Tag: newspapers
ದೇಶದ ಸ್ವಾತಂತ್ರ್ಯಕ್ಕೆ ಪತ್ರಿಕೆಗಳ ಕೊಡುಗೆ ಅಪಾರ- ಪ್ರೊ.ಮಂಜುನಾಥ್
ಮೈಸೂರು,ಮಾರ್ಚ್,23,2022(www.justkannada.in): ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕೆಗಳ ಕೊಡುಗೆ ಅಪಾರ ಎಂದು ಮೈಸೂರು ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ ಆಡಳಿತ ಮಂಡಳಿ ಕಾರ್ಯದರ್ಶಿ ಪ್ರೊ.ಎಂ. ಮಂಜುನಾಥ್ ಹೇಳಿದರು.
ಟಿ. ನರಸೀಪುರ ರಸ್ತೆಯ ದೊಡ್ಡಾಲಮರದ ಬಳಿ ಇರುವ ಕಾಲೇಜಿನಲ್ಲಿ ಬುಧವಾರ ನಡೆದ ಮೈಸೆಮ್- ಅಂತರಂಗ ಎಂಬ ದ್ವಿಭಾಷಾ ಮಾಸಿಕ ವಾರ್ತಾ ಪತ್ರಿಕೆಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ವತಃ ಮಹಾತ್ಮ ಗಾಂಧಿಜಿ ಅವರೇ ಎರಡು ಪತ್ರಿಕೆಗಳನ್ನು ಆರಂಭಿಸಿದ್ದರು. ಆಗ ಈಗಿನಂತೆ ದೃಶ್ಯ ಮಾಧ್ಯಮಗಳಿರಲಿಲ್ಲ. ಪತ್ರಿಕೆಗಳ ಮೂಲಕವೇ ಜನರನ್ನು ತಲುಪಬೇಕಿತ್ತು. ಪತ್ರಿಕೆಗಳು ಮೂಡಿಸಿದ ಜನಜಾಗೃತಿಯಿಂದಾಗಿ ದೇಶಕ್ಕೆ ಸ್ವಾತಂತ್ರ್ಯ ಲಭ್ಯವಾಯಿತು ಎಂದರು.
ಪ್ರತಿನಿತ್ಯ ಪತ್ರಿಕೆಗಳನ್ನು ಓದುವ ಅಭ್ಯಾಸ ಮಾಡಿಕೊಳ್ಳಬೇಕು. ಇದರಿಂದ ಐಎಎಸ್, ಕೆಎಎಸ್ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಬಹುದು. ಅಲ್ಲಿ ಸಾಮಾನ್ಯ ಜ್ಞಾನದ ಜೊತೆಗೆ ಇತರೆ ವಿಷಯಗಳು ಪ್ರಕಟವಾಗುವುದರಿಂದ ನಮ್ಮ ಬುದ್ಧಿಮತ್ತೆ ಹೆಚ್ಚಾಗುತ್ತದೆ ಎಂದು ಅವರು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್. ಪ್ರಭುಸ್ವಾಮಿ ಮಾತನಾಡಿ, ಮಾಧ್ಯಮಗಳಿಗೆ ಭಾರಿ ಮಹತ್ವವಿದೆ. ಪ್ರಪಂಚದ ಆಗುಹೋಗುಗಳ ಬಗ್ಗೆ ತಿಳಿಯಬೇಕಾದರೆ ಮಾಧ್ಯಮಗಳನ್ನು ಅವಲಂಬಿಸಬೇಕಾಗುತ್ತದೆ. ಹಿಂದೆ ಪತ್ರಿಕೆಗಳನ್ನು ಓದದಿದ್ದರೆ ದಿನ ಆರಂಭವಾಗುತ್ತಲೇ ಇರಲಿಲ್ಲ ಎಂಬ ಪರಿಸ್ಥಿತಿ ಇತ್ತು ಎಂದರು.
