<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Progress Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/progress/feed/" rel="self" type="application/rss+xml" />
	<link>https://www.justkannada.in/tag/progress/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 24 Jul 2026 11:48:32 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Progress Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/progress/</link>
	<width>32</width>
	<height>32</height>
</image> 
	<item>
		<title>ಕಾಮಗಾರಿಗಳ ಪ್ರಗತಿ ಪರಿಶೀಲನೆ: ರಾಜ್ಯದ ಎಲ್ಲಾ ಎಸ್ ಟಿಪಿ  ಘಟಕಗಳ ಸಮೀಕ್ಷೆge ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ.</title>
		<link>https://www.justkannada.in/minister-yathindra-siddaramaiah-10/</link>
		
		<dc:creator><![CDATA[prashanth]]></dc:creator>
		<pubDate>Fri, 24 Jul 2026 11:48:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[minister]]></category>
		<category><![CDATA[Progress]]></category>
		<category><![CDATA[Review]]></category>
		<category><![CDATA[works]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=157727</guid>

					<description><![CDATA[<p>ಬೆಂಗಳೂರು,ಜುಲೈ,24,2026 (www.justkannada.in):  ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು  ಇಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಂಡಳಿಯ ಯೋಜನೆಗಳ ಪ್ರಗತಿ ಹಾಗೂ ಆಡಳಿತಾತ್ಮಕ ಸುಧಾರಣೆಗಳಿಗೆ ಹಲವು ಪ್ರಮುಖ ನಿರ್ದೇಶನಗಳನ್ನು ನೀಡಿದರು. ನಗರ ನೀರು ಸರಬರಾಜು ಮಂಡಳಿಯು ಎಲ್ಲಾ ಪ್ರದೇಶಗಳಲ್ಲಿ ಚರಂಡಿ ಹಾಗೂ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಸರಿಯಾಗಿ ಮ್ಯಾಪ್ ಮಾಡಿ, ಆಯಾ ಪ್ರದೇಶದ ಸಾಮರ್ಥ್ಯಕ್ಕೆ ಅನುಗುಣವಾಗಿ ಸೂಕ್ತವಾದ ಸುಧಾರಿತ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕು ಎಂದು [&#8230;]</p>
<p>The post <a href="https://www.justkannada.in/minister-yathindra-siddaramaiah-10/">ಕಾಮಗಾರಿಗಳ ಪ್ರಗತಿ ಪರಿಶೀಲನೆ: ರಾಜ್ಯದ ಎಲ್ಲಾ ಎಸ್ ಟಿಪಿ  ಘಟಕಗಳ ಸಮೀಕ್ಷೆge ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,24,2026 (<a href="http://www.justkannada.in">www.justkannada.in</a>):</strong>  ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು  ಇಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಂಡಳಿಯ ಯೋಜನೆಗಳ ಪ್ರಗತಿ ಹಾಗೂ ಆಡಳಿತಾತ್ಮಕ ಸುಧಾರಣೆಗಳಿಗೆ ಹಲವು ಪ್ರಮುಖ ನಿರ್ದೇಶನಗಳನ್ನು ನೀಡಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ನಗರ ನೀರು ಸರಬರಾಜು ಮಂಡಳಿಯು ಎಲ್ಲಾ ಪ್ರದೇಶಗಳಲ್ಲಿ ಚರಂಡಿ ಹಾಗೂ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಸರಿಯಾಗಿ ಮ್ಯಾಪ್ ಮಾಡಿ, ಆಯಾ ಪ್ರದೇಶದ ಸಾಮರ್ಥ್ಯಕ್ಕೆ ಅನುಗುಣವಾಗಿ ಸೂಕ್ತವಾದ ಸುಧಾರಿತ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.</p>
<p>ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ನಿಗದಿತ ಗುರಿ ಸಾಧಿಸಬೇಕು. ಕಾಮಗಾರಿ ವಿಳಂಬವಾಗುತ್ತಿರುವ ಸ್ಥಳಗಳನ್ನು ಗುರುತಿಸಿ ಗುತ್ತಿಗೆದಾರರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಸಕಾರಣವಿಲ್ಲದೆ ಅನಗತ್ಯವಾಗಿ ಹಣ ಬಿಡುಗಡೆ ಮಾಡುವುದನ್ನು ತಡೆಯಬೇಕು. ಗುತ್ತಿಗೆದಾರ ಏಜೆನ್ಸಿಗೆ ಅನುದಾನ ಬಿಡುಗಡೆ ಮಾಡಲು ವಿಶ್ವಬ್ಯಾಂಕ್ ಅನುಸರಿಸುವ ಮಾದರಿಯನ್ನು ಅನುಸರಿಸಿ, ಸೂಕ್ತ &#8216;ಪಾಲಿಸಿ ಫ್ರೇಮ್‌ ವರ್ಕ್&#8217; ರೂಪಿಸಬೇಕು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಸ್ಥಳೀಯ ಸಂಸ್ಥೆಗಳು ಯೋಜನೆಗಳ ಸೂಕ್ತ ನಿರ್ವಹಣೆ ಮಾಡದಿರುವುದು ಹಾಗೂ ಬಾಕಿ ಹಣ ಪಾವತಿಸದಿರುವುದನ್ನು ಗಮನಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಮಂಡಳಿಯೇ ಪ್ರತ್ಯೇಕ ಪಾಲಿಸಿ ರೂಪಿಸಿ ಆದಾಯ ತರಬಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.<img decoding="async" class="aligncenter size-full wp-image-157729" src="https://www.justkannada.in/wp-content/uploads/2026/07/yathindra-siddaramaiah.jpg12.jpg" alt="" width="500" height="499" srcset="https://www.justkannada.in/wp-content/uploads/2026/07/yathindra-siddaramaiah.jpg12.jpg 500w, https://www.justkannada.in/wp-content/uploads/2026/07/yathindra-siddaramaiah.jpg12-300x300.jpg 300w, https://www.justkannada.in/wp-content/uploads/2026/07/yathindra-siddaramaiah.jpg12-150x150.jpg 150w, https://www.justkannada.in/wp-content/uploads/2026/07/yathindra-siddaramaiah.jpg12-421x420.jpg 421w, https://www.justkannada.in/wp-content/uploads/2026/07/yathindra-siddaramaiah.jpg12-100x100.jpg 100w" sizes="(max-width: 500px) 100vw, 500px" /></p>
<p>ನೀರು ಪೋಲಾಗುವುದು ಮತ್ತು ಸಿಬ್ಬಂದಿ ದುರುಪಯೋಗ ತಡೆಯಲು &#8216;ಸ್ಮಾರ್ಟ್ ಮೀಟರ್&#8217; ಅಳವಡಿಸಲು ಸಲಹೆ ನೀಡಿದರು. ಆರಂಭದಲ್ಲಿ ಇದನ್ನು &#8216;ಪೈಲಟ್ ಪ್ರಾಜೆಕ್ಟ್&#8217; ಆಗಿ ಜಾರಿಗೆ ತಂದು, ಮಂಡಳಿಯೇ ನಿರ್ವಹಿಸುವ ಮೂಲಕ ಆದಾಯ ಹೆಚ್ಚಿಸಿಕೊಳ್ಳುವ ಮಾದರಿಯನ್ನು ಪರಿಶೀಲಿಸಲು ತಿಳಿಸಿದರು.</p>
<p>ಯೋಜನಾ ವರದಿ ತಯಾರಿಸುವಾಗ ಹಾಗೂ ಎಸ್.ಟಿ.ಪಿ. ನಿರ್ಮಾಣಕ್ಕೆ ಜಾಗ ಕಾಯ್ದಿರಿಸುವಾಗ ಸ್ಥಳೀಯ ಸಂಸ್ಥೆಗಳೊಂದಿಗೆ ಪೂರ್ಣ ಪ್ರಮಾಣದಲ್ಲಿ ಚರ್ಚಿಸಬೇಕು. ಒಮ್ಮೆ ಜಾಗ ಅಂತಿಮಗೊಂಡ ಮೇಲೆ ಪದೇ ಪದೇ ಬದಲಾಯಿಸುವುದನ್ನು ತಡೆದು, ತಾಂತ್ರಿಕ ತಂಡ ಪೂರ್ಣ ಜವಾಬ್ದಾರಿಯಿಂದ ಕೆಲಸ ಮಾಡಬೇಕೆಂದು ಸೂಚಿಸಿದರು.</p>
<p>ಮಂಡಳಿಯ ಪ್ರಗತಿಯ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.  ಗ್ರೇಟರ್ ಬೆಂಗಳೂರು ವ್ಯಾಪ್ತಿಯನ್ನು ಹೊರತುಪಡಿಸಿ, ರಾಜ್ಯದ ಇತರ ನಗರ ಪ್ರದೇಶಗಳಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಸೌಕರ್ಯ ಒದಗಿಸುವ ಜವಾಬ್ದಾರಿಯನ್ನು ಮಂಡಳಿ ಹೊಂದಿದೆ. ರಾಜ್ಯದಲ್ಲಿ ಈವರೆಗೆ 256 ನಗರ ಪ್ರದೇಶಗಳಿಗೆ ಶಾಶ್ವತ ಮೇಲ್ಮೈ ಮೂಲಗಳಿಂದ ಸುರಕ್ಷಿತ ಕುಡಿಯುವ ನೀರು ಕಲ್ಪಿಸಲಾಗಿದ್ದು, ಉಳಿದ 60 ಪಟ್ಟಣಗಳಿಗೆ ಅಂತರ್ಜಲ ಮೂಲದಿಂದ ನೀರು ಪೂರೈಸಲಾಗುತ್ತಿದೆ.</p>
<p><strong>ಮಾರ್ಚ್ 2026ರವರೆಗಿನ ಸಾಧನೆ:</strong></p>
<p>​ಮಂಡಳಿಯಿಂದ ಇದುವರೆಗೆ 649 ನೀರು ಸರಬರಾಜು ಯೋಜನೆಗಳು ಹಾಗೂ 181 ಒಳಚರಂಡಿ (UGD) ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಒಟ್ಟು ರೂ. 16,887.84 ಕೋಟಿ ವೆಚ್ಚ ಮಾಡಲಾಗಿದ್ದು, ಇದರಲ್ಲಿ ಕುಡಿಯುವ ನೀರಿಗೆ ರೂ. 11,531.91 ಕೋಟಿ ಹಾಗೂ ಒಳಚರಂಡಿ ಯೋಜನೆಗಳಿಗೆ ರೂ. 5,355.93 ಕೋಟಿ ವಿನಿಯೋಗಿಸಲಾಗಿದೆ ಎಂದು ಮಾಹಿತಿ ನೀಡಿದರು.</p>
<p>2026-27ನೇ ಸಾಲಿನ ಆಯವ್ಯಯ ಹಾಗೂ ಯೋಜನೆಗಳು:</p>
<p>2026-27ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಯೋಜನೆಯಡಿ ರೂ. 700.00 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.</p>
<p>ಕಲಬುರಗಿ ನಗರಕ್ಕೆ 24/7 ಶಾಶ್ವತ ಕುಡಿಯುವ ನೀರು ಪೂರೈಸಲು ರೂ. 1,863 ಕೋಟಿ ವೆಚ್ಚದ ಡಿಪಿಆರ್‌ಗೆ ತಾತ್ವಿಕ ಅನುಮೋದನೆ ದೊರೆತಿದೆ.</p>
<p>ಮೈಸೂರು ನಗರಕ್ಕೆ ಕಾವೇರಿ ನದಿಯಿಂದ (ಉಂಡವಾಡಿ) ಸಗಟು ನೀರು ಸರಬರಾಜು ಯೋಜನೆ (ಅಂದಾಜು ವೆಚ್ಚ ರೂ. 595 ಕೋಟಿ) ಸೇರಿದಂತೆ ಹಲವು ಬೃಹತ್ ಯೋಜನೆಗಳ ಕಾಮಗಾರಿ ಚಾಲ್ತಿಯಲ್ಲಿದೆ.</p>
<p>​ಅಮೃತ್ 2.0 (AMRUT 2.0) ಯೋಜನೆ:</p>
<p>​ಅಮೃತ್ 2.0 ಯೋಜನೆಯಡಿ ಒಟ್ಟು 227 ನೀರು ಸರಬರಾಜು ಯೋಜನೆಗಳನ್ನು (ಮೊತ್ತ ರೂ. 9,590 ಕೋಟಿ) ಹಮ್ಮಿಕೊಳ್ಳಲಾಗಿದೆ.</p>
<p>​ಒಟ್ಟು 215 ಯೋಜನೆಗಳಿಗೆ ಗುತ್ತಿಗೆ ವಹಿಸಲಾಗಿದ್ದು, ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.<img loading="lazy" decoding="async" class="aligncenter size-full wp-image-157728" src="https://www.justkannada.in/wp-content/uploads/2026/07/yathindra-siddaramaiah-1.jpg" alt="" width="500" height="333" srcset="https://www.justkannada.in/wp-content/uploads/2026/07/yathindra-siddaramaiah-1.jpg 500w, https://www.justkannada.in/wp-content/uploads/2026/07/yathindra-siddaramaiah-1-300x200.jpg 300w, https://www.justkannada.in/wp-content/uploads/2026/07/yathindra-siddaramaiah-1-150x100.jpg 150w" sizes="auto, (max-width: 500px) 100vw, 500px" /></p>
<p>ಸಭೆಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಶಿವಲೀಲಾ ವಿನಯ್ ಕುಲಕರ್ಣಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಡಾ. ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Progress, review, works, Minister, Yathindra Siddaramaiah</p>
<p>The post <a href="https://www.justkannada.in/minister-yathindra-siddaramaiah-10/">ಕಾಮಗಾರಿಗಳ ಪ್ರಗತಿ ಪರಿಶೀಲನೆ: ರಾಜ್ಯದ ಎಲ್ಲಾ ಎಸ್ ಟಿಪಿ  ಘಟಕಗಳ ಸಮೀಕ್ಷೆge ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆ: ಅಧಿಕಾರಿಗಳಿಗೆ ಹಲವು ಸೂಚನೆಗಳನ್ನ ನೀಡಿದ ಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/forest-department-cm-dk-shivakumar/</link>
		
		<dc:creator><![CDATA[prashanth]]></dc:creator>
		<pubDate>Tue, 30 Jun 2026 05:46:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM DK Shivakumar]]></category>
		<category><![CDATA[forest department]]></category>
		<category><![CDATA[meeting]]></category>
		<category><![CDATA[Progress]]></category>
		<category><![CDATA[Review]]></category>
		<guid isPermaLink="false">https://www.justkannada.in/?p=156701</guid>

