<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>siddu Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/siddu/feed/" rel="self" type="application/rss+xml" />
	<link>https://www.justkannada.in/tag/siddu/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 23 Nov 2024 10:27:41 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>siddu Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/siddu/</link>
	<width>32</width>
	<height>32</height>
</image> 
	<item>
		<title>LIVE :  ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ..</title>
		<link>https://www.justkannada.in/cm-pressmeet-live/</link>
		
		<dc:creator><![CDATA[mahesh]]></dc:creator>
		<pubDate>Sat, 23 Nov 2024 10:27:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[live]]></category>
		<category><![CDATA[premeet]]></category>
		<category><![CDATA[siddu]]></category>
		<guid isPermaLink="false">https://www.justkannada.in/?p=132514</guid>

					<description><![CDATA[<p>ಬೆಂಗಳೂರು, ನ: ರಾಜ್ಯದ ಮೂರು ಉಪಚುನಾವಣೆಗಳಲ್ಲೂ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಮಾಧ್ಯಮಗೋಷ್ಠಿ. ರಾಜ್ಯದ ಜನತೆಗೆ ಧನ್ಯವಾದ ಅರ್ಪಣೆ.</p>
<p>The post <a href="https://www.justkannada.in/cm-pressmeet-live/">LIVE :  ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು, ನ: ರಾಜ್ಯದ ಮೂರು ಉಪಚುನಾವಣೆಗಳಲ್ಲೂ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಮಾಧ್ಯಮಗೋಷ್ಠಿ. ರಾಜ್ಯದ ಜನತೆಗೆ ಧನ್ಯವಾದ ಅರ್ಪಣೆ.</p>
<div class="youtube-embed" data-video_id=""><iframe title="CM Press Meet on 23rd Nov 2024" width="696" height="392" src="https://www.youtube.com/embed/-Q89BDNv5bY?feature=oembed&#038;enablejsapi=1" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" referrerpolicy="strict-origin-when-cross-origin" allowfullscreen></iframe></div>
<p>The post <a href="https://www.justkannada.in/cm-pressmeet-live/">LIVE :  ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಟಿವಿ ಮಾಧ್ಯಮಗಳ ಮೇಲೆ ಸಿಎಂ ಸಿದ್ದು ಸಿಡಿಮಿಡಿ..!</title>
		<link>https://www.justkannada.in/cm-siddu/</link>
		
		<dc:creator><![CDATA[mahesh]]></dc:creator>
		<pubDate>Fri, 22 Nov 2024 08:20:23 +0000</pubDate>
				<category><![CDATA[Front Page]]></category>
		<category><![CDATA[Just Mysore]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[lashes out]]></category>
		<category><![CDATA[Siddaramaiah]]></category>
		<category><![CDATA[siddu]]></category>
		<category><![CDATA[TV media]]></category>
		<guid isPermaLink="false">https://www.justkannada.in/?p=132431</guid>

					<description><![CDATA[<p>ಮೈಸೂರು, ನ.22,2024: (www.justkannada.in news) ಸತ್ಯವನ್ನು ತೋರಿಸಿ, ಸುಳ್ಳನ್ನು ಪ್ರಚಾರ ಮಾಡಬೇಡಿ. ಸತ್ಯ &#8211; ಸುಳ್ಳನ್ನು ಪರಾಮರ್ಶಿಸಿದೆ ಕೇವಲ ಸುದ್ದಿ ಮಾಡುವುದೇ ಆದರೆ, ವಾಟ್‌ ಇಸ್‌ ದ ರೋಲ್‌ ಆಫ್‌ ಮೀಡಿಯಾ..? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಡಿಮಿಡಿಗೊಂಡರು. ಮೈಸೂರು ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಒಂದು ಹಂತದಲ್ಲಿ ಮೀಡಿಯಾಗಳ ವಿರುದ್ಧ ಹರಿಹಾಯ್ದರು. ಟಿವಿಗಳಲ್ಲಿ ಸರಕಾರದ ಜನಪರ ಕಾರ್ಯಗಳ ಬಗ್ಗೆ ಹೆಚ್ಚು ಪ್ರಚಾರ ಮಾಡಲ್ಲ. ಬದಲಿಗೆ ವಿಪಕ್ಷಗಳ ಸುಳ್ಳು ಆರೋಪಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ [&#8230;]</p>
<p>The post <a href="https://www.justkannada.in/cm-siddu/">ಟಿವಿ ಮಾಧ್ಯಮಗಳ ಮೇಲೆ ಸಿಎಂ ಸಿದ್ದು ಸಿಡಿಮಿಡಿ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img fetchpriority="high" decoding="async" class="alignleft size-full wp-image-129610" src="https://www.justkannada.in/wp-content/uploads/2024/09/TOP-BANNER-01.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-01.png 730w, https://www.justkannada.in/wp-content/uploads/2024/09/TOP-BANNER-01-600x74.png 600w, https://www.justkannada.in/wp-content/uploads/2024/09/TOP-BANNER-01-300x37.png 300w, https://www.justkannada.in/wp-content/uploads/2024/09/TOP-BANNER-01-150x18.png 150w, https://www.justkannada.in/wp-content/uploads/2024/09/TOP-BANNER-01-696x86.png 696w" sizes="(max-width: 730px) 100vw, 730px" /></p>
<p>ಮೈಸೂರು, ನ.22,2024: (<a href="http://www.justkannada.in">www.justkannada.in</a> news) ಸತ್ಯವನ್ನು ತೋರಿಸಿ, ಸುಳ್ಳನ್ನು ಪ್ರಚಾರ ಮಾಡಬೇಡಿ. ಸತ್ಯ &#8211; ಸುಳ್ಳನ್ನು ಪರಾಮರ್ಶಿಸಿದೆ ಕೇವಲ ಸುದ್ದಿ ಮಾಡುವುದೇ ಆದರೆ, ವಾಟ್‌ ಇಸ್‌ ದ ರೋಲ್‌ ಆಫ್‌ ಮೀಡಿಯಾ..? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಡಿಮಿಡಿಗೊಂಡರು.</p>
<p>ಮೈಸೂರು ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಒಂದು ಹಂತದಲ್ಲಿ ಮೀಡಿಯಾಗಳ ವಿರುದ್ಧ ಹರಿಹಾಯ್ದರು.</p>
<p>ಟಿವಿಗಳಲ್ಲಿ ಸರಕಾರದ ಜನಪರ ಕಾರ್ಯಗಳ ಬಗ್ಗೆ ಹೆಚ್ಚು ಪ್ರಚಾರ ಮಾಡಲ್ಲ. ಬದಲಿಗೆ ವಿಪಕ್ಷಗಳ ಸುಳ್ಳು ಆರೋಪಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು. ಬಿಪಿಎಲ್‌ ಕಾರ್ಡ್‌ ಪರಿಷ್ಕರಣೆ ಯಾವ ಕಾರಣಕ್ಕೆ ಮಾಡುತ್ತಿದ್ದೇವೆ ಎಂಬ ಬಗ್ಗೆ ಜಾಗೃತಿ ಮೂಡಿಸಬೇಕಾದ ಮಾಧ್ಯಮ, ವಿಪಕ್ಷಗಳ ಆರೋಪಗಳಿಗೆ ಪ್ರಾಮುಖ್ಯತೆ ನೀಡುತ್ತಿದೆ ಎಂದು ಟೀಕಿಸಿದರು. ಇದಕ್ಕೆ ಟಿವಿ ವಾಹಿನಿ ಪ್ರತಿನಿಧಿ ಆಕ್ಷೇಪಿಸಿದಾಗ, ನೀನ್‌ ಇಲ್ಲಿ ಹೇಳಬಹುದಪ್ಪ, ಆದ್ರೆ ನಿಮ್‌ ಎಡಿಟರ್‌ ಕೇಳಬೇಕಲ್ವಾ..?  ನಾನು ನಿಮ್‌ ಟಿವಿ ನೋಡಿದ್ದೀನಿ , ಡೋಂಟ್‌ ಡಿಬೇಟ್ ಎಂದು ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರತ್ಯುತ್ತರಿಸಿದರು.</p>
<p><iframe title="ಟಿವಿ ಮೀಡಿಯಾಗಳ ಮೇಲೆ ಸಿಟ್ಟಿಗೆದ್ದ ಸಿಎಂ ಸಿದ್ದರಾಮಯ್ಯ" width="696" height="392" src="https://www.youtube.com/embed/_iq_q8jjVIQ?feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" referrerpolicy="strict-origin-when-cross-origin" allowfullscreen></iframe></p>
<p>.<strong>ಸಿಎಂ ಕಿಡಿ:</strong></p>
<p>ಏಯ್ ಯಾವನಯ್ಯಾ ನೀನು? ನಿಂಗೆ ಎಲ್ಲಾ ಗೊತ್ತಾ? ಮಾಧ್ಯಮ ಅಂದ್ರೆ ಏನ್ ಹೇಳು? ಅಲ್ಲಿಂದ ಇಲ್ಲಿಗೆ, ಇಲ್ಲಿಗೆ ಅಲ್ಲಿಗೆ ಕೇಳ್ಕಂಡ್ ಬಂದು ಹೇಳೋದಾ? ಜನಗಳಿಗೆ ಸತ್ಯ ತೋರಿಸ್ರಪ್ಪಾ? ಬರೀ ಸುಳ್ ಸುಳ್ ಸುದ್ದೀನೆ ಹಾಕ್ತೀರಿ<br />
ದಿನ ಬೆಳಗಾದ್ರೆ ಬರೀ ಸುಳ್ಳು ನ್ಯೂಸನ್ನೇ ಪ್ರಸಾರ ಮಾಡ್ತೀರಿ. ನಾವ್ ಮಾಡೋ ಕೆಲಸ ತೋರಿಸಿ ಬಿಜೆಪಿಯವರ ಪ್ರತಿಭಟನೆ ಯಾಕೆ ತೋರುಸ್ತೀರಿ?  ಏಯ್ ಕೇಳಯ್ಯಾ ಅಂತ ಟೇಬಲ್‌ ಕುಟ್ಟಿ, ಹಲ್ಲು‌ಮುರಿ ಕಚ್ಚಿದ್ದ ಸಿದ್ದರಾಮಯ್ಯ ಆಕ್ರೋಶ. ಮಾಧ್ಯಮವಂತೆ ಮಾಧ್ಯಮ ಅಂತ ಕಿಡಿಕಾರಿದರು.</p>
<p>key words: CM, Siddu, Siddaramaiah, lashes out, TV media</p>
<p><img loading="lazy" decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>SUMMARY: </strong></p>
<p>&#8220;CM Siddu lashes out at TV media&#8221;</p>
<p><img loading="lazy" decoding="async" class="alignleft size-full wp-image-132432" src="https://www.justkannada.in/wp-content/uploads/2024/11/cm-siddu.jpg" alt="" width="500" height="281" srcset="https://www.justkannada.in/wp-content/uploads/2024/11/cm-siddu.jpg 500w, https://www.justkannada.in/wp-content/uploads/2024/11/cm-siddu-300x169.jpg 300w, https://www.justkannada.in/wp-content/uploads/2024/11/cm-siddu-150x84.jpg 150w" sizes="auto, (max-width: 500px) 100vw, 500px" /></p>
<p>Chief Minister Siddu has expressed strong criticism or anger towards television media. He likely criticized their reporting, coverage, or the way they present news, perhaps accusing them of being biased or irresponsible.</p>
<p><img loading="lazy" decoding="async" class="alignleft size-full wp-image-132139" src="https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM.jpeg" alt="" width="500" height="61" srcset="https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM.jpeg 500w, https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM-300x37.jpeg 300w, https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM-150x18.jpeg 150w" sizes="auto, (max-width: 500px) 100vw, 500px" /></p>
<p>The post <a href="https://www.justkannada.in/cm-siddu/">ಟಿವಿ ಮಾಧ್ಯಮಗಳ ಮೇಲೆ ಸಿಎಂ ಸಿದ್ದು ಸಿಡಿಮಿಡಿ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿ ನಾಯಕರಿಗೆ ಸಿದ್ದು ಗುದ್ದು : ಗೂಂಡಾ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯಾ.?</title>
		<link>https://www.justkannada.in/goonda-mla-munirathna/</link>
		
		<dc:creator><![CDATA[mahesh]]></dc:creator>
		<pubDate>Sat, 14 Sep 2024 10:20:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP leaders]]></category>
		<category><![CDATA[Do you have]]></category>
		<category><![CDATA[goonda MLA]]></category>
		<category><![CDATA[hits out at]]></category>
		<category><![CDATA[in front of]]></category>
		<category><![CDATA[munirathna]]></category>
		<category><![CDATA[siddu]]></category>
		<category><![CDATA[the courage]]></category>
		<category><![CDATA[to stand]]></category>
		<guid isPermaLink="false">https://www.justkannada.in/?p=129271</guid>

					<description><![CDATA[<p>&#160; ಬೆಂಗಳೂರು, ಸೆ.14,2024: (www.justkannada.in news)ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ (@BJP4Karnataka) ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ. ಶಾಸಕ ಮುನಿರತ್ನ ಅಸಭ್ಯ ಆಡಿಯೋ ಬಹಿರಂಗ ಹಿನ್ನೆಲೆಯಲ್ಲಿ ಟ್ವೀಟರ್‌ ನಲ್ಲಿ  ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ. ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತ. ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಅವರು [&#8230;]</p>
<p>The post <a href="https://www.justkannada.in/goonda-mla-munirathna/">ಬಿಜೆಪಿ ನಾಯಕರಿಗೆ ಸಿದ್ದು ಗುದ್ದು : ಗೂಂಡಾ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯಾ.?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ಸೆ.14,2024: (<a href="http://www.justkannada.in">www.justkannada.in</a> news)ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ (<a href="https://x.com/BJP4Karnataka">@BJP4Karnataka</a>) ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ.</p>
<p>ಶಾಸಕ ಮುನಿರತ್ನ ಅಸಭ್ಯ ಆಡಿಯೋ ಬಹಿರಂಗ ಹಿನ್ನೆಲೆಯಲ್ಲಿ ಟ್ವೀಟರ್‌ ನಲ್ಲಿ  ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ.</p>
<p>ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತ. ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಅವರು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣರು. ಈ ಸಮುದಾಯಗಳ ಬಗ್ಗೆ ಬಿಜೆಪಿ ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ, ಅಸಹನೆಗೆ ಮುನಿರತ್ನ ಬಾಯಿಂದ ಉದುರಿದ ಅಣಿಮುತ್ತುಗಳು ಸಾಕ್ಷಿ.</p>
<p>ವೈರಲ್‌ ಆಗಿರುವ ಆಡಿಯೋದಲ್ಲಿ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ, ಮನಸೋ ಇಚ್ಛೆ ನಿಂದಿಸಿದ್ದಾರೆ, ಆತನಿಂದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ, ಕೊನೆಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇವೆಲ್ಲವೂ ಅತ್ಯಂತ ಗಂಭೀರ ಸ್ವರೂಪದ ಅಪರಾಧಗಳಾಗಿವೆ. 40% ಕಮಿಷನ್‌ ಸರ್ಕಾರ ತೊಲಗಿದರೂ ಅದರಿಂದ ಹುಟ್ಟಿರುವ ರಕ್ತಬೀಜಾಸುರರು ಉಳಿದಿದ್ದಾರೆ.</p>
<p><img loading="lazy" decoding="async" class="alignleft size-full wp-image-129244" src="https://www.justkannada.in/wp-content/uploads/2024/09/munirathna.jpg" alt="" width="500" height="341" srcset="https://www.justkannada.in/wp-content/uploads/2024/09/munirathna.jpg 500w, https://www.justkannada.in/wp-content/uploads/2024/09/munirathna-300x205.jpg 300w, https://www.justkannada.in/wp-content/uploads/2024/09/munirathna-150x102.jpg 150w, https://www.justkannada.in/wp-content/uploads/2024/09/munirathna-218x150.jpg 218w" sizes="auto, (max-width: 500px) 100vw, 500px" /></p>
<p>ಈಗ ನಾವು ಕೈಗೆತ್ತಿಕೊಂಡಿರುವ ಸ್ವಚ್ಚತಾ ಅಭಿಯಾನದಲ್ಲಿ ಈ ಹೊಲಸನ್ನು ಎಲ್ಲಿ ಇಡಬೇಕು ಅಲ್ಲಿಗೆ ಖಂಡಿತಾ ತಲುಪಿಸುತ್ತೇವೆ. ಮಾದ್ಯಮಗಳ ಮುಂದೆ ನಿಂತು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಉಪದೇಶ ಕೊಡುವ ಬಿಜೆಪಿ ರಾಜ್ಯಾಧ್ಯಕ್ಷ  ವಿಜಯೇಂದ್ರ ( <a href="https://x.com/BYVijayendra">@BYVijayendra</a>) ಮತ್ತು ವಿಪಕ್ಷ ನಾಯಕ  (<a href="https://x.com/RAshokaBJP">@RAshokaBJP</a>) ಅವರಿಗೆ ತಮ್ಮದೇ ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯಾ?</p>
<p>ಈಗ ಬಿಜೆಪಿ ನಾಯಕರಿಗೆ ಉಳಿದಿರುವುದು ಎರಡೇ ದಾರಿ. ಒಂದು ಮುನಿರತ್ನ ಅವರ ಹೇಳಿಕೆಗೆ ಬೆಂಬಲ ಕೊಟ್ಟು ತಾವು ದಲಿತ ವಿರೋಧಿಗಳು ಎಂದು ಒಪ್ಪಿಕೊಳ್ಳುವುದು, ಇಲ್ಲವೇ ನಾಡಿನ ದಲಿತ ಸಮುದಾಯದವರ ಬಳಿ ಬಹಿರಂಗ ಕ್ಷಮೆ ಕೇಳಿ, ಮುನಿರತ್ನ ಅವರನ್ನು ಪಕ್ಷದಿಂದ ಹೊರದಬ್ಬುವುದು.</p>
<p><img loading="lazy" decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>key words: Siddu, hits out at, BJP leaders, Do you have, the courage ,to stand, in front of , goonda MLA, Munirathna?</p>
<p>The post <a href="https://www.justkannada.in/goonda-mla-munirathna/">ಬಿಜೆಪಿ ನಾಯಕರಿಗೆ ಸಿದ್ದು ಗುದ್ದು : ಗೂಂಡಾ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯಾ.?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಲಾ ಮಕ್ಕಳಿಗೆ ನೈತಿಕ ವಿಷಯ ಕಲಿಸಲು ನಮ್ಮ ತಕರಾರು ಇಲ್ಲ : ಸಿದ್ದರಾಮಯ್ಯ.</title>
		<link>https://www.justkannada.in/mangalore-siddu/</link>
		
		<dc:creator><![CDATA[JK Desk]]></dc:creator>
		<pubDate>Sat, 19 Mar 2022 09:01:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[mangalore.]]></category>
		<category><![CDATA[siddu]]></category>
		<guid isPermaLink="false">https://www.justkannada.in/?p=88205</guid>

