<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>rohini-sindoori Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/rohini-sindoori/feed/" rel="self" type="application/rss+xml" />
	<link>https://www.justkannada.in/tag/rohini-sindoori/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 24 Dec 2021 07:12:29 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>rohini-sindoori Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/rohini-sindoori/</link>
	<width>32</width>
	<height>32</height>
</image> 
	<item>
		<title>ಉತ್ತರ ಕರ್ನಾಟಕ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚನೆ : ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ.</title>
		<link>https://www.justkannada.in/minister-for-muzarai-haj-wakf-govt-of-karnataka-shashikala-jolley-rohini-sindoori-belagavi/</link>
		
		<dc:creator><![CDATA[JK Desk]]></dc:creator>
		<pubDate>Fri, 24 Dec 2021 07:12:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[belagavi]]></category>
		<category><![CDATA[Govt. of Karnataka]]></category>
		<category><![CDATA[Haj & Wakf]]></category>
		<category><![CDATA[Minister for Muzarai]]></category>
		<category><![CDATA[rohini-sindoori]]></category>
		<category><![CDATA[shashikala-jolley]]></category>
		<guid isPermaLink="false">https://www.justkannada.in/?p=83038</guid>

					<description><![CDATA[<p>&#160; ಬೆಳಗಾವಿ, ಡಿ.24, 2021 : (www.justkannada.in news ) ಪ್ರಪ್ರಥಮ ಬಾರಿಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಉತ್ತರ ಕರ್ನಾಟಕ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚಿಸುವಂತೆ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಹಾಗೂ ರಾಜ್ಯ ಧಾರ್ಮಿಕ ಪರಿಷತ್ತಿನ ಅಧ್ಯಕ್ಷೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 3 ನೇ ರಾಜ್ಯ ಧಾರ್ಮಿಕ ಪರಿಷತ್ತಿನ 15 ನೇ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಉತ್ತರ ಕರ್ನಾಟಕ [&#8230;]</p>
<p>The post <a href="https://www.justkannada.in/minister-for-muzarai-haj-wakf-govt-of-karnataka-shashikala-jolley-rohini-sindoori-belagavi/">ಉತ್ತರ ಕರ್ನಾಟಕ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚನೆ : ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಳಗಾವಿ, ಡಿ.24, 2021 : (www.justkannada.in news ) ಪ್ರಪ್ರಥಮ ಬಾರಿಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಉತ್ತರ ಕರ್ನಾಟಕ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚಿಸುವಂತೆ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಹಾಗೂ ರಾಜ್ಯ ಧಾರ್ಮಿಕ ಪರಿಷತ್ತಿನ ಅಧ್ಯಕ್ಷೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು.</p>
<p>ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 3 ನೇ ರಾಜ್ಯ ಧಾರ್ಮಿಕ ಪರಿಷತ್ತಿನ 15 ನೇ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಉತ್ತರ ಕರ್ನಾಟಕ ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು.</p>
<p><img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ದಿ:</p>
<p>ಬೆಳಗಾವಿ ಜಿಲ್ಲೆಯಲ್ಲಿರುವ ಪ್ರಮುಖ ಎ ದರ್ಜೆಯ ದೇವಸ್ಥಾನ ಸವದತ್ತಿಯ ರೇಣುಕಾ ಯಲ್ಲಮ್ಮ. ಈ ದೇವಸ್ಥಾನಕ್ಕೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಪ್ರತಿವರ್ಷ ಆಗಮಿಸುತ್ತಾರೆ. ಭಕ್ತರುಗಳಿಗೆ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ದಿಯ ಕುರಿತು ವಿಶೇಷ ಚರ್ಚೆ ನಡೆಸಲಾಯಿತು. ಈಗಾಗಲೇ 3.58 ಕೋಟಿ ವೆಚ್ಚದಲ್ಲಿ ಬಳಿಗಾರ ಕಟ್ಟೆ ರಸ್ತೆಯ ಅಭಿವೃದ್ದಿ ಕಾರ್ಯದ ಬಗ್ಗೆ ಅಂದಾಜುಪಟ್ಟಿಯನ್ನು ತಯಾರಿಸಲಾಗಿದೆ. ಇದಕ್ಕೆ ಅಗತ್ಯವಿರುವ ಅನುದಾನದ ಬಿಡುಗಡೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವೆ ಸೂಚಿಸಿದರು.</p>
<p>ದೇವಾಲಯದ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡುವ ಸಂಬಂಧ ಘನತ್ಯಾಜ್ಯ ಮತ್ತು ದ್ರವತ್ಯಾಜ್ಯ ಸಂಸ್ಕರಣಾ ಯೋಜನೆಯ ಡಿಪಿಆರ್‌ ನ್ನು ಶೀಘ್ರವಾಗಿ ಸಿದ್ದಗೊಳಿಸಿ.</p>
<p>ಮಹದೇಶ್ವರ ಬೆಟ್ಟದ ಶ್ರೀ ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನದಿಂದ ಸಿ ದರ್ಜೆಯ ದೇವಸ್ಥಾನಗಳ ದತ್ತು. ಈ ಬಗ್ಗೆ ದತ್ತು ತಗೆದುಕೊಳ್ಳಬೇಕಾದ ಸಿ ದರ್ಜೆಯ ದೇವಸ್ಥಾನಗಳ ಪಟ್ಟಿಯನ್ನು ತಯಾರಿಸಿ ಪ್ರಾಧಿಕಾರಕ್ಕೆ ಕಳುಹಿಸಲು ಸೂಚನೆ.</p>