					<description><![CDATA[<p>ಬೆಂಗಳೂರು,ಜೂನ್,30,2026 (www.justkannada.in): ಗಣಿಗಾರಿಕೆ ಸೇರಿ ನಾನಾ ಚಟುವಟಿಕೆಗಳಿಗೆ ಸರ್ಕಾರಿ ಜಾಗ ಪಡೆದು ವರ್ಷಗಳ ಕಾಲ ಚಟುವಟಿಕೆ ಆರಂಭಿಸದಿದ್ದರೆ ಕ್ರಮ ಕೈಗೊಳ್ಳಿ. ಬಾಕಿ ಇರುವ ಅರಣ್ಯ ಅನುಮತಿ ಪ್ರಕರಣಗಳನ್ನು ಜುಲೈ 15ರೊಳಗೆ ಇತ್ಯರ್ಥಪಡಿಸಿ ಎಂದು ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದರು. ವಿಧಾನಸೌಧದಲ್ಲಿ ನಡೆದ ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಿಎಂ ಡಿ.ಕೆ ಶಿವಕುಮಾರ್, ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆ, ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಿ. ನಮ್ಮ ಅರಣ್ಯ ಪ್ರಾಣಿ ಸಂಪತ್ತು ಅಮೂಲ್ಯವಾದದ್ದು. ಸಂರಕ್ಷಣೆ ಪರಿಣಾಮಕಾರಿಯಾಗಿ [&#8230;]</p>
<p>The post <a href="https://www.justkannada.in/forest-department-cm-dk-shivakumar/">ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆ: ಅಧಿಕಾರಿಗಳಿಗೆ ಹಲವು ಸೂಚನೆಗಳನ್ನ ನೀಡಿದ ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,30,2026 (<a href="http://www.justkannada.in">www.justkannada.in</a>):</strong> ಗಣಿಗಾರಿಕೆ ಸೇರಿ ನಾನಾ ಚಟುವಟಿಕೆಗಳಿಗೆ ಸರ್ಕಾರಿ ಜಾಗ ಪಡೆದು ವರ್ಷಗಳ ಕಾಲ ಚಟುವಟಿಕೆ ಆರಂಭಿಸದಿದ್ದರೆ ಕ್ರಮ ಕೈಗೊಳ್ಳಿ. ಬಾಕಿ ಇರುವ ಅರಣ್ಯ ಅನುಮತಿ ಪ್ರಕರಣಗಳನ್ನು ಜುಲೈ 15ರೊಳಗೆ ಇತ್ಯರ್ಥಪಡಿಸಿ ಎಂದು ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಧಾನಸೌಧದಲ್ಲಿ ನಡೆದ ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಿಎಂ ಡಿ.ಕೆ ಶಿವಕುಮಾರ್, ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆ, ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಿ. ನಮ್ಮ ಅರಣ್ಯ ಪ್ರಾಣಿ ಸಂಪತ್ತು ಅಮೂಲ್ಯವಾದದ್ದು. ಸಂರಕ್ಷಣೆ ಪರಿಣಾಮಕಾರಿಯಾಗಿ ಆಗಬೇಕು. ಕೈಗಾರಿಕೆ ಹಾಗೂ ಗಣಿಗಾರಿಕೆ ಯೋಜನೆಗಳಿಗೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ನಿಗದಿತ ಕಾಲಮಿತಿಯೊಳಗೆ ನೀಡುವ ವ್ಯವಸ್ಥೆ ಮಾಡಬೇಕು. ಸರ್ಕಾರದ ಜಾಗವನ್ನು ಪಡೆದು ಐದಾರು ವರ್ಷಗಳ ಕಾಲ ಖಾಲಿ ಬಿಟ್ಟರೆ ಸರ್ಕಾರಕ್ಕೆ ಯಾವುದೇ ಆದಾಯ ದೊರೆಯುವುದಿಲ್ಲ. ಅಷ್ಟೇ ಅಲ್ಲದೆ, ಈ ಅವಧಿಯಲ್ಲಿ ಉತ್ಪಾದನಾ ವೆಚ್ಚ, ಸರಕುಗಳ ಬೆಲೆ ಹಾಗೂ ಯೋಜನೆಯ ಒಟ್ಟು ಮೌಲ್ಯವೂ ಹೆಚ್ಚಾಗುತ್ತದೆ. ಇಂತಹ ವಿಳಂಬವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.</p>
<p>ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ತುಷಾರ ಗಿರಿನಾಥ್ ಅವರು, ಬಾಕಿ ಇರುವ ಎಲ್ಲಾ ಹಳೆಯ ಅರಣ್ಯ ಅನುಮತಿ ಪ್ರಕರಣಗಳನ್ನು ಜುಲೈ 15ರೊಳಗೆ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.</p>
<p>ಅರಣ್ಯ ಭೂಮಿ ಒತ್ತುವರಿ ತೆರವು, ಮಾನವ–ವನ್ಯಜೀವಿ ಸಂಘರ್ಷ ತಡೆ ಹಾಗೂ ಅರಣ್ಯ ಸಂರಕ್ಷಣೆಗೆ ಸಂಬಂಧಿಸಿದ ಕ್ರಮಗಳ ಕುರಿತು ಸಿಎಂ ಡಿಕೆ ಶಿವಕುಮಾರ್ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಅರಣ್ಯವಾಸಿಗಳ ಅರಣ್ಯ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಸಣ್ಣಪುಟ್ಟ ನೆಪಗಳನ್ನು ಮುಂದಿಟ್ಟು ಅವರಿಗೆ ತೊಂದರೆ ನೀಡಬಾರದು. ನಿಯಮಾನುಸಾರ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಸೂಚಿಸಿದರು.</p>
<p>ನೆಡುತೋಪು ನಿರ್ಮಾಣ ಹಾಗೂ ಸಾರ್ವಜನಿಕರಿಗೆ ಸಸಿ ವಿತರಣೆ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>
<p>ಇಲಾಖೆಯ ಆಡಳಿತ ವ್ಯವಸ್ಥೆ, ಪ್ರಮುಖ ಯೋಜನೆಗಳು ಹಾಗೂ ವಿವಿಧ ಹಂತಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಸಮಗ್ರ ಮಾಹಿತಿ ಪಡೆದು, ಅಗತ್ಯ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವ ಕುರಿತು ಸಿಎಂ ಡಿಕೆ ಶಿವಕುಮಾರ್ ಚರ್ಚೆ ನಡೆಸಿದರು.<img loading="lazy" decoding="async" class="aligncenter size-full wp-image-101304" src="https://www.justkannada.in/wp-content/uploads/2022/12/dks.jpg" alt="" width="500" height="281" srcset="https://www.justkannada.in/wp-content/uploads/2022/12/dks.jpg 500w, https://www.justkannada.in/wp-content/uploads/2022/12/dks-300x169.jpg 300w" sizes="auto, (max-width: 500px) 100vw, 500px" /></p>
<p>ಬೆಳೆನಾಶ, ಜಾನುವಾರು ಜೀವಹಾನಿ, ಮಾನವ ಪ್ರಾಣ ಹಾನಿ, ಶಾಶ್ವತ ಅಂಗವಿಕಲತೆ, ಭಾಗಶಃ ಅಂಗವಿಕಲತೆ, ಮಾನವ ಗಾಯ, ಆಸ್ತಿನಾಶ, ಮಾಶಾಸನ ಗಳಿಗಾಗಿ 2025-2026ನೇ ಸಾಲಿನಲ್ಲಿ 6306 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಮಾನವ, ಅರಣ್ಯಜೀವಿ ಸಂಘರ್ಷ ತಪ್ಪಿಸಲು ರೈಲ್ವೆ ಬ್ಯಾರಿಕೇಡ್‌, ಆನೆತಡೆ ಕಂದಕ ಮತ್ತು ಸೌರತಂತಿ ಬೇಲಿಗಳನ್ನು ಅಳವಡಿಸಲಾಗುತ್ತಿರುವ ಬಗ್ಗೆ ಹಾಗೂ ಆನೆ ಕಾರ್ಯಪಡೆ, ಚಿರತೆ ಕಾರ್ಯಪಡೆ ಹಾಗೂ ಎಸ್‌ ಎಂಎಸ್‌ ಮತ್ತು ಇತರೆ ಡಿಜಿಟಲ್‌ ಬೋರ್ಡ್‌ಗಳ ಮೂಲಕ ಅರಿವು ಮೂಡಿಸುತ್ತಿರುವ ಪ್ರಮಾಣಗಳ ಬಗ್ಗೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>
<p>ಇದಕ್ಕೆ ಪ್ರತಿಕ್ರಿಯಿಸಿದ  ಸಿಎಂ ಡಿಕೆ ಶಿವಕುಮಾರ್, ಪ್ರಾಣಿಗಳು ಸಹ ಈ ಎಲ್ಲಾ ಅಡೆತಡೆಗಳನ್ನು ದಾಟಲು ನಾನಾ ಮಾರ್ಗಗಳನ್ನು ಕಂಡುಕೊಳ್ಳುತ್ತವೆ. ಹೀಗಾಗಿ ಅಧಿಕಾರಿಗಳು ಕೂಡ ಆಗಾಗ ಇತರೆ ಹೊಸ ಮಾರ್ಗೋಪಾಯಗಳ ಬಗ್ಗೆ ಅಧ್ಯಯನ ನಡೆಸಬೇಕು ಎಂದು ಸೂಚನೆ ನೀಡಿದರು.</p>
<p>ಸಭೆಯಲ್ಲಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ ಕುರಿತು ಪರಿಶೀಲನೆ ಮತ್ತು ಚರ್ಚೆ,  ಪ್ರಾಣಿ ಸಂಪತ್ತಿನ ಮೇಲೆ ನಿಗಾ ಇಡಲು ಥರ್ಮಲ್‌ ದ್ರೋಣ್‌ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.<img loading="lazy" decoding="async" class="aligncenter size-full wp-image-156702" src="https://www.justkannada.in/wp-content/uploads/2026/06/cm-dks.jpg" alt="" width="500" height="244" srcset="https://www.justkannada.in/wp-content/uploads/2026/06/cm-dks.jpg 500w, https://www.justkannada.in/wp-content/uploads/2026/06/cm-dks-300x146.jpg 300w, https://www.justkannada.in/wp-content/uploads/2026/06/cm-dks-150x73.jpg 150w" sizes="auto, (max-width: 500px) 100vw, 500px" /></p>
<p>ಶರಾವತಿ ಪಂಪ್ ಸ್ಟೋರೇಜ್‌, ಗೋವಾ ತಮ್ನೇರ್‌, ಕಳಸಾ ಬಂಡೂರಿ ಮತ್ತು ಬಿಡಿಎ ಫೆರಿಫೆರಲ್‌  ರಿಂಗ್‌ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಮತ್ತು  ಕೇಂದ್ರ ಅರಣ್ಯ ಇಲಾಖೆಗಳ ವಿವಿಧ ಹಂತಗಳಲ್ಲಿ ಬಾಕಿ ಇರುವ ಅರಣ್ಯ ಅನುಮತಿ ವಿಚಾರಗಳಲ್ಲಿ ತ್ವರಿತ ಗತಿಯಲ್ಲಿ ಕ್ರಮ ವಹಿಸುವಂತೆ ಸೂಚನೆ ನೀಡಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಸರಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ರಿತೇಶ್ ಕುಮಾರ್ ಸಿಂಗ್, ಅಂಜುಮ್ ಪರ್ವೇಜ್, ಕರ್ನಾಟಕ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಸಿಎಂ ಆರ್ಥಿಕ ಸಲಹೆಗಾರ ಎಲ್ ಕೆ ಅತೀಕ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.</p>
<p>Key words: Forest Department, progress, review, meeting, CM DK Shivakumar</p>
<p>The post <a href="https://www.justkannada.in/forest-department-cm-dk-shivakumar/">ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆ: ಅಧಿಕಾರಿಗಳಿಗೆ ಹಲವು ಸೂಚನೆಗಳನ್ನ ನೀಡಿದ ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತೆರಿಗೆ ವಂಚನೆ ಮತ್ತು ತೆರಿಗೆ ಸೋರಿಕೆ ಸಂಪೂರ್ಣ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಡಿಕೆಶಿ ಸೂಚನೆ</title>
		<link>https://www.justkannada.in/meeting-cm-dk-shivakumar/</link>
		
		<dc:creator><![CDATA[prashanth]]></dc:creator>
		<pubDate>Fri, 26 Jun 2026 12:06:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM DK Shivakumar]]></category>
		<category><![CDATA[Commerce Department]]></category>
		<category><![CDATA[meeting]]></category>
		<category><![CDATA[Progress]]></category>
		<category><![CDATA[Review]]></category>
		<guid isPermaLink="false">https://www.justkannada.in/?p=156592</guid>

