<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Rambhakta –Mahatma Gandhi-great -faith - Sri Rama-CM -Siddaramaiah Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/rambhakta-mahatma-gandhi-great-faith-sri-rama-cm-siddaramaiah/feed/" rel="self" type="application/rss+xml" />
	<link>https://www.justkannada.in/tag/rambhakta-mahatma-gandhi-great-faith-sri-rama-cm-siddaramaiah/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 30 Jan 2024 09:14:12 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Rambhakta –Mahatma Gandhi-great -faith - Sri Rama-CM -Siddaramaiah Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/rambhakta-mahatma-gandhi-great-faith-sri-rama-cm-siddaramaiah/</link>
	<width>32</width>
	<height>32</height>
</image> 
	<item>
		<title>ಶ್ರೀರಾಮ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ: ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/rambhakta-mahatma-gandhi-great-faith-sri-rama-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Tue, 30 Jan 2024 09:14:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Rambhakta –Mahatma Gandhi-great -faith - Sri Rama-CM -Siddaramaiah]]></category>
		<guid isPermaLink="false">https://www.justkannada.in/?p=118659</guid>

					<description><![CDATA[<p>ಬೆಂಗಳೂರು, ಜನವರಿ,30,2024(www.justkannada.in):  ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ. ಶ್ರೀರಾಮ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ಮಹಾತ್ಮಾ ಗಾಂಧೀಜಿಯವರು1948ರ ಜನವರಿ 30 ರಂದು ಗೋಡ್ಸೆಯವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ದಿನ. ಗಾಂಧೀಜಿಯವರು ವಲ್ಲಭಾ ಬಾಯಿ [&#8230;]</p>
<p>The post <a href="https://www.justkannada.in/rambhakta-mahatma-gandhi-great-faith-sri-rama-cm-siddaramaiah/">ಶ್ರೀರಾಮ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ: ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜನವರಿ,30,2024(<a href="http://www.justkannada.in">www.justkannada.in</a>):</strong>  ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ. ಶ್ರೀರಾಮ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.<img decoding="async" class="aligncenter size-full wp-image-118660" src="https://www.justkannada.in/wp-content/uploads/2024/01/gandhi.jpg" alt="" width="500" height="403" srcset="https://www.justkannada.in/wp-content/uploads/2024/01/gandhi.jpg 500w, https://www.justkannada.in/wp-content/uploads/2024/01/gandhi-300x242.jpg 300w" sizes="(max-width: 500px) 100vw, 500px" /></p>
<p>ಇಂದು ಮಹಾತ್ಮಾ ಗಾಂಧೀಜಿಯವರು1948ರ ಜನವರಿ 30 ರಂದು ಗೋಡ್ಸೆಯವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ದಿನ. ಗಾಂಧೀಜಿಯವರು ವಲ್ಲಭಾ ಬಾಯಿ ಪಟೇಲರೊಂದಿಗೆ ಸಂವಾದಿಸಿದ ನಂತರ ಭಜನೆಗೆ ತೆರಳಲು ಸ್ವಲ್ಪ ವಿಳಂಬವಾಗಿದ್ದ ಸಂದರ್ಭದಲ್ಲಿ ಹಂತಕ ಗೋಡ್ಸೆ, ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದರು. ಈ ದೇಶಕ್ಕೆ ಅವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಲಭಿಸಿತು. ಕಾಂಗ್ರೆಸ್ ನ ಬಹಳಷ್ಟು ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ ಎಂದರು.</p>