<p>ರಾಜ್ಯದ ಎ ಮತ್ತು ಬಿ ದರ್ಜೆಯ ದೇವಸ್ಥಾನಗಳಿಂದ ಸಾಮಾನ್ಯ ಸಂಗ್ರಹಣ ನಿಧಿಗೆ ಪ್ರತಿವರ್ಷ ಶೇಕಡಾ 10 ರಷ್ಟು ವಂತಿಗೆಯನ್ನು ಸಂಗ್ರಹಿಸಲಾಗುತ್ತದೆ. ಇದನ್ನು ಕಡಿಮೆ ಆದಾಯವಿರುವ ದೇವಸ್ಥಾನಗಳ ಅಭಿವೃದ್ದಿಗೆ ಬಳಸಲಾಗುತ್ತದೆ. ಈ ನಿಧಿಗೆ ವಂತಿಗೆ ಸಂಗ್ರಹಕ್ಕೆ ಆದ್ಯತೆ ನೀಡಬೇಕಾಗಿದೆ. ಪ್ರತಿವರ್ಷ ದೇವಸ್ಥಾನದ ಲೆಕ್ಕಪತ್ರ ಪರಿಶೀಲನೆಯಾಗಿ ಜೂನ್‌ ತಿಂಗಳ ಒಳಗಾಗಿ ಆಯುಕ್ತರಿಗೆ ಆಡಿಟ್‌ ವರದಿ ನೀಡದಿದ್ದಲ್ಲಿ ಆಯಾ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿಸಿ ಶಿಸ್ತು ಕ್ರಮ ಜರುಗಿಸುವಂತೆ ಸೂಚಿಸಿ ಸಚಿವೆ ಜೊಲ್ಲೆ.</p>
<p><strong>ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನದಿಂದ ವಂತಿಗೆ ಸಂಗ್ರಹ:</strong></p>
<p>ಮಹದೇಶ್ವರ ಬೆಟ್ಟದ ಶ್ರೀ ಮಲೈ ಮಹದೇಶ್ವರ ಸ್ವಾಮಿ ದೇವಾಲಯದ ವಾರ್ಷಿಕ ಆದಾಯದಿಂದ ಸಾಮಾನ್ಯ ಸಂಗ್ರಹಣಾ ನಿಧಿಗೆ ವಂತಿಗೆಯನ್ನು ನೀಡಲಾಗುತ್ತಿಲ್ಲ. ಈ ದೇವಸ್ಥಾನದಿಂದಲೂ ವಂತಿಗೆ ಯನ್ನು ನೀಡುವಂತೆ ಪ್ರಾಧಿಕಾರಕ್ಕೆ ಸೂಚನೆ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>
<p><img decoding="async" class="aligncenter size-full wp-image-83039" src="https://www.justkannada.in/wp-content/uploads/2021/12/shashikala-rohini.jpg" alt="" width="1033" height="466" /></p>
<p>ರಾಮದುರ್ಗದ ಗೊಡಚಿ ವೀರಭದ್ರ ದೇವಸ್ಥಾನ, ಬೆಳಗಾವಿಯ ಪಂಥಬಾಳೇಕುಂದ್ರಿ ಶ್ರೀ ದತ್ತ ದೇವಸ್ಥಾನ, ಶ್ರೀ ಪರಮಾರ್ಥನಿಕೇತನ ಹರಿಮಂದಿರ, ರಾಯಭಾಗದ ಶ್ರೀ ಮಹಾಕಾಳಿ (ಮಾಯಕ್ಕ) ದೇವಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳ ಅಭಿವೃದ್ದಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.</p>
<p>ಸಭೆಯಲ್ಲಿ ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ತುಷಾರ್‌ ಗಿರಿನಾಥ್‌, ಮುಜರಾಯಿ ಆಯುಕ್ತರಾದ ಶ್ರೀಮತಿ ರೋಹಿಣಿ ಸಿಂಧೂರಿ, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.</p>
<p><img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>key words : Minister for Muzarai- Haj &amp; Wakf- Govt. of Karnataka -shashikala-jolley-rohini.sindoori-belagavi</p>
<p>&nbsp;</p>
<p>The post <a href="https://www.justkannada.in/minister-for-muzarai-haj-wakf-govt-of-karnataka-shashikala-jolley-rohini-sindoori-belagavi/">ಉತ್ತರ ಕರ್ನಾಟಕ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚನೆ : ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಿಷ್ಠಾಚಾರ ಕ್ರಮಗಳ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಹೊರಡಿಸಲು ಸರಕಾರಕ್ಕೆ ಶಿಫಾರಸ್ಸು ಮಾಡಿದ ಹಕ್ಕು ಬಾಧ್ಯತೆ ಸಮಿತಿ.</title>
		<link>https://www.justkannada.in/bangalore-mysore-rohini-sindoori-dc/</link>
		
		<dc:creator><![CDATA[JK Desk]]></dc:creator>
		<pubDate>Sat, 09 Oct 2021 05:53:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[DC]]></category>
		<category><![CDATA[Mysore.]]></category>
		<category><![CDATA[rohini-sindoori]]></category>
		<guid isPermaLink="false">https://www.justkannada.in/?p=77568</guid>

					<description><![CDATA[<p>&#160; ಮೈಸೂರು, ಅ.09, 2021 : (www.justkannada.in news) : ವಿಧಾನ ಮಂಡಲದ ಸಮಿತಿಗಳು ಭೇಟಿ/ಅಧ್ಯಯನ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಅಂಥಹ ಸಮಿತಿಗಳನ್ನು ಸ್ವಾಗತಿಸುವ ಸಂಬಂಧ ಕೂಡಲೇ ಸರಕಾರ ಶಿಷ್ಠಾಚಾರ ಕ್ರಮಗಳ ಬಗ್ಗೆ ಸುತ್ತೂಲೆ ಹೊರಡಿಸಬೇಕು ಎಂದು ಶಿಫಾರಸ್ಸು ಮಾಡಲಾಗಿದೆ. ಹಕ್ಕು ಬಾಧ್ಯತೆ ಗಳ ಸಮಿತಿ ಎದುರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಿತಿ ವಿಚಾರಣೆ ನಡೆಸಿದ ವೇಳೆ ಸರಕಾರದ ಶಿಷ್ಠಾಚಾರ ಕ್ರಮಗಳೇ ಇಲ್ಲದಿರುವುದು ಬಹಿರಂಗಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ [&#8230;]</p>
<p>The post <a href="https://www.justkannada.in/bangalore-mysore-rohini-sindoori-dc/">ಶಿಷ್ಠಾಚಾರ ಕ್ರಮಗಳ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಹೊರಡಿಸಲು ಸರಕಾರಕ್ಕೆ ಶಿಫಾರಸ್ಸು ಮಾಡಿದ ಹಕ್ಕು ಬಾಧ್ಯತೆ ಸಮಿತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಅ.09, 2021 : (www.justkannada.in news) : ವಿಧಾನ ಮಂಡಲದ ಸಮಿತಿಗಳು ಭೇಟಿ/ಅಧ್ಯಯನ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಅಂಥಹ ಸಮಿತಿಗಳನ್ನು ಸ್ವಾಗತಿಸುವ ಸಂಬಂಧ ಕೂಡಲೇ ಸರಕಾರ ಶಿಷ್ಠಾಚಾರ ಕ್ರಮಗಳ ಬಗ್ಗೆ ಸುತ್ತೂಲೆ ಹೊರಡಿಸಬೇಕು ಎಂದು ಶಿಫಾರಸ್ಸು ಮಾಡಲಾಗಿದೆ.</p>
<p><img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಹಕ್ಕು ಬಾಧ್ಯತೆ ಗಳ ಸಮಿತಿ ಎದುರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಿತಿ ವಿಚಾರಣೆ ನಡೆಸಿದ ವೇಳೆ ಸರಕಾರದ ಶಿಷ್ಠಾಚಾರ ಕ್ರಮಗಳೇ ಇಲ್ಲದಿರುವುದು ಬಹಿರಂಗಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಸಮಿತಿ ಶಿಷ್ಠಾಚಾರ ಕ್ರಮಗಳ ಬಗ್ಗೆ ಸುತ್ತೂಲೆ ಹೊರಡಿಸಲು ಶಿಫಾರಸ್ಸು ಮಾಡಿದೆ.</p>