					<description><![CDATA[<p>&#160; ಮಂಗಳೂರು, ಮಾ.19, 2022 : ನೈತಿಕ ವಿಷಯವನ್ನು ಶಾಲಾ ಮಕ್ಕಳಿಗೆ ಕಲಿಸಲು ನಮ್ಮ ತಕರಾರು ಇಲ್ಲ. ನಾವು ಸಂವಿಧಾನ ಮತ್ತು ಜಾತ್ಯಾತೀತತೆಯಲ್ಲಿ ನಂಬಿಕೆ ಇಟ್ಟವರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಠ್ಯ ವಿಷಯದಲ್ಲಿ ಭಗವದ್ಗೀತೆ ಸೇರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದು ಹೀಗೆ.. ನೈತಿಕ ವಿಷಯವನ್ನು ಶಾಲಾ ಮಕ್ಕಳಿಗೆ ಕಲಿಸಲು ನಮ್ಮ ತಕರಾರು ಇಲ್ಲ. ನಾವು ಸಂವಿಧಾನ ಮತ್ತು ಜಾತ್ಯಾತೀತತೆಯಲ್ಲಿ ನಂಬಿಕೆ ಇಟ್ಟವರು. ಮಕ್ಕಳಿಗೆ ಭಗವದ್ಗೀತೆ, [&#8230;]</p>
<p>The post <a href="https://www.justkannada.in/mangalore-siddu/">ಶಾಲಾ ಮಕ್ಕಳಿಗೆ ನೈತಿಕ ವಿಷಯ ಕಲಿಸಲು ನಮ್ಮ ತಕರಾರು ಇಲ್ಲ : ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮಂಗಳೂರು, ಮಾ.19, 2022 : ನೈತಿಕ ವಿಷಯವನ್ನು ಶಾಲಾ ಮಕ್ಕಳಿಗೆ ಕಲಿಸಲು ನಮ್ಮ ತಕರಾರು ಇಲ್ಲ. ನಾವು ಸಂವಿಧಾನ ಮತ್ತು ಜಾತ್ಯಾತೀತತೆಯಲ್ಲಿ ನಂಬಿಕೆ ಇಟ್ಟವರು.</p>
<p>ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಠ್ಯ ವಿಷಯದಲ್ಲಿ ಭಗವದ್ಗೀತೆ ಸೇರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದು ಹೀಗೆ..</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ನೈತಿಕ ವಿಷಯವನ್ನು ಶಾಲಾ ಮಕ್ಕಳಿಗೆ ಕಲಿಸಲು ನಮ್ಮ ತಕರಾರು ಇಲ್ಲ. ನಾವು ಸಂವಿಧಾನ ಮತ್ತು ಜಾತ್ಯಾತೀತತೆಯಲ್ಲಿ ನಂಬಿಕೆ ಇಟ್ಟವರು. ಮಕ್ಕಳಿಗೆ ಭಗವದ್ಗೀತೆ, ಖುರಾನ್, ಬೈಬಲ್ ಯಾವುದನ್ನಾದರೂ ಹೇಳಿಕೊಡಲಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕಾದುದ್ದು ಮುಖ್ಯ. ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ಉತ್ತಮ ಶಿಕ್ಷಣ ಸಿಗಬೇಕು. ಭಗವದ್ಗೀತೆ ಹೇಳಿಕೊಟ್ಟರೆ ತಪ್ಪೇನಿಲ್ಲ. ನಮಗೂ ಮನೆಯಲ್ಲಿ ರಾಮಾಯಣ, ಮಹಾಭಾರತ, ಭಗವದ್ಗೀತೆ ಹೇಳಿಕೊಟ್ಟಿದ್ದಾರೆ. ನಾವೇನು ಹಿಂದೂಗಳಲ್ಲವೆ. ಹಳ್ಳಿಗಳಲ್ಲಿ ನಾಟಕಗಳಲ್ಲಿ ಇವುಗಳನ್ನು ಹಾಡೋದು ನೋಡಿದ್ದೇವೆ. ನಾವು ಭಗವದ್ಗೀತೆ, ಖುರಾನ್, ಬೈಬಲ್ ಇವು ಯಾವುದಕ್ಕೂ ವಿರೋಧ ಮಾಡಲ್ಲ. ನಮ್ಮದು ಬಹು ಸಂಸ್ಕೃತಿಯ ದೇಶ, ಶಿಕ್ಷಣದಲ್ಲಿ ಕಲಿಸುವ ವಿಷಯ ಸಂವಿಧಾನ ಬದ್ಧವಾಗಿರಬೇಕು ಅಷ್ಟೆ. ಸಹಿಷ್ಣುತೆ ಮತ್ತು ಸಹಬಾಳ್ವೆಯಲ್ಲಿ ನಮಗೆ ನಂಬಿಕೆ ಇದೆ.</p>
<p>ಕಾಶ್ಮೀರಿ ಫೈಲ್ ಸಿನೆಮಾ ಮೂಲಕ ಸತ್ಯ ತೋರಿಸದ್ರೆ ಯಾರಿಗೂ ತೊಂದರೆ ಇಲ್ಲ. ಕಾಶ್ಮೀರದಲ್ಲಿ ಭಯೋತ್ಪಾದಕರು ಏನೆಲ್ಲಾ ಮಾಡಿದರು, ಕಾಶ್ಮೀರಿ ಪಂಡಿತರಿಗೆ ಏನು ತೊಂದರೆ ಮಾಡಿದರು, ಆ ಕಾಲದಲ್ಲಿ ಯಾರ ಸರ್ಕಾರ ಇತ್ತು? ಇದನ್ನೆಲ್ಲ ತೋರಿಸಬೇಕು. ಸತ್ಯ ಹೇಳಿದ್ರೆ ಯಾರಿಗೂ ಸಮಸ್ಯೆ ಇಲ್ಲ. ಇದರ ಜೊತೆಗೆ ಲಿಖಿಂಪುರ್ ನ ಹಿಂಸಾಚಾರದ ಸಿನೆಮಾವನ್ನು ಮಾಡಿ ಜನರಿಗೆ ತೋರಿಸಲಿ.<br />
ನಾನು ಚಿತ್ರಮಂದಿರಕ್ಕೆ ಹೋಗಿ ಸಿನೆಮಾ ನೋಡಿದ್ದು ತುಂಬಾ ಕಡಿಮೆ, ಬಹುತೇಕ ಸಿನೆಮಾಗಳನ್ನು ನಾನು ನೋಡಿಲ್ಲ, ಅದರಲ್ಲಿ ಇದೂ ಒಂದು. ಸಿನೆಮಾ ನೋಡಲೇ ಬೇಕು ಅಂತ ಎಲ್ಲಿದೆ?</p>
<p><img loading="lazy" decoding="async" class="aligncenter size-full wp-image-70411" src="https://www.justkannada.in/wp-content/uploads/2021/07/siddaramaiahd.jpg" alt="" width="400" height="300" /></p>
<p>ನಮ್ಮದು ಮೃದು ಹಿಂದೂತ್ವವಾಗಲೀ, ಕಠೋರ ಹಿಂದುತ್ವವಾಗಲೀ ಅಲ್ಲ. ನಾವು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟಿದ್ದೇವೆ, ಸಂವಿಧಾನ ಹೇಳಿದಂತೆ ಎಲ್ಲ ಧರ್ಮಗಳನ್ನು ಸಮಾನವಾಗಿ ಗೌರವಿಸುತ್ತೇವೆ. ಅದು ಇತರೆ ಧರ್ಮಗಳಾದ ಕ್ರಿಶ್ಚಿಯನ್ ಧರ್ಮ ಆಗಿರಲಿ, ಮುಸ್ಲಿಂ ಧರ್ಮ ಆಗಿರಲಿ, ಸಿಖ್‌ ಧರ್ಮವಾಗಿರಲಿ, ಪಾರಸಿ ಧರ್ಮವಾಗಿರಲಿ, ಬೌದ್ಧ ಧರ್ಮ ಆಗಿರಲಿ ಎಲ್ಲರನ್ನು ಸಮಾನವಾಗಿ ಕಾಣುತ್ತೇವೆ.</p>
<p>ಹಿಜಾಬ್ ತೀರ್ಪಿನ ಬಗ್ಗೆ ಅಸಮಧಾನ ಇರುವವರು ಬಂದ್ ಮಾಡಿದ್ದಾರೆ, ಆದರೆ ನ್ಯಾಯಾಂಗದ ನಿರ್ಣಯವನ್ನು ಯಾರೂ ಕೂಡ ವಿರೋಧ ಮಾಡಬಾರದು.<br />
ಹಿಂದೂ ಧಾರ್ಮಿಕ ಕಾರ್ಯಕ್ರಮಗಳ ಸ್ಥಳದಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಅಭಿಯಾನದ ಕುರಿತು ಪ್ರತಿಕ್ರಿಸಿದ ಅವರು ಯಾವುದೇ ಧರ್ಮವಾಗಿರಲಿ ಅವರು ಕೋಮುವಾದ ಮಾಡಕೂಡದು. ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದರು.</p>
<p>key words : mangalore-siddu</p>
<p>The post <a href="https://www.justkannada.in/mangalore-siddu/">ಶಾಲಾ ಮಕ್ಕಳಿಗೆ ನೈತಿಕ ವಿಷಯ ಕಲಿಸಲು ನಮ್ಮ ತಕರಾರು ಇಲ್ಲ : ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಆಕ್ಸಿಜನ್ ಕೊರತೆಯಿಂದ ಮೃತಪಟ್ಟ 36 ಜನರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ : ಸಿದ್ದರಾಮಯ್ಯ</title>
		<link>https://www.justkannada.in/chamarajanagara-congress-covid-oxygen-death-bjp-government-is-responsible-siddu/</link>
		
		<dc:creator><![CDATA[JK Desk]]></dc:creator>
		<pubDate>Sun, 02 Jan 2022 11:31:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP government]]></category>
		<category><![CDATA[chamarajanagara]]></category>
		<category><![CDATA[congress]]></category>
		<category><![CDATA[covid]]></category>
		<category><![CDATA[is-responsible]]></category>
		<category><![CDATA[oxygen-death]]></category>
		<category><![CDATA[siddu]]></category>
		<guid isPermaLink="false">https://www.justkannada.in/?p=83680</guid>

					<description><![CDATA[<p>&#160; ಚಾಮರಾಜನಗರ, ಜ.02, 2022 : (www.justkannada.in news): ಕರೋನಾ ಸಂಕಷ್ಟದ ಸಮಯದಲ್ಲಿ ಜಿಲ್ಲೆಯಲ್ಲಿ ಆಕ್ಸಿಜನ್ ಸಿಗದೆ ಪ್ರಾಣ ಕಳೆದುಕೊಂಡ 36 ಜನರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದರು. ನಗರದಲ್ಲಿ ಇಂದು ಆಯೋಜಿಸಿದ್ದ ಮೇಕೆದಾಟು ಯೋಜನೆ ಜಾರಿ ಕುರಿತಾದ ಜನಜಾಗೃತಿ ಸಭೆ ಮತ್ತು ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತನಾಡಿದರು. ಈ ಹಿಂದೆ ಕೊರೊನಾ ರೋಗ ಹೆಚ್ಚಾದಾಗ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ [&#8230;]</p>
<p>The post <a href="https://www.justkannada.in/chamarajanagara-congress-covid-oxygen-death-bjp-government-is-responsible-siddu/">ಆಕ್ಸಿಜನ್ ಕೊರತೆಯಿಂದ ಮೃತಪಟ್ಟ 36 ಜನರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ : ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಚಾಮರಾಜನಗರ, ಜ.02, 2022 : (www.justkannada.in news): ಕರೋನಾ ಸಂಕಷ್ಟದ ಸಮಯದಲ್ಲಿ ಜಿಲ್ಲೆಯಲ್ಲಿ ಆಕ್ಸಿಜನ್ ಸಿಗದೆ ಪ್ರಾಣ ಕಳೆದುಕೊಂಡ 36 ಜನರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದರು.</p>
<p>ನಗರದಲ್ಲಿ ಇಂದು ಆಯೋಜಿಸಿದ್ದ ಮೇಕೆದಾಟು ಯೋಜನೆ ಜಾರಿ ಕುರಿತಾದ ಜನಜಾಗೃತಿ ಸಭೆ ಮತ್ತು ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತನಾಡಿದರು.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಹಿಂದೆ ಕೊರೊನಾ ರೋಗ ಹೆಚ್ಚಾದಾಗ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದರು. ಆಗ ಮೃತರ ಕುಟುಂಬದವರನ್ನು ಸಂತೈಸಿ, ಅವರಿಗೆ ನ್ಯಾಯ ದೊರಕಿಸಿಕೊಡಲು ಚಾಮರಾಜನಗರಕ್ಕೆ ಕಡೆಯದಾಗಿ ಬಂದಿದ್ದೆ. ರಾಜ್ಯ ಸರ್ಕಾರದ ಆರೋಗ್ಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ ಸತ್ತಿದ್ದು ಕೇವಲ ಮೂರೆ ಮಂದಿ ಎಂದು ಸುಳ್ಳು ಹೇಳಿದ್ದರು, ಜನತ್ತಿಗೆ ಸತ್ಯವನ್ನು ತೆರೆದಿಡಲು ನಾನು ಚಾಮರಾಜನಗರಕ್ಕೆ ಬಂದು, ವೈದ್ಯರು, ಅಧಿಕಾರಿಗಳೊಂದಿಗೆ ಸಭೆ ಮಾಡಿ ಸತ್ತವರ ನಿಜವಾದ ಲೆಕ್ಕವನ್ನು ಮಾಧ್ಯಮಗಳೆದುರು ಹೇಳಿದ್ದೆ. ಆಕ್ಸಿಜನ್ ಸಿಗದೆ ಪ್ರಾಣ ಕಳೆದುಕೊಂಡ 36 ಜನರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ.</p>
<p><img loading="lazy" decoding="async" class="aligncenter size-full wp-image-29403" src="https://www.justkannada.in/wp-content/uploads/2020/06/sidduram.png" alt="mysore-temple-program-former-cm-siddaramaiah" width="692" height="363" /></p>
<p>ಚಾಮರಾಜನಗರ ಜಿಲ್ಲೆಗೆ ಬಂದರೆ ಮುಖ್ಯಮಂತ್ರಿ ಹುದ್ದೆ ಹೋಗುತ್ತದೆ ಎಂಬ ಮೂಢನಂಬಿಕೆ ಇತ್ತು, ಇದನ್ನು ತೊಲಗಿಸಬೇಕು ಎಂದೇ ನಾನು ಮುಖ್ಯಮಂತ್ರಿ ಆಗಿದ್ದಾಗ 10 ರಿಂದ 12 ಬಾರಿ ಬಂದು ಹೋಗಿದ್ದೆ ಮತ್ತು ಐದು ವರ್ಷ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿ ಉಳಿದಿದ್ದೆ. ರಾಚಯ್ಯ ಮತ್ತು ನಾನು ಚಾಮರಾಜನಗರವನ್ನು ಹೊಸ ಜಿಲ್ಲೆಯಾಗಿ ಘೋಷಣೆ ಮಾಡಿದ್ದೆವು. ಇಂದು ಅವರು ನಮ್ಮೊಂದಿಗಿಲ್ಲ ಅನ್ನೋದು ನೋವಿನ ವಿಚಾರ. ನಾನು ಮುಖ್ಯಮಂತ್ರಿ ಆಗಿದ್ದಾಗ ಸುಮಾರು ಹತ್ತು ಸಾವಿರ ಕೋಟಿಗೂ ಅಧಿಕ ಹಣವನ್ನು ಚಾಮರಾಜನಗರದ ಅಭಿವೃದ್ಧಿಗೆ ಕೊಟ್ಟಿದ್ದೆ. ಕೃಷಿ, ಕಾನೂನು ಕಾಲೇಜು, ಸರ್ಕಾರಿ ಆಸ್ಪತ್ರೆ, ದ್ವಿಪಥ ರಸ್ತೆಗಳು ಇವೆಲ್ಲ ನಮ್ಮ ಸರ್ಕಾರದ ಕೊಡುಗೆಗಳು, ಇಂದು ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಕೂಡ ನಮ್ಮ ಸರ್ಕಾರದ ಕಾಲದಲ್ಲಿ ಅನುಮೋದನೆಗೊಂಡವೇ ಆಗಿವೆ.</p>
<p><img loading="lazy" decoding="async" class="aligncenter size-full wp-image-65016" src="https://www.justkannada.in/wp-content/uploads/2021/05/dery.png" alt="Chamarajanagar -Oxygen –Disaster- Full report - expert panel" width="1200" height="667" /></p>
<p>ಬಿಜೆಪಿ ಸರ್ಕಾರ ಬಂದಮೇಲೆ ರಾಜ್ಯದಲ್ಲಿ ಒಂದೇ ಒಂದು ಹೊಸದಾಗಿ ಮನೆ ನಿರ್ಮಿಸಿಕೊಟ್ಟಿಲ್ಲ. ನಮ್ಮ ಕಾಲದಲ್ಲಿ ಕೊಟ್ಟ ಮನೆಗಳಿಗೂ ಹಣ ಬಿಡುಗಡೆ ಮಾಡ್ತಿಲ್ಲ. ವಸತಿ ಸಚಿವ ಸೋಮಣ್ಣನಿಗೆ ಬಡವರಿಗೆ ಮನೆ ಕೊಡೋಕಾಗಲ್ಲ ಅಂದ್ರೆ ಅಧಿಕಾರದಲ್ಲಿ ಯಾಕಿದೀರಪ್ಪ, ರಾಜೀನಾಮೆ ಕೊಡಿ ಎಂದರೆ ಸರ್ಕಾರ ದುಡ್ ಕೊಡ್ತಿಲ್ಲ ಸಾರ್ ಅಂತಾರೆ, ವಿಜೇಂದ್ರನಿಗೂ ಸೋಮಣ್ಣನಿಗೂ ವೈಯಕ್ತಿಕವಾಗಿ ಸರಿ ಇರಲಿಲ್ಲ ಹಾಗಾಗಿ ಇವರ ಇಲಾಖೆಗೆ ಬೇಕಂತಲೇ ದುಡ್ಡು ಬಿಡುಗಡೆ ಮಾಡುತ್ತಾ ಇರಲಿಲ್ಲ. ಅಭಿವೃದ್ಧಿ ಕೆಲಸ ಮಾಡದ ಬಿಜೆಪಿ ಸರ್ಕಾರವನ್ನು ಕಿತ್ತು ಬಿಸಾಕು ಮುಂದಿನ ಚುನಾವಣೆಯಲ್ಲಿ ಚಾಮರಾಜನಗರದ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಬೇಕು. ಅದು ಇಂದಿನಿಂದಲೇ ಆರಂಭ ಆಗಬೇಕು.</p>
<p>1968 ರಲ್ಲೇ ಕಾಂಗ್ರೆಸ್ ಸರ್ಕಾರ ಮೇಕೆದಾಟು ಯೋಜನೆ ಜಾರಿಗೆ ಪ್ರಯತ್ನ ಮಾಡಿತ್ತು, ಆದರೆ ಆಗ ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ಜಲ ವಿವಾದ ನ್ಯಾಯಾಲಯದಲ್ಲಿ ಇದ್ದಿದ್ದರಿಂದ ಅನುಷ್ಠಾನ ಸಾಧ್ಯವಾಗಲಿಲ್ಲ. ನಂತರ 2017 ರಲ್ಲಿ ನಮ್ಮ ಸರ್ಕಾರ ಈ ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿತ್ತು. ಆಗ ಯೋಜನಾ ವೆಚ್ಚ ರೂ. 5,912 ಕೋಟಿ. ನಂತರ ಸಮ್ಮಿಶ್ರ ಸರ್ಕಾರ ಬಂದಮೇಲೆ ಸಚಿವರಾಗಿದ್ದ ಡಿ.ಕೆ ಶಿವಕುಮಾರ್ ಅವರು ಮತ್ತೆ ರೂ. 9000 ಕೋಟಿಯ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದರು. ಆಗಲೂ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿಲ್ಲ.</p>
<p><img loading="lazy" decoding="async" class="aligncenter size-full wp-image-67636" src="https://www.justkannada.in/wp-content/uploads/2021/06/congress-1.jpg" alt="" width="518" height="388" /></p>
<p>ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಯೋಜನೆ ಜಾರಿಗೆ ಪ್ರಯತ್ನ ಮಾಡದೆ ಈಗ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ ಎಂದು ಗೋವಿಂದ ಕಾರಜೋಳ ಸುಳ್ಳು ಆರೋಪ ಮಾಡಿದ್ದಾರೆ. ಅವರ ಆರೋಪಕ್ಕೆ ಸೂಕ್ತ ಸಾಕ್ಷಿ ಇದ್ದರೆ ಕೂಡಲೇ ಬಿಡುಗಡೆ ಮಾಡಲಿ ಎಂದು ಸವಾಲು ಹಾಕುತ್ತೇನೆ. ಇದೊಂದು ಕುಡಿಯುವ ನೀರಿನ ಯೋಜನೆ ಹಾಗಾಗಿ ಯಾರೂ ಕೂಡ ತಕರಾರು ಮಾಡುವಂತಿಲ್ಲ, ಕೇಂದ್ರದ ಅರಣ್ಯ ಇಲಾಖೆಯ ಅನುಮತಿ ಒಂದು ಸಿಕ್ಕರೆ ಅಣೆಕಟ್ಟು ನಿರ್ಮಾಣ ಮಾಡಲು ಬೇರಾವ ಅನುಮತಿಯೂ ಬೇಡ. ಎರಡೂ ಕಡೆ ಬಿಜೆಪಿಯವರ ಸರ್ಕಾರ ಇದೆ, ಆದರೂ ಯೋಜನೆ ಜಾರಿ ಮಾಡದೆ ಯಾಕೆ ಸುಮ್ಮನಿದ್ದಾರೆ? ಇದೇನಾ ಡಬ್ಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ?</p>
<p>ಒಂದು ಸಾಮಾನ್ಯ ವರ್ಷದಲ್ಲಿ ಕರ್ನಾಟಕದಿಂದ ತಮಿಳುನಾಡಿಗೆ 177.25 ಟಿ.ಎಂ.ಸಿ ಕಾವೇರಿ ನೀರು ಹರಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಇದೆ. ಇದನ್ನು ಬಿಟ್ಟರೆ ತಮಿಳುನಾಡಿಗೆ ಕಾವೇರಿ ನೀರಿನ ವಿಚಾರದಲ್ಲಿ ತಕರಾರು ಮಾಡಲು ಬೇರೆ ಯಾವುದೇ ರೀತಿಯ ಕಾನೂನು ಹಕ್ಕಿಲ್ಲ. ಪ್ರತೀ ವರ್ಷ ಸುಮಾರು 200 ಟಿ.ಎಂ.ಸಿ ನೀರು ಸಮುದ್ರ ಪಾಲಾಗುವ ಮೂಲಕ ವ್ಯರ್ಥವಾಗುತ್ತಿದೆ. ಹೀಗೆ ವ್ಯರ್ಥವಾಗುವ ನೀರನ್ನು ಕುಡಿಯುವ ಮತ್ತು ವಿದ್ಯುತ್ ಉತ್ಪಾದನೆಗೆ ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಮೇಕೆದಾಟು ಯೋಜನೆ ರೂಪಿಸಲಾಗಿದೆ. ವಿದ್ಯುತ್ ಉತ್ಪಾದನೆ ಆದ ಮೇಲೆ ಆ ನೀರು ಕೂಡ ತಮಿಳುನಾಡಿಗೆ ಹೋಗುತ್ತದೆ, ಅದೂ ಅವರಿಗೆ ಇನ್ನೊಂದು ಲಾಭದಾಯಕ ಅಂಶ.</p>
<p><img loading="lazy" decoding="async" class="aligncenter size-full wp-image-64104" src="https://www.justkannada.in/wp-content/uploads/2021/05/ex-ips-officer-annamalai-getting-back-in-tamil-nadu-election-.jpg" alt="" width="750" height="500" /></p>
<p>ಮೇಕೆದಾಟು ಯೋಜನೆ ಜಾರಿ ಮಾಡದಂತೆ ತಮಿಳುನಾಡಿನ ಸರ್ಕಾರ ಸುಪ್ರೀಂ ಕೋರ್ಟ್ ಮೋರೆ ಹೋಗಿದ್ದರು ಕೂಡ ನ್ಯಾಯಾಲಯ ಅವರ ಮನವಿಯನ್ನು ಪುರಸ್ಕರಿಸಿಲ್ಲ. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಉದ್ದೇಶಕ್ಕಾಗಿ ಯೋಜನೆಗೆ ತಕರಾರು ಮಾಡುತ್ತಿದೆ. ತಮಿಳುನಾಡಿನ ಮಾತು ಕೇಳಿಕೊಂಡು ಕೇಂದ್ರ ಸರ್ಕಾರ ಡ್ಯಾಂ ನಿರ್ಮಾಣಕ್ಕೆ ಅನುಮತಿ ಕೊಡುತ್ತಿಲ್ಲ.</p>
<p>ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮೇಕೆದಾಟು ಯೋಜನೆ ಜಾರಿ ಮಾಡಬಾರದು ಎಂದು ಧರಣಿ ಕೂತಿದ್ದಾರೆ. ತಮಿಳುನಾಡಿನ ಬಿಜೆಪಿ ಉಸ್ತುವಾರಿ ಸಿ.ಟಿ ರವಿ ಅವರು ಕೂಡ ಮೇಕೆದಾಟು ವಿರುದ್ಧವಾಗಿದ್ದಾರೆ. ಹೀಗಾಗಿಯೇ ಯೋಜನೆ ಜಾರಿಯಾಗದೆ ಅನಗತ್ಯ ವಿಳಂಬವಾಗುತ್ತಿದೆ. ಈ ವಿಳಂಬವನ್ನು ವಿರೋಧಿಸಿಯೇ ಕಾಂಗ್ರೆಸ್ ಪಕ್ಷ ಈ ತಿಂಗಳ 9 ನೇ ತಾರೀಖಿನಿಂದ ಮೇಕೆದಾಟು ಇಂದ ಬೆಂಗಳೂರು ವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ.</p>
<p>ಹೇಮಾವತಿ, ಕಬಿನಿ, ಕೆಆರ್‌ಎಸ್ ನಲ್ಲಿ ನೀರಿದ್ದರೆ ಮಾತ್ರ ಚಾಮರಾಜನಗರ, ಮೈಸೂರು, ತುಮಕೂರು, ಮಂಡ್ಯ ಜಿಲ್ಲೆಗೆ ನೀರು ಸಿಗೋದು. ಹೀಗಾಗಿ ಮನೆಗೊಂದು ಆಳಿನಂತೆ ಪಾದಯಾತ್ರೆಯಲ್ಲಿ ಭಾಗವಹಿಸಬೇಕು ಎಂದು ತಮ್ಮಲ್ಲಿ ಮನವಿ ಮಾಡುತ್ತೇನೆ.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /><br />
key words : chamarajanagara-congress-covid-oxygen-death-bjp-government-is-responsible-siddu</p>
<p>The post <a href="https://www.justkannada.in/chamarajanagara-congress-covid-oxygen-death-bjp-government-is-responsible-siddu/">ಆಕ್ಸಿಜನ್ ಕೊರತೆಯಿಂದ ಮೃತಪಟ್ಟ 36 ಜನರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ : ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಧಾರ್ಮಿಕ ಮಾಫಿಯಾ ಇಂದು ಶೇ. ೮೦ ರಷ್ಟಿರುವ ಹಿಂದೂಗಳ ಆಸ್ತಿ ಕಬಳಿಸಿ, 2-3 ಪರ್ಸೆಂಟ್ ಜನರ ಅಧೀನಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸಿದೆ : ಸಿದ್ದರಾಮಯ್ಯ.</title>
		<link>https://www.justkannada.in/bangalore-karnataka-bjp-government-temple-congress-siddu-oppose/</link>
		
		<dc:creator><![CDATA[JK Desk]]></dc:creator>
		<pubDate>Sun, 02 Jan 2022 10:45:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[BJP]]></category>
		<category><![CDATA[congress]]></category>
		<category><![CDATA[government]]></category>
		<category><![CDATA[karnataka]]></category>
		<category><![CDATA[Oppose]]></category>
		<category><![CDATA[siddu]]></category>
		<category><![CDATA[temple]]></category>
		<guid isPermaLink="false">https://www.justkannada.in/?p=83677</guid>

					<description><![CDATA[<p>&#160; ಬೆಂಗಳೂರು, ಜ.02, 2022 : (www.justkannada.in news ) ದೇವಾಲಯಗಳನ್ನು ಸ್ವತಂತ್ರಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಾರವಾಗಿ ಖಂಡಿಸಿದ್ದು, ಬಿಜೆಪಿಯ ಸುಳ್ಳಿನ ಫ್ಯಾಕ್ಟರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಲೇ, ರಾಜ್ಯ ಸರಕಾರದ ಈ ನಿರ್ಧಾರದ ಹಿಂದಿನ ಹುನ್ನಾರದ ಬಗ್ಗೆ ಸುದೀರ್ಘ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮಾಧ್ಯಮ ಹೇಳಿಕೆ ವಿವರ ಹೀಗಿದೆ&#8230;.. ಸರ್ಕಾರವು ರಾಜ್ಯದ ದೇವಸ್ಥಾನಗಳನ್ನು ಸ್ವತಂತ್ರಗೊಳಿಸುವುದಾಗಿ, ಸ್ವಾಯತ್ತಗೊಳಿಸುವುದಾಗಿ ಹೇಳುತ್ತಿದೆ. ದೇವಸ್ಥಾನಗಳು ಈಗಲೂ ಸ್ವತಂತ್ರವಾಗಿಯೆ ಇವೆ. ಸರ್ಕಾರ ಅನೇಕ ದೇವಸ್ಥಾನಗಳಿಗೆ [&#8230;]</p>
<p>The post <a href="https://www.justkannada.in/bangalore-karnataka-bjp-government-temple-congress-siddu-oppose/">ಧಾರ್ಮಿಕ ಮಾಫಿಯಾ ಇಂದು ಶೇ. ೮೦ ರಷ್ಟಿರುವ ಹಿಂದೂಗಳ ಆಸ್ತಿ ಕಬಳಿಸಿ, 2-3 ಪರ್ಸೆಂಟ್ ಜನರ ಅಧೀನಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸಿದೆ : ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ಜ.02, 2022 : (www.justkannada.in news ) ದೇವಾಲಯಗಳನ್ನು ಸ್ವತಂತ್ರಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಾರವಾಗಿ ಖಂಡಿಸಿದ್ದು, ಬಿಜೆಪಿಯ ಸುಳ್ಳಿನ ಫ್ಯಾಕ್ಟರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಲೇ, ರಾಜ್ಯ ಸರಕಾರದ ಈ ನಿರ್ಧಾರದ ಹಿಂದಿನ ಹುನ್ನಾರದ ಬಗ್ಗೆ ಸುದೀರ್ಘ ಪತ್ರಿಕಾ ಹೇಳಿಕೆ ನೀಡಿದ್ದಾರೆ.</p>
<p>ಮಾಜಿ ಸಿಎಂ ಸಿದ್ದರಾಮಯ್ಯ ಮಾಧ್ಯಮ ಹೇಳಿಕೆ ವಿವರ ಹೀಗಿದೆ&#8230;..</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಸರ್ಕಾರವು ರಾಜ್ಯದ ದೇವಸ್ಥಾನಗಳನ್ನು ಸ್ವತಂತ್ರಗೊಳಿಸುವುದಾಗಿ, ಸ್ವಾಯತ್ತಗೊಳಿಸುವುದಾಗಿ ಹೇಳುತ್ತಿದೆ. ದೇವಸ್ಥಾನಗಳು ಈಗಲೂ ಸ್ವತಂತ್ರವಾಗಿಯೆ ಇವೆ. ಸರ್ಕಾರ ಅನೇಕ ದೇವಸ್ಥಾನಗಳಿಗೆ ನೆರವು ನೀಡುವುದರ ಮೂಲಕ ಅವುಗಳನ್ನು ಪೊರೆಯುತ್ತಿದೆ. ಮುಜರಾಯಿ ಇಲಾಖೆಯ ವಾರ್ಷಿಕ ಬಜೆಟ್ಟು ಸುಮಾರು ೩೫೦ ಕೋಟಿಗಳಷ್ಟಿದೆ.</p>
<p>ಸರ್ಕಾರವೇ ದೇವಸ್ಥಾನಗಳನ್ನು ನಡೆಸುವುದೆಂದರೆ ಸಮಾಜದ ಕಟ್ಟ ಕಡೆಯ ಮನುಷ್ಯರಿಗೂ ಅವುಗಳ ಮೇಲೆ ಹಕ್ಕುಗಳು ಇವೆಯೆಂದು ಅರ್ಥ. ಸರ್ಕಾರ ದೇವಸ್ಥಾನಗಳ ಮೇಲಿನ ಹಿಡಿತವನ್ನು ತಪ್ಪಿಸುವುದೆಂದರೆ ಜನ ಸಮುದಾಯಗಳಿಗೆ ಇರುವ ಅಧಿಕಾರವನ್ನು ತಪ್ಪಿಸುವುದೆಂದು ಅರ್ಥ.</p>
<p>ಈಗ ಸರ್ಕಾರ ಮಾಡ ಹೊರಟಿರುವುದೇನೆಂದರೆ ನಾಡಿನ ಐದೂವರೆ ಕೋಟಿ ಕನ್ನಡಿಗ ಹಿಂದೂಗಳ ಅಧಿಕಾರವನ್ನು ತಪ್ಪಿಸಿ ಕೇವಲ ಶೇ.ಎರಡರಷ್ಟು ಜನರ ಕೈಗೆ ಕೊಡಲು ಮುಂದಾಗಿರುವುದು. ಸರ್ಕಾರದ ಈ ನಿರ್ಧಾರದಿಂದ ಶೇ. ೮೦ ರಷ್ಟು ಜನ ಮತ್ತೆ ಊಳಿಗಮಾನ್ಯ ಸಮಾಜದ ಕ್ರೌರ್ಯವನ್ನು ಅನುಭವಿಸಬೇಕೆಂದು ಸರ್ಕಾರ ತೀರ್ಮಾನಿಸಿದಂತೆ ಕಾಣುತ್ತಿದೆ.</p>
<p>ಬಸವಣ್ಣನವರ ನೇತೃತ್ವದ ಶರಣ ಚಳುವಳಿಯನ್ನು ದಮನ ಮಾಡಿದ ಪುರೋಹಿತಶಾಹಿ ಶಕ್ತಿಗಳೆ ಇಂದು ತಮ್ಮ ಬಿಜೆಪಿ ಪಕ್ಷದಲ್ಲಿರುವ ಶೂದ್ರ ರಾಜಕಾರಣಿಗಳನ್ನು ಬಳಸಿಕೊಂಡು ದೇವಸ್ಥಾನಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡು ಐದೂವರೆ ಕೋಟಿ ಕನ್ನಡಿಗ ಹಿಂದೂಗಳನ್ನು ಧಾರ್ಮಿಕ ಗುಲಾಮಗಿರಿಯ ಕಡೆಗೆ ತಳ್ಳಲು ಪ್ರಯತ್ನಿಸುತ್ತಿವೆ.</p>
<p><img loading="lazy" decoding="async" class="aligncenter size-full wp-image-83602" src="https://www.justkannada.in/wp-content/uploads/2022/01/chamundeshwari.jpg" alt="" width="650" height="299" srcset="https://www.justkannada.in/wp-content/uploads/2022/01/chamundeshwari.jpg 650w, https://www.justkannada.in/wp-content/uploads/2022/01/chamundeshwari-600x276.jpg 600w, https://www.justkannada.in/wp-content/uploads/2022/01/chamundeshwari-300x138.jpg 300w" sizes="auto, (max-width: 650px) 100vw, 650px" /></p>
<p>ಈ ಪುರೋಹಿತ ಶಾಹಿ ವರ್ಗ ಸ್ವಾಯತ್ತತೆಯ ಹೆಸರಲ್ಲಿ ಎಲ್ಲ ದೇವಸ್ಥಾನಗಳನ್ನು ವಶಪಡಿಸಿಕೊಳ್ಳುವುದಿಲ್ಲ. ಲಕ್ಷಾಂತರ, ಕೋಟ್ಯಾಂತರ ಆದಾಯವಿರುವ ದೇವಸ್ಥಾನಗಳನ್ನು ತಾವು ತೆಗೆದುಕೊಂಡು ಆದಾಯವಿಲ್ಲದ ಕೆಲವು ದೇವಸ್ಥಾನಗಳನ್ನು ಉಳಿದವರಿಗೆ ಬಿಟ್ಟುಕೊಡಬಹುದು.<br />
ಆದರೆ ಸರ್ಕಾರದ ಹಿಡಿತ ತಪ್ಪಿದ ಕೂಡಲೆ ಮನುವಾದಿ ನಿಯಮಗಳನ್ನು ಸಮಾಜದ ಮೇಲೆ ಹೇರಿಕೆ ಮಾಡಲು ಪ್ರಾರಂಭಿಸುತ್ತಾರೆ. ಈ ವಿಚಾರಗಳನ್ನು ಹೇಳಿದ ಕೂಡಲೆ ಸಂಘ ಪರಿವಾರದವರು ಇನ್ನಿಲ್ಲದಂತೆ ತೊಳಲಾಡುತ್ತಾರೆ.</p>
<p>ತಾವು ಮಾತನಾಡಲಾರದೆ ತಮ್ಮ ಪಕ್ಷದಲ್ಲಿರುವ ಶೂದ್ರಾದಿ ದಲಿತ ನಾಯಕರನ್ನು ಛೂ ಬಿಟ್ಟು ಬಾಯಿಗೆ ಬಂದಂತೆ ಮಾತನಾಡಲು ಸೂಚಿಸುತ್ತಾರೆ. ಈ ಧಾರ್ಮಿಕ ಅನ್ಯಾಯಗಳ ವಿರುದ್ಧ, ಶೋಷಣೆಯ ನೀತಿಗಳ ವಿರುದ್ಧ ಮಾತನಾಡಿದರೆ, ಸಾಮಾಜಿಕ ನ್ಯಾಯ, ಸಂವಿಧಾನದ ಆಶಯಗಳ ಬಗ್ಗೆ ಪ್ರಸ್ತಾಪಿಸಿದ ಕೂಡಲೆ ಹಾಗೆ ಪ್ರಸ್ತಾಪಿಸಿದವರನ್ನು ಹಿಂದೂ ವಿರೋಧ, ಪಾಕಿಸ್ತಾನ, ಮುಸ್ಲಿಂ, ಕ್ರಿಶ್ಚಿಯನ್ ಮುಂತಾದ ವಿಷಯಗಳನ್ನು ಮಾತನಾಡಿ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಾರೆ.</p>
<p>ಇದು ಮನುವಾದಿಗಳ ಪುರಾತನ ಅಜೆಂಡ. ಹಾಗಾಗಿ ಜನರು ಇವರ ದುಷ್ಟ ಹುನ್ನಾರಗಳನ್ನು ಅರ್ಥ ಮಾಡಿಕೊಳ್ಳಬೇಕು. ಧರ್ಮ, ದೇವರು, ದೇವಸ್ಥಾನ, ಮಸೀದಿ, ಚರ್ಚುಗಳ ವಿಷಯದಲ್ಲಿ ರಾಜಕೀಯ ಮಾಡಿಕೊಂಡು ದೇಶವನ್ನು ಅದಾನಿ, ಅಂಬಾನಿ ಮುಂತಾದ ಬಂಡವಾಳಿಗರಿಗೆ ಒತ್ತೆ ಇಡುತ್ತಿರುವ ಬಿಜೆಪಿಯು ಆರಂಭದಿಂದಲೂ ಸುಳ್ಳುಗಳ ಫ್ಯಾಕ್ಟರಿ ಇಟ್ಟುಕೊಂಡು ಸುಳ್ಳುಗಳನ್ನೆ ಉತ್ಪಾದಿಸಿ ಜನರಿಗೆ ಮಾರಿ ರಾಜಕಾರಣ ಮಾಡುತ್ತಿದ್ದಾರೆ.</p>
<p>ಅಂಥ ಹಲವು ಸುಳ್ಳುಗಳಲ್ಲಿ, ದೇವಸ್ಥಾನಗಳ ಹಣವನ್ನು ಮುಸ್ಲಿಂ ಮತ್ತು ಕ್ರಿಶ್ಚಿಯನ್ನರ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ ಖರ್ಚು ಮಾಡಲಾಗುತ್ತಿದೆ ಎಂಬುದೂ ಒಂದು. ಆದರೆ ವಾಸ್ತವವಾಗಿ ದೇವಸ್ಥಾನಗಳ ಒಂದೇ ಒಂದು ರೂಪಾಯಿ ಹಣವನ್ನೂ ಮಸೀದಿಗಾಗಲಿ, ಚರ್ಚುಗಳಿಗಾಗಲಿ ಬಳಸಿಲ್ಲವೆಂದು ಇಲಾಖೆ ಉತ್ತರ ನೀಡಿದೆ.</p>
<p>ಇಲಾಖೆಯ ಉತ್ತರ ಈ ರೀತಿ ಇದೆ, “ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ-೧೯೯೭ ಮತ್ತು ನಿಯಮಗಳು-೨೦೦೨ ರಡಿ ಸದರಿ ಅನುದಾನಗಳನ್ನು ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ಯಾವುದೇ ದೇವಾಲಯದ ಆದಾಯದಿಂದ / ನಿಧಿಯಿಂದ ಬಿಡುಗಡೆ/ ಮಂಜೂರು ಮಾಡುತ್ತಿರುವುದಿಲ್ಲ” ಎಂದು ಹೇಳಲಾಗಿದೆ.</p>
<p>ಆದರೂ ಬಿಜೆಪಿಯ ಕೆಲವು ಸುಳ್ಳಿನ ಉತ್ಪಾದಕರು ಅಪಪ್ರಚಾರ ಮಾಡುತ್ತಲೆ ಇದ್ದಾರೆ. ದೇವರ ಹೆಸರಿನಲ್ಲಿ ಸುಳ್ಳು ಹೇಳುವ, ಅಪಚಾರ ಎಸಗುವ ಈ ಜನ ಎಷ್ಟು ಕೆಟ್ಟವರು, ಅಮಾನವೀಯ ವ್ಯಕ್ತಿಗಳು ಎಂಬುದಕ್ಕೆ ಇದು ಸಾಕ್ಷಿ.</p>
<p>ಹಾಗಿದ್ದರೆ ಹಿಂದೂ ಮತ್ತು ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರ ವರ್ಷಾಸನ ಮತ್ತು ತಸ್ತೀಕ್ ನೀಡುತ್ತಿಲ್ಲವೆ? ಖಂಡಿತ ನೀಡುತ್ತಿದೆ. ಅದರೆ ಅದು ದೇವಸ್ಥಾನಗಳ ಆದಾಯವಲ್ಲ. ಅದು ಸರ್ಕಾರದ ಹಣ.</p>
<p><img loading="lazy" decoding="async" class="aligncenter size-full wp-image-62643" src="https://www.justkannada.in/wp-content/uploads/2021/04/nH-1.jpg" alt="corona-restriction-public-access-srikantheshwara-temple-nanjangud" width="550" height="366" /></p>
<p>ರಾಜ್ಯದಲ್ಲಿ ತಸ್ತೀಕ್ ಮತ್ತು ವರ್ಷಾಸನಗಳನ್ನು ಪಡೆಯುತ್ತಿರುವ ಹಿಂದೂ ಮತ್ತು ಹಿಂದೂಯೇತರ ಒಟ್ಟು ಸಂಸ್ಥೆಗಳು ೩೦೩೬೩. ಈ ಸಂಸ್ಥೆಗಳಿಗೆ ಒಟ್ಟಾರೆ ಒಂದು ವರ್ಷಕ್ಕೆ ೧೫೦.೯೨ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಇದರಲ್ಲಿ ೮೭೫ ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ೪.೨೦ ಕೋಟಿ ರೂಗಳನ್ನು ನೀಡಲಾಗುತ್ತಿದೆ. ಉಳಿದ ೧೪೬.೭೨ ಕೋಟಿ ರೂಪಾಯಿಗಳನ್ನು ಹಿಂದೂ ಧಾರ್ಮಿಕ ಸಂಸ್ಥೆಗಳಿಗೆ ನೀಡಲಾಗುತ್ತಿದೆ. ಈ ಹಣವೂ ದೇವಾಲಯಗಳ ಹಣವಲ್ಲ. ಇದು ಸರ್ಕಾರ ನೀಡುತ್ತಿರುವ ಪರಿಹಾರದ ಹಣ.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಇದನ್ನು ಪರಿಹಾರ ಅನ್ನುವುದು ಏಕೆ?</p>
<p>ತಸ್ತೀಕ್; ಅಂದರೆ ಮೈಸೂರು ಇನಾಂ ರದ್ದಿಯಾತಿ ಕಾಯ್ದೆ ೧೯೫೫ ರಂತೆ ೧-೭-೧೯೭೦ ರಿಂದ ಧರ್ಮಾದಾಯ ಮತ್ತು ದೇವಾದಾಯ ಇನಾಂ ಜಮೀನುಗಳ ಹಕ್ಕುಗಳನ್ನು ಸರ್ಕಾರವು ಕಾಯ್ದೆಯ ಕಲಂ ೧೭ ರಂತೆ ತನ್ನಲ್ಲಿ ನಿಹಿತಗೊಳಿಸಿಕೊಂಡಿತು. ಜಮೀನುಗಳನ್ನು ವಶಪಡಿಸಿಕೊಂಡ ಹಿಂದಿನ ೫ ವರ್ಷಗಳ ಬೆಳೆಯನ್ನು ಆಧರಿಸಿ ತಸ್ತೀಕ್ ಅನ್ನು ಜಿಲ್ಲಾಧಿಕಾರಿಗಳು/ ಉಪವಿಭಾಗಾಧಿಕಾರಿಗಳು ನಿಗಧಿಗೊಳಿಸುತ್ತಾರೆ. ಸಂಸ್ಥೆಯ/ ವ್ಯಕ್ತಿಯ ಜಮೀನುಗಳನ್ನು ನಿಹಿತಗೊಳಿಸಿಕೊಂಡದ್ದರಿಂದ ಅವರಿಗೆ ಪರಿಹಾರ ನೀಡುವ ಉದ್ದೇಶದಿಂದ ತಸ್ತೀಕ್ ನೀಡಲಾಗುತ್ತದೆ.</p>
<p>ವರ್ಷಾಸನ; ಅಂದರೆ, ಕರ್ನಾಟಕ ಭೂ ಸುಧಾರಣೆ ಕಾಯ್ದೆ- ೧೯೬೧ ರಂತೆ ೧-೩-೧೯೭೪ ರಂದು ಜಾರಿಗೆ ಬಂದ ಸರ್ಕಾರದಲ್ಲಿ ಜಮೀನುಗಳು ನಿಹಿತವಾದ ಜಮೀನುಗಳಿಗೆ ವರ್ಷಾಸನ ನಿಗಧಿಗೊಳಿಸಲಾಗುತ್ತದೆ. ದೇವರಾಜ ಅರಸು ಅವರ ಕಾಲದಲ್ಲಿ ಈ ಕಾಯ್ದೆಯನ್ನು ಜಾರಿಗೆ ತರಲಾಯಿತು. ಜಮೀನುಗಳನ್ನು ಸರ್ಕಾರಕ್ಕೆ ಬಿಟ್ಟುಕೊಟ್ಟ ಸಂಸ್ಥೆಗಳ ನಿರ್ವಹಣೆಗಾಗಿ ಈ ತಸ್ತೀಕ್ ಮತ್ತು ವರ್ಷಾಸನಗಳನ್ನು ನೀಡಲಾಗುತ್ತಿದೆ.</p>
<p>ಹಿಂದೆ ರಾಜ ಮಹಾರಾಜರು ಈ ಧಾರ್ಮಿಕ ಸಂಸ್ಥೆಗಳ ನಿರ್ವಹಣೆಗೆಂದು ಜಮೀನುಗಳನ್ನು ಇನಾಂ ನೀಡಿದ್ದರು. ಆ ಜಮೀನುಗಳಿಂದ ಬರುವ ಆದಾಯದ ಮೇಲೆ ಆ ಸಂಸ್ಥೆಗಳ ನಿರ್ವಹಣೆ ನಡೆಯುತ್ತಿತ್ತು. ಸರ್ಕಾರ ಆ ಜಮೀನುಗಳನ್ನು ವಶಕ್ಕೆ ಪಡೆದು ಬಡ ರೈತರಿಗೆ ಮಂಜೂರು ಮಾಡಿತ್ತು. ಅದಕ್ಕಾಗಿ ಸರ್ಕಾರ ಈ ಸಂಸ್ಥೆಗಳು ಅಸ್ತಿತ್ವದಲ್ಲಿ ಇರುವವರೆಗೆ ಪರಿಹಾರ ನೀಡುತ್ತವೆ. ಇದು ಸರ್ಕಾರದಿಂದ ನೀಡುವ ಪರಿಹಾರವೇ ಹೊರತು ದೇವಾಲಯಗಳ ಹಣವನ್ನು ಹಂಚುವುದಲ್ಲ.</p>
<p>ದುಷ್ಟರು ಮಾತ್ರ ಈ ವಿಚಾರದಲ್ಲಿ ಜನರಿಗೆ ಸುಳ್ಳು ಹೇಳಿ ರಾಜಕೀಯ ಮಾಡುತ್ತಾರೆ. ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಲ್ಲಿ ಶೇ.೯೦ಕ್ಕಿಂತ ಹೆಚ್ಚು ದರ್ಗಾಗಳೇ ಇವೆ. ಈ ದರ್ಗಾಗಳು ಸಂತರುಗಳ ಸಮಾಧಿಗಳು. ಈ ದರ್ಗಾಗಳಿಗೆ ಹಿಂದೂ-ಮುಸ್ಲಿಂ ಮುಂತಾದ ಸಮುದಾಯಗಳ ಜನರು ಧರ್ಮಾತೀತವಾಗಿ ನಡೆದುಕೊಳ್ಳುತ್ತಾರೆ.</p>
<p><img loading="lazy" decoding="async" class="aligncenter size-full wp-image-69211" src="https://www.justkannada.in/wp-content/uploads/2021/07/siddu.jpg" alt="" width="400" height="300" /><br />
ದೇವಾಲಯಗಳನ್ನು ಸ್ವತಂತ್ರಗೊಳಿಸುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿರುವುದು ಏಕೆ?</p>
<p>ರಾಜ್ಯದಲ್ಲಿ ಮುಜರಾಯಿ ಇಲಾಖೆಯ ಅಧೀನದಲ್ಲಿ ಒಟ್ಟಾರೆ ೩೪೫೫೮ ದೇವಾಲಯಗಳಿವೆ. ಅವುಗಳ ಆದಾಯವನ್ನು ಆಧರಿಸಿ ಎ,ಬಿ,ಸಿ ಎಂದು ಮೂರು ಗುಂಪುಗಳಾಗಿ ವಿಂಗಡಿಸಲಾಗಿದೆ. ಇದರ ಆಧಾರದಂತೆ ಎ ಗುಂಪಿನಲ್ಲಿ ೨೦೫, ಬಿ ಗುಂಪಿನಲ್ಲಿ ೧೩೯ ಮತ್ತು ಸಿ ಗುಂಪಿನಲ್ಲಿ ೩೪೨೧೪ ದೇವಸ್ಥಾನಗಳಿವೆ. ಕುತೂಹಲಕ್ಕೆ ಈ ದೇವಾಲಯಗಳ ಬಳಿ ಎಷ್ಟು ಹಣವಿದೆ ಎಂದು ನೋಡಿದರೆ, ಎ ಗುಂಪಿನ ದೇವಾಲಯಗಳ ಬಳಿ ಉಳಿತಾಯ ಠೇವಣಿ ಮತ್ತು ನಿಶ್ಚಿತ ಠೇವಣಿ ಹಣ ಎರಡೂ ಸೇರಿ ಸುಮಾರು ೧೫೮೦ ಕೋಟಿ ರೂಗಳಷ್ಟಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಅಕೌಂಟಿನಲ್ಲಿಯೆ ಸುಮಾರು ರೂ.೪೦೦ ಕೋಟಿ ಹಣವಿದೆ. ಬಿ ಗುಂಪಿನ ದೇವಾಲಯಗಳ ಬಳಿ ೯೮.೬೭ ಕೋಟಿ ಹಣವಿದೆ. ಇದನ್ನು ಹೊರತುಪಡಿಸಿ ಈ ದೇವಾಲಯಗಳ ಬಳಿ ಇರುವ ಆಸ್ತಿ ಮೌಲ್ಯ ಬಹುಶಃ ೧ ಲಕ್ಷ ಕೋಟಿಗೂ ಅಧಿಕವಿರಬಹುದು. ಸಾವಿರಾರು ಎಕರೆ ಭೂಮಿ, ಸಾವಿರಾರು ಕಟ್ಟಡಗಳು ಈ ದೇವಾಲಯಗಳ ಸುಪರ್ದಿಯಲ್ಲಿವೆ. ಒಡವೆಗಳು, ವಸ್ತು, ವಾಹನಗಳು ಇದರಡಿ ಸೇರುತ್ತವೆ.</p>
<p>ಒಂದು ವರ್ಗದ ದುಷ್ಟ ಕಣ್ಣು ಇದರ ಮೇಲೆ ಬಿದ್ದಿದೆ. ದೇವರ ಹೆಸರಿನಲ್ಲಿ ದಂಧೆ ನಡೆಸುವ ಧಾರ್ಮಿಕ ಮಾಫಿಯಾ ಇಂದು ಶೇ. ೮೦ ರಷ್ಟು ಜನರಿರುವ ಹಿಂದೂಗಳ ಆಸ್ತಿಯನ್ನು ಕಬಳಿಸಿ ಎರಡು- ಮೂರು ಪರ್ಸೆಂಟ್ ಜನರ ಅಧೀನಕ್ಕೆ ತೆಗೆದುಕೊಳ್ಳುವ ಭೀಕರ ಹುನ್ನಾರವಿದು. ಸರ್ಕಾರ ಈ ಕೆಲಸವನ್ನು ಮಾಡಿದ್ದೆ ಆದರೆ ನಾಡಿನ ಒಂದು ಸಾವಿರ ವರ್ಷಗಳ ಜನರ ದೀರ್ಘ ಹೋರಾಟವನ್ನು ಅವಮಾನಿಸಿದಂತಾಗುತ್ತದೆ ಮತ್ತು ದಮನ ಮಾಡಿದಂತಾಗುತ್ತದೆ.</p>
<p>ಸರ್ಕಾರದ ಈ ಹಿಂದೂ ವಿರೋಧಿ, ಧಾರ್ಮಿಕ ಬಂಡವಾಳವಾದಿ ಪರ ಧೋರಣೆಯನ್ನು ಬುದ್ಧಿ, ಪ್ರಜ್ಞೆ ಇರುವ ಜನರೆಲ್ಲ ವಿರೋಧಿಸಬೇಕು.<br />
ಈ ಬಿಜೆಪಿಯ ಮೂಲಭೂತ ಸ್ವಭಾವದಲ್ಲೆ ಸಮಾಜವನ್ನು ಹಿಂದಕ್ಕೆ ಕರೆದುಕೊಂಡು ಹೋಗುವ, ಸಾಮಾಜಿಕ ನ್ಯಾಯವನ್ನು ತೊತ್ತಳ ತುಳಿದು ಹಾಕುವ ದೇಶದ ಬಹುಸಂಖ್ಯಾತರಾದ ಶೂದ್ರರು, ದಲಿತರು, ಮಹಿಳೆಯರನ್ನು ಗುಲಾಮಗಿರಿಗೆ ತಳ್ಳುವ ಅತ್ಯಂತ ನೀಚ ಅಜೆಂಡಾ ಇವರದ್ದಾಗಿದೆ.</p>
<p>ಇದನ್ನು ಸಮಾಜ ಬೇಗ ಅರ್ಥಮಾಡಿಕೊಂಡು ಇವರನ್ನು ತಿಪ್ಪೆಗೆ ಎಸೆಯದಿದ್ದರೆ ಸಮಾಜವು ಶಾಶ್ವತ ಗುಲಾಮಗಿರಿಯ ಕಡೆಗೆ ನಡೆಯುತ್ತದೆ. ಇದರ ಭಾಗವಾಗಿಯೆ ಬಿಜೆಪಿಯವರು ಧರ್ಮವನ್ನು ಬಂಡವಾಳ ಮಾಡಿಕೊಂಡು ಅದಕ್ಕೆ ಸಂಬಂಧಿಸಿದ ಕಾಯ್ದೆಗಳನ್ನು ರೂಪಿಸುತ್ತಿದ್ದಾರೆ.</p>
<p>ಸಮಾಜವು ಕೂಡಲೆ ಎದ್ದು ನಿಂತು ಇದನ್ನು ವಿರೋಧಿಸಬೇಕು. ಬಿಜೆಪಿಯು ಬಹುಸಂಖ್ಯಾತ ಹಿಂದೂ ಸಮಾಜದ ಮೇಲೆ ಸಾರಿರುವ ಈ ಸಮರವನ್ನು ಸೋಲಿಸಿ ನಾವು ಜಯಗಳಿಸಬೇಕಾದರೆ, ಯುವಕ ಯುವತಿಯರಾದಿಯಾಗಿ ಪ್ರತಿಯೊಬ್ಬರೂ ಪ್ರಜ್ಞಾವಂತರಾಗಬೇಕು. ಸಾಧ್ಯವಾದ ರೀತಿಗಳಲ್ಲಿ ಪ್ರತಿಭಟಿಸಬೇಕು.</p>
<p><img loading="lazy" decoding="async" class="aligncenter size-full wp-image-70924" src="https://www.justkannada.in/wp-content/uploads/2021/07/siddu-4.jpg" alt="" width="1280" height="720" /></p>
<p>ಬಿಜೆಪಿಯೆಂಬ ಧಾರ್ಮಿಕ ಬಂಡವಾಳವಾದಿ ಹಾಗೂ ಕಾರ್ಪೊರೇಟ್ ಬಂಡವಾಳಿಗರ ಪಕ್ಷವನ್ನು ತಿರಸ್ಕರಿಸಿ ನಾಡು ಮತ್ತು ದೇಶವನ್ನು ಉಳಿಸಬೇಕು. ಹಾಗೆ ಮಾಡದೆ ಹೋದರೆ ಗುಲಾಮಗಿರಿಗೆ ಕೊರಳೊಡ್ಡಬೇಕಾಗುತ್ತದೆ. ಒಂದು ವೇಳೆ ಹಾಗೆ ಕೊರಳೊಡ್ಡಿದ್ದೆ ಆದರೆ ಶರಣರು, ದಾಸರು, ಸಂತರು, ಧಾರ್ಮಿಕ ಸುಧಾರಕರು, ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ಕರ್ತೃಗಳು, ದಾರ್ಶನಿಕರು ಮುಂತಾದ ಮನುಷ್ಯ ಪರ ಹೋರಾಟಗಾರರ ಆಶಯಗಳಿಗೆ ನಾವು ದ್ರೋಹ ಬಗೆದಂತಾಗುತ್ತದೆ.</p>
<p>ಕಳೆದ ಒಂದು ಸಾವಿರ ವರ್ಷಗಳಿಂದ ನಮ್ಮ ಹಿರಿಯರು ನಡೆಸಿದ ಹೋರಾಟದಿಂದಾಗಿ ಈ ಮನುವಾದಿ ವಿಷವೃಕ್ಷದ ಬೇರುಗಳು ದುರ್ಬಲವಾಗಿದ್ದವು, ಶಿಥಿಲಾವಸ್ಥೆಯ ಕಡೆಗೆ ತಲುಪಿದ್ದವು.</p>
<p>ಆದರೆ ಬಿಜೆಪಿ ಸರ್ಕಾರ ದೇವಸ್ಥಾನಗಳನ್ನು ಸ್ವಾಯತ್ತ ಮಾಡುವುದರ ಮೂಲಕ ಒಣಗಿ ಹೋಗುತ್ತಿದ್ದ ಬೇರುಗಳಿಗೆ ಟಾನಿಕ್ಕು ನೀಡಲು ಹೊರಟಿದೆ. ಮನುವಾದಿ ಸಿದ್ಧಾಂತ ಮತ್ತೆ ಜೀವ ಪಡೆದದ್ದೆ ಆದರೆ ಅದು ರಾಕ್ಷಸ ರೂಪಿಯಾಗುತ್ತದೆ.</p>
<p>ಆದ್ದರಿಂದ ಬಿಜೆಪಿಯ ಈ ಮಾನವ ವಿರೋಧಿ ಕೃತ್ಯವನ್ನು ಪಕ್ಷಾತೀತವಾಗಿ, ಪಂಥಾತೀತವಾಗಿ ಎಲ್ಲರೂ ವಿರೋಧಿಸಿ ನಮ್ಮ ಹಿರಿಯರ ಆಶಯಗಳನ್ನು ಜೀವಂತವಾಗಿ ಉಳಿಸಬೇಕೆಂದು ವಿನಂತಿಸುತ್ತೇನೆ.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>key words : Bangalore-Karnataka-bjp-government-temple-congress-siddu-oppose</p>
<p>&nbsp;</p>
<p>The post <a href="https://www.justkannada.in/bangalore-karnataka-bjp-government-temple-congress-siddu-oppose/">ಧಾರ್ಮಿಕ ಮಾಫಿಯಾ ಇಂದು ಶೇ. ೮೦ ರಷ್ಟಿರುವ ಹಿಂದೂಗಳ ಆಸ್ತಿ ಕಬಳಿಸಿ, 2-3 ಪರ್ಸೆಂಟ್ ಜನರ ಅಧೀನಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸಿದೆ : ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೇಂದ್ರದ &#8216;ಅಚ್ಛೇದಿನ್ &#8216; ಘೋಷಣೆ : ಸದನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ &#8216;ಛೇಡಿಸಿದ್ದು&#8217; ಹೀಗೆ..!</title>
		<link>https://www.justkannada.in/karnataka-congress-siddu-opposition-leader-bangalore-bjp/</link>
		
		<dc:creator><![CDATA[JK Desk]]></dc:creator>
		<pubDate>Wed, 15 Sep 2021 14:35:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[BJP]]></category>
		<category><![CDATA[congress]]></category>
		<category><![CDATA[karnataka]]></category>
		<category><![CDATA[Opposition leader]]></category>
		<category><![CDATA[siddu]]></category>
		<guid isPermaLink="false">https://www.justkannada.in/?p=75726</guid>

					<description><![CDATA[<p>&#160; ಬೆಂಗಳೂರು, ಸೆ.15, 2021 : (www.justkannada.in news) : ಅಗತ್ಯ ವಸ್ತುಗಳ ಬೆಲೆ ಇಂದು ಗಗನ ಮುಟ್ಟಿದೆ. ಗ್ಯಾಸ್, ಪೆಟ್ರೋಲ್, ಡೀಸೆಲ್, ದಿನಸಿ, ಔಷಧ, ಪ್ರಯಾಣ ದರ ಹೀಗೆ ಎಲ್ಲಾ ಜೀವನಾವಶ್ಯಕ ವಸ್ತುಗಳ, ಸೇವೆಗಳ ಬೆಲೆ ಮಿತಿಮೀರಿದೆ. ಇದರಿಂದ ಬಡ, ಮಧ್ಯಮ ವರ್ಗದ ಜನರು ಜೀವನ ಮಾಡಲು ಕಷ್ಟಪಡಬೇಕಾಗಿದೆ. ಇದನ್ನೇ ನೀವು ಅಚ್ಚೇದಿನ್ ಎಂದು ಕರೆಯುತ್ತೀರ..? ವಿಧಾನಸಭಾ ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆಯೇರಿಕೆ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು [&#8230;]</p>
<p>The post <a href="https://www.justkannada.in/karnataka-congress-siddu-opposition-leader-bangalore-bjp/">ಕೇಂದ್ರದ &#8216;ಅಚ್ಛೇದಿನ್ &#8216; ಘೋಷಣೆ : ಸದನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ &#8216;ಛೇಡಿಸಿದ್ದು&#8217; ಹೀಗೆ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ಸೆ.15, 2021 : (www.justkannada.in news) : ಅಗತ್ಯ ವಸ್ತುಗಳ ಬೆಲೆ ಇಂದು ಗಗನ ಮುಟ್ಟಿದೆ. ಗ್ಯಾಸ್, ಪೆಟ್ರೋಲ್, ಡೀಸೆಲ್, ದಿನಸಿ, ಔಷಧ, ಪ್ರಯಾಣ ದರ ಹೀಗೆ ಎಲ್ಲಾ ಜೀವನಾವಶ್ಯಕ ವಸ್ತುಗಳ, ಸೇವೆಗಳ ಬೆಲೆ ಮಿತಿಮೀರಿದೆ. ಇದರಿಂದ ಬಡ, ಮಧ್ಯಮ ವರ್ಗದ ಜನರು ಜೀವನ ಮಾಡಲು ಕಷ್ಟಪಡಬೇಕಾಗಿದೆ. ಇದನ್ನೇ ನೀವು ಅಚ್ಚೇದಿನ್ ಎಂದು ಕರೆಯುತ್ತೀರ..?</p>
<p>ವಿಧಾನಸಭಾ ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆಯೇರಿಕೆ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸುದೀರ್ಘವಾಗಿ ಮಾತನಾಡಿ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಬಿಸಿ ಮುಟ್ಟಿಸಿದರು.</p>
<p>ಪೂರ್ಣ ಸಿದ್ಧತೆಯೊಂದಿಗೆ ಇಂದಿನ ಅಧಿವೇಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಈ ಹಿಂದಿನ ಯುಪಿಎ ಸರಕಾರದಲ್ಲಿನ ಆಡಲಿತ ವೈಖರಿ, ಜತೆಗೆ ಆ ವೇಳೆ ಪ್ರತಿ ಪಕ್ಷದಲ್ಲಿನ ಬಿಜೆಪಿ ಹಾಗೂ ಮುಖಂಡರ ವರ್ತನೆ&#8230;ಹೀಗೆ ಪ್ರತಿಯೊಂದನ್ನು ಎಳೆ ಎಳೆಯಾಗಿ ಸದನದಲ್ಲಿ ಬಿಡಿಸಿಟ್ಟರು. ತಮ್ಮ ಪ್ರತಿಯೊಂದು ಮಾತಿಗೂ ಪೂರಕವಾದ ಅಂಶಗಳನ್ನು ಉಲ್ಲೇಖಿಸಿದ್ದು ವಿಶೇಷ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಇಂದಿನ ಭಾಷಣದ ವಿವರ ಹೀಗಿದೆ&#8230;</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕೊರೊನಾ ಸಾಂಕ್ರಾಮಿಕ ತಡೆ, ಬೆಲೆ ನಿಯಂತ್ರಣ ಮುಂತಾದ ಗಂಭೀರ ವಿಚಾರಗಳ ಬಗ್ಗೆ ಚರ್ಚಿಸಿ, ಪರಿಹಾರ ಕಂಡುಕೊಳ್ಳಲು ಆಸಕ್ತಿಯಾಗಲೀ, ಪ್ರತಿಪಕ್ಷಗಳ ಮಾತು ಕೇಳುವ ಸೌಜನ್ಯವಾಗಲೀ ರಾಜ್ಯ ಸರ್ಕಾರಕ್ಕೆ ಇಲ್ಲ. ಸದನ ಕರೆಯಲು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿರುವುದು ಖಂಡನೀಯ. ಆರು ತಿಂಗಳಿಗೊಮ್ಮೆ ಸದನ ಕರೆಯಲು ಅವಕಾಶ ನೀಡಿರುವ ಕಾನೂನನ್ನು ಬಳಕೆ ಮಾಡಿಕೊಂಡು ಆರು ತಿಂಗಳಿಗೆ ಒಂದೇ ಬಾರಿ ಸದನ ನಡೆಸೋದು ಸರಿಯಲ್ಲ. ಕನಿಷ್ಟ 60 ದಿನ ಸದನ ನಡೆಸಬೇಕು ಎಂದು ನಾವೇ ಕಾನೂನು ಮಾಡಿದ್ದೇವೆ, ಆ ಕಾನೂನಿಗೆ ಸರ್ಕಾರ ಕವಡೆ ಕಾಸಿನ ಬೆಲೆ ಕೊಡುತ್ತಿಲ್ಲ.</p>
<p>ಕೊರೊನಾದಿಂದಾಗಿ ಸದನ ನಡೆಸಲು ಸರಿಯಾಗಿ ಸಮಯ ಸಿಗುತ್ತಿಲ್ಲ ಎಂಬ ಕುಂಟು ನೆಪವನ್ನು ನಾನು ಒಪ್ಪಲ್ಲ. ಈ ವರ್ಷ ಸದನ ನಡೆದಿರೋದು 20 ದಿನ ಮಾತ್ರ, ಈಗ 10 ದಿನ ಸದನ ನಡೆಸಲು ನೋಟಿಸ್ ನೀಡಿದ್ದೀರಿ, ಇದನ್ನು ಕನಿಷ್ಟ ಇಪ್ಪತ್ತು ದಿನಕ್ಕೆ ಹೆಚ್ಚಿಸಬೇಕು ಎಂದು ಬ್ಯುಸಿನೆಸ್ ಅಡ್ವೈಸರಿ ಕಮೀಟಿಗೆ ಸಲಹೆ ನೀಡಿದ್ದೇನೆ. ಕೇವಲ ಹತ್ತು ದಿನಗಳಲ್ಲಿ ಯಾವ ಪ್ರಮುಖ ವಿಚಾರಗಳ ಬಗ್ಗೆಯೂ ವಿಸ್ತೃತ ಚರ್ಚೆ ನಡೆಸಲು ಸಾಧ್ಯವಿಲ್ಲ ಎಂಬುದು ನನ್ನ ಅನಿಸಿಕೆ.</p>
<p>12-11-1973ರಲ್ಲಿ ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಪೆಟ್ರೋಲ್ ಬೆಲೆ ಕೇವಲ 7 ಪೈಸೆ ಹೆಚ್ಚಾಗಿದ್ದಕ್ಕೆ ಬಿಜೆಪಿ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ ಅವರು ಸಂಸತ್ತಿಗೆ ಎತ್ತಿನಗಾಡಿಯಲ್ಲಿ ಬಂದಿದ್ದರು. ಈ ಬೆಲೆಯೇರಿಕೆಯನ್ನು ಅವರು ಕ್ರಿಮಿನಲ್ ಲೂಟ್ ಎಂದಿದ್ದರು. ನಾನೀಗ ಅದಕ್ಕಿಂತ ಕೀಳು ಪದ ಬಳಕೆ ಮಾಡದೆ, ಅದೇ ಪದವನ್ನು ಬಳಕೆ ಮಾಡುತ್ತೇನೆ. ಈಗಿನ ಬಿಜೆಪಿ ಸರ್ಕಾರವೂ &#8220;ಕ್ರಿಮಿನಲ್ ಲೂಟಿ&#8221; ಮಾಡುತ್ತಿದೆ.</p>
<p><img loading="lazy" decoding="async" class="aligncenter size-large wp-image-69361" src="https://www.justkannada.in/wp-content/uploads/2021/07/siddu-1-1024x569.jpg" alt="" width="696" height="387" /></p>
<p>ಗ್ಯಾಸ್, ಪೆಟ್ರೋಲ್ ಬೆಲೆ ಏರಿಕೆಯಾಗಿದ್ದಕ್ಕೆ ತೈಲ ಕಂಪನಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ಸ್ಥಿತಿಗೆ ಅನುಗುಣವಾಗಿ ಬೆಲೆ ಏರಿಕೆ ಮಾಡುತ್ತಿವೆ, ಬೆಲೆ ನಿಯಂತ್ರಣ ನಮ್ಮ ಕೈಲಿ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳುತ್ತಾರೆ. ಬೆಲೆಯೇರಿಕೆಗೆ ಉತ್ತರ ನೀಡಬೇಕಾದವರು ತೈಲ ಕಂಪನಿಗಳ ಎಂ.ಡಿ ಗಳೋ ಅಥವಾ ಕೇಂದ್ರ ಸರ್ಕಾರವೋ? ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಬಿಜೆಪಿಯವರು ಪೆಟ್ರೋಲ್ ಬೆಲೆ ಏರಿಕೆಯಾದಾಗ ಪ್ರತಿಭಟನೆ ಮಾಡುತ್ತಿದ್ದುದ್ದು ತೈಲ ಕಂಪನಿಯ ವಿರುದ್ಧವೋ ಅಥವಾ ಕೇಂದ್ರ ಸರ್ಕಾರದ ವಿರುದ್ಧವೋ ಎಂದು ನೆನಪಿಸಿಕೊಳ್ಳಲಿ.</p>
<p>ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಬೇಕಾಬಿಟ್ಟಿ ಏರಿಕೆ ಮಾಡಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಡೀಸೆಲ್ ಮೇಲೆ ರೂ.3.45 ತೆರಿಗೆ ಇತ್ತು, ಇಂದು ರೂ.31.84 ಆಗಿದೆ. ಅಂದರೆ ಸುಮಾರು ಒಂಭತ್ತು ಪಟ್ಟು ಹೆಚ್ಚಾಗಿದೆ.<br />
ಅದೇ ರೀತಿ ಪೆಟ್ರೋಲ್ ಮೇಲೆ ರೂ.9.21 ಅಬಕಾರಿ ಸುಂಕ ಇತ್ತು, ಇಂದು ರೂ.32.98 ಆಗಿದೆ.‌ ಅಂದರೆ ಮೂರು ಪಟ್ಟು ಹೆಚ್ಚಾಗಿದೆ. ಇದರಿಂದ ಡೀಸೆಲ್ ಪೆಟ್ರೋಲ್ ಬೆಲೆ ಹೆಚ್ಚಾಗಿ, ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿದೆ. ಇದರಿಂದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ.<br />
ಮನಮೋಹನ್ ಸಿಂಗ್ ಅವರ ನೇತೃತ್ವದ ಯು.ಪಿ.ಎ ಸರ್ಕಾರದ ಕಾಲದಲ್ಲಿ ಡೀಸೆಲ್ ಬೆಲೆ ಗರಿಷ್ಠ ರೂ.47 ಇತ್ತು, ಈಗ ರೂ‌.95 ಆಗಿದೆ ಮತ್ತು ಪೆಟ್ರೋಲ್ ಬೆಲೆ ರೂ‌. 74 ಇತ್ತು, ಇಂದು ರೂ. 106 ಆಗಿದೆ.</p>
<p>2012-13 ರಲ್ಲಿ ಒಂದು ಬ್ಯಾರಲ್ ಕಚ್ಚಾತೈಲ ಬೆಲೆ 120 ಡಾಲರ್ ಇತ್ತು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಅದು 105 ಡಾಲರ್ ಗೆ ಇಳಿಕೆ ಕಂಡಿತು, ಈಗ ಆದರೆ ಅದರಿಂದ ಜನತೆಗೆ ಯಾವ ಪ್ರಯೋಜನವೂ ಆಗಿಲ್ಲ.</p>
<p>ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗಲು ಮುಖ್ಯ ಕಾರಣ ಕೇಂದ್ರ ಸರ್ಕಾರ ಹೆಚ್ಚುವರಿ ಅಬಕಾರಿ ಸುಂಕವನ್ನು ಹೆಚ್ಚಿಸಿದ್ದು. ಮನಮೋಹನಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಪೆಟ್ರೋಲ್ ಮೇಲೆ ಕೇಂದ್ರ ವಿಧಿಸುತ್ತಿದ್ದ ತೆರಿಗೆ[ ಅಡಿಷನಲ್ ಎಕ್ಸೈಜ್ ಡ್ಯೂಟಿ] 9.21 ರೂಪಾಯಿ, ಡೀಸೆಲ್ ಮೇಲೆ 3.45 ರೂಪಾಯಿ. ಈಗ ಪೆಟ್ರೋಲ್ ಮೇಲೆ 32.98 ರೂಪಾಯಿ ಮತ್ತು ಡೀಸೆಲ್ ಮೇಲೆ 31.84 ರೂಪಾಯಿ ಆಗಿದೆ.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಆಯಿಲ್ ಬಾಂಡ್ ಗಳ ಪರಿಕಲ್ಪನೆ ಪ್ರಾರಂಭಿಸಿದ್ದೆ ವಾಜಪೇಯಿಯವರ ಸರ್ಕಾರ. ಆನಂತರ ಮನಮೋಹನ ಸಿಂಗ್ ಸರ್ಕಾರ ಈ ಯೋಜನೆಯನ್ನು ಮುಂದುವರೆಸಿತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಾದಾಗ ಅದರ ಹೊರೆಯನ್ನು ಸಾರ್ವಜನಿಕರಿಗೆ ವರ್ಗಾಯಿಸದಂತೆ ಮಾಡಲು ಹಾಗೂ ಸರ್ಕಾರಿ ಸ್ವಾಮ್ಯದ ಆಯಿಲ್ ಕಂಪೆನಿಗಳು ನಷ್ಟ ವಾಗದಂತೆ ನೋಡಿಕೊಳ್ಳಲು ಈ ಆಯಿಲ್ ಬಾಂಡಗಳನ್ನು ಖರೀದಿಸಲಾಯಿತು. ಇದರಿಂದಾಗಿ ಮನಮೋಹನಸಿಂಗರ ಕಾಲದಲ್ಲಿ ಕಚ್ಛ ತೈಲಬೆಲೆ 125- 140 ಡಾಲರ್‍ಗೆ ಏರಿಕೆಯಾದರೂ ಸಹ ಪೆಟ್ರೋಲ್ ಬೆಲೆ 75 ರೂಪಾಯಿ ಮೀರಿರಲಿಲ್ಲ. ಡೀಸೆಲ್ ಬೆಲೆ 47 ರೂಪಾಯಿ ದಾಟಿರಲಿಲ್ಲ.</p>
<p>ಈಗ 45- 65 ಡಾಲರ್ ಇದ್ದಾಗಲೂ ಪೆಟ್ರೋಲ್ ಬೆಲೆ 105 ರೂ ಆಗಿದೆ. ಡೀಸೆಲ್ ಬೆಲೆ 100 ರೂ ಆಗಿದೆ. ಇದಕ್ಕೆ ಕಾರಣ ಕೇಂದ್ರ, ರಾಜ್ಯಗಳೆರಡೂ ಸೇರಿ 65 ರೂಪಾಯಿಗಳಷ್ಟು ತೆರಿಗೆ ವಸೂಲಿ ಮಾಡುತ್ತಿವೆ. ತೈಲ ಬಾಂಡ್ ಗಳನ್ನು ಖರೀದಿಸಿದ ಕಾರಣಕ್ಕಾಗಿಯೆ ಜನರಿಗೆ ಹೆಚ್ಚು ಹೊರೆ ಬೀಳಲಿಲ್ಲ ಅದರಲ್ಲೂ ಡೀಸೆಲ್ ದರಗಳು ಕಡಿಮೆ ಇದ್ದಷ್ಟು ದೇಶದ ಆರ್ಥಿಕ ಪ್ರಗತಿ ವೇಗವಾಗಿರುತ್ತದೆ. ಯಾಕೆಂದರೆ ಎಲ್ಲ ಉತ್ಪಾದನೆಗಳು, ಸಾಗಣೆಗಳು ಡೀಸೆಲ್ಲನ್ನು ಅವಲಂಬಿಸಿರುತ್ತವೆ. ಈ ಸಾಮಾನ್ಯ ಜ್ಞಾನ ಇದ್ದ ಕಾರಣಕ್ಕೆ ಮನಮೋಹನಸಿಂಗರು ಡೀಸೆಲ್ ಬೆಲೆಯನ್ನು 47 ರೂಪಾಯಿಗಳ ಒಳಗೆ ಇಟ್ಟಿದ್ದರು.</p>
<p>ಮನಮೋಹನಸಿಂಗರು ತೈಲ ಬಾಂಡುಗಳನ್ನು ಖರೀದಿಸಿದ ಕಾರಣಕ್ಕಾಗಿಯೆ ಕೇಂದ್ರ ಸರ್ಕಾರದ ಅಧೀನದಲ್ಲಿಯ ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಮುಂತಾದ ಕಂಪೆನಿಗಳೂ ನಷ್ಟ ಅನುಭವಿಸಲಿಲ್ಲ. ಬದಲಾಗಿ ನವರತ್ನ ಕಂಪೆನಿಗಳಾಗಿ ಬೆಳೆದವು. ಒಂದೊಂದು ಕಂಪೆನಿಯೂ ಲಕ್ಷಾಂತರ ಕೋಟಿಗಳನ್ನು ತೆರಿಗೆ, ಡಿವಿಡೆಂಟುಗಳ ರೀತಿಯಲ್ಲಿ ಸರ್ಕಾರಕ್ಕೆ ಪಾವತಿ ಮಾಡಿವೆ.<br />
ಈಗ ಈ ಕಂಪೆನಿಗಳನ್ನೆಲ್ಲ ಅದಾನಿ, ಅಂಬಾನಿ, ಸೌದಿ ಆರಾಮ್ಕೊ ಮುಂತಾದ ಕಂಪೆನಿಗಳಿಗೆ ಕೇಂದ್ರ ಸರ್ಕಾರ ಮಾರಲು ಹೊರಟಿದೆ. ಯು ಪಿ ಎ ಸರ್ಕಾರ ಅಧಿಕಾರದಲ್ಲಿದ್ದಾಗ 9-9-2012 ರಲ್ಲಿ ರೂ.5,762 ಕೋಟಿಗಳನ್ನು ತೀರಿಸಿತ್ತು. ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 7-3-2015 ಮತ್ತು 23-3-2015ರಲ್ಲಿ ಕೇವಲ ರೂ.3,500 ಬಾಂಡ್ ಮಾತ್ರ ಮೆಚ್ಯೂರ್ ಆಗಿತ್ತು. ಅದನ್ನು ಮಾತ್ರ ತೀರಿಸಲಾಗಿತ್ತು. ಇದರ ಜೊತೆಗೆ ಪ್ರತಿ ವರ್ಷ ಬಡ್ಡಿ ತೀರಿಸಲಾಗುತ್ತಿದೆ. ಪ್ರತಿ ವರ್ಷ ತೀರಿಸಬೇಕಾದ ಬಡ್ಡಿ ರೂ.9989.96 ಕೋಟಿ ಅಂದರೆ 10 ಸಾವಿರ ಕೋಟಿಗಳು.<br />
[ಕೇಂದ್ರ ಸರ್ಕಾರದ ದಾಖಲೆಗಳಲ್ಲಿನ ಮಾಹಿತಿ ಇದು. ]</p>
<p><img loading="lazy" decoding="async" class="aligncenter size-full wp-image-69211" src="https://www.justkannada.in/wp-content/uploads/2021/07/siddu.jpg" alt="" width="400" height="300" /></p>
<p>ಈ ವರ್ಷ ತೀರಿಸಬೇಕಾದ ಅಸಲು 10 ಸಾವಿರ ಕೋಟಿ. 2022 ರಲ್ಲಿ ಅಸಲು ಪಾವತಿಸುವಂತಿಲ್ಲ. 2023 ರಲ್ಲಿ 26150 ಕೋಟಿ ತೀರಿಸಬೇಕು. 2024 ರಲ್ಲಿ ಚುನಾವಣೆ ಬರುತ್ತದೆ. ಆಗ ಹೊಸ ಸರ್ಕಾರ ಬರುತ್ತದೆ. ಹೊಸ ಸರ್ಕಾರ ತೀರಿಸಬೇಕಾದ ಮೊತ್ತ 37306 ಕೋಟಿ. ಅಂದರೆ ಮೋದಿಯವರ ಸರ್ಕಾರ 2014 ರಿಂದ 2024 ರ ವರೆಗೆ ತೀರಿಸುವ ಒಟ್ಟಾರೆ ಅಸಲು ಮೊತ್ತ 40050 ಕೋಟಿ ಮಾತ್ರ. ಬಡ್ಡಿ ಮೊತ್ತ ಸುಮಾರು 70 ಸಾವಿರ ಕೋಟಿ. ಎರಡೂ ಸೇರಿದರೆ 1 ಲಕ್ಷದ 10 ಸಾವಿರದ 50 ಕೋಟಿ ಮಾತ್ರ. ಅದೂ 2024 ರ ಮಾರ್ಚ್‍ವರೆಗೆ.</p>
<p>ಆದರೆ ಕೇಂದ್ರ ಸರ್ಕಾರ ಇದುವರೆಗೆ ಪೆಟ್ರೋಲ್, ಡೀಸೆಲ್‍ಗಳಿಂದ ಜನರಿಂದ ದೋಚಿಕೊಂಡಿರುವ ತೆರಿಗೆ ಹಣ ಸುಮಾರು 20 ಲಕ್ಷ ಕೋಟಿ. 2020 ರಲ್ಲೆ 3.45 ಲಕ್ಷ ಕೋಟಿ ಹಣವನ್ನು ಸಂಗ್ರಹಿಸಲಾಗಿದೆ. ಇದು ಯಾವ ಲೆಕ್ಕ?</p>
<p>ಜನರಿಗೆ ಯಾಕೆ ಸುಳ್ಳು ಹೇಳುತ್ತಿದ್ದೀರಿ?</p>
<p>ಎರಡು ಕಾರಣಕ್ಕೆ ರಾಜ್ಯದಲ್ಲಿ ಬೆಲೆ ಏರಿಕೆಯಾಗಿದೆ. ಒಂದು, ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ಏರಿಕೆಯಾದ ಕಾರಣ ವಸ್ತುಗಳ ಬೆಲೆ ಏರಿಕೆಯಾಗಿದೆ. ಅದರಲ್ಲೂ ಡೀಸೆಲ್ ಬೆಲೆ ಏರಿಕೆಯಾದರೆ ನಮ್ಮ ಮನೆಗೆ ಬರುವ ಪ್ರತಿ ಕಾಳು ಅಕ್ಕಿ, ಬೇಳೆಗಳ ಬೆಲೆ ಹೆಚ್ಚಾಗುತ್ತವೆ. ವಸ್ತುಗಳ ಉತ್ಪಾದನಾ ವೆಚ್ಚ ಮತ್ತು ಸಾಗಣೆಯ ವೆಚ್ಚಗಳು ಹೆಚ್ಚುತ್ತವೆ.<br />
ಈ ಸತ್ಯ ತಿಳಿದಿದ್ದ ಕಾರಣಕ್ಕಾಗಿಯೆ ಮನಮೋಹನ ಸಿಂಗ್ ಅವರು ಡೀಸೆಲ್ ಬೆಲೆಯನ್ನು 46 ರೂಪಾಯಿಗಳ ಒಳಗೆ ಇರಿಸಿದ್ದರು. ಪೆಟ್ರೋಲ್ ಮೇಲೆ 9.21 ರೂಗಳಷ್ಟು ತೆರಿಗೆ ವಿಧಿಸಿದರೆ, ಡೀಸೆಲ್ ಮೇಲೆ ಕೇವಲ 3.45 ರೂಗಳಷ್ಟು ಅಡಿಷನಲ್ ಎಕ್ಸೈಜ್ ಡ್ಯೂಟಿ ವಿಧಿಸಿದ್ದರು.</p>
<p><img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ನಮ್ಮ ರಾಜ್ಯದಲ್ಲಿ ಪೆಟ್ರೋಲ್ ದರ ರೂ.105/- ದಾಟಿದೆ.<br />
2012 ರಲ್ಲಿ ಕಚ್ಚಾ ತೈಲದ ಬೆಲೆ 125.45 ಡಾಲರ್ ಇದ್ದಾಗ ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.41.91/-, ಪ್ರತಿ ಲೀಟರ್ ಪೆಟ್ರೋಲ್ ರೂ.78.57/- ಇತ್ತು. 2014 ರಲ್ಲಿ ಮೋದಿಯವರು ಅಧಿಕಾರ ವಹಿಸಿಕೊಂಡ ನಂತರ ಪ್ರತಿ ಬ್ಯಾರಲ್ ಕಚ್ಚಾ ತೈಲಕ್ಕೆ 105.52 ಡಾಲರ್‍ಗೆ ಇಳಿಯಿತು. ಆಗ ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.55.48/-, ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.80.11/- ಮಾರಾಟ ಮಾಡಿದರು.<br />
2017 ರಲ್ಲಿ ಪ್ರತಿ ಬ್ಯಾರಲ್ ಕಚ್ಚಾ ತೈಲದ ಬೆಲೆ 47.56 ಡಾಲರ್‍ಗೆ ಇಳಿಯಿತು.<br />
ಆದರೆ ನರೇಂದ್ರ ಮೋದಿಯವರು ಕೇಂದ್ರ ಸರ್ಕಾರ ವಿಧಿಸುವ ಅಡಿಷನಲ್ ಎಕ್ಸೈಜ್ ಡ್ಯೂಟಿಯನ್ನು ಡೀಸೆಲ್ ಮೇಲೆ ರೂ.15.83/- ಏರಿಸಿದರು, ಪೆಟ್ರೋಲ್ ಮೇಲೆ ರೂ.19.98/- ಗೆ ಏರಿಸಿದರು.<br />
ಅದಕ್ಕೂ ಮೊದಲು 2013 ರಲ್ಲಿ ಡೀಸೆಲ್ ಮೇಲೆ ರೂ.3.45/-, ಪೆಟ್ರೋಲ್ ಮೇಲೆ ರೂ.9.21/- ಗಳನ್ನು ಅಡಿಷನಲ್ ಎಕ್ಸೈಜ್ ಡ್ಯೂಟಿ ಎಂದು ಸಂಗ್ರಹ ಮಾಡಲಾಗುತ್ತಿತ್ತು.<br />
2017 ರಲ್ಲಿ ಅಡಿಷನಲ್ ಎಕ್ಸೈಜ್ ಡ್ಯೂಟಿಯನ್ನು ಹೆಚ್ಚು ಮಾಡಿದ ಕೂಡಲೇ ಮಾರುಕಟ್ಟೆಯಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.54.78/-, ಪೆಟ್ರೋಲ್ ಬೆಲೆ ರೂ.76.55/- ಏರಿಕೆಯಾಯಿತು.<br />
ಆದರೆ ದಿನಾಂಕ: 01-06-2020 ರಲ್ಲಿ ಕೇಂದ್ರವು ತನ್ನ ಅಡಿಷನಲ್ ಎಕ್ಸೈಜ್ ಡ್ಯೂಟಿಯನ್ನು ಡೀಸೆಲ್ ಮೇಲೆ ರೂ.31.83/-, ಪೆಟ್ರೋಲ್ ಮೇಲೆ ರೂ.32.98/- ಗಳನ್ನು ವಿಧಿಸಲಾರಂಭಿಸಿತು.<br />
ಅದರ ಪರಿಣಾಮವಾಗಿ ಇಂದು ರಾಜ್ಯದಲ್ಲಿ ಪೆಟ್ರೋಲ್ ಬೆಲೆ ರೂ.105- ಗಳಿಗೆ ಮತ್ತು ಡೀಸೆಲ್ ಬೆಲೆ ರೂ.96.61- ಗಳಿಗೆ ಏರಿಕೆಯಾಗಿದೆ.</p>
<p>ಇದೇ ಮಾರ್ಚ್‍ನಲ್ಲಿ ನಾನು ಬಜೆಟ್ ಮೇಲೆ ಮಾತನಾಡಿದಾಗ ಡೀಸೆಲ್ ಬೆಲೆ 89 ರೂಪಾಯಿ ಇತ್ತು. ಈಗ 97 ರೂ ಆಗಿದೆ. ಅಂದರೆ ಪ್ರತಿ ಲೀಟರ್ ಮೇಲೆ 8 ರೂ ಜಾಸ್ತಿಯಾಗಿದೆ. ಜನವರಿಯಲ್ಲಿ 81 ರೂ ಗಳಿದ್ದವು. ಜನವರಿಗೆ ಹೋಲಿಸಿದರೆ ಪ್ರತಿ ಲೀಟರ್ ದರ 15 ರೂಪಾಯಿ ಜಾಸ್ತಿಯಾಗಿವೆ. ಪೆಟ್ರೋಲ್ ವಿಚಾರಕ್ಕೆ ಬಂದರೆ ಜನವರಿಯಲ್ಲಿ 86 ರೂಪಾಯಿ ಇತ್ತು. ಈಗ 105 ರೂ ದಾಟಿದೆ. ಅಂದರೆ ಒಂದು ಲೀಟರ್ ಮೇಲೆ 20 ರೂಪಾಯಿ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಮಾರ್ಚಿನಲ್ಲಿ 96 ರೂ ಇತ್ತು. ಮಾರ್ಚ್ ನಿಂದ ಈಚೆಗೆ 11 ರೂಪಾಯಿ ಜಾಸ್ತಿಯಾಗಿದೆ.</p>
<p>ಕಚ್ಚಾತೈಲ ಬೆಲೆ ಆಧರಿಸಿ ಪೆಟ್ರೋಲ್ ನ ಇಂದಿನ ಮೂಲ ಬೆಲೆ ರೂ. 38, ರಾಜ್ಯ ಹಾಗೂ ಕೇಂದ್ರ ಸರ್ಕಾರದ ತೆರಿಗೆ ಒಟ್ಟು ರೂ.67. ಹೀಗಾಗಿ ಪೆಟ್ರೋಲ್ ಬೆಲೆ ಲೀಟರ್ ಗೆ 105 ದಾಟಿದೆ. ಇದಕ್ಕೆ ಅಂತಾರಾಷ್ಟ್ರೀಯ ಮಾರುಕಟ್ಟೆ, ತಾಲಿಬಾನ್ ಕಾರಣ ಅಂದರೆ ಹೇಗೆ?</p>
<p>ಗ್ಯಾಸ್ ಬೆಲೆ ಹಿಂದೆ ರೂ. 414 ಇವತ್ತು 980 ಆಗಿದೆ. ಸಬ್ಸಿಡಿ ಹಣವನ್ನು ನಿಲ್ಲಿಸಲಾಗಿದೆ. ಇದರಿಂದ ಸಾಮಾನ್ಯ ಜನ ಗ್ಯಾಸ್ ಖರೀದಿಸಲು ಸಾಧ್ಯವಾಗುತ್ತಿಲ್ಲ. ಉಜ್ವಲ ಯೋಜನೆಯಡಿ ಗ್ಯಾಸ್ ಬಳಕೆ ಮಾಡುತ್ತಿದ್ದ 36% ಜನ ಕಟ್ಟಿಗೆ ಒಲೆ ಬಳಕೆಗೆ ಮರಳಿದ್ದಾರೆ. ದೇಶದಲ್ಲಿ ಎಂಟು ಕೋಟಿ ಉಜ್ವಲ ಯೋಜನೆ ಬಳಕೆದಾರರು ಸೇರಿ ಒಟ್ಟು 28 ಕೋಟಿ ಗ್ಯಾಸ್ ಬಳಕೆದಾರರು ಇದ್ದಾರೆ, ನಮ್ಮ ರಾಜ್ಯದಲ್ಲಿ 1 ಕೋಟಿ 78 ಲಕ್ಷ ಗ್ಯಾಸ್ ಬಳಕೆದಾರರಿದ್ದಾರೆ.</p>
<p>ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಕಡಿತ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವಿಧಾನಮಂಡಲದ ಉಭಯ ಸದನಗಳು ಸರ್ವಾನುಮತದ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಬೇಕು ಎಂದು ಒತ್ತಾಯಿಸುತ್ತೇನೆ. ಎಲ್ಲ ಪಕ್ಷಗಳ ನಾಯಕರು ಒಪ್ಪಿದರೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಹೊಣೆಯನ್ನು ನಾನು ಹೊರಲು ಸಿದ್ದನಿದ್ದೇನೆ.<br />
ತಮಿಳುನಾಡಿನ ಸ್ಟಾಲಿನ್ ಸರ್ಕಾರ ಈಗಾಗಲೇ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಮಾರಾಟ ತೆರಿಗೆ ಕಡಿತ ಮಾಡಿದಂತೆ ರಾಜ್ಯ ಸರ್ಕಾರ ಮಾರಾಟ ತೆರಿಗೆಯನ್ನು 50% ಕಡಿತಗೊಳಿಸಬೇಕು. ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>key words: karnataka-congress-siddu-opposition-leader-bangalore-bjp</p>
<p>The post <a href="https://www.justkannada.in/karnataka-congress-siddu-opposition-leader-bangalore-bjp/">ಕೇಂದ್ರದ &#8216;ಅಚ್ಛೇದಿನ್ &#8216; ಘೋಷಣೆ : ಸದನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ &#8216;ಛೇಡಿಸಿದ್ದು&#8217; ಹೀಗೆ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭದ್ರಾ ಮೇಲ್ದಂಡೆ ಕಾಮಗಾರಿ : ಕಿಕ್ ಬ್ಯಾಕ್ ಬಗ್ಗೆ ಎಸಿಬಿ ತನಿಖೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ.</title>
		<link>https://www.justkannada.in/karnataka-bjp-corrupt-yadiyurappa-modi-siddu-congress/</link>
		