<p><strong> ಶ್ರೀರಾಮನ ಮೇಲೆ ಗಾಂಧಿಯವರಿಗೆ ಅಪಾರ ಭಕ್ತಿ:</strong></p>
<p>ಅವರು  ತಮ್ಮ ಕೊನೆಯುಸಿರೆಳೆದಾಗಲೂ ‘ಹೇ ರಾಮ್’ ಎಂದು ಉಚ್ಛರಿಸಿದ್ದರು. ಶ್ರೀ ರಾಮನ ಬಗ್ಗೆ ಅಪಾರ ಭಕ್ತಿ, ನಂಬಿಕೆಯನ್ನು ಹೊಂದಿದ್ದರು. ಆದ್ದರಿಂದಲೇ ‘ರಘುಪತಿ ರಾಘವ ರಾಜಾರಾಮ್ ’ ಎಂಬುದು ಅವರ ನೆಚ್ಚಿನ ಭಜನೆಯಾಗಿತ್ತು. ಶ್ರೀರಾಮ ಪಿತೃವಾಕ್ಯ ಪರಿಪಾಲಕನಾಗಿದ್ದು, ಹದಿನಾಲ್ಕು ವರ್ಷಗಳ ಕಾಲ ವನವಾಸಕ್ಕೆ ತೆರಳಿದ್ದರು. ಆದರ್ಶಮಯ ಆಡಳಿತವನ್ನು ನೀಡಿದ ಶ್ರೀರಾಮಚಂದ್ರನನ್ನು ಪೂಜಿಸುವ ಮಹಾತ್ಮಾ ಗಾಂಧಿಯವರನ್ನು ಮತಾಂಧನಾಗಿದ್ದ ಗೋಡ್ಸೆ ಹತ್ಯೆಗೈಯುತ್ತಾರೆ. ಅವರ ಆದರ್ಶದಲ್ಲಿ ನಡೆದು ನಾವೆಲ್ಲರೂ ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣಬೇಕು. ಸತ್ಯ ಅಹಿಂಸೆಯ ಹಾದಿಯನ್ನು ತೋರಿದ ಗಾಂಧೀಜಿಯವರನ್ನು ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಅಂತಹ ಮಹಾನ್ ವ್ಯಕ್ತಿಯ ಹತ್ಯೆಗೈದ ಗೋಡ್ಸೆಯನ್ನು ಪೂಜಿಸುವವರು ನಮ್ಮ ನಡುವೆ ಇದ್ದಾರೆ. ರಾಜ್ಯದ ಜನತೆ ಹಾಗೂ ಸರ್ಕಾರದ ಪರವಾಗಿ ಮಹಾತ್ಮಾ ಗಾಂಧೀಜಿಯವರಿಗೆ ನಮ್ಮ ನಮನಗಳನ್ನು ಸಲ್ಲಿಸುತ್ತೇನೆ ಎಂದರು.</p>
<p><strong>ಸಮಾಜದಲ್ಲಿ ಶಾಂತಿ ನೆಲೆಸಬೇಕು.</strong></p>
<p>ಗಾಂಧೀಜಿಯವರು  ಶಾಂತಿ ಸಂದೇಶವನ್ನು ಸಾರಿದರು. ಆದರೆ ಇತ್ತೀಚೆಗೆ ಸಮಾಜದಲ್ಲಿ ಶಾಂತಿಯನ್ನು ಕದಡುವ ಪ್ರಸಂಗಗಳು ನಡೆಯುತ್ತಿವೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಗೋಡ್ಸೆಯ ಅನುಯಾಯಿಗಳು ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿದ್ದಾರೆ. ಪರಸ್ಪರ ಪ್ರೀತಿ ವಿಶ್ವಾಸ ಹಾಗೂ ಶಾಂತಿ ಸಮಾಜದಲ್ಲಿ ನೆಲೆಸಬೇಕು. ಮನುಷ್ಯ ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು ಎಂದರು.</p>
<p><strong>ಮಂಡ್ಯ ಘಟನೆ: ರಾಜಕೀಯ ದುರುದ್ದೇಶದಿಂದ ಕೂಡಿದೆ:</strong></p>
<p>ಜಿಲ್ಲಾಡಳಿತದ ವೈಫಲ್ಯದಿಂದ ಮಂಡ್ಯ ಘಟನೆ ನಡೆದಿದೆ ಎಂದು ಸಂಸದೆ ಸುಮಲತಾ ದೂಷಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತೇ ಹೊರತು ಯಾವುದೇ ಧರ್ಮ ಜಾತಿ, ಪಕ್ಷದ ಧ್ವಜವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಪತ್ರ ನೀಡಿದ ನಂತರ ಅದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದರಿಂದ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದ್ದು, ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುವ ಪ್ರಯತ್ನ ಮಾಡಲಾಗಿದೆ.</p>
<p>ಫೆಬ್ರವರಿ 8 ರಂದು ಮಂಡ್ಯ ಬಂದ್ ಮಾಡಲು ಮಾಜಿ ಸಿಎಂ ಕುಮಾರಸ್ವಾಮಿಯವರು ಕರೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಂದ್ ಮಾಡುವ ಅಥವಾ ಮಾಡದಿರುವ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ. ಇವರೇ ಮುಚ್ಚಳಿಕೆ ಪತ್ರ ನೀಡಿ, ನಂತರ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾರಿಸಿ, ತಮ್ಮ ಮುಚ್ಚಳಿಕೆಯನ್ನು ತಾವೇ ಉಲ್ಲಂಘನೆ ಮಾಡಿರುವುದು ತಪ್ಪು ಎಂದರು.</p>
<p>Key words: Rambhakta –Mahatma Gandhi-great -faith &#8211; Sri Rama-CM -Siddaramaiah</p>
<p>The post <a href="https://www.justkannada.in/rambhakta-mahatma-gandhi-great-faith-sri-rama-cm-siddaramaiah/">ಶ್ರೀರಾಮ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ: ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