<p>ವಿಧಾನ ಮಂಡಲದ ಸಮಿತಿಗಳು ಭೇಟಿ/ಅಧ್ಯಯನ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಯಾವ ಹಂತದ ಅಧಿಕಾರಿಗಳು ಸ್ವಾಗತಿಸಬೇಕೆಂಬುದರ ಬಗ್ಗೆ ಹಾಗೂ ಕೈಗೊಳ್ಳಬೇಕಾದ ಶಿಷ್ಠಾಚಾರ ಕ್ರಮಗಳ ಬಗ್ಗೆ ಸರ್ಕಾರದ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ನಮೂದಿಸಿರುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಸಮಿತಿ, ಆದುದರಿಂದ ಈ ಬಗ್ಗೆ ಪರಿಶೀಲಿಸಿ, ಸ್ಪಷ್ಟ ಮಾರ್ಗಸೂಚಿಗಳನ್ನು ಕೂಡಲೇ ಹೊರಡಿಸುವಂತೆ ಸಮಿತಿಯು ಶಿಫಾರಸ್ಸು ಮಾಡಿದೆ.</p>
<p><img loading="lazy" decoding="async" class="aligncenter size-full wp-image-77569" src="https://www.justkannada.in/wp-content/uploads/2021/10/committy.jpg" alt="" width="970" height="1221" /></p>
<p>ಜತೆಗೆ, ದಿನಾಂಕ:21.04,2021 ರಂದು ನಡೆದ ಹಕ್ಕುಬಾಧ್ಯತೆಗಳ ಸಮಿತಿ ಮುಂದೆ ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ರವರು ಹಾಜರಾಗಿ ಯಾವುದೇ ಸಮಿತಿಗಾಗಲೇ, ಶಾಸಕರೊಂದಿಗೆ ಆಗಲೇ ಅಗೌರವ ತೋರುವ ಉದ್ದೇಶವಿಲ್ಲ, ಎಲ್ಲರೊಂದಿಗೂ ಗೌರವದೊಂದಿಗೆ ನಡೆದುಕೊಂಡು ಹೋಗುತ್ತೇನೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ನಿಯಮದಂತ ಶಿಷ್ಠಾಚಾರ ಪಾಲಿಸುತ್ತೇನೆ ಎಂದು ಹೇಳಿಕೆ ನೀಡಿದರು. ಈ ಹಿನ್ನೆಲೆಯಲ್ಲಿ ಸದರಿ ಪ್ರಕರಣವನ್ನು ಮುಕ್ತಾಯಗೊಳಿಸಲು ಸಮಿತಿ ಶಿಫಾರಸ್ಸು ಮಾಡಿತು.</p>
<p><img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>key words : bangalore-mysore-rohini-sindoori-dc</p>
<p>The post <a href="https://www.justkannada.in/bangalore-mysore-rohini-sindoori-dc/">ಶಿಷ್ಠಾಚಾರ ಕ್ರಮಗಳ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಹೊರಡಿಸಲು ಸರಕಾರಕ್ಕೆ ಶಿಫಾರಸ್ಸು ಮಾಡಿದ ಹಕ್ಕು ಬಾಧ್ಯತೆ ಸಮಿತಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>JK EXCLUSIVE ; ಶರತ್ V/S ರೋಹಿಣಿ ಸಿಂಧೂರಿ : ಸಕ್ಷಮ ಪ್ರಾಧಿಕಾರ ಮರು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲು ನಿರ್ದೇಶಿಸಿದ ಸಿಎಟಿ.</title>
		<link>https://www.justkannada.in/mysore-dc-rohini-sindoori-sharath-transfer-high-court-order/</link>
		
		<dc:creator><![CDATA[JK Desk]]></dc:creator>
		<pubDate>Mon, 29 Mar 2021 08:53:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[high-court-order]]></category>
		<category><![CDATA[Mysore DC]]></category>
		<category><![CDATA[rohini-sindoori]]></category>
		<category><![CDATA[sharath-transfer]]></category>
		<guid isPermaLink="false">https://www.justkannada.in/?p=60724</guid>

					<description><![CDATA[<p>ಬೆಂಗಳೂರು, ಮಾ.29, 2021 : (www.justkannada.in news ) ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಿ. ಶರತ್ ವರ್ಗಾವಣೆ ಪ್ರಕರಣ, ಹೈಕೋರ್ಟ್ ನಿರ್ದೇಶನದಂತೆ ಸಿಎಟಿಯಿಂದ ತೀರ್ಪು ಪ್ರಕಟ, ಒಂದು ತಿಂಗಳೊಳಗೆ ಶರತ್ ಅವರನ್ನು ವರ್ಗಾವಣೆ ಮಾಡಿ 2020ರ ಸೆಪ್ಟೆಂಬರ್ 28 ರಂದು ಹೊರಡಿಸಿದ್ದ ಆದೇಶದ ಬಗ್ಗೆ ಸಕ್ಷಮ ಪ್ರಾಧಿಕಾರ ಮರು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲು ನಿರ್ದೇಶನ‌ ಅರ್ಜಿ ಇತ್ಯರ್ಥ. ಒಟ್ಟು 31 ಪುಟಗಳ ಸುದೀರ್ಘ ಆದೇಶ ಹೊರಡಿಸಿರುವ ಸಿಎಟಿ, ವರ್ಗಾವಣೆ ಆದೇಶದ ಬಗ್ಗೆ ಸರಕಾರವೇ ( ಸಕ್ಷಮ ಪ್ರಾಧಿಕಾರ [&#8230;]</p>
<p>The post <a href="https://www.justkannada.in/mysore-dc-rohini-sindoori-sharath-transfer-high-court-order/">JK EXCLUSIVE ; ಶರತ್ V/S ರೋಹಿಣಿ ಸಿಂಧೂರಿ : ಸಕ್ಷಮ ಪ್ರಾಧಿಕಾರ ಮರು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲು ನಿರ್ದೇಶಿಸಿದ ಸಿಎಟಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು, ಮಾ.29, 2021 : (www.justkannada.in news ) ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಿ. ಶರತ್ ವರ್ಗಾವಣೆ ಪ್ರಕರಣ, ಹೈಕೋರ್ಟ್ ನಿರ್ದೇಶನದಂತೆ ಸಿಎಟಿಯಿಂದ ತೀರ್ಪು ಪ್ರಕಟ,<br />
ಒಂದು ತಿಂಗಳೊಳಗೆ ಶರತ್ ಅವರನ್ನು ವರ್ಗಾವಣೆ ಮಾಡಿ 2020ರ ಸೆಪ್ಟೆಂಬರ್ 28 ರಂದು ಹೊರಡಿಸಿದ್ದ ಆದೇಶದ ಬಗ್ಗೆ ಸಕ್ಷಮ ಪ್ರಾಧಿಕಾರ ಮರು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲು ನಿರ್ದೇಶನ‌ ಅರ್ಜಿ ಇತ್ಯರ್ಥ.</p>
<p>ಒಟ್ಟು 31 ಪುಟಗಳ ಸುದೀರ್ಘ ಆದೇಶ ಹೊರಡಿಸಿರುವ ಸಿಎಟಿ, ವರ್ಗಾವಣೆ ಆದೇಶದ ಬಗ್ಗೆ ಸರಕಾರವೇ ( ಸಕ್ಷಮ ಪ್ರಾಧಿಕಾರ )  ಮರು ಪರಿಶೀಲನೆ ನಡೆಸಿ ತೀರ್ಮಾನ ತೆಗೆದುಕೊಳ್ಳಲು ಹೇಳಿದೆ.</p>
<p>ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಅವಧಿಪೂರ್ವ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಅಧಿಕಾರಿ ಬಿ. ಶರತ್ ಸಿಎಟಿಗೆ ಅರ್ಜಿ ಸಲ್ಲಿಸಿದ್ದರು. ತಿಂಗಳುಗಳೇ ಕಳೆದರು ಸಿಎಟಿಯಿಂದ ಯಾವುದೇ ತೀರ್ಪು ಪ್ರಕಟವಾಗಿರಲಿಲ್ಲ. ಇದನ್ನು ಪ್ರಶ್ನಿಸಿ ಶರತ್, ಹೈಕೋರ್ಟ್ ಮೊರೆ ಹೋಗಿದ್ದರು.</p>
<p><img loading="lazy" decoding="async" class="aligncenter size-medium wp-image-60725" src="https://www.justkannada.in/wp-content/uploads/2021/03/cat-bang-177x300.jpeg" alt="mysore-dc-rohini-sindoori-sharath-transfer-high-court-order" width="177" height="300" /></p>
<p>ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ಮುಂದಿನ 2 ವಾರಗಳಲ್ಲಿ ಇತ್ಯರ್ಥಗೊಳಿಸುವಂತೆ ಹೈಕೋರ್ಟ್ ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣಕ್ಕೆ (ಸಿಎಟಿ) ಎರಡು ದಿನಗಳ ಹಿಂದೆ ನಿರ್ದೇಶಿಸಿತ್ತು.</p>
<p>ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಸಿಎಟಿಗೆ ನಿರ್ದೇಶಿಸಬೇಕು ಎಂದು ಕೋರಿ ಅಧಿಕಾರಿ ಬಿ. ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ, ಸತೀಶ್ ಚಂದ್ರ ಶರ್ಮಾ ಹಾಗೂ ನ್ಯಾ, ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಈ ನಿರ್ದೇಶನ ನೀಡಿತ್ತು.<br />
ಪೀಠ ತನ್ನ ತೀರ್ಪಿನಲ್ಲಿ, ಸಿಎಟಿ ರೂಲ್ಸ್-1993 ರ ನಿಯಮ 105ರ ಪ್ರಕಾರ ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ದಿನದಿಂದ 3 ವಾರಗಳ ಒಳಗೆ ಪ್ರಕಟಿಸಬೇಕು. ಪಕ್ಷಗಾರರಿಗೆ ಸೂಚನೆ ಮೂಲಕ ತಿಳಿಸದೇ ಈ ಅವಧಿಯನ್ನು ಬದಲಿಸಲು ಬರುವುದಿಲ್ಲ. ಅದರಂತೆ ಈ ಪ್ರಕರಣದಲ್ಲಿ ಸಿಎಟಿ ಆದೇಶ ಕಾಯ್ದಿರಿಸಿದ ಡಿ.22ರ ನಂತರದ ಮೂರು ವಾರಗಳಲ್ಲಿ ತೀರ್ಪು ಪ್ರಕಟಿಸಬೇಕಿತ್ತು. ಆದರೆ ವಿಳಂಬ ಮಾಡಲಾಗಿದೆ. ಹೀಗಾಗಿ ಮುಂದಿನ 2 ವಾರಗಳಲ್ಲಿ ತೀರ್ಪು ಪ್ರಕಟಿಸಬೇಕು ಎಂದು ನಿರ್ದೇಶಿಸಿತ್ತು.</p>
<p><img loading="lazy" decoding="async" class="aligncenter size-medium wp-image-60726" src="https://www.justkannada.in/wp-content/uploads/2021/03/rohini-sindoori-dc-300x273.jpeg" alt="mysore-dc-rohini-sindoori-sharath-transfer-high-court-order" width="300" height="273" /></p>
<p>ಪ್ರಕರಣದ ಹಿನ್ನೆಲೆ :</p>
<p>ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ರೋಹಿಣಿ ಸಿಂಧೂರಿ ನೇಮಕ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಬಿ. ಶರತ್ ಅವರನ್ನು ಅವಧಿಪೂರ್ವ ವರ್ಗಾವಣೆ ಮಾಡಿತ್ತು. 2020ರ ಆಗಸ್ಟ್ 29ರಂದು ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಬಿ. ಶರತ್ ಅವರನ್ನು ಸೆಪ್ಟೆಂಬರ್ 27ರಂದು ತಿಂಗಳು ತುಂಬುವ ಮುನ್ನವೇ ಹುದ್ದೆಯಿಂದ ತೆರವು ಮಾಡಿತ್ತು.<br />
ಅಕ್ಟೋಬರ್ ಮೊದಲ ವಾರದಲ್ಲಿ ಸರ್ಕಾರದ ವರ್ಗಾವಣೆ ಕ್ರಮ ಪ್ರಶ್ನಿಸಿ ಬಿ. ಶರತ್ ಸಿಎಟಿ ಮೆಟ್ಟಿಲೇರಿದ್ದರು. ಸೇವಾ ನಿಯಮಗಳನ್ನು ಉಲ್ಲಂಘಿಸಿ 2 ವರ್ಷ ತುಂಬುವ ಮೊದಲೇ ತನ್ನನ್ನು ವರ್ಗಾವಣೆ ಮಾಡಿರುವ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು. ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಲ್ಲಿಂದ ಹಿಡಿದು ವಾದ ಮಂಡನೆವರೆಗೂ ವಿಳಂಬ ಧೋರಣೆ ಅನುಸರಿಸಿದ್ದ ಸರ್ಕಾರ ಅಂತಿಮವಾಗಿ ಬಿ. ಶರತ್ ಅವರನ್ನು ರೇಷ್ಮೆ ಮಾರುಕಟ್ಟೆ ಮಂಡಳಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಆದರೆ ಶರತ್ ಅನಾರೋಗ್ಯ ಕಾರಣ ನೀಡಿ ಅಧಿಕಾರ ಸ್ವೀಕರಿಸದೆ ಉಳಿದಿದ್ದಾರೆ. ಇಂತಹ ಅನಾರೋಗ್ಯಪೀಡಿತ ಅಧಿಕಾರಿಯನ್ನು ಮೈಸೂರು ಡಿಸಿ ಹುದ್ದೆಗೆ ನಿಯೋಜಿಸಲು ಸಾಧ್ಯವಿಲ್ಲ ಎಂದು ತನ್ನ ನಿಲುವು ತಿಳಿಸಿತ್ತು.</p>
<p><img loading="lazy" decoding="async" class="aligncenter size-medium wp-image-40675" src="https://www.justkannada.in/wp-content/uploads/2020/10/dcd-300x133.png" alt="Rohini Sindhuri,Transfer,Within,two weeks,Case,disposition,CAT,Suggested,High Court" width="300" height="133" /><br />
ಡಿ.22ರಂದು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ಸಿಎಟಿ ತೀರ್ಪನ್ನು ಕಾಯ್ದಿರಿಸಿರುವುದಾಗಿ ತಿಳಿಸಿತ್ತು. ಆದರೆ, ತೀರ್ಪು ಪ್ರಕಟಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಗೆ ರಿಟ್ ಸಲ್ಲಿಸಿದ್ದ ಅಧಿಕಾರಿ ಶರತ್, ಸಿಎಟಿ ರೂಲ್ಸ್ 105ರ ಪ್ರಕಾರ ಕಾಯ್ದಿರಿಸಿದ ತೀರ್ಪನ್ನು ಮೂರು ವಾರಗಳಲ್ಲಿ ಪ್ರಕಟಿಸಬೇಕಿತ್ತು. ಹೀಗಾಗಿ ತೀರ್ಪು ಪ್ರಕಟಿಸಲು ಸಿಎಟಿಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.</p>
<p>key words : mysore-dc-rohini-sindoori-sharath-transfer-high-court-order</p>
<p>The post <a href="https://www.justkannada.in/mysore-dc-rohini-sindoori-sharath-transfer-high-court-order/">JK EXCLUSIVE ; ಶರತ್ V/S ರೋಹಿಣಿ ಸಿಂಧೂರಿ : ಸಕ್ಷಮ ಪ್ರಾಧಿಕಾರ ಮರು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲು ನಿರ್ದೇಶಿಸಿದ ಸಿಎಟಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾರಾ ಮಹೇಶ್ ಮುಖಾಮುಖಿ : ಈ ವೇಳೆ ಏನಾಯ್ತು ಗೊತ್ತ..?</title>
		<link>https://www.justkannada.in/mysore-dc-rohini-sindoori-mla-sa-ra-mahesh-zp-meeting/</link>
		
		<dc:creator><![CDATA[JK Desk]]></dc:creator>
		<pubDate>Tue, 12 Jan 2021 08:07:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[MLA]]></category>
		<category><![CDATA[Mysore DC]]></category>
		<category><![CDATA[rohini-sindoori]]></category>
		<category><![CDATA[Sa.Ra Mahesh]]></category>
		<category><![CDATA[zp-meeting]]></category>
		<guid isPermaLink="false">https://www.justkannada.in/?p=52478</guid>

					<description><![CDATA[<p>ಮೈಸೂರು,ಜನವರಿ,12,2021(www.justkannada.in): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾರಾ ಮಹೇಶ್ ಮೊದಲ ಬಾರಿಗೆ ಮುಖಾಮುಖಿಯಾಗಿದ್ದು, ಮುಖಾಮುಖಿಯಾದ ಮೊದಲ ಸಭೆಯಲ್ಲೇ ಇಬ್ಬರ ನಡುವಿನ ಮುಸುಕಿನ ಗುದ್ಧಾಟ ಬಹಿರಂಗಗೊಂಡಿದೆ. ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಇಂದು ವಿಧಾನಮಂಡಲ ಕಾಗದ ಪತ್ರಗಳ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಸಾ.ರಾ ಮಹೇಶ್ ಪಾಲ್ಗೊಂಡಿದ್ದರು. ಈ ಸಭೆಗೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆಗಮಿಸಿದ್ದು, ವೇದಿಕೆಯಲ್ಲಿ ಆಸನದ ವ್ಯವಸ್ಥೆ ಇರದಿದ್ದ ಹಿನ್ನೆಲೆ, ವೇದಿಕೆ ಮುಂಭಾಗದ ಕುರ್ಚಿಯಲ್ಲಿ ಕುಳಿತರು. [&#8230;]</p>
<p>The post <a href="https://www.justkannada.in/mysore-dc-rohini-sindoori-mla-sa-ra-mahesh-zp-meeting/">ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾರಾ ಮಹೇಶ್ ಮುಖಾಮುಖಿ : ಈ ವೇಳೆ ಏನಾಯ್ತು ಗೊತ್ತ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಜನವರಿ,12,2021(www.justkannada.in): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾರಾ ಮಹೇಶ್ ಮೊದಲ ಬಾರಿಗೆ ಮುಖಾಮುಖಿಯಾಗಿದ್ದು, ಮುಖಾಮುಖಿಯಾದ ಮೊದಲ ಸಭೆಯಲ್ಲೇ ಇಬ್ಬರ ನಡುವಿನ ಮುಸುಕಿನ ಗುದ್ಧಾಟ ಬಹಿರಂಗಗೊಂಡಿದೆ.</p>
<p>ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಇಂದು ವಿಧಾನಮಂಡಲ ಕಾಗದ ಪತ್ರಗಳ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಸಾ.ರಾ ಮಹೇಶ್ ಪಾಲ್ಗೊಂಡಿದ್ದರು. ಈ ಸಭೆಗೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆಗಮಿಸಿದ್ದು, ವೇದಿಕೆಯಲ್ಲಿ ಆಸನದ ವ್ಯವಸ್ಥೆ ಇರದಿದ್ದ ಹಿನ್ನೆಲೆ, ವೇದಿಕೆ ಮುಂಭಾಗದ ಕುರ್ಚಿಯಲ್ಲಿ ಕುಳಿತರು.</p>
<p><img loading="lazy" decoding="async" class="aligncenter size-medium wp-image-46356" src="https://www.justkannada.in/wp-content/uploads/2020/11/jk-300x300.jpg" alt="jk-logo-justkannada-mysore" width="300" height="300" /></p>
<p>ಬಳಿಕ ಸಭೆಯಲ್ಲಿ ಮಾಸ್ಕ್ ಹಾಕಿಕೊಂಡು ಮಾತು ಆರಂಭಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ, ನಿಮ್ಮ ಮಾತು ಕೇಳುತ್ತಿಲ್ಲ, ಮಾಸ್ಕ್ ತೆಗೆದು ಮಾತನಾಡಿ ಎಂದು ಶಾಸಕ ಸಾ.ರಾ ಮಹೇಶ್ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ ರೋಹಿಣಿ ಸಿಂಧೂರಿ, ನಾನು ಮಾಸ್ಕ್ ತೆಗೆಯವುದಿಲ್ಲ, ಮಾಸ್ಕ್ ತೆಗೆದು ಮಾತನಾಡಬಾರದು. ಅದಕ್ಕಾಗಿ ಮಾಸ್ಕ್ ತೆಗೆಯುವುದಿಲ್ಲ ಎಂದು ಉತ್ತರ ಕೊಟ್ಟರು.</p>
<p><img loading="lazy" decoding="async" class="aligncenter size-medium wp-image-52479" src="https://www.justkannada.in/wp-content/uploads/2021/01/mysore-dc-300x181.jpeg" alt="mysore-dc-rohini-sindoori-mla-.sa.ra.mahesh-zp-meeting" width="300" height="181" /></p>
<p>ಅಲ್ಲದೆ ಈ ಸಭೆಯಲ್ಲಿ ನನಗೆ ಸಂಬಂಧಿಸಿದ ವಿಷಯಗಳ ಚರ್ಚೆ ಇಲ್ಲ. ಹಾಗಾಗಿ ನೀವು ಸಮ್ಮತಿಸಿದರೆ ನಾನು ಸಭೆಯಿಂದ ಹೋಗುತ್ತೇನೆ ಎಂದು ಡಿಸಿ ರೋಹಿಣಿ ಸಿಂಧೂರಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಸಾ.ರಾ ಮಹೇಶ್, ನಿಮ್ಮನ್ನು ನಾವು ಸಭೆಗೆ ಕರೆದಿರಲಿಲ್ಲ. ಆದರೂ ತಾವು ಸಭೆಗೆ ಬಂದಿದ್ದೀರಿ ಸಂತೋಷ. ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಯಾವುದೇ ಸಭೆಯ ಮಾಹಿತಿ ಕೊಡುವುದು ಕರ್ತವ್ಯ. ಅದಕ್ಕೆ ಮಾಹಿತಿ ಕೊಟ್ಟಿದ್ದೇವೆ ಅಷ್ಟೆ. ಮೈಸೂರಿಗೆ ಬಂದ ಕಾಗದ ಪತ್ರಗಳ ಸಮಿತಿಯನ್ನು ನೀವು ಸ್ವಾಗತಿಸಿಲ್ಲ, ಆದರೂ ಪರವಾಗಿಲ್ಲ. ಸಮಯ ಇದ್ದರೆ ಇರಿ, ಬೇರೆ ಕೆಲಸ ಇದ್ದರೆ ಹೋಗಿ ಎಂದು ಡಿಸಿ ರೋಹಿಣಿ ಸಿಂಧೂರಿ ಅವರಿಗೆ ಸಾ.ರಾ ಮಹೇಶ್ ಹೇಳಿದರು.</p>
<p>ಈ ರೀತಿ ಶಾಸಕ ಸಾರಾ ಮಹೇಶ್ ಹೇಳುತ್ತಿದ್ದಂತೆ ರೋಹಿಣಿ ಸಿಂಧೂರಿ ಅವರು ತಕ್ಷಣವೇ ಸಭೆಯಿಂದ ಹೊರನಡೆದ ಘಟನೆ ನಡೆಯಿತು.</p>
<p>key words : mysore-dc-rohini-sindoori-mla-.sa.ra.mahesh-zp-meeting</p>
<p>The post <a href="https://www.justkannada.in/mysore-dc-rohini-sindoori-mla-sa-ra-mahesh-zp-meeting/">ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾರಾ ಮಹೇಶ್ ಮುಖಾಮುಖಿ : ಈ ವೇಳೆ ಏನಾಯ್ತು ಗೊತ್ತ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿ.ಶರತ್ V/S ಸರಕಾರ : ಸದ್ಯಕ್ಕಿಲ್ಲ ಸಿಎಟಿ ಅಂತಿಮ ತೀರ್ಪು, ಅದಕ್ಕೇನು ಕಾರಣ ಗೊತ್ತ..?</title>
		<link>https://www.justkannada.in/mysore-dc-rohini-sindoori-sharath-transfer-cat-judgment/</link>
		
		<dc:creator><![CDATA[JK Desk]]></dc:creator>
		<pubDate>Fri, 25 Dec 2020 10:30:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CAT-judgment]]></category>
		<category><![CDATA[Mysore DC]]></category>
		<category><![CDATA[rohini-sindoori]]></category>
		<category><![CDATA[sharath]]></category>
		<category><![CDATA[transfer]]></category>
		<guid isPermaLink="false">https://www.justkannada.in/?p=50294</guid>

					<description><![CDATA[<p>&#160; ಮೈಸೂರು,ಅಕ್ಟೋಬರ್, 23,2020(www.justkannada.in): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನವೇ ತಮ್ಮನ್ನ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿ.ಶರತ್ ಅವರು ಸಿಎಟಿಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು ಅಂತಿಮ ತೀರ್ಪು ಅಧಿಕೃತವಾಗಿ ಹೊರಬೀಳುವುದು ಮಾತ್ರ ಬಾಕಿ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರದ ಅಡ್ವೊಕೇಟ್ ಜನರಲ್ ಅಫಿಡವೆಟ್ ಸಲ್ಲಿಸಿ, ಅರ್ಜಿದಾರರಾದ ಬಿ.ಶರತ್ ಅವರ ಅರ್ಜಿಯನ್ನು ತಿರಸ್ಕರಿಸುವಂತೆ ಸಿಎಟಿಗೆ ಮನವಿ ಮಾಡಿದ್ದರು. ಕೋವಿಡ್ ನಂಥ ಪೆಂಡಮಿಕ್ ನಿಯಂತ್ರಿಸುವ ಸಲುವಾಗಿಯೇ ಮುಖ್ಯಮಂತ್ರಿಗಳು ತಮಗಿರುವ ಪರಮಾಧಿಕಾರ [&#8230;]</p>
<p>The post <a href="https://www.justkannada.in/mysore-dc-rohini-sindoori-sharath-transfer-cat-judgment/">ಬಿ.ಶರತ್ V/S ಸರಕಾರ : ಸದ್ಯಕ್ಕಿಲ್ಲ ಸಿಎಟಿ ಅಂತಿಮ ತೀರ್ಪು, ಅದಕ್ಕೇನು ಕಾರಣ ಗೊತ್ತ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು,ಅಕ್ಟೋಬರ್, 23,2020(www.justkannada.in): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನವೇ ತಮ್ಮನ್ನ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿ.ಶರತ್ ಅವರು ಸಿಎಟಿಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು ಅಂತಿಮ ತೀರ್ಪು ಅಧಿಕೃತವಾಗಿ ಹೊರಬೀಳುವುದು ಮಾತ್ರ ಬಾಕಿ ಇದೆ.</p>
<p>ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರದ ಅಡ್ವೊಕೇಟ್ ಜನರಲ್ ಅಫಿಡವೆಟ್ ಸಲ್ಲಿಸಿ, ಅರ್ಜಿದಾರರಾದ ಬಿ.ಶರತ್ ಅವರ ಅರ್ಜಿಯನ್ನು ತಿರಸ್ಕರಿಸುವಂತೆ ಸಿಎಟಿಗೆ ಮನವಿ ಮಾಡಿದ್ದರು.</p>
<p><img loading="lazy" decoding="async" class="aligncenter size-full wp-image-46356" src="https://www.justkannada.in/wp-content/uploads/2020/11/jk.jpg" alt="Teachers,solve,problems,Government,bound,Minister,R.Ashok" width="640" height="640" /></p>
<p>ಕೋವಿಡ್ ನಂಥ ಪೆಂಡಮಿಕ್ ನಿಯಂತ್ರಿಸುವ ಸಲುವಾಗಿಯೇ ಮುಖ್ಯಮಂತ್ರಿಗಳು ತಮಗಿರುವ ಪರಮಾಧಿಕಾರ ಬಳಸಿ ರೋಹಿಣಿ ಸಿಂಧೂರಿ ಅವರನ್ನು ಮೈಸೂರಿಗೆ ನೇಮಕ ಮಾಡಿದ್ದು. ಆದ್ದರಿಂದ ಈ ಪರಿಸ್ಥಿತಿಯಲ್ಲಿ ಬಿ.ಶರತ್ ಅವರ ಅರ್ಜಿಯನ್ನು ಪರಿಗಣಿಸುವುದು ಸೂಕ್ತವಲ್ಲ. ಜತೆಗೆ ಶರತ್, ತಮ್ಮ ಆರೋಗ್ಯದ ಬಗೆಗೂ ಮಾಹಿತಿ ನೀಡಿದ್ದು, ಈ ಹಂತದಲ್ಲಿ ಮೈಸೂರು ಜಿಲ್ಲಾಧಿಕಾರಿ ಹುದ್ದೆ ನಿಭಾಯಿಸಲು ಅವರು ಅರ್ಹರಲ್ಲ. ಆದ್ದರಿಂದ ಶರತ್ ರ ಅರ್ಜಿಯನ್ನು ತಿರಸ್ಕರಿಸಿ ಎಂದು ಸರಕಾರದ ಪರವಾಗಿ ಸಿಎಟಿಗೆ ಮನವಿ ಮಾಡಿದ್ದಾರೆ.</p>
<p><img loading="lazy" decoding="async" class="aligncenter size-full wp-image-40675" src="https://www.justkannada.in/wp-content/uploads/2020/10/dcd.png" alt="mysore-DC-rohini.sindoori-sharath-transfer-CAT-judgment" width="1392" height="618" /></p>
<p>ಅರ್ಜಿದಾರರ ಪರ ಹಾಗೂ ಸರಕಾರದ ಪರವಾಗಿ ಮಂಡಿಸಿದ ವಾದಗಳನ್ನು ಸಿಎಟಿ ಆಲಿಸಿದ್ದು, ಅಂತಿಮ ತೀರ್ಪು ನೀಡಬೇಕಾಗಿದೆ. ಆದರೆ ಡಿ. 31ರ ತನಕ ಕೋರ್ಟ್ ರಜೆ ಇರುವ ಕಾರಣ, ರಜೆ ಬಳಿಕವಷ್ಟೆ ಅಂತಿಮ ತೀರ್ಪು ಹೊರಬೀಳಲು ಸಾಧ್ಯ. ಹಾಗಾಗಿ ಮುಂದಿನ ವರ್ಷದ ಜನವರಿ ಮೊದಲ ವಾರದಲ್ಲಿ ಸಿಎಟಿ ಫೈನಲ್ ಜಡ್ಜ್ ಮೆಂಟ್ ಹೊರ ಬೀಳಲಿದೆ ಎಂದು ನಿರೀಕ್ಷಿಸಲಾಗಿದೆ.</p>
<p>ooooo</p>
<p>key words : mysore-DC-rohini.sindoori-sharath-transfer-CAT-judgment</p>
<p>The post <a href="https://www.justkannada.in/mysore-dc-rohini-sindoori-sharath-transfer-cat-judgment/">ಬಿ.ಶರತ್ V/S ಸರಕಾರ : ಸದ್ಯಕ್ಕಿಲ್ಲ ಸಿಎಟಿ ಅಂತಿಮ ತೀರ್ಪು, ಅದಕ್ಕೇನು ಕಾರಣ ಗೊತ್ತ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಯು.ಕೆ.ಯಿಂದ ಮೈಸೂರಿಗೆ ಆಗಮಿಸಿದ 137 ಮಂದಿಗೂ ಕೋವಿಡ್ ಪರೀಕ್ಷೆ :  ರೋಹಿಣಿ ಸಿಂಧೂರಿ</title>