					<description><![CDATA[<p>ಬೆಂಗಳೂರು,ಜೂನ್,26,2026 (www.justkannada.in): ತೆರಿಗೆ ವಂಚನೆಗೆ ಯಾವುದೇ ಅವಕಾಶ ನೀಡಬಾರದು. ತೆರಿಗೆ ಸೋರಿಕೆಯನ್ನು ಸಂಪೂರ್ಣವಾಗಿ ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಾಣಿಜ್ಯ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ತಾಕೀತು ಮಾಡಿದರು. ಇಂದು  ವಿಧಾನಸೌಧದಲ್ಲಿ ನಡೆದ ವಾಣಿಜ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಅಧಿಕಾರಿಗಳಿಗೆ ನೀಡಿದ  ಸ್ಪಷ್ಟ ಸೂಚನೆಗಳು ಹೀಗಿವೆ&#8230; ವಾಣಿಜ್ಯ ತೆರಿಗೆ ಅಧಿಕಾರಿಗಳು ಸರ್ಕಾರದ ಶಕ್ತಿ. ನೀವು ಶಕ್ತಿ ಕೊಡದಿದ್ದರೆ ಸರ್ಕಾರ ನಡೆಸುವುದು ಕಷ್ಟ. ವಾಣಿಜ್ಯ ತೆರಿಗೆ ಇಲಾಖೆಗೆ [&#8230;]</p>
<p>The post <a href="https://www.justkannada.in/meeting-cm-dk-shivakumar/">ತೆರಿಗೆ ವಂಚನೆ ಮತ್ತು ತೆರಿಗೆ ಸೋರಿಕೆ ಸಂಪೂರ್ಣ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಡಿಕೆಶಿ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,26,2026 (<a href="http://www.justkannada.in">www.justkannada.in</a>):</strong> ತೆರಿಗೆ ವಂಚನೆಗೆ ಯಾವುದೇ ಅವಕಾಶ ನೀಡಬಾರದು. ತೆರಿಗೆ ಸೋರಿಕೆಯನ್ನು ಸಂಪೂರ್ಣವಾಗಿ ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಾಣಿಜ್ಯ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ತಾಕೀತು ಮಾಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು  ವಿಧಾನಸೌಧದಲ್ಲಿ ನಡೆದ ವಾಣಿಜ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಅಧಿಕಾರಿಗಳಿಗೆ ನೀಡಿದ  ಸ್ಪಷ್ಟ ಸೂಚನೆಗಳು ಹೀಗಿವೆ&#8230;</p>
<p>ವಾಣಿಜ್ಯ ತೆರಿಗೆ ಅಧಿಕಾರಿಗಳು ಸರ್ಕಾರದ ಶಕ್ತಿ. ನೀವು ಶಕ್ತಿ ಕೊಡದಿದ್ದರೆ ಸರ್ಕಾರ ನಡೆಸುವುದು ಕಷ್ಟ. ವಾಣಿಜ್ಯ ತೆರಿಗೆ ಇಲಾಖೆಗೆ ಪ್ರಸ್ತುತ ಹಣಕಾಸು ವರ್ಷಕ್ಕೆ ನೀಡಿರುವ ತೆರಿಗೆ ಸಂಗ್ರಹದ ಗುರಿಯನ್ನು ಮೀರಿ ಸಾಧನೆ ತೋರಿಸುತ್ತೀರೆಂಬ ವಿಶ್ವಾಸ ನನಗಿದೆ. ಆರ್ಥಿಕ ಇಲಾಖೆ ಅಧಿಕಾರಿಗಳು, ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್‌ ಅವರು ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್‌ ಅವರು ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಹಲವು ಸಲಹೆಗಳನ್ನು ನೀಡಿದ್ದಾರೆ. ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಜವಾಬ್ದಾರಿ ಈಗ ನಿಮ್ಮೆಲ್ಲರ ಮೇಲಿದೆ. ಅಧಿಕಾರಿಗಳ ಮೇಲೆ ನನಗೆ ಪೂರ್ತಿ ಭರವಸೆ ಇದೆ. ನೀವೆಲ್ಲಾ ನನ್ನ ನಿರೀಕ್ಷೆ ಈಡೇರಿಸಲು ಶ್ರಮಿಸುತ್ತೀರಿ ಎನ್ನುವ ವಿಶ್ವಾಸವೂ ಇದೆ. ಯಾವುದೇ ಸರಕು ಸಾಗಣೆ ವಾಹನವು ಅಗತ್ಯ ದಾಖಲೆಗಳಿಲ್ಲದೆ ಚೆಕ್‌ ಪೋಸ್ಟ್‌ ಅಥವಾ ರಾಜ್ಯದ ಗಡಿಯನ್ನು ದಾಟಬಾರದು. ತೆರಿಗೆ ಸೋರಿಕೆಗೆ ಯಾವುದೇ ಅವಕಾಶ ಇರಬಾರದು. ಇದರಲ್ಲಿ ಯಾವುದೇ ರೀತಿಯ ರಾಜಿ ಅಥವಾ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ನಾನು ಎಲ್ಲವನ್ನೂ ಗಮನಿಸುತ್ತಿದ್ದೇನೆ. ರಾಜ್ಯದ ಎಲ್ಲ ವಲಯಗಳಿಂದಲೂ ನನಗೆ ನಿರಂತರ ಮಾಹಿತಿ ಬರುತ್ತದೆ. ಚಿಕ್ಕಪೇಟೆಯಿಂದ ಗಾಂಧಿನಗರದವರೆಗೆ, ಗಡಿ ಜಿಲ್ಲೆಗಳಿಂದ ರಾಜ್ಯದ ಎಲ್ಲ ಭಾಗಗಳಲ್ಲೂ ನನ್ನದೇ ಆದ ಸಂಪರ್ಕಗಳಿವೆ. ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿ ಯಾವುದೇ ಲೋಪ ಅಥವಾ ನಿರ್ಲಕ್ಷ್ಯ ನಡೆದರೂ ಅದು ನನ್ನ ಗಮನಕ್ಕೆ ಬರುತ್ತದೆ. ಆದ್ದರಿಂದ ನನಗೆ ಬರುತ್ತಿರುವ ಮಾಹಿತಿಯೂ ನಿಮ್ಮ ಕಾರ್ಯಕ್ಷಮತೆಯ ವರದಿಯೂ ಒಂದಕ್ಕೊಂದು ಹೊಂದಿಕೆಯಾಗಬೇಕು. ಪಕ್ಕದ ರಾಜ್ಯಗಳ ವಾಣಿಜ್ಯ ತೆರಿಗೆ ಇಲಾಖೆ ಮತ್ತು ಜಾರಿ ಸಂಸ್ಥೆಗಳೊಂದಿಗೆ ಉತ್ತಮ ಸಮನ್ವಯ ಸಾಧಿಸಿ. ಮಾಹಿತಿ ಹಂಚಿಕೆ ಮತ್ತು ಜಂಟಿ ಕಾರ್ಯಾಚರಣೆಗಳ ಮೂಲಕ ತೆರಿಗೆ ಸೋರಿಕೆಯನ್ನು ಪರಿಣಾಮಕಾರಿಯಾಗಿ ತಡೆಯಬೇಕು.</p>
<p>ಇಂದು ನಮ್ಮ ಬಳಿ ಸುಮಾರು 12 ಲಕ್ಷ ತೆರಿಗೆದಾರರ ಮಾಹಿತಿಯಿದೆ. ತಂತ್ರಜ್ಞಾನ ಮತ್ತು ಡೇಟಾ ಅನಾಲಿಟಿಕ್ಸ್ ಮೂಲಕ ಅವರನ್ನು 360 ಡಿಗ್ರಿ ದೃಷ್ಟಿಕೋನದಲ್ಲಿ ವಿಶ್ಲೇಷಿಸುವ ಸಾಮರ್ಥ್ಯ ನಿಮಗಿದೆ. ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡರೆ ನಿಮಗೆ ನೀಡಿರುವ ಗುರಿಯನ್ನು ಸಾಧಿಸುವುದಷ್ಟೇ ಅಲ್ಲ, ಅದನ್ನು ಮೀರಿಸುವ ಸಾಮರ್ಥ್ಯವೂ ನಿಮ್ಮಿಂದ ಸಾಧ್ಯವಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.</p>
<p><strong>ಬುದ್ಧಿವಂತಿಕೆಯಿಂದ ಕಾರ್ಯನಿರ್ವಹಿಸಿದರೆ ಗುರಿ ಮೀರಿದ ಸಾಧನೆ ಮಾಡುವುದು ಸಾಧ್ಯ..</strong></p>
<p>ನಮ್ಮ ಉದ್ದೇಶ ಯಾರಿಗೂ ಅನಗತ್ಯ ತೊಂದರೆ ನೀಡುವುದಲ್ಲ. ಪ್ರಾಮಾಣಿಕ ತೆರಿಗೆದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ತೆರಿಗೆ ಪಾವತಿಸುವ ಪ್ರತಿಯೊಬ್ಬ ನಾಗರಿಕನನ್ನು ಘನತೆ ಮತ್ತು ಗೌರವದಿಂದ ನಡೆಸಿಕೊಳ್ಳಬೇಕು. ಜೊತೆಗೆ ಇಲಾಖೆಯ ಸಿಬ್ಬಂದಿಯನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬುದ್ಧಿವಂತಿಕೆಯಿಂದ ಕಾರ್ಯನಿರ್ವಹಿಸಿದರೆ ಗುರಿಯನ್ನು ಮೀರಿದ ಸಾಧನೆ ಮಾಡುವುದು ಸಾಧ್ಯ. ಆದರೆ ತೆರಿಗೆ ವಂಚನೆಗೆ ಮಾತ್ರ ಯಾವುದೇ ಅವಕಾಶ ಇರಬಾರದು. ತೆರಿಗೆ ಸೋರಿಕೆಯನ್ನು ಸಂಪೂರ್ಣವಾಗಿ ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಮುಂದಿನ ಪರಿಶೀಲನಾ ಸಭೆ ನಡೆಯುವ ವೇಳೆಗೆ ಇಂದು ನಾನು ನೀಡಿರುವ ಪ್ರತಿಯೊಂದು ಸೂಚನೆಯೂ ಜಾರಿಯಾಗಿರಬೇಕು. ಮುಂದಿನ ಸಭೆಯಲ್ಲಿ ನಾನು ಸ್ವತಃ ಅನೇಕ ನೈಜ ಉದಾಹರಣೆಗಳೊಂದಿಗೆ ನಿಮ್ಮ ಕಾರ್ಯಕ್ಷಮತೆಯನ್ನು ಪರಿಶೀಲಿಸುತ್ತೇನೆ ಎಂದು ಎಚ್ಚರಿಸಿದರು.<img loading="lazy" decoding="async" class="aligncenter size-full wp-image-111158" src="https://www.justkannada.in/wp-content/uploads/2023/08/vidhan.jpg" alt="" width="500" height="335" srcset="https://www.justkannada.in/wp-content/uploads/2023/08/vidhan.jpg 500w, https://www.justkannada.in/wp-content/uploads/2023/08/vidhan-300x201.jpg 300w" sizes="auto, (max-width: 500px) 100vw, 500px" /></p>
<p>ಮತ್ತೊಮ್ಮೆ ಸ್ಪಷ್ಟವಾಗಿ ಹೇಳುತ್ತೇನೆ. ಒಂದೇ ಒಂದು ಸರಕು ಸಾಗಣೆ ವಾಹನ ಕೂಡ ಸೂಕ್ತ ಲೆಕ್ಕಪತ್ರ, ದಾಖಲೆ ಮತ್ತು ಸಂಪೂರ್ಣ ಅಕೌಂಟಬಿಲಿಟಿ ಇಲ್ಲದೆ ಚೆಕ್‌ ಪೋಸ್ಟ್‌ ಅಥವಾ ರಾಜ್ಯದ ಗಡಿಯನ್ನು ದಾಟಬಾರದು. ಇದು ನಮ್ಮ ಇಲಾಖೆಯ ಕಾರ್ಯವೈಖರಿಯ ಮೂಲ ತತ್ವವಾಗಬೇಕು. ಎಲ್ಲಾ ಜಂಟಿ ಆಯುಕ್ತರುಗಳು ಆಯಾ ವಿಭಾಗಗಳಿಗೆ ಹಂಚಿಕೆ ಮಾಡಲಾದ ತೆರಿಗೆ ಸಂಗ್ರಹಣಾ ಗುರಿಯನ್ನು ಸಾಧಿಸಿ ತೋರಿಸಿ.</p>
<p>ತೆರಿಗೆ ರಿಟರ್ನ್‌ ಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವುದು ಹಾಗೂ ತೆರಿಗೆ ರಿಟರ್ನ್‌ ಸಲ್ಲಿಸದಿರುವುದನ್ನು ಗುರುತಿಸಿ ನಿಗದಿತ ಅವಧಿಯ ಒಳಗೆ ರಿಟರ್ನ್‌ಗಳನ್ನು ಸಲ್ಲಿಸುವಂತೆ ಮಾಡಲು ಕಟ್ಟು ನಿಟ್ಟಿನ ಕ್ರಮಗಳನ್ನು  ಕೈಗೊಳ್ಳಬೇಕು. ನಿಮ್ಮ ಗುರಿ ಮುಟ್ಟಿ. ನಿಮಗೆ ಈಗ ಬರುತ್ತಿರುವ ತೆರಿಗೆಯ ಎರಡರಷ್ಟು ಸಂಗ್ರಹ ಮಾಡುವ ಸಾಮರ್ಥ್ಯ ಇದೆ. ಆದರೆ ಕಾನೂನು ಮೀರಿ, ಶೋಷಣೆ ಮಾಡಿ ಅಂತ ಹೇಳಲ್ಲ. ಪ್ರಾಮಾಣಿಕ ತೆರಿಗೆದಾರರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಅವರನ್ನು ಸುಲಿಗೆ ಮಾಡಬಾರದು. ನಿಮ್ಮ ತೊಂದರೆಗಳು ಇದ್ದರೆ ಹೇಳಿ, ಅವು ನೈಜ ಇದ್ದರೆ ನಿವಾರಿಸೋಣ. ಪ್ರಾಮಾಣಿಕತೆ, ನಿಷ್ಠೆ, ಶ್ರಮಕ್ಕೆ ನನ್ನ ಬಳಿ ಗೌರವ, ಬೆಲೆ. ಪ್ರಾಮಾಣಿಕತೆ ಇಲ್ಲದಿದ್ದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವೆ. ಎಲ್ಲಾ ಹಂತಗಳ ಅಧಿಕಾರಿಗಳು ತೆರಿಗೆದಾರರ ನೈಜ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು ಎಂದು ಸೂಚಿಸಿದರು.<img loading="lazy" decoding="async" class="aligncenter size-full wp-image-155452" src="https://www.justkannada.in/wp-content/uploads/2026/05/dk-shivakumar-dks.jpg" alt="" width="500" height="280" srcset="https://www.justkannada.in/wp-content/uploads/2026/05/dk-shivakumar-dks.jpg 500w, https://www.justkannada.in/wp-content/uploads/2026/05/dk-shivakumar-dks-300x168.jpg 300w, https://www.justkannada.in/wp-content/uploads/2026/05/dk-shivakumar-dks-150x84.jpg 150w" sizes="auto, (max-width: 500px) 100vw, 500px" /></p>
<p>ನನ್ನ ಸಾರ್ವಜನಿಕ ಜೀವನಕ್ಕೆ ಸುಮಾರು ಮೂವತ್ತೆಂಟು ವರ್ಷಗಳ ಅನುಭವವಿದೆ. ಈ ಅವಧಿಯಲ್ಲಿ ಹಲವು ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದೇನೆ. ಈಗ ಹಣಕಾಸು ಮತ್ತು ವಾಣಿಜ್ಯ ತೆರಿಗೆ ಇಲಾಖೆಯ ಕಾರ್ಯವೈಖರಿಯನ್ನು ಇನ್ನಷ್ಟು ಆಳವಾಗಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ. ಕೇಳುವುದಕ್ಕೂ, ಕಲಿಯುವುದಕ್ಕೂ ನಾನು ಸದಾ ಸಿದ್ಧನಿದ್ದೇನೆ. ನಿರಂತರ ಕಲಿಕೆಯೇ ಉತ್ತಮ ಆಡಳಿತದ ಮೂಲ ಎಂದು ನಾನು ನಂಬುತ್ತೇನೆ. ಆದ್ದರಿಂದ ಮುಂದಿನ ಸಭೆಯ ವೇಳೆಗೆ ಇಂದಿನ ವರದಿಗಿಂತ ಉತ್ತಮವಾದ ಕಾರ್ಯಕ್ಷಮತೆಯ ವರದಿಯನ್ನು ನಿಮ್ಮಿಂದ ನಿರೀಕ್ಷಿಸುತ್ತೇನೆ.</p>
<p>ರಜೆ ದಿನವಾಗಿದ್ದರೂ ಸಭೆಗೆ ಆಗಮಿಸಿ, ಇಲಾಖೆಯ ಅಭಿವೃದ್ಧಿಗೆ ಬದ್ಧತೆಯಿಂದ ಪಾಲ್ಗೊಂಡಿರುವ ನಿಮ್ಮೆಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ಕರ್ನಾಟಕದ ಅಭಿವೃದ್ಧಿಗೆ ಅಗತ್ಯವಾದ ಸಂಪನ್ಮೂಲಗಳನ್ನು ಸಂಗ್ರಹಿಸುವ ಈ ಮಹತ್ವದ ಜವಾಬ್ದಾರಿಯನ್ನು ನಾವು ಎಲ್ಲರೂ ಸೇರಿ ಯಶಸ್ವಿಯಾಗಿ ನಿರ್ವಹಿಸೋಣ ಎಂದು ಸಿಎಂ ಡಿಕೆ ಶಿವಕುಮಾರ್ ಕರೆ ನೀಡಿದರು.</p>
<p><strong>GST ಸಂಗ್ರಹದಲ್ಲಿ ರಾಜ್ಯ ಉತ್ತಮ ಪ್ರಗತಿ ಸಾಧಿಸಿದೆ..</strong></p>
<p>GST ಸಂಗ್ರಹದಲ್ಲಿ ರಾಜ್ಯ ಉತ್ತಮ ಪ್ರಗತಿ ಸಾಧಿಸಿದೆ. ಶೇ 9ರಷ್ಟು ಪ್ರಗತಿ ಆಗಿದೆ. ಈ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಉತ್ತಮ ಸಾಧನೆಯಾಗಿದೆ. ಗುಜರಾತ್, ತಮಿಳುನಾಡು, ಹರಿಯಾಣ ರಾಜ್ಯಗಳಿಗಿಂತ ಹೆಚ್ಚು ಪ್ರಗತಿ ರಾಜ್ಯದಲ್ಲಿ ಆಗಿರುವುದು ಸಮಾಧಾನದ ಸಂಗತಿ. ಹೈದರಾಬಾದ್ IIT ಸಹಯೋಗದಲ್ಲಿ GST ವಂಚನೆ ಮೇಲೆ ತೀವ್ರ ನಿಗಾ ಇಡಲಾಗಿದೆ. (GST analytical portal)  ಇದರಿಂದಾಗಿ ಹಲವು ರೀತಿಯ ಜಿಸ್ಟ್ ವಂಚನೆಗಳನ್ನು ಪತ್ತೆಹಚ್ಚಲಾಗಿದ್ದರೂ ಇದರಲ್ಲಿ ಸಂಪೂರ್ಣ ಪ್ರಗತಿ ಸಾಧಿಸಿ ಎಂದರು.</p>
<p>GST ಸಂಗ್ರಹ, ಸೋರಿಕೆ, ವಂಚನೆ ಸೇರಿ ಸಮಗ್ರವಾಗಿ 360° ಯಲ್ಲಿ ನಿಗಾ ಇಡಬಹುದಾಗಿದೆ. ನಕಲಿ ರಶೀದಿ ಮತ್ತು ನಕಲಿ ITC ಗಳು ದೊಡ್ಡ ಸವಾಲಾಗಿದೆ. ಈ ಸವಾಲನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇವೆ. ಬೋಗಸ್ ಕಂಪನಿಗಳನ್ನು ಪತ್ತೆ ಹಚ್ಚಿ 166 ಕೋಟಿ ಸಂಗ್ರಹಿಸಿದ್ದೇವೆ. ಬೋಗಸ್ ಕಂಪನಿ ಸ್ಥಾಪಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಪ್ರಮಾಣ ಹೆಚ್ಚಲಿ. ಇಲ್ಲಿಯವರೆಗೆ ಬೋಗಸ್ ಮಾಡುವವರನ್ನು ಬಂಧಿಸುವ ಪ್ರಮಾಣ ಕಡಿಮೆ ಇತ್ತು. ಈಗ ಬಂಧನವನ್ನು ಹೆಚ್ಚಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಸಿಬ್ಬಂದಿಯಿಂದ ಲೋಪ ಕಂಡು ಬಂದಾಗಲೂ ಕಠಿಣ ಕ್ರಮಗಳ ಮೂಲಕ ಎಚ್ಚರಿಕೆ ನೀಡಲಾಗಿದೆ. ವಿಭಾಗವಾರು ನೀಡಲಾಗಿದ್ದ ಟಾರ್ಗೆಟ್ ತಲುಪುವಲ್ಲಿ ಹಿಂದುಳಿದಿರುವ ಬಗ್ಗೆ ಅಧಿಕಾರಿಗಳು ಸ್ಪಷ್ಟ ವಿವರಗಳನ್ನು ಕೊಡಬೇಕು.</p>
<p>ತೆರಿಗೆದಾರರಿಗೆ ಅಗತ್ಯ ಸಲಹೆ, ಮಾರ್ಗದರ್ಶನ ಮತ್ತು ಸಹಕಾರ ಒದಗಿಸುವುದರ ಜೊತೆಗೆ, ಅವರ ತೆರಿಗೆ ಸಂಬಂಧಿತ ಗೊಂದಲಗಳನ್ನು ಆನ್‌ಲೈನ್‌ನಲ್ಲಿಯೇ ತ್ವರಿತವಾಗಿ ಬಗೆಹರಿಸುವ ಸಮಗ್ರ ವ್ಯವಸ್ಥೆಯನ್ನು ನಾವು ರಾಜ್ಯದಲ್ಲಿ ರೂಪಿಸಿದ್ದೇವೆ.&#8221; ತೆರಿಗೆದಾರರು ಕಚೇರಿಗಳಿಗೆ ಅಲೆದಾಡುವ ಅಗತ್ಯವಿಲ್ಲದಂತೆ, ಅವರಿಗೆ ಅಗತ್ಯ ಸಲಹೆ ಮತ್ತು ಸಹಕಾರವನ್ನು ನೀಡುವ ಹಾಗೂ ಅವರ ಎಲ್ಲಾ ತೆರಿಗೆ ಸಂಬಂಧಿತ ಗೊಂದಲಗಳನ್ನು ಆನ್‌ ಲೈನ್‌ ನಲ್ಲಿಯೇ ಪರಿಹರಿಸುವ ನಾಗರಿಕ ಸ್ನೇಹಿ ವ್ಯವಸ್ಥೆಯನ್ನು ಜಾರಿಗೆ ತಂದಿದ್ದೇವೆ. ತೆರಿಗೆದಾರರಿಗೆ ಸಲಹೆ, ಸಹಕಾರ ಮತ್ತು ತೆರಿಗೆ ಸಂಬಂಧಿತ ಗೊಂದಲಗಳ ತ್ವರಿತ ಪರಿಹಾರವನ್ನು ಆನ್‌ಲೈನ್‌ನಲ್ಲಿಯೇ ಒದಗಿಸುವ ವ್ಯವಸ್ಥೆಯನ್ನು ರೂಪಿಸಿದ್ದೇವೆ ಎಂದು ಡಿಕೆಶಿ ತಿಳಿಸಿದರು.<img loading="lazy" decoding="async" class="aligncenter size-full wp-image-156593" src="https://www.justkannada.in/wp-content/uploads/2026/06/dks-7.jpg" alt="" width="500" height="340" srcset="https://www.justkannada.in/wp-content/uploads/2026/06/dks-7.jpg 500w, https://www.justkannada.in/wp-content/uploads/2026/06/dks-7-300x204.jpg 300w, https://www.justkannada.in/wp-content/uploads/2026/06/dks-7-150x102.jpg 150w" sizes="auto, (max-width: 500px) 100vw, 500px" /></p>
<p>ಮೈಸೂರು ವಿಭಾಗದಲ್ಲಿ ಕಾರ್ಯಕ್ಷಮತೆ ಕುಸಿತ ಆಗಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕಾರ್ಯಕ್ಷಮತೆ ಕುಸಿದಿರುವುದಕ್ಕೆ ನೆಪಗಳು, ಕಾರಣಗಳನ್ನು ಕೊಡುವುದು ಸರಿಯಲ್ಲ. ಫಲಿತಾಂಶ ಮುಖ್ಯ. ಏನೇ ತಾಂತ್ರಿಕ ತೊಂದರೆಗಳಿದ್ದರೂ ಬಗೆಹರಿಸಿಕೊಂಡು ಉತ್ತಮ ಕಾರ್ಯಕ್ಷಮತೆ ನಿರೀಕ್ಷಿಸುತ್ತೇನೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಮೇ 2026ರ ವರೆಗೆ ಜಿಎಸ್‌ ಟಿ ಸಂಗ್ರಹದಲ್ಲಿ ತೆಲಂಗಾಣ ರಾಜ್ಯ ಶೇ10 ರಷ್ಟು ಪ್ರಗತಿ ಸಾಧಿಸಿದ್ದರೆ ರಾಜ್ಯ ಶೇ9 ರಷ್ಟು ಪ್ರಗತಿ ಸಾಧಿಸಿದೆ. ಮಹಾರಾಷ್ಟ್ರ ಶೇ5, ಗುಜರಾತ್‌ ಶೇ5, ತಮಿಳುನಾಡು ಶೇ -7, ಉತ್ತರಪ್ರದೇಶ ಶೇ8 ರಷ್ಟು ಜಿಎಸ್‌ಟಿ ಪ್ರಗತಿ ಸಾಧಿಸಿವೆ. ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿ ಇದ್ದೇವೆ. ಮೊದಲ ಸ್ಥಾನಕ್ಕೆ ಬರುವ ಮಾರ್ಗಗಳನ್ನು ಶೋಧಿಸಿ. ಬಾಕಿ ಇರುವ ಮೇಲ್ಮನವಿಗಳನ್ನು ತ್ವರಿತವಾಗಿ ನಿರ್ವಹಿಸದಿರುವುದನ್ನು ಸಹಿಸಲು ಸಾಧ್ಯವಿಲ್ಲ. ಮೇಲ್ಮನವಿಗಳ ವಿಲೇವಾರಿ ವಿಚಾರದಲ್ಲಿ ಹಿರಿಯ  ಅಧಿಕಾರಿಗಳು ಹೆಚ್ಚಿನ ನಿಗಾ ಇಡಬೇಕು. ತೆರಿಗೆದಾರ ಸ್ನೇಹಿಯಾಗಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸುವ ಅಗತ್ಯವಿದೆ ಎಂದರು.</p>
<p>Key words: progress, review, meeting, Commerce Department, CM DK Shivakumar</p>
<p>The post <a href="https://www.justkannada.in/meeting-cm-dk-shivakumar/">ತೆರಿಗೆ ವಂಚನೆ ಮತ್ತು ತೆರಿಗೆ ಸೋರಿಕೆ ಸಂಪೂರ್ಣ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಡಿಕೆಶಿ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ</title>
		<link>https://www.justkannada.in/cm-siddaramaiah-meeting-7/</link>
		