ಮೈಸೆಮ್ ಅಂತರಂಗ ವಾರ್ತಾ ಪತ್ರಿಕೆ ಬಿಡುಗಡೆ ಮಾಡಿದ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ,ಹಿಂದೆ ಕಾಲೇಜಿನಲ್ಲಿ ಗೋಡೆ ಪತ್ರಿಕೆಗಳು ಪ್ರಕಟವಾಗುತ್ತಿದ್ದವು. ಈಗ ಮುದ್ರಣದಲ್ಲಿಯೇ ಆಂತರಿಕ ಪತ್ರಿಕೆಗಳನ್ನು ಪ್ರಕಟಿಸಲಾಗುತ್ತಿದೆ. ಇದು ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ವೇದಿಕೆ ಕಲ್ಪಿಸುತ್ತದೆ. ಸಾಂಸ್ಥಿಕ ವರದಿಗಾರಿಕೆ ಕಲಿಯಲು ಸಹಕಾರಿಯಾಗುತ್ತದೆ ...
ಪತ್ರಿಕೆಗಳ ಜಾಹೀರಾತು ದರ ಪರಿಷ್ಕರಣೆ ಮಾಡುವಂತೆ ಶಿವಾನಂದ ತಗಡೂರು ಮನವಿ.
ಬೆಂಗಳೂರು,ಜೂನ್,12,2021(www.justkannada.in): ಪತ್ರಿಕೆಗಳ ಜಾಹೀರಾತು ದರ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮನವಿ ಮಾಡಿದ್ದಾರೆ.
ಈ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಿಗೆ ಮನವಿ...
ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ಬಿಡುಗಡೆ ಮಾಡಿಸುವ ಭರವಸೆ ನೀಡಿದ ಸಿಎಂ ಯಡಿಯೂರಪ್ಪ
ಬೆಂಗಳೂರು,ಮೇ,17,2021(www.justkannada.in): ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ನೀಡುವ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿದರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ಕರ್ನಾಟಕ ಜಿಲ್ಲಾ ಮತ್ತು...
“ಗ್ರಾಪಂ ಗ್ರಂಥಾಲಯದಲ್ಲಿ ಪತ್ರಿಕೆಯೊಂದಿಗೆ ಕಾಫಿ ಉಚಿತ”
ಮೈಸೂರು,ಮಾರ್ಚ್,17,2021(www.justkannada.in) : ಸ್ಥಳೀಯವಾಗಿ ಗ್ರಂಥಾಲಯವನ್ನು ಸ್ಥಾಪಿಸುವ ಮೂಲಕ ಮಕ್ಕಳು, ಯುವಕರು, ವಯಸ್ಕರಿಗೂ ಜ್ಞಾನವನ್ನು ಪಸರಿಸುವ ನಿಟ್ಟಿನಲ್ಲಿ ಮೈಸೂರು ತಾಲೂಕು ನಾಗವಾಲ ಗ್ರಾಮಪಂಚಾಯಿತಿ ಮುಂದಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ‘ಓದುವ ಬೆಳಕು’ ಕಾರ್ಯಕ್ರಮದಡಿ...
ಪತ್ರಿಕೆಗಳಿಗೆ ಜಾಹೀರಾತು ಹಣ ನೀಡದ ಏಜೆನ್ಸಿಗಳ ಮೇಲೆ ಕಠಿಣ ಕ್ರಮ : ಡಾ.ಹರ್ಷ
ಬೆಂಗಳೂರು,ಆಗಸ್ಟ್,30,2020(www.justkannada.in) : ಪತ್ರಿಕೆಗಳಿಗೆ ಜಾಹೀರಾತು ಹಣ ಇನ್ನೂ ನೀಡದ ಏಜೆನ್ಸಿಗಳ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ದೂರು ಬಂದ ಏಜೆನ್ಸಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ ಎಂದು ವಾರ್ತಾ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ...