<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Rs 4000 crore Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/rs-4000-crore/feed/" rel="self" type="application/rss+xml" />
	<link>https://www.justkannada.in/tag/rs-4000-crore/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 17 Jan 2026 09:27:59 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Rs 4000 crore Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/rs-4000-crore/</link>
	<width>32</width>
	<height>32</height>
</image> 
	<item>
		<title>ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ 4000 ಕೋಟಿ ವೆಚ್ಚ ಮಾಡುವ ಗುರಿ –ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/hospital-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Sat, 17 Jan 2026 09:27:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[hospital.]]></category>
		<category><![CDATA[human]]></category>
		<category><![CDATA[multi-organ transplant]]></category>
		<category><![CDATA[Rs 4000 crore]]></category>
		<category><![CDATA[spend]]></category>
		<guid isPermaLink="false">https://www.justkannada.in/?p=150347</guid>

					<description><![CDATA[<p>ಬೆಂಗಳೂರು, ನವೆಂಬರ್, 17,2026 (www.justkannada.in):   ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ [&#8230;]</p>
<p>The post <a href="https://www.justkannada.in/hospital-cm-siddaramaiah/">ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ 4000 ಕೋಟಿ ವೆಚ್ಚ ಮಾಡುವ ಗುರಿ –ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ನವೆಂಬರ್, 17,2026 (<a href="http://www.justkannada.in">www.justkannada.in</a>):</strong>   ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ನಡುವೆ ಒಡಂಬಡಿಕೆಗೆ ಸಹಿ ಹಾಕಿದ ನಂತರ  ಸಿಎಂ ಸಿದ್ದರಾಮಯ್ಯ ಮಾತನಾಡಿದರು.</p>
<p>ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ವತಿಯಿಂದ ಸಾವಿರ ಆಸ್ಪತ್ರೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣಕ್ಕೆ ಸಾವಿರಾರು ಕೋಟಿ ರೂ ಗಳ ಆರೋಗ್ಯ  ಸಂಬಂಧಿಸಿದಂತೆ ಒಡಂಬಡಿಕೆಗೆ ಸಹಿ ಮಾಡಲಾಗಿದೆ. ಇದಕ್ಕಾಗಿ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಆವರಣದಲ್ಲಿ ಸರ್ಕಾರ 10 ಎಕರೆ ಸ್ಥಳವನ್ನು 99 ವರ್ಷಗಳ ಅವಧಿಗೆ  ಗುತ್ತಿಗೆ ಆಧಾರದ ಮೇಲೆ ನೀಡಲು ಒಪ್ಪಂದವಾಗಿದೆ ಎಂದರು.</p>
<p><strong>ಪ್ರೇಮ್ ಜಿ ಪ್ರತಿಷ್ಠಾನಕ್ಕೆ ಸರ್ಕಾರ ಆಭಾರಿ</strong></p>
<p>ಅಜೀಂ ಪ್ರೇಮ್ ಜಿ ಅವರ ಈ ಮಹತ್ಕಾರ್ಯಕ್ಕೆ ಸರ್ಕಾರ ಆಭಾರಿಯಾಗಿದೆ. ಅದರಲ್ಲಿಯೂ ಉಚಿತವಾಗಿ ಈ ಕಾರ್ಯವನ್ನು ನೆರವೇರಿಸಲು ಮುಂದಾಗಿರುವುದು ಶ್ರೇಷ್ಠ ಕಾರ್ಯ ಎಂದರು .</p>
<p><strong>ಶಿಕ್ಷಣಕ್ಕೆ ನೆರವು</strong></p>
<p>ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಕಳೆದ 25 ವರ್ಷಗಳಿಂದ ಶಿಕ್ಷಣ ಮತ್ತು  ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ ಸಲ್ಲಿಸುತ್ತಿದೆ. 2021ರಲ್ಲಿ ಶಿಕ್ಷಕರ ತರಬೇತಿಗೆ, 2024 ರಲ್ಲಿ ಎಲ್.ಕೆ.ಜಿ ಯಿಂದ ಹತ್ತನೇ ತರಗತಿಯವರೆಗೆ ವಾರದಲ್ಲಿ ನಾಲ್ಕು ದಿನ ಮೊಟ್ಟೆ ಕೊಡುವ ಕಾರ್ಯಕ್ರಮಕ್ಕೆ ಒಂದೂವರೆ ಕೋಟಿ ರೂ ನೀಡುವ ಮೂಲಕ ಕೈಜೋಡಿಸಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ ಓದಿರುವವವರಿಗೆ ವರ್ಷಕ್ಕೆ 30 ಸಾವಿರ ವಿದ್ಯಾರ್ಥಿ ವೇತನವನ್ನು ದೀಪಿಕಾ ವಿದ್ಯಾರ್ಥಿ ವೇತನದಡಿ ನೀಡುತ್ತಿದ್ದಾರೆ ಎಂದು ಹೇಳಿಸಿದ ಸಿಎಂ ಸಿದ್ದರಾಮಯ್ಯ  ಅಜೀಂ ಪ್ರೇಮ್ ಜಿ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.</p>
<p><strong>ಸಾರ್ವಜನಿಕ ವ್ಯವಸ್ಥೆಗಳು  ಬಲಗೊಳ್ಳಬೇಕು</strong></p>
<p>ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುರಾಗ್ ಬೆಹರ್ ಮಾತನಾಡಿ , ಸಾರ್ವಜನಿಕ ವ್ಯವಸ್ಥೆಗಳಲ್ಲಿ ನಂಬಿಕೆಯಿಟ್ಟಿರುವ ಸಂಸ್ಥೆಯಾಗಿದ್ದು, ಸಾರ್ವಜನಿಕ ವ್ಯವಸ್ಥೆಗಳು  ಬಲಗೊಳ್ಳಬೇಕು ಎಂದರು.  ಆರೋಗ್ಯ ಶುರುವಾಗುವುದು ಆಶಾ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ.  ನಮ್ಮ ಜನತೆ ಖಾಯಿಲೆ ಬೀಳದಿರುವಂತೆ ತಡೆಯುವುದು ನಮ್ಮ ಮುಖ್ಯ ಗುರಿಯಾಗಬೇಕು. ಕರ್ನಾಟಕ  ಅತ್ಯಂತ ಕ್ರಿಯಾಶೀಲ ರಾಜ್ಯವಾಗಿದ್ದು,  ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಅಧಿಕಾರಿಗಳು, ಆಡಳಿತ ಒಟ್ಟಾಗಿ ಕೆಲಸ ಮಾಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>
<p>Key words: spend, Rs 4000 crore , human, multi-organ transplant, hospital, CM Siddaramaiah</p>
<p>The post <a href="https://www.justkannada.in/hospital-cm-siddaramaiah/">ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ 4000 ಕೋಟಿ ವೆಚ್ಚ ಮಾಡುವ ಗುರಿ –ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
