<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>No liquor sale allowed for any reason: Minister Ramesh Zarakihilli Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/no-liquor-sale-allowed-for-any-reason-minister-ramesh-zarakihilli/feed/" rel="self" type="application/rss+xml" />
	<link>https://www.justkannada.in/tag/no-liquor-sale-allowed-for-any-reason-minister-ramesh-zarakihilli/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 19 Apr 2020 02:52:33 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>No liquor sale allowed for any reason: Minister Ramesh Zarakihilli Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/no-liquor-sale-allowed-for-any-reason-minister-ramesh-zarakihilli/</link>
	<width>32</width>
	<height>32</height>
</image> 
	<item>
		<title>ಯಾವುದೇ ಕಾರಣಕ್ಕೂ ಮದ್ಯ ಮಾರಾಟ ಅವಕಾಶ ಇಲ್ಲ‌: ಸಚಿವ ರಮೇಶ್ ಜಾರಕಿಹೊಳಿ‌</title>
		<link>https://www.justkannada.in/no-liquor-sale-allowed-for-any-reason-minister-ramesh-zarakihilli/</link>
		
		<dc:creator><![CDATA[JK Desk]]></dc:creator>
		<pubDate>Sun, 19 Apr 2020 02:52:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[No liquor sale allowed for any reason: Minister Ramesh Zarakihilli]]></category>
		<guid isPermaLink="false">https://www.justkannada.in/?p=26792</guid>

					<description><![CDATA[<p>ಬೆಳಗಾವಿ, ಏಪ್ರಿಲ್ 19, 2020 (www.justkannada.in): ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಕೊರೋನಾ ಸೋಂಕು ಹರಡುತ್ತಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. *ಕೋವಿಡ್ &#8211; 19 ನಿಯಂತ್ರಣ* ಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಶನಿವಾರ (ಏ.೧೮) *ಜಿಲ್ಲೆಯ ಉನ್ನತ ಅಧಿಕಾರಿಗಳ ಜೊತೆಗೆ ನಡೆದ ಸಭೆ* ಯಲ್ಲಿ ಮಾತನಾಡಿದ ಸಚಿವರು ಸದ್ಯಕ್ಕೆ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿರುವುದರಿಂದ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಆದ್ದರಿಂದ [&#8230;]</p>
<p>The post <a href="https://www.justkannada.in/no-liquor-sale-allowed-for-any-reason-minister-ramesh-zarakihilli/">ಯಾವುದೇ ಕಾರಣಕ್ಕೂ ಮದ್ಯ ಮಾರಾಟ ಅವಕಾಶ ಇಲ್ಲ‌: ಸಚಿವ ರಮೇಶ್ ಜಾರಕಿಹೊಳಿ‌</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಳಗಾವಿ, ಏಪ್ರಿಲ್ 19, 2020 (www.justkannada.in): ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಕೊರೋನಾ ಸೋಂಕು ಹರಡುತ್ತಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.</p>
<p>*ಕೋವಿಡ್ &#8211; 19 ನಿಯಂತ್ರಣ* ಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಶನಿವಾರ (ಏ.೧೮) *ಜಿಲ್ಲೆಯ ಉನ್ನತ ಅಧಿಕಾರಿಗಳ ಜೊತೆಗೆ ನಡೆದ ಸಭೆ* ಯಲ್ಲಿ ಮಾತನಾಡಿದ ಸಚಿವರು ಸದ್ಯಕ್ಕೆ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿರುವುದರಿಂದ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಆದ್ದರಿಂದ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ ಬರುವರೆಗೆ ಜಿಲ್ಲೆಯಲ್ಲಿ ಮದ್ಯ ಮಾರಾಟ ಆರಂಭಿಸಬಾರದು ಎಂದರು.</p>
<p>ಯಾವುದೇ ಒತ್ತಡಕ್ಕೂ ಮಣಿಯದೇ ಸೂಕ್ತ ವ್ಯವಸ್ಥೆ ಇರುವ ಹೋಟೆಲ್ ಗಳನ್ನು ಮಾತ್ರ ಕ್ವಾರಂಟೈನ್ ಗೆ ಪಡೆದುಕೊಳ್ಳಬೇಕು ಎಂದು ಸಚಿವರು ಜಿಲ್ಲಾಡಳಿತಕ್ಕೆ ಸೂಚಿಸಿದರು.</p>
<p>ಲಾಕ್ ಡೌನ್ ನಿಂದಾಗಿ ಜನರ ಹಣಕಾಸಿನ ಪರಿಸ್ಥಿತಿ ವಿಷಮವಾಗಿದ್ದು, ಸಹಕಾರಿ ಬ್ಯಾಂಕುಗಳನ್ನು ಪುನಃ ತೆರೆದು ಗ್ರಾಹಕರಿಗೆ ಸೇವೆ ಒದಗಿಸುವ ಬಗ್ಗೆ ಕೂಡಲೇ ಪರಿಶೀಲಿಸುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.</p>
<p>ಕೊರೋನಾ ‌ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ಪಿಪಿಇ ಕಿಟ್ ಗಳನ್ನು ಕಡ್ಡಾಯವಾಗಿ ನೀಡಬೇಕು. ಅದಕ್ಕಾಗಿ ಹೆಚ್ಚುವರಿಯಾಗಿ ಪಿಪಿಇ ಕಿಟ್ ಗಳನ್ನು ಖರೀದಿಸಲು ಕ್ರಮವಹಿಸಬೇಕು ಮತ್ತು ಜಿಲ್ಲೆಗೆ ಇನ್ನೂ ಹೆಚ್ಚಿನ ವೆಂಟಿಲೇಟರ್ ಗಳನ್ನು ಒದಗಿಸಬೇಕು ಎಂದು *ಜಲಸಂಪನ್ಮೂಲ ಸಚಿವರು*, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಮನವಿ ಮಾಡಿಕೊಂಡರು.</p>
<p>The post <a href="https://www.justkannada.in/no-liquor-sale-allowed-for-any-reason-minister-ramesh-zarakihilli/">ಯಾವುದೇ ಕಾರಣಕ್ಕೂ ಮದ್ಯ ಮಾರಾಟ ಅವಕಾಶ ಇಲ್ಲ‌: ಸಚಿವ ರಮೇಶ್ ಜಾರಕಿಹೊಳಿ‌</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