		<dc:creator><![CDATA[prashanth]]></dc:creator>
		<pubDate>Mon, 29 Dec 2025 10:13:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[instructs]]></category>
		<category><![CDATA[meeting]]></category>
		<category><![CDATA[Progress]]></category>
		<category><![CDATA[Review]]></category>
		<guid isPermaLink="false">https://www.justkannada.in/?p=149617</guid>

					<description><![CDATA[<p>ಬೆಂಗಳೂರು,ಡಿಸೆಂಬರ್,29,2025 (www.justkannada.in): ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು. ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೇ ಯೋಜನೆಗಳ ಭೂಸ್ವಾಧಿನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. 2023-24 ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ ರೂ.25 ಕೋಟಿಯಂತೆ ಒಟ್ಟು ರೂ. [&#8230;]</p>
<p>The post <a href="https://www.justkannada.in/cm-siddaramaiah-meeting-7/">ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,29,2025 (<a href="http://www.justkannada.in">www.justkannada.in</a>):</strong> ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು. ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಿಎಂ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೇ ಯೋಜನೆಗಳ ಭೂಸ್ವಾಧಿನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.</p>
<p>2023-24 ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ ರೂ.25 ಕೋಟಿಯಂತೆ ಒಟ್ಟು ರೂ. 3510 ಕೋಟಿ ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು. ಇದರಲ್ಲಿ ಈಗಾಗಲೇ ರೂ. 2040 ಕೋಟಿ ಮೊತ್ತದಲ್ಲಿ ಶೇ.58ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ರೂ.920 ಕೋಟಿ ವೆಚ್ಚ ಭರಿಸಲಾಗಿದೆ. ಇನ್ನೂ ರೂ. 1205 ಕೋಟಿ ಬಿಡುಗಡೆ ಮಾಡಲು ಬೆಳಗಾವಿ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಆದೇಶ ನೀಡಲಾಗಿದೆ. ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.</p>
<p>2024-25ರಲ್ಲಿ ಮಳೆ ಹಾನಿಯಿಂದ ಉಂಟಾದ ರಸ್ತೆ ದುರಸ್ತಿಗಾಗಿ ರೂ.1890 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, ರೂ.250 ಕೋಟಿ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ ರೂ. 8666.50 ಕೋಟಿ ಅನುಮೋದನೆ ನೀಡಲಾಗಿದ್ದು, ಈಗಾಗಲೇ ರೂ.1 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ. ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ, ಅನುದಾನ ಪಾವತಿಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ. ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು.</p>
<p>2024-25 ನೇ ಸಾಲಿನಲ್ಲಿ 205 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಒಟ್ಟು ರೂ. 8666.50 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.  ಇನ್ನು ಬಾಕಿಯಿರುವ 19 ಕ್ಷೇತ್ರಗಳಿಂದ ಪ್ರಸ್ತಾವನೆಗಳನ್ನು ಪಡೆದ ಬಳಿಕ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಟೆಂಡರ್‌ ಪ್ರಕ್ರಿಯೆಗಳನ್ನು ಜನವರಿ 10ರೊಳಗಾಗಿ ಪೂರ್ಣಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.</p>
<p>ಮೂಲಸೌಲಭ್ಯ ಅಭಿವೃದ್ಧಿ, (ರೈಲ್ವೇ ಮತ್ತು ವಿಮಾನ ನಿಲ್ದಾಣ) ರೈಲ್ವೇ ಕಾಮಗಾರಿಗಳಿಗೆ ಬಾಕಿಯಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಕುಡಚಿ-ಬಾಗಲಕೋಟೆ, ತುಮಕೂರು-ದಾವಣಗೆರೆ, ಬೇಲೂರು-ಹಾಸನ, ಶಿವಮೊಗ್ಗ-ರಾಣೆಬೆನ್ನೂರು, ಧಾರವಾಡ-ಬೆಳಗಾವಿ ರೈಲ್ವೇ ಮಾರ್ಗಗಳ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯೊಳಗಾಗಿ ಕೈಗೊಳ್ಳಲು ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.</p>
<p>ಸಭೆಯಲ್ಲಿ ಸಚಿವರಾದ ಎಚ್.ಕೆ ಪಾಟೀಲ್, ಎಂ.ಬಿ ಪಾಟೀಲ್, ಕೆ .ಎಚ್ ಮುನಿಯಪ್ಪ, ಪ್ರಿಯಾಂಕ್ ಖರ್ಗೆ,  ರಹೀಂ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ವಿಸಿ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.</p>
<p>Key words: CM Siddaramaiah, Progress, Review, Meeting, instructs</p>
<p>The post <a href="https://www.justkannada.in/cm-siddaramaiah-meeting-7/">ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-217/</link>
		
		<dc:creator><![CDATA[prashanth]]></dc:creator>
		<pubDate>Sat, 12 Jul 2025 10:32:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Army]]></category>
		<category><![CDATA[CM Siddaramaiah]]></category>
		<category><![CDATA[education]]></category>
		<category><![CDATA[Progress]]></category>
		<category><![CDATA[space]]></category>
		<category><![CDATA[women]]></category>
		<category><![CDATA[work]]></category>
		<guid isPermaLink="false">https://www.justkannada.in/?p=142695</guid>

					<description><![CDATA[<p>ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ [&#8230;]</p>
<p>The post <a href="https://www.justkannada.in/cm-siddaramaiah-217/">ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಜುಲೈ,13,2025 (<a href="http://www.justkannada.in">www.justkannada.in</a>):</strong>  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.</p>
<p>ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಅತ್ಯಂತ ಯಶಸ್ವಿ ಆಗಿದೆ. ಇದಕ್ಕಾಗಿ ಶ್ರಮಿಸಿದ ಯಲ್ಲಮ್ಮ ಮತ್ತು ಜೊತೆಗಿರುವ  ಪ್ರತಿಯೊಬ್ಬರೂ ಅಭಿನಂದನಾರ್ಹರು ಎಂದರು.</p>
<p>ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ಶೋಷಿತ ಜಾತಿ-ಸಮುದಾಯಗಳಿಗೆ ಕೊಟ್ಟಿರುವ ಮಂತ್ರ. ಶೂದ್ರರು ಮತ್ತು ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಆದರೆ ಅಂಬೇಡ್ಕರ್ ಅವರ ಕಾರಣದಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಒದಗಿ ಬಂತು. ಇದಕ್ಕೆ ನಮ್ಮ ಸಂವಿಧಾನ ನೀಡಿದ ಕಡ್ಡಾಯ ಶಿಕ್ಷಣ ಕಾನೂನು ನೆರವಾಯಿತು ಎಂದರು.</p>
<p>ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು. ಆದರೆ, ನಾನು ಶಾಲೆಗೆ ಹೋಗಿ ಕಾನೂನು ಪದವಿ ಪಡೆದು ಮುಖ್ಯಮಂತ್ರಿಯೂ ಆದೆ. ನಾನು ಶಾಲೆಗೆ ಹೋಗಿ ಶಿಕ್ಷಣ ಕಲಿಯುವ ಅವಕಾಶ ಉಪಯೋಗಿಸಿಕೊಳ್ಳದಿದ್ದರೆ ನಾನೂ ಹಸು, ಕುರಿ ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ರಾಣಿ ಅಹಲ್ಯಾ ಬಾಯಿ ಅವರ ಶಿಕ್ಷಣ ಕ್ರಾಂತಿ  ಎಲ್ಲರಿಗೂ ಈ ಮಹಿಳಾ ಸಂಘಟನೆಗೂ ಪ್ರೇರಣೆ ಆಯಿತು. ಇತಿಹಾಸ ಗೊತ್ತಿಲ್ಲದವರು ಭವಿಷ್ಯ ರೂಪಿಸಲು ಸಾಧ್ಯವಿಲ್ಲ ಎಂದರು.</p>
<p>ರಾಣಿ 20 ವರ್ಷ ಅಧಿಕಾರದಲ್ಲಿದ್ದರೂ ತನ್ನ ಸಾಮ್ರಾಜ್ಯ ಉಳಿಸಲು ಅಗತ್ಯವಾದ ಎಲ್ಲಾ ಅರ್ಹತೆಗಳನ್ನು ಬೆಳೆಸಿಕೊಂಡಿದ್ದರೂ ಸಾಮ್ರಾಜ್ಯ ವಿಸ್ತರಿಸುವ ಹಪಾಹಪಿ ಇರಲಿಲ್ಲ. ಖಜಾನೆ ತುಂಬಿದ್ದರೂ ಸರಳ ಜೀವನ ನಡೆಸುತ್ತಾ, ಸುಸ್ಥಿರ ಆಡಳಿತ, ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿದ್ದ ರಾಣಿ ಅಹಲ್ಯಾ ಬಾಯಿ ಅವರು ಬಾಲ್ಯ ವಿವಾಹ ನಿಲ್ಲಿಸುವ ಮೂಲಕ ಸಾಮಾಜಿಕ ಬದಲಾವಣೆಯಲ್ಲೂ ಪ್ರಮುಖ ಪಾತ್ರ ವಹಿಸಿದರು ಎಂದರು.</p>
<p>ಜಾತ್ಯತೀತ ಮನೋಭಾವ ಹೊಂದಿದ್ದ ಅಹಲ್ಯಾ ಬಾಯಿ ಆಗಲೇ ಅಂತರ್ಜಾತಿ ವಿವಾಹ ಮಾಡಿಸಿದ್ದರು. ಶಿಕ್ಷಣ ಪಡೆದು ಆರ್ಥಿಕವಾಗಿ ಸಾಮಾಜಿಕವಾಗಿ ಸಭಲರಾದರೆ ಮಾತ್ರ ಅಸಮಾನತೆ ಅಳಿಸಿ ಸಾಮಾಜಿಕ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು.</p>
<p>ನಮ್ಮ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಿಂದ ಯಾರೂ ಸೋಮಾರಿಗಳಾಗುವುದಿಲ್ಲ. ಬದಲಿಗೆ ಸಾಮಾಜಿಕವಾಗಿ ಸಬಲರಾಗುತ್ತಾರೆ. ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಗೃಹಲಕ್ಷ್ಮಿ, ಶಕ್ತಿ ಯೋಜನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದಾಗಿದೆ. ಇದರಿಂದ ಸಮಾಜಕ್ಕೆ, ಮಹಿಳಾ ಕುಲಕ್ಕೆ ಶಕ್ತಿ ಬಂದಿದೆಯೇ ಹೊರತು ಯಾರೂ ಸೋಮಾರಿಗಳಾಗಿಲ್ಲ ಎಂದರು.</p>
<p>ರಾಜ್ಯ ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು ನೀಡಲಾಗುವುದು ಎಂದು ಸಿ.ಎಂ ಘೋಷಣೆ ಮಾಡಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Women, education, Work, army,  space, progress, CM Siddaramaiah</p>
<p>The post <a href="https://www.justkannada.in/cm-siddaramaiah-217/">ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿಮಾನ‌ ನಿಲ್ದಾಣ, ಏರ್ ಸ್ಟ್ರಿಪ್ ಪ್ರಗತಿ ಪರಿಶೀಲನೆ: ತಾಂತ್ರಿಕ ಅಡಚಣೆಗಳ ನಿವಾರಣೆಗೆ ಸಚಿವ ಎಂ‌.ಬಿ ಪಾಟೀಲ್ ಸೂಚನೆ</title>
		<link>https://www.justkannada.in/airport-air-strip-progress-minister-mb-patil/</link>
		
		<dc:creator><![CDATA[prashanth]]></dc:creator>
		<pubDate>Sat, 24 Aug 2024 12:47:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[air strip]]></category>
		<category><![CDATA[airport]]></category>
		<category><![CDATA[Minister MB Patil.]]></category>
		<category><![CDATA[Progress]]></category>
		<guid isPermaLink="false">https://www.justkannada.in/?p=128311</guid>