		<link>https://www.justkannada.in/mysore-dc-rohini-sindoori-covid-britain-return-test/</link>
		
		<dc:creator><![CDATA[JK Desk]]></dc:creator>
		<pubDate>Wed, 23 Dec 2020 13:49:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[- Britain-return]]></category>
		<category><![CDATA[covid]]></category>
		<category><![CDATA[DC]]></category>
		<category><![CDATA[Mysore.]]></category>
		<category><![CDATA[rohini-sindoori]]></category>
		<category><![CDATA[test]]></category>
		<guid isPermaLink="false">https://www.justkannada.in/?p=50006</guid>

					<description><![CDATA[<p>&#160; ಮೈಸೂರು, ಡಿಸೆಂಬರ್ 23,2020: ರೂಪಾಂತರಗೊಂಡ ಕೋವಿಡ್ ವೈರಸ್ ಯು.ಕೆ.ನಲ್ಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಮೈಸೂರು ಜಿಲ್ಲಾಡಳಿತ ಕಟ್ಟಿನ ಕ್ರಮಕ್ಕೆ ಮುಂದಾಗಿದೆ. ಬುಧವಾರ ಸಂಜೆ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಡಿಸೆಂಬರ್ 1ರಿಂದ 20 ರ ವರೆಗೆ 119 ಜನರು ಹಾಗೂ ಡಿಸೆಂಬರ್ 21 ರಂದು 18 ಜನರು ಸೇರಿದಂತೆ ಒಟ್ಟು 137 ಜನರು ಬ್ರಿಟನ್‌ನಿಂದ ಮೈಸೂರಿಗೆ ಬಂದಿದ್ದಾರೆ ಎಂದು ಹೇಳಿದರು. ಡಿ. 21ರಂದು ವಾಪಾಸ್ಸಾದ [&#8230;]</p>
<p>The post <a href="https://www.justkannada.in/mysore-dc-rohini-sindoori-covid-britain-return-test/">ಯು.ಕೆ.ಯಿಂದ ಮೈಸೂರಿಗೆ ಆಗಮಿಸಿದ 137 ಮಂದಿಗೂ ಕೋವಿಡ್ ಪರೀಕ್ಷೆ :  ರೋಹಿಣಿ ಸಿಂಧೂರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಡಿಸೆಂಬರ್ 23,2020:<br />
ರೂಪಾಂತರಗೊಂಡ ಕೋವಿಡ್ ವೈರಸ್ ಯು.ಕೆ.ನಲ್ಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಮೈಸೂರು ಜಿಲ್ಲಾಡಳಿತ ಕಟ್ಟಿನ ಕ್ರಮಕ್ಕೆ ಮುಂದಾಗಿದೆ.</p>
<p>ಬುಧವಾರ ಸಂಜೆ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಡಿಸೆಂಬರ್ 1ರಿಂದ 20 ರ ವರೆಗೆ 119 ಜನರು ಹಾಗೂ ಡಿಸೆಂಬರ್ 21 ರಂದು 18 ಜನರು ಸೇರಿದಂತೆ ಒಟ್ಟು 137 ಜನರು ಬ್ರಿಟನ್‌ನಿಂದ ಮೈಸೂರಿಗೆ ಬಂದಿದ್ದಾರೆ ಎಂದು ಹೇಳಿದರು.</p>
<p><img loading="lazy" decoding="async" class="aligncenter size-full wp-image-50007" src="https://www.justkannada.in/wp-content/uploads/2020/12/IMG-20201223-WA0217.jpg" alt="mysore- DC- rohini-sindoori- covid- Britain-return.test" width="1280" height="853" /></p>
<p>ಡಿ. 21ರಂದು ವಾಪಾಸ್ಸಾದ ಎಲ್ಲಾ ಬ್ರಿಟನ್ ಪ್ರಯಾಣಿಕರ ಕೋವಿಡ್-19 ಪರೀಕ್ಷೆ ಆಗಿದೆ. ಡಿ‌20ಕ್ಕೂ ಮೊದಲು ಬಂದ ಕೆಲವರು ಪರೀಕ್ಷೆಗೆ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಡಿಸೆಂಬರ್ 21ರಂದು ಬಂದಿರುವ ಎಲ್ಲಾ 18 ಜನರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಡಿಸೆಂಬರ್ 20ಕ್ಕೂ ಮೊದಲು ಬಂದಿರುವ ಎಲ್ಲರು ಮುನ್ನೆಚ್ಚರಿಕೆಯಾಗಿ ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.</p>
<p>ಬ್ರಿಟನ್‌ನಿಂದ ವಾಪಾಸ್ಸಾದವರ ಕೋವಿಡ್ ಪರೀಕ್ಷೆಗೆ ಡಿಸೆಂಬರ್ 24 ರಂದು ಗುರುವಾರ ಮೈಸೂರಿನ ಟೌನ್‌ಹಾಲ್‌ನಲ್ಲಿ ಪ್ರತ್ಯೇಕವಾದ ಕೌಂಟರ್ ತೆರೆಯಲಾಗಿದೆ. ಬೆಳಗ್ಗೆ‌ 10 ಗಂಟೆಯಿಂದ‌ ಸಂಜೆ 4 ಗಂಟೆ ವರೆಗೆ ಕೌಂಟರ್ ತೆರೆದಿರುತ್ತದೆ. ವಾರ್ ರೂಂ ನಿಂದ ಅವರೆಲ್ಲರಿಗೂ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದರು.</p>
<p><img loading="lazy" decoding="async" class="aligncenter size-full wp-image-50008" src="https://www.justkannada.in/wp-content/uploads/2020/12/IMG-20201223-WA0215.jpg" alt="mysore- DC- rohini-sindoori- covid- Britain-return.test" width="1280" height="853" /></p>
<p>ರೋಗ ಲಕ್ಷಣ ಇರುವವರು ಹಾಗೂ ಈ 137 ಜನರೊಂದಿಗೆ ಪ್ರಾಥಮಿಕ ಸಂಪರ್ಕ ಇದ್ದವರೂ ಕೂಡ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.</p>
<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್, ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ನಂಜರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಮರನಾಥ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words : mysore- DC- rohini-sindoori- covid- Britain-return.test</p>
<p>&nbsp;</p>
<p>&nbsp;</p>
<p>The post <a href="https://www.justkannada.in/mysore-dc-rohini-sindoori-covid-britain-return-test/">ಯು.ಕೆ.ಯಿಂದ ಮೈಸೂರಿಗೆ ಆಗಮಿಸಿದ 137 ಮಂದಿಗೂ ಕೋವಿಡ್ ಪರೀಕ್ಷೆ :  ರೋಹಿಣಿ ಸಿಂಧೂರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಡಹಬ್ಬ ದಸರಾ ಉದ್ಘಾಟನೆ ದಿನದಂದೇ ಮೈಸೂರು ಡಿಸಿಗೆ ಹಿನ್ನೆಡೆ..!</title>
		<link>https://www.justkannada.in/mysore-dc-rohini-sindoori-tourist-place-closer-order-withdrawn-by-cm-yadiyurappa-set-back-to-mysore-dc/</link>
		