		<dc:creator><![CDATA[JK Desk]]></dc:creator>
		<pubDate>Sat, 19 Jun 2021 10:21:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bjp-corupt]]></category>
		<category><![CDATA[congress]]></category>
		<category><![CDATA[karnataka]]></category>
		<category><![CDATA[Modi]]></category>
		<category><![CDATA[siddu]]></category>
		<category><![CDATA[yadiyurappa]]></category>
		<guid isPermaLink="false">https://www.justkannada.in/?p=68256</guid>

					<description><![CDATA[<p>ಬೆಂಗಳೂರು, ಜೂ.19, 2021 : (www.justkannada.in news) ಭದ್ರಾ ಮೇಲ್ದಂಡೆ ಕಾಮಗಾರಿಯ ರೂ. 20,000 ಕೋಟಿ ಟೆಂಡರ್ ನಲ್ಲಿ ಬಿ.ಎಸ್.ವಿಜಯೇಂದ್ರ ಅವರು ಶೇಕಡಾ ಹತ್ತರಷ್ಟು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರ ಆರೋಪವನ್ನು ಭ್ರಷ್ಟಾಚಾರ ನಿರೋಧ ದಳ (ಎಸಿಬಿ)ದ ತನಿಖೆಗೆ ಒಪ್ಪಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಹೇಳಿರುವುದಿಷ್ಟು&#8230; ಎರಡು ಕಾರಣಗಳಿಗಾಗಿ ಈ ಆರೋಪ ಗಂಭೀರ ಸ್ವರೂಪದ್ದಾಗಿದೆ. ಮೊದಲನೆಯದಾಗಿ ಆರೋಪ [&#8230;]</p>
<p>The post <a href="https://www.justkannada.in/karnataka-bjp-corrupt-yadiyurappa-modi-siddu-congress/">ಭದ್ರಾ ಮೇಲ್ದಂಡೆ ಕಾಮಗಾರಿ : ಕಿಕ್ ಬ್ಯಾಕ್ ಬಗ್ಗೆ ಎಸಿಬಿ ತನಿಖೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು, ಜೂ.19, 2021 : (www.justkannada.in news) ಭದ್ರಾ ಮೇಲ್ದಂಡೆ ಕಾಮಗಾರಿಯ ರೂ. 20,000 ಕೋಟಿ ಟೆಂಡರ್ ನಲ್ಲಿ ಬಿ.ಎಸ್.ವಿಜಯೇಂದ್ರ ಅವರು ಶೇಕಡಾ ಹತ್ತರಷ್ಟು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರ ಆರೋಪವನ್ನು ಭ್ರಷ್ಟಾಚಾರ ನಿರೋಧ ದಳ (ಎಸಿಬಿ)ದ ತನಿಖೆಗೆ ಒಪ್ಪಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.</p>
<p>ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಹೇಳಿರುವುದಿಷ್ಟು&#8230;</p>
<p><img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಎರಡು ಕಾರಣಗಳಿಗಾಗಿ ಈ ಆರೋಪ ಗಂಭೀರ ಸ್ವರೂಪದ್ದಾಗಿದೆ. ಮೊದಲನೆಯದಾಗಿ ಆರೋಪ ನೇರವಾಗಿ ಮುಖ್ಯಮಂತ್ರಿಗಳ ಮಗನ ಮೇಲೆ ಮಾಡಲಾಗಿದೆ, ಎರಡನೆಯದಾಗಿ ಆಡಳಿತ ಪಕ್ಷದ ವಿಧಾನಪರಿಷತ್ ಸದಸ್ಯರೇ ಈ ಆರೋಪ ಮಾಡಿದ್ದಾರೆ. ತರಾತುರಿಯಲ್ಲಿ ನೀರಾವರಿ ಇಲಾಖೆ ಸ್ಪಷ್ಟನೆ ನೀಡಿದ್ದನ್ನು ನೋಡಿದರೆ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ಸ್ಪಷ್ಟವಾಗಿದೆ.</p>
<p>ನಗರದ ಬಿಐಇಸಿಯಲ್ಲಿ ನಿರ್ಮಿಸಲಾಗಿದ್ದ ಕೋವಿಡ್ ಕೇರ್ ಸೆಂಟರ್ ನ ಹಾಸಿಗೆ ಮತ್ತು ಬೆಡ್ ಗಳ ಖರೀದಿ-ಮಾರಾಟದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಭ್ರಷ್ಟಾಚಾರ ಎಸಗಿದ್ದಾರೆ ಮತ್ತು ಭೂಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಎಚ್.ವಿಶ್ವನಾಥ್ ಅವರ ಇನ್ನೊಂದು ಆರೋಪದ ಬಗ್ಗೆಯೂ ತನಿಖೆ ನಡೆಯಬೇಕು.</p>
<p>ಆಡಳಿತ ಪಕ್ಷದ ಶಾಸಕರು ಮತ್ತು ಈಗಿನ ಬಿಜೆಪಿ ಸರ್ಕಾರದ ರೂವಾರಿಯೇ ತಾನೆಂದು ಹೇಳಿಕೊಳ್ಳುತ್ತಿರುವ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರೇ ಈ ಸರ್ಕಾರವನ್ನು ‘ಗುತ್ತಿಗೆದಾರರ ಸರ್ಕಾರ’ ಎಂದು ಬಣ್ಣಿಸಿರುವುದು ನೋಡಿದರೆ ಅವರ ಬಳಿ ಬೇರೆ ಸಚಿವರ ಭ್ರಷ್ಟಾಚಾರದ ಮಾಹಿತಿಯೂ ಇದ್ದ ಹಾಗಿದೆ. ಎಸಿಬಿ ಅವರನ್ನೂ ಕರೆದು ವಿಚಾರಣೆಗೆ ಒಳಪಡಿಸಿದರೆ ಸತ್ಯ ಬಯಲಿಗೆ ಬರಬಹುದು.<br />
ಮುಖ್ಯಮಂತ್ರಿಗಳು ಮತ್ತು ಅವರ ಮಗನ ವಿರುದ್ಧದ ಆರೋಪ ಇದೇ ಮೊದಲಬಾರಿ ಕೇಳಿಬಂದದ್ದಲ್ಲ, ಇನ್ನೊಬ್ಬ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕಳೆದ ಒಂದು ವರ್ಷದಿಂದ ವಿಜಯೇಂದ್ರ ವಿರುದ್ದ ಆರೋಪಗಳ ಸುರಿಮಳೆಗೈಯ್ಯುತ್ತಾ ಬಂದಿದ್ದಾರೆ. ಇತ್ತೀಚೆಗೆ ಇನ್ನೊಬ್ಬ ಶಾಸಕ ಸಿ.ಪಿ.ಯೋಗೀಶ್ವರ್ ಅವರೂ ಇದಕ್ಕೆ ದನಿಗೂಡಿಸಿದ್ದಾರೆ. ಈ ಎಲ್ಲ ಆರೋಪಗಳ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಯಬೇಕು.</p>
<p><img loading="lazy" decoding="async" class="aligncenter size-full wp-image-15763" src="https://www.justkannada.in/wp-content/uploads/2019/11/bsy-siddu.jpg" alt="state-Your-Government-Does-exist?-B.S.Y-Former CM-Siddaramaiah-question" width="275" height="183" /></p>
<p>ಮುಖ್ಯಮಂತ್ರಿಗಳು ಮತ್ತು ಅವರ ಮಗನ ವಿರುದ್ಧ ಈ ರೀತಿ ಬಹಿರಂಗವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಶಾಸಕರ ವಿರುದ್ದ ಯಾವುದೇ ಶಿಸ್ತಿನ ಕ್ರಮ ಕೈಗೊಳ್ಳದೆ ಅವರಿಗೆ ಇನ್ನಷ್ಟು ಅವಕಾಶ ನೀಡುತ್ತಿರುವುದನ್ನು ನೋಡಿದರೆ ಒಂದೋ ಬಿಜೆಪಿಯ ಹೈಕಮಾಂಡ್ ಈ ಆರೋಪಗಳನ್ನು ಒಪ್ಪಿಕೊಂಡಿದೆ ಇಲ್ಲವೇ ಭ್ರಷ್ಟಾಚಾರದ ಹೇಸಿಗೆಯಲ್ಲಿ ಅದೂ ಕೂಡಾ ಪಾಲು ಪಡೆದಿದೆ ಎಂದೇ ಅರ್ಥಮಾಡಿಕೊಳ್ಳಬೇಕಾಗುತ್ತದೆ.</p>
<p>ರಾಜ್ಯದ ಆಡಳಿತ ಪಕ್ಷದೊಳಗೆ ಭುಗಿಲೆದ್ದಿರುವ ಭಿನ್ನಮತವನ್ನು ಶಮನಗೊಳಿಸಲು ಬಿಜೆಪಿ ಹೈಕಮಾಂಡ್ ಪ್ರತಿನಿಧಿಯಾಗಿ ಬಂದಿದ್ದ ಅರುಣ್ ಸಿಂಗ್ ಎಂಬ ಬಡಪಾಯಿಯ ಕೆಲಸ ‘ಬಂದ ಪುಟ್ಟಾ..ಹೋದ ಪುಟ್ಟಾ’ ಎಂದಾಗಿದೆ. ಪ್ರಧಾನಿ ನರೇಂದ್ರಮೋದಿಯವರ ಪೌರುಷವೇನಿದ್ದರೂ ಪಾಕಿಸ್ತಾನದ ವಿರುದ್ದ ಅಷ್ಟೆ. ಉಳಿದಂತೆ ಚೀನಾದ ದೊರೆಗಳಿರಲಿ, ಕರ್ನಾಟಕದ ಸ್ವಪಕ್ಷೀಯ ಮರಿಗಳಿರಲಿ..ಮೋದಿಯವರು ಪೌರುಷವಿಲ್ಲದ ಉತ್ತರಕುಮಾರ.</p>
<p>&nbsp;</p>
<p>key words : karnataka-bjp-corrupt-yadiyurappa-modi-siddu-congress</p>
<p>The post <a href="https://www.justkannada.in/karnataka-bjp-corrupt-yadiyurappa-modi-siddu-congress/">ಭದ್ರಾ ಮೇಲ್ದಂಡೆ ಕಾಮಗಾರಿ : ಕಿಕ್ ಬ್ಯಾಕ್ ಬಗ್ಗೆ ಎಸಿಬಿ ತನಿಖೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನನ್ನನ್ನು ಟೀಕಿಸದಿದ್ರೆ ಮಾಧ್ಯಮಗಳಿಗೆ ನಿದ್ದೆ ಬಾರದು, ಆದ್ರು ಟೀಕೆಗಳನ್ನು ನಾನು ಸ್ವಾಗತಿಸುತ್ತೇನೆ : ಸಿದ್ದರಾಮಯ್ಯ&#8230;</title>
		<link>https://www.justkannada.in/mysore-photo-journalist-association-inaguration-siddu-mpja/</link>
		
		<dc:creator><![CDATA[JK Desk]]></dc:creator>
		<pubDate>Sat, 20 Feb 2021 08:04:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Association]]></category>
		<category><![CDATA[inaguration]]></category>
		<category><![CDATA[journalist]]></category>
		<category><![CDATA[MPJA]]></category>
		<category><![CDATA[Mysore.]]></category>
		<category><![CDATA[photo]]></category>
		<category><![CDATA[siddu]]></category>
		<guid isPermaLink="false">https://www.justkannada.in/?p=57011</guid>