					<description><![CDATA[<p>ಬೆಂಗಳೂರು,ಆಗಸ್ಟ್,24,2024 (www.justkannada.in): ರಾಜ್ಯದಲ್ಲಿ ನಡೆಯುತ್ತಿರುವ ವಿಜಯಪುರ, ಹಾಸನ ಸೇರಿ ವಿವಿಧ ವಿಮಾನ ನಿಲ್ದಾಣಗಳು ಮತ್ತು ಏರ್-ಸ್ಟ್ರಿಪ್ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌.ಬಿ ಪಾಟೀಲ್ ನಡೆಸಿದರು. ಹಲವು ಯೋಜನೆಗಳಿಗೆ ತಾಂತ್ರಿಕ ಅಡಚಣೆಗಳು ಎದುರಾಗಿವೆ. ಇನ್ನು ಕೆಲ ಯೋಜನೆಗಳಿಗೆ ಅಗತ್ಯ ಪ್ರಮಾಣದ ಭೂಮಿ ಸಿಕ್ಕಿಲ್ಲ. ಇವೆಲ್ಲವನ್ನೂ ತ್ವರಿತವಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು. 219 ಕೋಟಿ ರೂ. ವೆಚ್ಚದಲ್ಲಿ, 322 ಎಕರೆ‌ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಯಚೂರು [&#8230;]</p>
<p>The post <a href="https://www.justkannada.in/airport-air-strip-progress-minister-mb-patil/">ವಿಮಾನ‌ ನಿಲ್ದಾಣ, ಏರ್ ಸ್ಟ್ರಿಪ್ ಪ್ರಗತಿ ಪರಿಶೀಲನೆ: ತಾಂತ್ರಿಕ ಅಡಚಣೆಗಳ ನಿವಾರಣೆಗೆ ಸಚಿವ ಎಂ‌.ಬಿ ಪಾಟೀಲ್ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,24,2024 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ನಡೆಯುತ್ತಿರುವ ವಿಜಯಪುರ, ಹಾಸನ ಸೇರಿ ವಿವಿಧ ವಿಮಾನ ನಿಲ್ದಾಣಗಳು ಮತ್ತು ಏರ್-ಸ್ಟ್ರಿಪ್ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌.ಬಿ ಪಾಟೀಲ್ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹಲವು ಯೋಜನೆಗಳಿಗೆ ತಾಂತ್ರಿಕ ಅಡಚಣೆಗಳು ಎದುರಾಗಿವೆ. ಇನ್ನು ಕೆಲ ಯೋಜನೆಗಳಿಗೆ ಅಗತ್ಯ ಪ್ರಮಾಣದ ಭೂಮಿ ಸಿಕ್ಕಿಲ್ಲ. ಇವೆಲ್ಲವನ್ನೂ ತ್ವರಿತವಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>
<p>219 ಕೋಟಿ ರೂ. ವೆಚ್ಚದಲ್ಲಿ, 322 ಎಕರೆ‌ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಯಚೂರು ಗ್ರೀನ್ ಫೀಲ್ಡ್ ವಿಮಾನ‌ ನಿಲ್ದಾಣದ ಕಾಮಗಾರಿ ಆರಂಭಕ್ಕೆ ತಾಂತ್ರಿಕ ಅಡಚಣೆಗಳಿದ್ದು ತಕ್ಷಣ ಅವುಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದರು. ಅಗತ್ಯ ಬಿದ್ದರೆ ದೆಹಲಿಗೂ ಹೋಗಿ ಬರಬೇಕು ಎನ್ನುವ ಕಟ್ಟಾಜ್ಞೆ ಹೊರಡಿಸಿದರು.</p>
<p>ರಾಯಚೂರು ವಿಮಾನ‌ ನಿಲ್ದಾಣ ಯೋಜನೆಗೆ ಈಗಾಗಲೇ ಡಿಪಿಆರ್ ಸಿದ್ಧವಾಗಿದೆ. ಯೋಜನೆಗೆ ಬೇಕಾಗಿರುವ ಪರಿಸರ ಇಲಾಖೆಯ ಅನುಮತಿಯನ್ನು ಕೂಡ ಬೇಗನೆ ಪಡೆಯಬೇಕು ಎಂದು ಅವರು ಹೇಳಿದ್ದಾರೆ.</p>
<p>ಹಾಸನ ವಿಮಾನ ನಿಲ್ದಾಣದ ಕಾಮಗಾರಿ ಚುರುಕಾಗಿ ಮುಗಿಸಬೇಕು. ಭೂಸ್ವಾಧೀನದ ಸಮಸ್ಯೆ ಇದ್ದು ತಕ್ಷಣ ಬಗೆಹರಿಸಲು ಸಚಿವ ಎಂ.ಬಿ ಪಾಟೀಲ್  ಸೂಚಿಸಿದರು.</p>
<p>ಉಡಾನ್ ಯೋಜನೆ ಸ್ಥಗಿತವಾಗಿರುವ ಕಾರಣ ಬೀದರ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ನಿಲ್ಲಿಸಲಾಗಿದೆ. ಈ ಸಂಬಂಧ ವಿಮಾನಯಾನ ಸಂಸ್ಥೆಗಳ ಜತೆ ಮಾತುಕತೆ ನಡೆಸಿ, ಪರ್ಯಾಯ ಕ್ರಮಗಳ ಬಗ್ಗೆ ತೀರ್ಮಾನಿಸಬೇಕು. ಪುನಃ ಉಡಾನ್ ಯೋಜನೆ ಚಾಲನೆಗೆ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಸಚಿವರು ಸೂಚಿಸಿದರು.</p>
<p>ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣವಾಗಿದ್ದು ಅಗತ್ಯ ಇರುವ ಅಗ್ನಿಶಾಮಕ ವಾಹನಗಳನ್ನು ಖರೀದಿಸಲು ತ್ವರಿತವಾಗಿ ಕ್ರಮ ತೆಗೆದುಕೊಳ್ಳಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನಕ್ಕೂ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಲಹೆ‌ ನಿಡೀದರು.</p>
<p><strong>ಏರ್-ಸ್ಟ್ರಿಪ್ಸ್ ಅಭಿವೃದ್ಧಿಗೆ ಭೂಮಿ ಗುರುತಿಸಿ</strong></p>
<p>ಪ್ರವಾಸೋದ್ಯಮವನ್ನು ಪರಿಗಣಿಸಿ ಚಿಕ್ಕಮಗಳೂರು, ಕೊಡಗು, ಧರ್ಮಸ್ಥಳ ಮತ್ತು ಹಂಪೆಯಲ್ಲಿ ಏರ್-ಸ್ಟ್ರಿಪ್ ನಿರ್ಮಿಸುವುದಾಗಿ ಘೋಷಿಸಲಾಗಿದೆ. ಈ ಪೈಕಿ ಕೊಡಗು ಮತ್ತು ಧರ್ಮಸ್ಥಳದಲ್ಲಿ 140 ಎಕರೆ ಭೂಮಿ ಅಗತ್ಯವಿದೆ. ಸ್ಥಳೀಯ ಶಾಸಕರು ಮತ್ತು ಜಿಲ್ಲಾಡಳಿತದ ಜತೆ ವ್ಯವಹರಿಸಿ, ಈ ಪ್ರಕ್ರಿಯೆ ಮುಗಿಸಬೇಕು ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.</p>
<p>ಚಿಕ್ಕಮಗಳೂರಿನಲ್ಲಿ ಈ  ಯೋಜನೆಗೆ ಈಗಾಗಲೇ 12೦ ಎಕರೆ ಜಾಗ ಗುರ್ತಿಸಲಾಗಿದೆ. ಆದರೆ ಇದಕ್ಕೆ ಇನ್ನೂ 17.5 ಎಕರೆ ಅಗತ್ಯವಿದ್ದು, ಇದನ್ನು ಗುರುತಿಸಲು ನಿರ್ದೇಶಿಸಲಾಗಿದೆ. ಜತೆಗೆ ಈ ಸಂಬಂಧ ಡಿಪಿಆರ್ ಸಿದ್ಧ ಪಡಿಸಲು ಪವನ್ ಹನ್ಸ್ ಕಂಪನಿಗೆ ಹೇಳಲಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ಮಾಹಿತಿ ನೀಡಿದ್ದಾರೆ.</p>
<p>ಕಾರವಾರದಲ್ಲಿ ಸಿವಿಲ್ ಎನ್ಕ್ಲೇವ್ ಅಭಿವೃದ್ಧಿಗೆ ಇನ್ನೂ 97 ಎಕರೆ ಭೂಮಿ ಬೇಕಾಗಿದೆ. ಇದಕ್ಕಾಗಿ ಈಗಾಗಲೇ 27.34 ಕೋಟಿ ರೂಪಾಯಿಗೂ ಹೆಚ್ಚು ಹಣ ಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.</p>
<p>ರಾಯಚೂರು ವಿಮಾನ‌ ನಿಲ್ದಾಣಕ್ಕೆ ಸಂಬಂಧಿಸಿದಂತೆ ಆ ಜಿಲ್ಲೆಯ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ರಾಯಚೂರು ಸಂಸದ ಕುಮಾರ್ ನಾಯಕ್, ರಾಯಚೂರು ಜಿಲ್ಲಾಧಿಕಾರಿ ನಿತೇಶ ಸಭೆಯಲ್ಲಿ ಹಾಜರಿದ್ದರು.</p>
<p>ಚಿಕ್ಕಮಗಳೂರು ಏರ್ ಸ್ಟ್ರಿಪ್ ಗೆ ಸಂಬಂಧಿಸಿದಂತೆ ಅಲ್ಲಿನ ಶಾಸಕ ತಮ್ಮಯ್ಯ ಅವರೊಟ್ಟಿಗೆ ಸಚಿವರು ಸಭೆ ನಡೆಸಿದರು. ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್, ಮೂಲ ಸೌಕರ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಹೆಬ್ಸಿಬಾ ರಾಣಿ ಕೊರ್ಲಪಟ್ಟಿ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.</p>
<p>ENGLISH SUMMARY</p>
<p>Airport, Airstrip Projects Progress Reviewed</p>
<p>Minister Instructs Officials to Swiftly Resolve Hurdles</p>
<p>Bengaluru: Infrastructure Development Minister MB Patil convened a meeting on Friday to review the progress of various airport and airstrip development projects across the state.</p>
<p>Following the meeting, Minister Patil acknowledged that several projects are currently facing technical hurdles, while others are delayed due to incomplete land acquisition. He emphasised that strict instructions have been given to officials to swiftly resolve these issues.</p>
<p>One of the major concerns discussed was the Rs 219 crore Raichur Greenfield Airport project on the 322-acre site, which has encountered delays due to technical issues. Minister Patil stated that officials have been directed to engage with the Directorate General of Civil Aviation (DGCA) to address these obstacles and even visit Delhi if needed.</p>
<p>He further informed that the Detailed Project Report (DPR) for the Raichur project is already prepared, and the necessary environmental clearances should be obtained without delay.</p>
<p>The Minister also called for the swift advancement of work at Hassan Airport.</p>
<p>He noted that flight operations from Bidar Airport have been halted due to the suspension of the UDAN scheme. He instructed officials to explore alternative options with other service providers and to investigate the possibility of resuming operations under the UDAN scheme.</p>
<p>He mentioned that work on Vijayapura Airport is almost complete and directed officials to expedite the procurement of fire extinguisher vehicles for the airport. He also instructed them to take appropriate action to acquire the land required for constructing a connecting road to Vijayapura Airport.</p>
<p>*Identification of Land for Airstrip Development*</p>
<p>In line with promoting tourism, the government has announced the construction of airstrips in Chikkamagaluru, Kodagu, Dharmasthala, and Hampi. For this, 140 acres of land are required in both Kodagu and Dharmasthala. The Minister directed that this process be completed after consultations with the respective MLAs and district administrations.</p>
<p>Regarding Chikkamagaluru, Minister Patil mentioned that 120 acres of land have already been identified, but an additional 17.5 acres are needed. Officials have been directed to locate the remaining land, and Pawan Hans, a helicopter service company, has been asked to prepare a DPR for the project.</p>
<p>Additionally, Minister Patil highlighted the need for 97 more acres of land for the development of a civil enclave in Karwar, noting that over Rs 27.34 crore has already been allocated for this project.</p>
<p>Raichur District In-charge Minister Dr. Sharan Prakash Patil, Minister Bosaraju, MP Kumar Naik, Raichur Deputy Commissioner Nitesha, Chikkamagaluru MLA Thammaiah, KSIIDC Managing Director Khushbu Goyal, and Hebsiba Rani, Additional Secretary of the Department of Infrastructure, were among the officials present at the meeting.</p>
<p>Key words: Airport, air strip,  progress, Minister MB Patil</p>
<p>The post <a href="https://www.justkannada.in/airport-air-strip-progress-minister-mb-patil/">ವಿಮಾನ‌ ನಿಲ್ದಾಣ, ಏರ್ ಸ್ಟ್ರಿಪ್ ಪ್ರಗತಿ ಪರಿಶೀಲನೆ: ತಾಂತ್ರಿಕ ಅಡಚಣೆಗಳ ನಿವಾರಣೆಗೆ ಸಚಿವ ಎಂ‌.ಬಿ ಪಾಟೀಲ್ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿಗರೇ ಪ್ರತಿಮೆ ರಾಜಕೀಯ ಬಿಡಿ. ಪ್ರಗತಿ ಎಲ್ಲಿದೆ ತೋರಿಸಿ..?  ಸರ್ಕಾರಕ್ಕೆ ಡಿ.ಕೆ ಶಿವಕುಮಾರ್ ಚಾಟಿ.</title>
		<link>https://www.justkannada.in/statue-politics-bjp-people-progress-dk-shivakumar/</link>
		
		<dc:creator><![CDATA[JK Desk]]></dc:creator>
		<pubDate>Sat, 12 Nov 2022 08:19:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[DK Shivakumar]]></category>
		<category><![CDATA[people]]></category>
		<category><![CDATA[politics]]></category>
		<category><![CDATA[Progress]]></category>
		<category><![CDATA[statue]]></category>
		<guid isPermaLink="false">https://www.justkannada.in/?p=99622</guid>

					<description><![CDATA[<p>ಬೆಂಗಳೂರು,ನವೆಂಬರ್,12,2022(www.justkannada.in):  ನಾಡಪ್ರಭು ಕೆಂಪೇಗೌಡರ  ಪ್ರತಿಮೆ ಲೋಕಾರ್ಪಣೆ  ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಆಹ್ವಾನಿಸದ ವಿಚಾರ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಈ ಕುರಿತು ಟ್ವೀಟ್ ಮಾಡಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಚಾಟಿ ಬೀಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್, ಸಿಎಂ ಬೊಮ್ಮಾಯಿ ಅವರೇ ಪ್ರಧಾನಿಮೋದಿ ಅವರಿಂದ ಕೆಂಪೇಗೌಡರ ಪ್ರತಿಮೆ ಅನಾವರಣ, ಸಂತ ಕನಕದಾಸರು, ವಾಲ್ಮೀಕಿ ಮಹರ್ಷಿಗಳ ಪ್ರತಿಮೆಗಳಿಗೆ ಮಾಲೆ ಹಾಕಿಸಿದ್ದರಿಂದ ಈ ಮಹನೀಯರ ಸಮುದಾಯದವರ ಹೊಟ್ಟೆ ತುಂಬುವುದಿಲ್ಲ, [&#8230;]</p>
<p>The post <a href="https://www.justkannada.in/statue-politics-bjp-people-progress-dk-shivakumar/">ಬಿಜೆಪಿಗರೇ ಪ್ರತಿಮೆ ರಾಜಕೀಯ ಬಿಡಿ. ಪ್ರಗತಿ ಎಲ್ಲಿದೆ ತೋರಿಸಿ..?  ಸರ್ಕಾರಕ್ಕೆ ಡಿ.ಕೆ ಶಿವಕುಮಾರ್ ಚಾಟಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,12,2022(<a href="http://www.justkannada.in">www.justkannada.in</a>): </strong> ನಾಡಪ್ರಭು ಕೆಂಪೇಗೌಡರ  ಪ್ರತಿಮೆ ಲೋಕಾರ್ಪಣೆ  ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಆಹ್ವಾನಿಸದ ವಿಚಾರ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಈ ಕುರಿತು ಟ್ವೀಟ್ ಮಾಡಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಚಾಟಿ ಬೀಸಿದ್ದಾರೆ.<a href="https://www.justkannada.in/wp-content/uploads/2022/09/jk-logo.jpg"><img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></a></p>
<p>ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್, ಸಿಎಂ ಬೊಮ್ಮಾಯಿ ಅವರೇ ಪ್ರಧಾನಿಮೋದಿ ಅವರಿಂದ ಕೆಂಪೇಗೌಡರ ಪ್ರತಿಮೆ ಅನಾವರಣ, ಸಂತ ಕನಕದಾಸರು, ವಾಲ್ಮೀಕಿ ಮಹರ್ಷಿಗಳ ಪ್ರತಿಮೆಗಳಿಗೆ ಮಾಲೆ ಹಾಕಿಸಿದ್ದರಿಂದ ಈ ಮಹನೀಯರ ಸಮುದಾಯದವರ ಹೊಟ್ಟೆ ತುಂಬುವುದಿಲ್ಲ, ಅವರ ಸಮಸ್ಯೆ ಬಗೆಹರಿಯುವುದಿಲ್ಲ, ಕಣ್ಣೀರು ಕೊನೆಯಾಗುವುದಿಲ್ಲ.</p>
<p>ಚುನಾವಣೆ ಸಮಯದಲ್ಲಿ ಟ್ರಬಲ್ ಇಂಜಿನ್ ಸರಕಾರ ತನ್ನ ಭ್ರಷ್ಟಾಚಾರ, ಹಗರಣ, ಕರ್ತವ್ಯಲೋಪಗಳನ್ನು ಮುಚ್ಚಿಕೊಳ್ಳಲು ಮಹನೀಯರ ಪ್ರತಿಮೆಯ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ. ಆದರೆ ಬಿಜೆಪಿಯ ಭ್ರಷ್ಟಾಚಾರದ ಸಾಧನೆ ಹಾಗೂ ಅಸಲಿಯತ್ತು ಈಗಾಗಲೇ ರಾಜ್ಯದ ಜನರ ಮುಂದೆ ಬಯಲಾಗಿದೆ ಎಂದು ಗುಡುಗಿದ್ದಾರೆ.<a href="https://www.justkannada.in/wp-content/uploads/2022/10/dks.jpg"><img loading="lazy" decoding="async" class="aligncenter size-medium wp-image-97719" src="https://www.justkannada.in/wp-content/uploads/2022/10/dks-300x180.jpg" alt="" width="300" height="180" srcset="https://www.justkannada.in/wp-content/uploads/2022/10/dks-300x180.jpg 300w, https://www.justkannada.in/wp-content/uploads/2022/10/dks.jpg 500w" sizes="auto, (max-width: 300px) 100vw, 300px" /></a></p>
<p>ಮೋದಿ ಅವರು ಹೇಳಿದಂತೆ ರೈತರ ಆದಾಯ ಡಬಲ್ ಆಗಲಿಲ್ಲ. ಬದಲಿಗೆ ವೆಚ್ಚ ತ್ರಿಬಲ್ ಆಗಿದೆ. ಕೋವಿಡ್ ಸಂತ್ರಸ್ತರಿಗೆ ನೀಡಿದ ಪರಿಹಾರದ ಭರವಸೆ ಇನ್ನೂ ಈಡೇರಿಲ್ಲ. ಅಚ್ಚೇ ದಿನ್‌ಗಾಗಿ ಎದುರು ನೋಡುತ್ತಿದ್ದ ಬಡವರ ಕಷ್ಟ ಇನ್ನೂ ನೀಗಿಲ್ಲ. ಬಿಜೆಪಿಗರೇ ಪ್ರತಿಮೆ ರಾಜಕೀಯ ಬಿಡಿ. ಪ್ರಗತಿ ಎಲ್ಲಿದೆ ತೋರಿಸಿ? ಎಂದು ಸರ್ಕಾರಕ್ಕೆ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.</p>
<p>Key words: statue -politics -BJP -people – progress-DK Shivakumar</p>
<p>The post <a href="https://www.justkannada.in/statue-politics-bjp-people-progress-dk-shivakumar/">ಬಿಜೆಪಿಗರೇ ಪ್ರತಿಮೆ ರಾಜಕೀಯ ಬಿಡಿ. ಪ್ರಗತಿ ಎಲ್ಲಿದೆ ತೋರಿಸಿ..?  ಸರ್ಕಾರಕ್ಕೆ ಡಿ.ಕೆ ಶಿವಕುಮಾರ್ ಚಾಟಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕುದ್ಮಲ್ ರಂಗರಾವ್ ಅವರು ಪ್ರಗತಿಗೆ ವಿದ್ಯೆಯೇ ಮೂಲ ಎಂದು ನಂಬಿದ್ದರು- ಪ್ರೊ. ಜಿ.ಹೇಮಂತ್ ಕುಮಾರ್</title>
		<link>https://www.justkannada.in/kudmal-rangarao-believed-progress-mysore-university-pro-g-hemanth-kumar/</link>
		