		<dc:creator><![CDATA[JK Desk]]></dc:creator>
		<pubDate>Sat, 17 Oct 2020 12:19:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cm-yadiyurappa]]></category>
		<category><![CDATA[Mysore DC]]></category>
		<category><![CDATA[rohini-sindoori]]></category>
		<category><![CDATA[set.back-to]]></category>
		<category><![CDATA[tourist-place-closer-order]]></category>
		<category><![CDATA[withdrawn-by]]></category>
		<guid isPermaLink="false">https://www.justkannada.in/?p=41868</guid>

					<description><![CDATA[<p>&#160; ಮೈಸೂರು, ಅ.17, 2020 : (www.justkannada.in news) : ಕೋವಿಡ್ ಕಾರಣ, ನಾಡಹಬ್ಬ ದಸರಾ ಆಚರಣೆ ವೇಳೆ ಮುಂಜಾಗ್ರತ ಕ್ರಮವಾಗಿ ಮೈಸೂರಿನ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೊರಡಿಸಿದ್ದ ಆದೇಶವನ್ನು ಒತ್ತಡಕ್ಕೆ ಮಣಿದ ರಾಜ್ಯ ಸರಕಾರ ಇದೀಗ ರದ್ದುಗೊಳಿಸಿದೆ. ದಸರ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಫೇಸ್ ಬುಕ್ ಲೈವ್ ಮೂಲಕ ಮೈಸೂರಿನ ಪ್ರವಾಸಿ ತಾಣಗಳಾದ ಅರಮನೆ, ಮೃಗಾಲಯ ಹಾಗೂ ಧಾರ್ಮಿಕ ಸ್ಥಳಗಳಾದ ಚಾಮುಂಡಿಬೆಟ್ಟ, [&#8230;]</p>
<p>The post <a href="https://www.justkannada.in/mysore-dc-rohini-sindoori-tourist-place-closer-order-withdrawn-by-cm-yadiyurappa-set-back-to-mysore-dc/">ನಾಡಹಬ್ಬ ದಸರಾ ಉದ್ಘಾಟನೆ ದಿನದಂದೇ ಮೈಸೂರು ಡಿಸಿಗೆ ಹಿನ್ನೆಡೆ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಅ.17, 2020 : (www.justkannada.in news) : ಕೋವಿಡ್ ಕಾರಣ, ನಾಡಹಬ್ಬ ದಸರಾ ಆಚರಣೆ ವೇಳೆ ಮುಂಜಾಗ್ರತ ಕ್ರಮವಾಗಿ ಮೈಸೂರಿನ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೊರಡಿಸಿದ್ದ ಆದೇಶವನ್ನು ಒತ್ತಡಕ್ಕೆ ಮಣಿದ ರಾಜ್ಯ ಸರಕಾರ ಇದೀಗ ರದ್ದುಗೊಳಿಸಿದೆ.</p>
<p>ದಸರ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಫೇಸ್ ಬುಕ್ ಲೈವ್ ಮೂಲಕ ಮೈಸೂರಿನ ಪ್ರವಾಸಿ ತಾಣಗಳಾದ ಅರಮನೆ, ಮೃಗಾಲಯ ಹಾಗೂ ಧಾರ್ಮಿಕ ಸ್ಥಳಗಳಾದ ಚಾಮುಂಡಿಬೆಟ್ಟ, ನಂಜನಗೂಡು ನಂಜುಂಡೇಶ್ವರ ದೇವಾಲಯಗಳನ್ನು ನ.01 ರ ವರೆಗೆ ಬಂದ್ ಮಾಡಲು ಆದೇಶಿಸಿ ಸಾರ್ವಜನಿಕರ ಸಹಕಾರ ಕೋರಿದ್ದರು.</p>
<p>ಮೈಸೂರಿನಲ್ಲಿ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಮುಂಜಾಗ್ರತ ಕ್ರಮ ತೆಗೆದುಕೊಳ್ಳುವ ಅನಿವಾರ್ಯತೆಯನ್ನು ರೋಹಿಣಿ ಸಿಂಧೂರಿ ಒತ್ತಿ ಹೇಳಿದ್ದರು.</p>
<p><img loading="lazy" decoding="async" class="aligncenter size-medium wp-image-41869" src="https://www.justkannada.in/wp-content/uploads/2020/10/travel-300x300.jpeg" alt="Mysore-dc-rohini-sindoori-tourist-place-closer-order-withdrawn-by-cm-yadiyurappa-set.back-to-Mysore-dc" width="300" height="300" /></p>
<p>ಆದರೆ ಮರುದಿನವೇ ಜಿಲ್ಲಾಧಿಕಾರಿಗಳ ಈ ಆದೇಶದ ವಿರುದ್ಧ ಮೈಸೂರಿನ ಹೊಟೇಲ್ ಮಾಲೀಕರ ಸಂಘ, ಟ್ರಾವೆಲ್ಸ್ ಅಸೋಸಿಯೇಷನ್, ಪ್ರವಾಸಿ ಗೈಡ್ಸ್ ಅಸೋಸಿಯೇಷನ್ ಸೇರಿದಂತೆ ವಿವಿಧ ಸಂಘಟನೆಗಳು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದವು. ಜಿಲ್ಲಾಡಳಿತದ ಈ ನಿರ್ಧಾರದಿಂದ ನಮಗೆ ಅನಾನುಕೂಲವಾಗುತ್ತದೆ ಎಂದು ಅವಲತ್ತುಕೊಂಡಿದ್ದವು. ಈ ಕೂಡಲೇ ರದ್ದತಿ ಆದೇಶವನ್ನು ಹಿಂಪಡೆಯಬೇಕು ಎಂದು ಸರಕಾರದ ಮೇಲೆ ಒತ್ತಡವನ್ನು ಹೇರಿದ್ದವು.</p>
<p>ಇದೀಗ ಈ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಯಡಿಯೂರಪ್ಪ, ಕೋವಿಡ್ ನಿಯಂತ್ರಣದ ಸಲುವಾಗಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮುಂಜಾಗ್ರತ ಕ್ರಮವಾಗಿ ಕೈಗೊಂಡಿದ್ದ ಆದೇಶವನ್ನು ರದ್ದುಪಡಿಸಿ, ಪ್ರವಾಸಿ ತಾಣಗಳ ವೀಕ್ಷಣೆಗೆ ಅನುಮತಿ ನೀಡಿದ್ದಾರೆ. ಸರಕಾರದ ಈ ಕ್ರಮವನ್ನು ಹೊಟೇಲ್ ಮಾಲೀಕರ ಸಂಘ, ಟ್ರಾವೆಲ್ಸ್ ಅಸೋಸಿಯೇಷನ್, ಪ್ರವಾಸಿ ಗೈಡ್ಸ್ ಅಸೋಸಿಯೇಷನ್ ಸ್ವಾಗತಿಸಿವೆ.</p>
<p>&nbsp;</p>
<p><img loading="lazy" decoding="async" class="aligncenter size-medium wp-image-41742" src="https://www.justkannada.in/wp-content/uploads/2020/10/dcd-5-300x300.jpg" alt="Mysore-dc-rohini-sindoori-tourist-place-closer-order-withdrawn-by-cm-yadiyurappa-set.back-to-Mysore-dc" width="300" height="300" /></p>
<p>key words : Mysore-dc-rohini-sindoori-tourist-place-closer-order-withdrawn-by-cm-yadiyurappa-set.back-to-Mysore-dc</p>
<p>The post <a href="https://www.justkannada.in/mysore-dc-rohini-sindoori-tourist-place-closer-order-withdrawn-by-cm-yadiyurappa-set-back-to-mysore-dc/">ನಾಡಹಬ್ಬ ದಸರಾ ಉದ್ಘಾಟನೆ ದಿನದಂದೇ ಮೈಸೂರು ಡಿಸಿಗೆ ಹಿನ್ನೆಡೆ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
