www.justkannada.in/cylinder-explosion-three-boy-serious-injuries-magadi/</link>
		
		<dc:creator><![CDATA[JK Desk]]></dc:creator>
		<pubDate>Tue, 17 Nov 2020 12:26:07 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[boy]]></category>
		<category><![CDATA[Cylinder –explosion]]></category>
		<category><![CDATA[injuries.]]></category>
		<category><![CDATA[magadi]]></category>
		<category><![CDATA[serious]]></category>
		<category><![CDATA[Three]]></category>
		<guid isPermaLink="false">https://www.justkannada.in/?p=45584</guid>

					<description><![CDATA[<p>ಬೆಂಗಳೂರು, ನವೆಂಬರ್,17,2020(www.justkannada.in):  ಸಿಲಿಂಡರ್ ಸ್ಪೋಟಗೊಂಡು ಮೂವರು ಬಾಲಕರು ಗಂಭೀರ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮಾಗಡಿ ಪಟ್ಟಣದ ರಾಜೀವ್ ಗಾಂಧಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ದರ್ಶನ್(18), ಕಿಶೋರ್(14), ಚಂದ್ರ(14) ಗಂಭೀರ ಗಾಯಗೊಂಡ ಬಾಲಕರು. ಮೂವರು ಬಾಲಕರು ಮಧ್ಯಾಹ್ನ ಅಡುಗೆ ಮಾಡಲು ಹೋದ ವೇಳೆ ಸಿಲಿಂಡರ್ ಸ್ಪೋಟಗೊಂಡು ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡ ಮೂವರು ಬಾಲಕರನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಾಗಡಿ ಪೊಲೀಸ್ [&#8230;]</p>
<p>The post <a href="https://www.justkannada.in/cylinder-explosion-three-boy-serious-injuries-magadi/">ಸಿಲಿಂಡರ್ ಸ್ಪೋಟ: ಮೂವರು ಬಾಲಕರಿಗೆ ಗಂಭೀರ ಗಾಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ನವೆಂಬರ್,17,2020(<a href="https://www.justkannada.in">www.justkannada.in</a>): </strong> ಸಿಲಿಂಡರ್ ಸ್ಪೋಟಗೊಂಡು ಮೂವರು ಬಾಲಕರು ಗಂಭೀರ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ.<img decoding="async" class="aligncenter size-full wp-image-7" src="https://www.justkannada.in/wp-content/uploads/2019/05/jk-logo.jpg" alt="kannada-journalist-media-fourth-estate-under-loss" width="125" height="125" /></p>
<p>ಮಾಗಡಿ ಪಟ್ಟಣದ ರಾಜೀವ್ ಗಾಂಧಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ದರ್ಶನ್(18), ಕಿಶೋರ್(14), ಚಂದ್ರ(14) ಗಂಭೀರ ಗಾಯಗೊಂಡ ಬಾಲಕರು. ಮೂವರು ಬಾಲಕರು ಮಧ್ಯಾಹ್ನ ಅಡುಗೆ ಮಾಡಲು ಹೋದ ವೇಳೆ ಸಿಲಿಂಡರ್ ಸ್ಪೋಟಗೊಂಡು ಈ ದುರ್ಘಟನೆ ಸಂಭವಿಸಿದೆ.<img decoding="async" class="aligncenter size-full wp-image-45585" src="https://www.justkannada.in/wp-content/uploads/2020/11/cylender.jpg" alt="cylinder-explosion-three-boy-serious-injuries-magadi" width="518" height="388" /></p>
<p>ಗಾಯಗೊಂಡ ಮೂವರು ಬಾಲಕರನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: Cylinder –explosion-Three –boy-serious –injuries- magadi</p>
<p>The post <a href="https://www.justkannada.in/cylinder-explosion-three-boy-serious-injuries-magadi/">ಸಿಲಿಂಡರ್ ಸ್ಪೋಟ: ಮೂವರು ಬಾಲಕರಿಗೆ ಗಂಭೀರ ಗಾಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