		<dc:creator><![CDATA[JK Desk]]></dc:creator>
		<pubDate>Wed, 29 Jun 2022 10:44:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[believed]]></category>
		<category><![CDATA[Kudmal Rangarao]]></category>
		<category><![CDATA[Mysore University]]></category>
		<category><![CDATA[Pro. G. Hemanth Kumar]]></category>
		<category><![CDATA[Progress]]></category>
		<guid isPermaLink="false">https://www.justkannada.in/?p=92427</guid>

					<description><![CDATA[<p>ಮೈಸೂರು,ಜೂನ್,29,2022(www.justkannada.in):  ಕುದ್ಮಲ್ ರಂಗರಾವ್ ಅವರು, &#8216;ಪ್ರಗತಿಗೆ ವಿದ್ಯೆಯೇ ಮೂಲ&#8217; ಎಂದು ನಂಬಿ ಶೋಷಿತ ವರ್ಗದ ಸಮುದಾಯದ ಮಕ್ಕಳಿಗೆ ವಿದ್ಯೆ ನೀಡುವ ಕುರಿತು ಚಿಂತಿಸಿದ್ದರು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಸಾಮಾಜಿಕ ನ್ಯಾಯ ವೇದಿಕೆ, ಸಾಮರಸ್ಯ ವೇದಿಕೆ ಇವರ ಸಹಯೋಗದಲ್ಲಿ ಕುದ್ಮುಲ್ ರಂಗರಾವ್ ಅವರ 163ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು. ರಂಗರಾವ್‌ ಅವರು, ಡಿ.ಸಿ.ಎಂ. ಎಂಬ ಸಂಸ್ಥೆಯನ್ನು ಸ್ಥಾಪಿಸಿ ಮಂಗಳೂರಿನ ಕಂಕನಾಡಿ, ಮೂಲ್ಕಿ, ಬೋಳೂರು, ಉಡುಪಿ, ಬನ್ನಂಜೆ, ನೇಜಾರು, ಅತ್ತಾವರ, ದಾಟುಗುಡ್ಡೆ, ದಡ್ಡ‌ ಕಾಡು [&#8230;]</p>
<p>The post <a href="https://www.justkannada.in/kudmal-rangarao-believed-progress-mysore-university-pro-g-hemanth-kumar/">ಕುದ್ಮಲ್ ರಂಗರಾವ್ ಅವರು ಪ್ರಗತಿಗೆ ವಿದ್ಯೆಯೇ ಮೂಲ ಎಂದು ನಂಬಿದ್ದರು- ಪ್ರೊ. ಜಿ.ಹೇಮಂತ್ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,29,2022(<a href="http://www.justkannada.in">www.justkannada.in</a>):</strong>  ಕುದ್ಮಲ್ ರಂಗರಾವ್ ಅವರು, &#8216;ಪ್ರಗತಿಗೆ ವಿದ್ಯೆಯೇ ಮೂಲ&#8217; ಎಂದು ನಂಬಿ ಶೋಷಿತ ವರ್ಗದ ಸಮುದಾಯದ ಮಕ್ಕಳಿಗೆ ವಿದ್ಯೆ ನೀಡುವ ಕುರಿತು ಚಿಂತಿಸಿದ್ದರು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಸಾಮಾಜಿಕ ನ್ಯಾಯ ವೇದಿಕೆ, ಸಾಮರಸ್ಯ ವೇದಿಕೆ ಇವರ ಸಹಯೋಗದಲ್ಲಿ ಕುದ್ಮುಲ್ ರಂಗರಾವ್ ಅವರ 163ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು. ರಂಗರಾವ್‌ ಅವರು, ಡಿ.ಸಿ.ಎಂ. ಎಂಬ ಸಂಸ್ಥೆಯನ್ನು ಸ್ಥಾಪಿಸಿ ಮಂಗಳೂರಿನ ಕಂಕನಾಡಿ, ಮೂಲ್ಕಿ, ಬೋಳೂರು, ಉಡುಪಿ, ಬನ್ನಂಜೆ, ನೇಜಾರು, ಅತ್ತಾವರ, ದಾಟುಗುಡ್ಡೆ, ದಡ್ಡ‌ ಕಾಡು ಈ ಸ್ಥಳಗಳಲ್ಲಿ ಉಚಿತ ಶಾಲೆಗಳನ್ನು ತೆರೆದರು. ಆ ಶಾಲೆಗಳನ್ನು &#8216;ಪಂಚಮ ಶಾಲೆ&#8217;ಗಳೆಂದು ಕರೆಯುತಿದ್ದರು ಎಂದರು.</p>
<p>ದಲಿತರಿಗೆ ವೃತ್ತಿಪರ ಶಿಕ್ಷಣ ನೀಡಲು ಶೇಡಿಗುಡ್ಡ ಎಂಬಲ್ಲಿ ಕೈಗಾರಿಕಾ ತರಬೇತಿ ಶಾಲೆ ಪ್ರಾರಂಭಿಸಿದರು. ತಾವು ಸ್ಥಾಪಿಸಿದ ಡಿ.ಸಿ.ಎಂ, ಮಿಶನ್ ಶಾಲೆಗಳಲ್ಲಿ ಮತ್ತು ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿ ಬಡಗಿ, ನೇಯ್ಗೆ, ತೋಟಗಾರಿಕೆ, ಕಸೂತಿ, ರೇಷ್ಮೆ ಹುಳು ಸಾಕಾಣಿಕೆ ಇತ್ಯಾದಿ ವೃತ್ತಿಗಳನ್ನು ಅವಲಂಬಿಸಲು ಅಗತ್ಯವಾದ ತರಬೇತಿಯನ್ನು ಕೊಡಿಸಿದಂತಹ ಧೀಮಂತ ವ್ಯಕ್ತಿ, ಹಾಗೂ ಅವರುಗಳ ಸ್ವಾವಲಂಬಿ ಜೀವನಕ್ಕೆ ದಾರಿ ತೋರಿದವರು.‌ ಅನ್ಯರ ಅನ್ನಕ್ಕಿಂತ ಆತ್ಮಗೌರವದ ಗಂಜಿ ಊಟವೇ ದೊಡ್ದದೆಂದು ತೋರಿಸಿಕೊಟ್ಟಂತಹ ಮಹಾನ್ ವ್ಯಕ್ತಿ ಕುಲ್ಕುಲ್ ರಂಗರಾವ್‌ ಅವರಾಗಿದ್ದರು ಎಂದು ಬಣ್ಣಿಸಿದರು.<img loading="lazy" decoding="async" class="aligncenter size-full wp-image-92428" src="https://www.justkannada.in/wp-content/uploads/2022/06/hemanth-kumar-1.jpg" alt="" width="500" height="333" /></p>
<p>ಕುದ್ಮಲ್ ರಂಗರಾವ್ ಅವರು ಒಬ್ಬ ಸಮಾಜ ಸೇವಕ.‌‌ ಕಾಸರಗೋಡಿನ ಕುದ್ಮಲ್ ಎಂಬ ಸಣ್ಣ ಗ್ರಾಮದಲ್ಲಿ  ಜನಿಸಿದರು. ಬಹಳ ಕಷ್ಟದಿಂದಲೇ ಬಾಲ್ಯ ಶಿಕ್ಷಣವನ್ನು ಕಾಸರಗೋಡಿನಲ್ಲಿಯೇ ಮುಗಿಸಿ ಉದ್ಯೋಗಕ್ಕಾಗಿ ಮಂಗಳೂರಿಗೆ ಬಂದು, ವಿದ್ಯಾಭ್ಯಾಸ ಮುಗಿಸಿ ವಕೀಲ ವೃತ್ತಿಯಲ್ಲಿ ತೊಡಗಿದರು. ಬ್ರಿಟೀಷರ ಆಡಳಿತ ಕಾಲದಲ್ಲಿ ಶೋಷಣೆಗೊಳಪಟ್ಟವರ ಪರವಾಗಿ ಹೋರಾಡಿದವರು.</p>
<p>ಇಂತಹ ಒಂದು ಸಂದಿಗ್ಧ ಕಾಲದಲ್ಲಿ ಯಾವುದೇ ನಿರೀಕ್ಷೆ ಇಲ್ಲದೆ ತಲೆ ಎತ್ತಿ ನಡೆಯಬೇಕು, ಬದುಕಬೇಕು ಎನ್ನುವ ಕಲ್ಪನೆಯು ಸುಳಿಯದ, ಸುಳಿಯಲು ಅವಕಾಶವನ್ನು ನೀಡದ ಒಂದು ಸಾಮಾಜಿಕ ವ್ಯವಸ್ಥೆಯೊಳಗೆ ಬಂದಂತಹ ಆಶಾಕಿರಣದ ಒಂದು ಬೆಳಕೇ ಶ್ರೀ ಕುದ್ಮಲ್ ರಂಗರಾವ್ ಎಂದರು.</p>
<p>ಕುಲ್ಕುಲ್ ರಂಗರಾವ್‌&#8217; ಒಬ್ಬ ಮಹಾನ್ ಸಮಾಜ ಸುಧಾರಕರು, ಅವರು ತಮ್ಮ ಸ್ವಂತ ವೆಚ್ಚದಲ್ಲಿಯೇ ದಲಿತರ ಯೋಗಕ್ಷೇಮಕ್ಕಾಗಿ ದುಡಿದು ಗುರುತರವಾದ ಕೆಲಸ, ದಕ್ಷಿಣ ಕನ್ನಡದಲ್ಲಿ ದಲಿತರ ಜೀವನದಲ್ಲಿ ಅವರ ಹಸ್ತಕ್ಷೇಪವು ಒಂದು ಪ್ರಮುಖ ಘಟನೆಯಾಗಿದೆ, ಅವರ ಗ್ರಹಿಕೆಗಳು ಮತ್ತು ಉಪದೇಶಗಳ ನಡುವೆ ಗಮನಾರ್ಹವಾದ ಏಕತೆ ಇತ್ತು. ಸೃಷ್ಟಿಯು ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದೆ. ಅದರಂತೆ ಎಲ್ಲರೂ ಸಮಾನತೆಯ ಮನೋಭಾವದಿ೦ದ ಬದುಕಬೇಕೆಂಬ ಮಹಾದಾಸೆಯನ್ನು ಹೊಂದಿದ್ದವರು ಎಂದರು.</p>
<p>ಸಂಸದ ಶ್ರೀನಿವಾಸ್ ಪ್ರಸಾದ್, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸಿದರು. ಡಾ. ಬಾಬೂ ಜಗಜೀವನರಾಮ್ ಅಧ್ಯಯನ, ಸಂಶೋಧನ ಕೇಂದ್ರದ ನಿರ್ದೇಶಕ ಪ್ರೊ. ಬಿ. ಗಂಗಾಧರ್, ಪರಮಾನಂದ ಎಂ.ಎಸ್‌. ಸೇರಿದಂತೆ ಇತರರು ಇದ್ದರು.</p>
<p>Key words: Kudmal Rangarao-believed -progress –mysore University- Pro. G. Hemanth Kumar</p>
<p>The post <a href="https://www.justkannada.in/kudmal-rangarao-believed-progress-mysore-university-pro-g-hemanth-kumar/">ಕುದ್ಮಲ್ ರಂಗರಾವ್ ಅವರು ಪ್ರಗತಿಗೆ ವಿದ್ಯೆಯೇ ಮೂಲ ಎಂದು ನಂಬಿದ್ದರು- ಪ್ರೊ. ಜಿ.ಹೇಮಂತ್ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಸಗೊಬ್ಬರ, ಬಿತ್ತನೆ ಬೀಜ ಕೊರತೆ ಇಲ್ಲ: ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ-ಸಚಿವ ಬಿ.ಸಿ ಪಾಟೀಲ್.</title>
		<link>https://www.justkannada.in/mysore-minister-bc-patil-progress-review-meeting/</link>
		
		<dc:creator><![CDATA[JK Desk]]></dc:creator>
		<pubDate>Wed, 16 Jun 2021 08:20:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BC Patil]]></category>
		<category><![CDATA[meeting]]></category>
		<category><![CDATA[minister]]></category>
		<category><![CDATA[Mysore.]]></category>
		<category><![CDATA[Progress]]></category>
		<category><![CDATA[Review]]></category>
		<guid isPermaLink="false">https://www.justkannada.in/?p=67982</guid>

					<description><![CDATA[<p>ಮೈಸೂರು,ಜೂನ್,16,2021(www.justkannada.in):  ನಮ್ಮಲ್ಲಿ ಯಾವುದೇ ರಸಗೊಬ್ಬರ, ಬಿತ್ತನೆ ಬೀಜ ಕೊರತೆ ಇಲ್ಲ. ಯಾರು ಕೃತಕ ಅಭಾವ ಸೃಷ್ಟಿಸುತ್ತಾರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದರು. ಕೃಷಿ ಇಲಾಖೆಗೆ ಸಂಬಂಧಿಸಿದಂತೆ  ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಸಚಿವ ಬಿ.ಸಿ ಪಾಟೀಲ್ ಅವರು ಮುಂಗಾರು ಹಂಗಾಮಿ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಕೈಪಿಡಿ [&#8230;]</p>
<p>The post <a href="https://www.justkannada.in/mysore-minister-bc-patil-progress-review-meeting/">ರಸಗೊಬ್ಬರ, ಬಿತ್ತನೆ ಬೀಜ ಕೊರತೆ ಇಲ್ಲ: ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ-ಸಚಿವ ಬಿ.ಸಿ ಪಾಟೀಲ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,16,2021(<a href="https://www.justkannada.in">www.justkannada.in</a>):</strong>  ನಮ್ಮಲ್ಲಿ ಯಾವುದೇ ರಸಗೊಬ್ಬರ, ಬಿತ್ತನೆ ಬೀಜ ಕೊರತೆ ಇಲ್ಲ. ಯಾರು ಕೃತಕ ಅಭಾವ ಸೃಷ್ಟಿಸುತ್ತಾರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಕೃಷಿ ಇಲಾಖೆಗೆ ಸಂಬಂಧಿಸಿದಂತೆ  ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಸಚಿವ ಬಿ.ಸಿ ಪಾಟೀಲ್ ಅವರು ಮುಂಗಾರು ಹಂಗಾಮಿ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಕೈಪಿಡಿ ಬಿಡುಗಡೆ ಮಾಡಿದರು.</p>
<p>ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಶಾಸಕರಾದ ಕೆ.ಮಹದೇವ್, ಹರ್ಷವರ್ಧನ್, ಅನಿಲ್ ಚಿಕ್ಕಮಾದು, ವಿಧಾನಪರಿಷತ್ ಸದಸ್ಯ ಆರ್.ಧರ್ಮಸೇನಾ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಕೃಷಿ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.</p>
<p>ಜಿಲ್ಲೆಯಲ್ಲಿ ಬಿತ್ತನೆ ಬೀಜ ಕೊರತೆ ವಿಚಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚೆಯಾಯಿತು. ಸಭೆಯಲ್ಲಿ ಮಾತನಾಡಿದ ಸಚಿವ ಬಿ.ಸಿ ಪಾಟೀಲ್ , ಜಿಲ್ಲೆಯಲ್ಲಿ ಬಿತ್ತನೆ ಬೀಜ ಕೊರತೆ ಇದೆ ಎಂದು ಸುದ್ದಿಯಾಗುತ್ತಿದೆ. ಆದರೆ ಕೃಷಿ ಇಲಾಖೆಯಲ್ಲಿ ಕೊರತೆ ಇಲ್ಲ ಎಂದು ಹೇಳುತ್ತಿದ್ದೀರಿ. ಮತ್ತೇಕೆ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಮಹಾಂತೇಶಪ್ಪಗೆ  ಅವರಿಗೆ ಪ್ರಶ್ನಿಸಿದರು.</p>
<p>ಎಲ್ಲ ಮಾಹಿತಿಗಳನ್ನ ಮಾಧ್ಯಮದವರೊಂದಿಗೆ ಹಂಚಿಕೊಳ್ಳಬೇಕು. ಹಾಗಾದರೆ ಮಾತ್ರ ರೈತರಿಗೆ ಮಾಹಿತಿ ತಿಳಿಯುತ್ತದೆ. ತಾಲ್ಲೂಕು ಮಟ್ಟದಿಂದಲೂ ಆಗಿದ್ದಾಗಿನ ಮಾಹಿತಿಯನ್ನ ಮಾಧ್ಯಮದವರಿಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಬಿಸಿ ಪಾಟೀಲ್ ಸಲಹೆ ನೀಡಿದರು.</p>
<p>ಈ ವೇಳೆ ಎಲ್ಲ ಹಂತದ ಅಧಿಕಾರಿಗಳು ವಾರ್ತಾ ಇಲಾಖೆಯ ಸಹಾಯದಿಂದ ಪತ್ರಿಕಾ ಪ್ರಕಟಣೆ ನೀಡಿ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಸೂಚನೆ ನೀಡಿದರು.</p>
<p>ನಂತರ ಮಾತನಾಡಿದ ಸಚಿವ ಬಿಸಿ ಪಾಟೀಲ್, ನಮ್ಮಲ್ಲಿ ಯಾವುದೇ ರಸಗೊಬ್ಬರ, ಬಿತ್ತನೆ ಬೀಜ ಕೊರತೆ ಇಲ್ಲ. ಇದು ಕೃತಕವಾಗಿ ಅಭಾವ ಸೃಷ್ಟಿ ಮಾಡುವ ಉದ್ದೇಶ. ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೈಸೂರಿನಲ್ಲಿ ಈಗಾಗಲೇ ನಾಲ್ಕು ಕೇಸ್ ದಾಖಲಾಗಿದೆ. ಹಲವರು ಅಕ್ರಮವಾಗಿ ಗೋದಾಮಿನಲ್ಲಿ ಇಟ್ಟು ಅಭಾವ ಸೃಷ್ಟಿಸಿದ್ದಾರೆ. ಇದರಿಂದ ರೈತರು ಕ್ಯೂ ನಲ್ಲಿ ನಿಲ್ಲುವ  ಸಮಸ್ಯೆ ಉಂಟಾಗುತ್ತಿದೆ ಎಂದರು.<img loading="lazy" decoding="async" class="aligncenter size-medium wp-image-67983" src="https://www.justkannada.in/wp-content/uploads/2021/06/bc-patil-2-300x195.jpg" alt="" width="300" height="195" /></p>
<p>ಬಳ್ಳಾರಿಯಲ್ಲಿ ನಡೆದ ಘಟನೆ ನಮ್ಮ ಇಲಾಖೆ ವ್ಯಾಪ್ತಿಗೆ ಬರೋದಿಲ್ಲ. ಅದು ಖಾಸಗಿ ಸಂಸ್ಥೆಯವರು ಮಾಡಿದ ಸಮಸ್ಯೆ. ಕೃತಕ ಅಭಾವ ಸೃಷ್ಟಿಸುವ ಉದ್ದೇಶದಿಂದ ಹೀಗೆ ಆಗಿದೆ. ಯಾರು ಕೃತಕ ಅಭಾವ ಸೃಷ್ಟಿಸುತ್ತಾರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಸಿ ಪಾಟೀಲ್ ತಿಳಿಸಿದರು.</p>
<p>Key words: mysore-Minister- BC Patil- Progress -review -meeting</p>
<p>The post <a href="https://www.justkannada.in/mysore-minister-bc-patil-progress-review-meeting/">ರಸಗೊಬ್ಬರ, ಬಿತ್ತನೆ ಬೀಜ ಕೊರತೆ ಇಲ್ಲ: ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ-ಸಚಿವ ಬಿ.ಸಿ ಪಾಟೀಲ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಬಿ.ಎಸ್.ವೈ ಗೆ ಕೆಲ ಸಚಿವರಿಂದ ಹೆದರಿಸುವ ಕೆಲಸ ನಡೆಯುತ್ತಿದೆ : ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಾಗ್ದಾಳಿ</title>
		<link>https://www.justkannada.in/cmb-s-ysomeministerscaryworkprogressformermlam-k-somashekhar/</link>
		
		<dc:creator><![CDATA[JK Desk]]></dc:creator>
		<pubDate>Sat, 06 Mar 2021 11:21:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.S.Y.]]></category>
		<category><![CDATA[CM]]></category>
		<category><![CDATA[Former]]></category>
		<category><![CDATA[M.K.Somashekhar]]></category>
		<category><![CDATA[minister]]></category>
		<category><![CDATA[MLA]]></category>
		<category><![CDATA[Progress]]></category>
		<category><![CDATA[Scary]]></category>
		<category><![CDATA[some]]></category>
		<category><![CDATA[work]]></category>
		<guid isPermaLink="false">https://www.justkannada.in/?p=58354</guid>

					<description><![CDATA[<p>ಬೆಂಗಳೂರು,ಮಾರ್ಚ್,06,2021(www.justkannada.in) : ಸಿಎಂ ಬಿ.ಎಸ್.ವೈ ಗೆ ಕೆಲ ಸಚಿವರಿಂದ ಹೆದರಿಸುವ ಕೆಲಸ ನಡೆಯುತ್ತಿದೆ. ಜನಸಾಮಾನ್ಯರ ಕೆಲಸ ಮಾಡುವ ಬದಲು ಅವರವರ ರಕ್ಷಣೆಗಿಳಿದಿದ್ದಾರೆ ಎಂದು ರಾಜ್ಯ ಸಚಿವರ ಕಾರ್ಯವೈಖರಿ ವಿರುದ್ಧ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಿಡಿ ಬಿಡುಗಡೆ ಭಯದಲ್ಲಿ ನ್ಯಾಯಾಲಯದ ಮೊರೆ ಹೋಗಿ ಮುಂಚಿತವಾಗಿಯೇ ತಡೆಯಾಜ್ಞೆ ತಂದಿದ್ದಾರೆ. ನಮ್ಮ ಸಿಡಿಗಳು ಎಲ್ಲಿ ಬಯಲಿಗೆ ಬರುತ್ತೋ ಎಂದು ಭಯಭೀತರಾಗಿದ್ದಾರೆ. ಬಿಜೆಪಿ ಅವರ ಸಮಸ್ಯೆ, ಜಗಳವೇ ಇನ್ನು ಸರಿಯಾಗಿಲ್ಲ. ಇನ್ನು [&#8230;]</p>
<p>The post <a href="https://www.justkannada.in/cmb-s-ysomeministerscaryworkprogressformermlam-k-somashekhar/">ಸಿಎಂ ಬಿ.ಎಸ್.ವೈ ಗೆ ಕೆಲ ಸಚಿವರಿಂದ ಹೆದರಿಸುವ ಕೆಲಸ ನಡೆಯುತ್ತಿದೆ : ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,06,2021(www.justkannada.in)</strong> : ಸಿಎಂ ಬಿ.ಎಸ್.ವೈ ಗೆ ಕೆಲ ಸಚಿವರಿಂದ ಹೆದರಿಸುವ ಕೆಲಸ ನಡೆಯುತ್ತಿದೆ. ಜನಸಾಮಾನ್ಯರ ಕೆಲಸ ಮಾಡುವ ಬದಲು ಅವರವರ ರಕ್ಷಣೆಗಿಳಿದಿದ್ದಾರೆ ಎಂದು ರಾಜ್ಯ ಸಚಿವರ ಕಾರ್ಯವೈಖರಿ ವಿರುದ್ಧ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="jk" width="363" height="363" /></p>
<p>ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಿಡಿ ಬಿಡುಗಡೆ ಭಯದಲ್ಲಿ ನ್ಯಾಯಾಲಯದ ಮೊರೆ ಹೋಗಿ ಮುಂಚಿತವಾಗಿಯೇ ತಡೆಯಾಜ್ಞೆ ತಂದಿದ್ದಾರೆ. ನಮ್ಮ ಸಿಡಿಗಳು ಎಲ್ಲಿ ಬಯಲಿಗೆ ಬರುತ್ತೋ ಎಂದು ಭಯಭೀತರಾಗಿದ್ದಾರೆ. ಬಿಜೆಪಿ ಅವರ ಸಮಸ್ಯೆ, ಜಗಳವೇ ಇನ್ನು ಸರಿಯಾಗಿಲ್ಲ. ಇನ್ನು ಬಡ ಜನರ ಕೆಲಸ ಮಾಡಿಕೊಡಲು ಇವರಿಗೆ ಆಗುತ್ತಾ? ಎಂದು ಪ್ರಶ್ನಿಸಿದ್ದಾರೆ.</p>
<p>ಸ್ಥಳೀಯ ಶಾಸಕರು ಯಾವ ಬೀದಿ ಸುತ್ತಿದರು, ಎಲ್ಲಿ ಬರುತ್ತಿದ್ದರು ನೋಡಿದ್ದೀರಾ?, ಗೆದ್ದು 5 ವರ್ಷ ಸುಮ್ಮನ್ನೇ ಮನೆಯಲ್ಲಿ ಇರುತ್ತಾರೆ. 5 ವರ್ಷದ ನಂತರ ಅವರು ಮನೆಯಿಂದ ಆಚೆ ಬರುತ್ತಾರೆ ಎಂದು ಶಾಸಕ ರಾಮದಾಸ್ ವಿರುದ್ಧವು ಆಕ್ರೋಶ ಹೊರಹಾಕಿದರು.</p>
<p><strong>ಬಡವರಿಗೆ ಪೆನ್ಷನ್ ಕೊಡದಷ್ಟು ದರಿದ್ರ ಈ ಸರ್ಕಾರಕ್ಕೆ ಬಂದಿದೆಯಾ?</strong></p>
<p>ಬಡವರಿಗೆ ಪೆನ್ಷನ್ ಕೊಡದಷ್ಟು ದರಿದ್ರ ಈ ಸರ್ಕಾರಕ್ಕೆ ಬಂದಿದೆಯಾ?. ಈ ಸರ್ಕಾರ ನಿರ್ಗತಿಕ ಸರ್ಕಾರವಾಗಿದೆ. ಬಡವರ ಮೇಲೆ‌ ಯಾವುದೇ ಕರುಣೆ ಈ ಸರ್ಕಾರಕ್ಕೆ ಇಲ್ಲ. ಸರ್ಕಾರದಲ್ಲಿ ಇಚ್ಛಾ ಶಕ್ತಿಯ ಕೊರತೆ ಇದೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣಕಾಸೆ ಇಲ್ಲ ಎಂದು ಕಿಡಿಕಾರಿದರು.</p>
<p>ಅಂಗವಿಕಲ, ವಿಧವಾ ಮತ್ತು ವೃದ್ಧಾಪ್ಯ ವೇತನ ನೀಡದೆ ವಿಳಂಬ. ಬಹುತೇಕ ಮಂದಿ ಬಡ ಅಂಗವಿಕಲ, ವೃದ್ಧ ಮತ್ತು ವಿಧವೆಯರಿಗೆ ೪ ರಿಂದ ೭ ತಿಂಗಳುಗಳಿಂದ ಪೆನ್ಷನ್ ನೀಡುತ್ತಿಲ್ಲ. ಈ ಬಗ್ಗೆ ತಾಲೂಕು ಕಚೇರಿಗೆ ತೆರಳಿ ನಿರಂತರವಾಗಿ ಅರ್ಜಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅಸಮಾಧಾನವ್ಯಕ್ತಪಡಿಸಿದರು.</p>
<p><img loading="lazy" decoding="async" class="aligncenter size-medium wp-image-58364" src="https://www.justkannada.in/wp-content/uploads/2021/03/16-1-300x211.jpg" alt="" width="300" height="211" /></p>
<p>ಅಧಿಕಾರಿಗಳು ಸರ್ಕಾರದಿಂದ ಹಣ ಬರುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ, ೬೦೦ ರೂ. ಪೆನ್ಷನ್ ನೀಡದಷ್ಟು ಗತಿ ಇಲ್ಲದಾಗಿದೆಯೇ ಈ ಸರ್ಕಾರಕ್ಕೆ?, ಸರ್ಕಾರದ ಖಜಾನೆ ಖಾಲಿ‌ ಆಗಿದೆಯೇ ಅಥವಾ ದರಿದ್ರ ಬಂದಿದೆಯೇ ಈ ಸರ್ಕಾರಕ್ಕೆ?, ಇಲ್ಲಿನ ಸ್ಥಳೀಯ ಶಾಸಕರು ಕೇವಲ ವೋಟ್ ಗಾಗಿ ಮಾತ್ರ ಬರುತ್ತಾರೆ. ಬಡವರ ಕಷ್ಟಕ್ಕೆ ಸ್ಪಂದಿಸಲ್ಲ ಎಂದು ಕಿಡಿಕಾರಿದರು.</p>
<p>key words : CM-B.S.Y-some-minister-Scary-Work-progress-Former-MLA-M.K.Somashekhar</p>
<p>The post <a href="https://www.justkannada.in/cmb-s-ysomeministerscaryworkprogressformermlam-k-somashekhar/">ಸಿಎಂ ಬಿ.ಎಸ್.ವೈ ಗೆ ಕೆಲ ಸಚಿವರಿಂದ ಹೆದರಿಸುವ ಕೆಲಸ ನಡೆಯುತ್ತಿದೆ : ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