					<description><![CDATA[<p>ಮೈಸೂರು, ಫೆ.20, 2021 : (www.justkannada.in news) ಇತ್ತೀಚಿನ ದಿನಗಳಲ್ಲಿ ನನ್ನನ್ನ ಟೀಕೆ ಮಾಡಲಿಲ್ಲ ಅಂದರೆ ಮಾಧ್ಯಮದವರಿಗೆ ನಿದ್ದೆಬರಲ್ಲ. ಆದರೂ ಇದನ್ನ ನಾನು ಸ್ವಾಗತಿಸುತ್ತೇನೆ, ಕಾರಣ ಪತ್ರಿಕಾ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾಜದಲ್ಲಿ ಇರಬೇಕು, ಇಲ್ಲ ಅಂದರೆ ಅದು ಸರ್ವಾಧಿಕಾರಿ ಧೋರಣೆಯಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಆವರಣದಲ್ಲಿ ಆಯೋಜಿಸಿದ್ದ ಮೈಸೂರು ಜಿಲ್ಲಾ ಪತ್ರಿಕಾ ಛಾಯಾಗ್ರಾಹಕರ ಸಂಘ (MPJA)ದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಆದರೂ ಕೆಲವು ಬಾರಿ ಸಂವಿಧಾನ [&#8230;]</p>
<p>The post <a href="https://www.justkannada.in/mysore-photo-journalist-association-inaguration-siddu-mpja/">ನನ್ನನ್ನು ಟೀಕಿಸದಿದ್ರೆ ಮಾಧ್ಯಮಗಳಿಗೆ ನಿದ್ದೆ ಬಾರದು, ಆದ್ರು ಟೀಕೆಗಳನ್ನು ನಾನು ಸ್ವಾಗತಿಸುತ್ತೇನೆ : ಸಿದ್ದರಾಮಯ್ಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು, ಫೆ.20, 2021 : (www.justkannada.in news) ಇತ್ತೀಚಿನ ದಿನಗಳಲ್ಲಿ ನನ್ನನ್ನ ಟೀಕೆ ಮಾಡಲಿಲ್ಲ ಅಂದರೆ ಮಾಧ್ಯಮದವರಿಗೆ ನಿದ್ದೆಬರಲ್ಲ. ಆದರೂ ಇದನ್ನ ನಾನು ಸ್ವಾಗತಿಸುತ್ತೇನೆ, ಕಾರಣ ಪತ್ರಿಕಾ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾಜದಲ್ಲಿ ಇರಬೇಕು, ಇಲ್ಲ ಅಂದರೆ ಅದು ಸರ್ವಾಧಿಕಾರಿ ಧೋರಣೆಯಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /><br />
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಆವರಣದಲ್ಲಿ ಆಯೋಜಿಸಿದ್ದ ಮೈಸೂರು ಜಿಲ್ಲಾ ಪತ್ರಿಕಾ ಛಾಯಾಗ್ರಾಹಕರ ಸಂಘ (MPJA)ದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.<br />
ಆದರೂ ಕೆಲವು ಬಾರಿ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತೇವೆ, ಇದು ವಿಪರ್ಯಾಸ. ನಾನು ಈಗಲೂ ಟಿವಿಗಿಂತ ಹೆಚ್ಚು ಪತ್ರಿಕೆ ಓದುತ್ತೇನೆ. ಪತ್ರಿಕೆಯಷ್ಟು ಟಿವಿ ಮಾಧ್ಯಮದಲ್ಲಿ ಸುದ್ದಿ ಸತ್ಯತೆ ಇರೋದಿಲ್ಲ. ಪಾಪಾ ಸ್ಥಳೀಯವಾಗಿ ವರದಿಗಾರರು ಸರಿಯಾಗಿಯೇ ವರದಿ ಮಾಡಿದ್ರು, ಅದನ್ನು ಹೆಡ್ ಆಫೀಸ್ ನಲ್ಲಿರುವವರು ತಮ್ಮಿಷ್ಟದಂತೆ ಎಡಿಟ್ ಮಾಡುತ್ತಾರೆ. ಜತೆಗೆ ಓನರ್ ಗಳು ಬೇರೆ ಅದನ್ನು ತಿರುಚಿ ಹಾಕಿಬಿಡ್ತಾರೆ ಎಂದು ಸಿದ್ದರಾಮಯ್ಯ ಮಾರ್ಮಿಕವಾಗಿ ಹೇಳಿದರು.<br />
ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಿಂದ ಸ್ವಲ್ಪ ಮಟ್ಟಿಗೆ ಛಾಯಾಗ್ರಾಹಕರ ವರ್ಚಸ್ಸು ಕಡಿಮೆಯಾಗಿದೆ. ವಾಟ್ಸ್ ಅಪ್, ಫೇಸ್ ಬುಕ್, ಇನ್ ಸ್ಟಗ್ರಾಮ್ ಮುಂತಾದ ಫ್ಲಾಟ್ ಫಾರ್ಮ್ ಗಳ ಮೂಲಕ ಫೋಟೋಗಳು ಅತಿ ವೇಗವಾಗಿ ಜನರನ್ನು ತಲುಪುತ್ತಿರುವುದು ಇದಕ್ಕೆ ಕಾರಣವಿರಬಹುದು. ಅಂದ ಮಾತ್ರಕ್ಕೆ ಸಂಪೂರ್ಣವಾಗಿ ಛಾಯಾಗ್ರಾಹಕರ ವಚ್ಚಸ್ಸು ಕುಂದಿದೆ ಎಂದು ಹೇಳಲಾಗದು ಎಂದರು.<br />
ಛಾಯಾಗ್ರಾಹಕರಿಗೂ ನಿಮ್ಮದೆ ಆದ ಸಮಸ್ಯೆಗಳಿಗೆ,ಅವುಗಳ ಪರಿಹಾರಕ್ಕೆ ಸಂಘ ಕಟ್ಟಿರೋದು ಸಹಕಾರಿಯಾಗಲಿದೆ. ಛಾಯಾಗ್ರಾಹಕರು ಹಲವು ಅಪಾಯದ ಸನ್ನಿವೇಶಗಳನ್ನ ಎದುರಿಸಿ ಕೆಲಸ ಮಾಡ್ತಾರೆ. ವಿಶೇಷ ಪೋಟೋ ತೆಗೆಯಬೇಕು ಅನ್ನೋದು ನಿಮ್ಮ ಇಚ್ಚೆ. ನಿಮ್ಮದು ಒಂದು ರೀತಿಯ ಸಾಹಸ ಪ್ರವೃತ್ತಿ. ನಿಮ್ಮ ಸಮಸ್ಯೆ, ಪರಿಹಾರ ಎಲ್ಲದಕ್ಕೂ ಈ ಅಸೋಸಿಯೇಷನ್ ಸಹಾಯವಾಗಲಿದೆ ಎಂದು ಸಿದ್ದರಾಮಯ್ಯ ಶುಭಕೋರಿದರು.<br />
ಸಮಾರಂಭದಲ್ಲಿ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕರಾದ ಜಿ.ಟಿ.ದೇವೇಗೌಡ, ಜಮೀರ್ ಅಹಮದ್ ಖಾನ್ , ವಿಧಾನ ಪರಿಷತ್ ಸದಸ್ಯ ಧರ್ಮಸೇನ, ಮೂಡಾ ಅಧ್ಯಕ್ಷ ರಾಜೀವ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರವಿಕುಮಾರ್ ಉಪಸ್ಥಿತರಿದ್ದರು.<br />
ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಅಧ್ಯಕ್ಷ, ಹಿರಿಯ ಛಾಯಾಗ್ರಾಹಕ ಪ್ರಗತಿ ಗೋಪಾಲಕೃಷ್ಣ ಅವರು ಸಂಘದ ಸ್ಥಾಪನೆ, ಧೆಯ್ಯೊದ್ದೇಶದ ಬಗ್ಗೆ ಮಾಹಿತಿ ನೀಡಿದರು. ಸಂಘದ ಖಜಾಂಜಿ ನಾಗೇಶ್ ಪಾಣತ್ತಲೆ ಕಾರ್ಯಕ್ರಮ ನಿರೂಪಿಸಿದರು. ಶ್ರೀರಾಮ್ ಸ್ವಾಗತಿಸಿದರು. ಅನುರಾಗ್ ಬಸವರಾಜು ವಂದಿಸಿದರು.</p>
<p>ENGLISH SUMMARY&#8230;</p>
<p>&#8220;Media people won&#8217;t get sleep if they won&#8217;t criticize me, but I welcome them: Siddaramaiah<br />
Mysuru, Feb. 20, 2021 (www.justkannada.in): &#8221; Nowadays the media people won&#8217;t get sleep if they won&#8217;t criticize me. But I will welcome them, because of the freedom of journalism, freedom of expression our constitution has given us, it should exist in the society, otherwise, it becomes a dictatorship,&#8221; opined former CM Siddaramaiah.<br />
He participated in the inaugural function of the Mysuru District Photo Journalists&#8217; Association (MPJA) held in the Mysuru District Journalists&#8217; Association building premises today.<img loading="lazy" decoding="async" class="aligncenter size-medium wp-image-57012" src="https://www.justkannada.in/wp-content/uploads/2021/02/fdsfd-300x169.jpg" alt="mysore-photo-journalist-association-inaguration-siddu-mpja" width="300" height="169" /><br />
&#8220;Despite this sometimes our acts will be against our constitution and it is very sad. Even today I read newspapers more than watching TV. I believe that there will be more truth in print media news rather than TV media. Though local journos report correctly, it will be edited as per their wish at the Head offices. Moreover, the owners twist the news,&#8221; he said sarcastically.<br />
His Holiness Jagadguru Sri Shivarathri Deshikendra Mahaswamiji, MLA G.T. Devegowda, Zamir Ahmed Khan, MLC Dharmasena, MUDA Chairman Rajeev, Mysuru District Journalists&#8217; Association President Ravikumar, and others were present.<br />
Keywords: former CM Siddaramaiah/ Media/ Print media</p>
<p>key words : mysore-photo-journalist-association-inaguration-siddu-MPJA</p>
<p>The post <a href="https://www.justkannada.in/mysore-photo-journalist-association-inaguration-siddu-mpja/">ನನ್ನನ್ನು ಟೀಕಿಸದಿದ್ರೆ ಮಾಧ್ಯಮಗಳಿಗೆ ನಿದ್ದೆ ಬಾರದು, ಆದ್ರು ಟೀಕೆಗಳನ್ನು ನಾನು ಸ್ವಾಗತಿಸುತ್ತೇನೆ : ಸಿದ್ದರಾಮಯ್ಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡುವ ಬದಲು ಸದಸ್ಯರನ್ನೇ ಮುಂದುವರೆಸಿ : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ</title>
		<link>https://www.justkannada.in/siddaramaiha-karnataka-grama-panchayath-election-postpone-siddu-oppose-cm/</link>
		
		<dc:creator><![CDATA[JK Desk]]></dc:creator>
		<pubDate>Sat, 16 May 2020 11:55:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[election]]></category>
		<category><![CDATA[grama.panchayath]]></category>
		<category><![CDATA[karnataka]]></category>
		<category><![CDATA[oppose-cm]]></category>
		<category><![CDATA[postpone]]></category>
		<category><![CDATA[siddaramaiha]]></category>
		<category><![CDATA[siddu]]></category>
		<guid isPermaLink="false">https://www.justkannada.in/?p=27869</guid>

					<description><![CDATA[<p>ಬೆಂಗಳೂರು, ಮೇ 16, 2020 : (www.justkannada.in news): ಕೊರೋನ ಸೋಂಕಿನ ಹೆಸರು ಹೇಳಿಕೊಂಡು ರಾಜ್ಯ ಸರ್ಕಾರ ಗ್ರಾಮ ಪಂಚಾಯ್ತಿ ಚುನಾವಣೆಗಳನ್ನು ಮುಂದೂಡಲು ಪ್ರಯತ್ನಿಸುತ್ತಿದೆ. ಹೀಗೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದು ಮಾಜಿ ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಗ್ರಾಮ ಪಂಚಾಯತಿಗಳಿಗೆ ಆಯ್ಕೆಯಾಗುವ ಸದಸ್ಯರು ಯಾವುದೇ ಪಕ್ಷ, ಬಣ ಮುಂತಾದವುಗಳಿಗೆ ಸೇರದೆ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಸಂವಿಧಾನದ ಮೂಲ ಆಶಯವಾಗಿದೆ. 5 ವರ್ಷಗಳ ಹಿಂದೆ ರಾಜ್ಯದ 6024 ಗ್ರಾಮ ಪಂಚಾಯತಿಗಳಿಗೆ ನಡೆದ [&#8230;]</p>
<p>The post <a href="https://www.justkannada.in/siddaramaiha-karnataka-grama-panchayath-election-postpone-siddu-oppose-cm/">ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡುವ ಬದಲು ಸದಸ್ಯರನ್ನೇ ಮುಂದುವರೆಸಿ : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು, ಮೇ 16, 2020 : (www.justkannada.in news): ಕೊರೋನ ಸೋಂಕಿನ ಹೆಸರು ಹೇಳಿಕೊಂಡು ರಾಜ್ಯ ಸರ್ಕಾರ ಗ್ರಾಮ ಪಂಚಾಯ್ತಿ ಚುನಾವಣೆಗಳನ್ನು ಮುಂದೂಡಲು ಪ್ರಯತ್ನಿಸುತ್ತಿದೆ. ಹೀಗೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದು ಮಾಜಿ ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.</p>
<p>ಗ್ರಾಮ ಪಂಚಾಯತಿಗಳಿಗೆ ಆಯ್ಕೆಯಾಗುವ ಸದಸ್ಯರು ಯಾವುದೇ ಪಕ್ಷ, ಬಣ ಮುಂತಾದವುಗಳಿಗೆ ಸೇರದೆ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಸಂವಿಧಾನದ ಮೂಲ ಆಶಯವಾಗಿದೆ. 5 ವರ್ಷಗಳ ಹಿಂದೆ ರಾಜ್ಯದ 6024 ಗ್ರಾಮ ಪಂಚಾಯತಿಗಳಿಗೆ ನಡೆದ ಚುನಾವಣೆಗಳಲ್ಲಿ 97060 ಸದಸ್ಯರು ಆಯ್ಕೆಯಾಗಿರುತ್ತಾರೆ. ಬರ, ಪ್ರವಾಹ ಕಠಿಣ ಪರಿಸ್ಥಿತಿಯನ್ನು ಹಾಗೂ ಗ್ರಾಮೀಣ ಅಭಿವೃದ್ಧಿಯನ್ನು ಸುಸೂತ್ರವಾಗಿ ನಿಭಾಯಿಸುವುದರ ಮೂಲಕ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕೋವಿದ್-19 ನ ಈ ಬಿಕ್ಕಟ್ಟನ್ನೂ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಹಾಗಾಗಿ ಗ್ರಾಮೀಣ ಭಾಗದಲ್ಲಿ ಈ ವೈರಸ್ಸಿನ ಸೋಂಕು ತೀವ್ರವಾಗಿ ಹರಡುತ್ತಿಲ್ಲ. ಆದರೂ ಕರೋನಾ ನೆಪವಿಟ್ಟುಕೊಂಡು ಚುನಾವಣೆ ಮುಂದೂಡಲು ಮುಂದಾಗಿರುವುದು ಸರಿಯಲ್ಲ ಎಂದಿದ್ದಾರೆ.</p>
<p><img loading="lazy" decoding="async" class="aligncenter size-medium wp-image-25687" src="https://www.justkannada.in/wp-content/uploads/2020/03/former-cm-300x168.png" alt=" siddaramaiha-karnataka-grama.panchayath-election-postpone-siddu-oppose-cm" width="300" height="168" /></p>
<p>ಸಿದ್ದರಾಮಯ್ಯ ಅವರ ಪತ್ರದ ವಿವರ ಹೀಗಿದೆ&#8230;&#8230;.</p>
<p>ಮಾನ್ಯ ಯಡಿಯೂರಪ್ಪನವರೆ,<br />
ಗ್ರಾಮ ಸ್ವರಾಜ್ಯದ ಸ್ಥಾಪನೆಯ ಮೂಲಕ ಭಾರತದ ಗ್ರಾಮಗಳನ್ನು ಸರ್ವತೋಮುಖವಾಗಿ ಅಭಿವೃದ್ಧಿ ಮಾಡಲು ಸಾಧ್ಯ ಎಂದು ರಾಷ್ಟ್ರಪಿತ ಮಹಾತ್ಮ ಗಾಧೀಜಿಯವರು ನಂಬಿದ್ದರು. ಈ ಹಿನ್ನೆಲೆಯಲ್ಲಿ 1991 ರಲ್ಲಿ ದಿವಂಗತ ರಾಜೀವ್‍ಗಾಂಧಿ ಮತ್ತು ದಿವಂಗತ ಪಿ.ವಿ ನರಸಿಂಹರಾವ್ ಇವರುಗಳ ಪ್ರಯತ್ನಗಳಿಂದ ಸಂವಿಧಾನಕ್ಕೆ 73ನೇ ತಿದ್ದುಪಡಿ ತರಲಾಯಿತು. ಈ ತಿದ್ದುಪಡಿಯ ಮೂಲಕ ಸಂವಿಧಾನದ ಅನುಚ್ಛೇದ 243 ಕ್ಕೆ ತಿದ್ದುಪಡಿ ತಂದು ಗ್ರಾಮ ಪಂಚಾಯತಿಗಳನ್ನು ಸ್ಥಳೀಯ ಸರ್ಕಾರಗಳನ್ನಾಗಿ ರೂಪಿಸಲಾಯಿತು. ಗ್ರಾಮ ಪಂಚಾಯತಿಗಳಿಗೆ ಆಯ್ಕೆಯಾಗುವ ಸದಸ್ಯರು ಯಾವುದೇ ಪಕ್ಷ, ಬಣ ಮುಂತಾದವುಗಳಿಗೆ ಸೇರದೆ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಸಂವಿಧಾನದ ಮೂಲ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ನ್ನು ಜಾರಿಗೆ ತರಲಾಯಿತು.</p>
<p>5 ವರ್ಷಗಳ ಹಿಂದೆ ರಾಜ್ಯದ 6024 ಗ್ರಾಮ ಪಂಚಾಯತಿಗಳಿಗೆ ನಡೆದ ಚುನಾವಣೆಗಳಲ್ಲಿ 97060 ಸದಸ್ಯರು ಆಯ್ಕೆಯಾಗಿರುತ್ತಾರೆ. ಬರ, ಪ್ರವಾಹ ಕಠಿಣ ಪರಿಸ್ಥಿತಿಯನ್ನು ಹಾಗೂ ಗ್ರಾಮೀಣ ಅಭಿವೃದ್ಧಿಯನ್ನು ಸುಸೂತ್ರವಾಗಿ ನಿಭಾಯಿಸುವುದರ ಮೂಲಕ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕೋವಿದ್-19 ನ ಈ ಬಿಕ್ಕಟ್ಟನ್ನೂ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಹಾಗಾಗಿ ಗ್ರಾಮೀಣ ಭಾಗದಲ್ಲಿ ಈ ವೈರಸ್ಸಿನ ಸೋಂಕು ತೀವ್ರವಾಗಿ ಹರಡುತ್ತಿಲ್ಲ. ನಗರಗಳಿಂದ ವ್ಯಾಪಕವಾಗಿ ಜನರು ಹಳ್ಳಿಗಳಿಗೆ ವಲಸೆ ಹೋದರೂ ಈ ಬೇಸಿಗೆಯಲ್ಲಿ ಕುಡಿಯುವ ನೀರು, ನೈರ್ಮಲ್ಯ ಮುಂತಾದ ಸಮಸ್ಯೆಗಳು ಸೃಷ್ಟಿಯಾಗದಂತೆ ಗ್ರಾಮ ಪಂಚಾಯಿತಿಗಳು ಅಚ್ಚು ಕಟ್ಟಾಗಿ ಕೆಲಸ ನಿರ್ವಹಿಸುತ್ತಿವೆ. ಈ ಸದಸ್ಯರುಗಳ ಪದಾವಧಿ ಮುಂದಿನ ಒಂದೆರಡು ತಿಂಗಳಲ್ಲಿ ಮುಗಿಯುತ್ತದೆ.</p>
<p><img loading="lazy" decoding="async" class="aligncenter size-full wp-image-15763" src="https://www.justkannada.in/wp-content/uploads/2019/11/bsy-siddu.jpg" alt=" siddaramaiha-karnataka-grama.panchayath-election-postpone-siddu-oppose-cm" width="275" height="183" /></p>
<p>ಸಂವಿಧಾನದ ಅನುಚ್ಛೇದ 243 ರ ಪ್ರಕಾರ ಚುನಾವಣೆಗಳನ್ನು ನಿಗಧಿತ ಅವಧಿಯೊಳಗೆ ಕಡ್ಡಾಯವಾಗಿ ನಡೆಸಬೇಕಾಗಿರುತ್ತದೆ. ಆದರೆ ಕೊರೋನ ಸೋಂಕಿನ ಹೆಸರು ಹೇಳಿಕೊಂಡು ಸರ್ಕಾರ ಚುನಾವಣೆಗಳನ್ನು ಮುಂದೂಡಲು ಪ್ರಯತ್ನಿಸುತ್ತಿದೆ. ಹೀಗೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಈ ಹಿಂದೆ ಹಲವು ಪ್ರಕರಣಗಳಲ್ಲಿ ನ್ಯಾಯಾಲಯಗಳು ಸಹ ನಿಗಧಿ ಪಡಿಸಿದ ಅವಧಿಯ ಒಳಗೆ ಚುನಾವಣೆಗಳನ್ನು ನಡೆಸುವಂತೆ ಸರ್ಕಾರಗಳಿಗೆ ನಿರ್ದೇಶನಗಳನ್ನು ನೀಡಿವೆ. ಕೊರೋನ ಬಿಕ್ಕಟ್ಟಿನ ನೆಪದಲ್ಲಿ ಚುನಾವಣೆಗಳನ್ನು ನಡೆಸದೆ ಜಿಲ್ಲಾಧಿಕಾರಿಗಳ ಮೂಲಕ ಆಡಳಿತಾಧಿಕಾರಿಗಳನ್ನು ಮತ್ತು ನಾಮ ನಿರ್ದೇಶಿತ ಆಡಳಿತ ಸಮಿತಿಗಳನ್ನು ರಚಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ಸರ್ಕಾರ ಒಂದು ವೇಳೆ ಹೀಗೆ ಮಾಡಿದ್ದೆ ಆದರೆ ಅದು ಪ್ರಜಾಪ್ರಭುತ್ವದ ಮತ್ತು ಸಂವಿಧಾನದ ಆಶಯಗಳಿಗೆ ಸಂಪೂರ್ಣ ವಿರುದ್ಧವಾಗುತ್ತದೆ. ಗ್ರಾಮ ಪಂಚಾಯತಿಗಳ ಕಾರ್ಯ ವೈಖರಿಯ ಬಗ್ಗೆ ಏನೇನೂ ತಿಳಿವಳಿಕೆ ಇಲ್ಲದವರನ್ನು, ನಿರ್ಧಿಷ್ಠ ಸಿದ್ಧಾಂತಗಳ ಹಿನ್ನೆಲೆಯವರನ್ನು ಸೇರಿಸಿ ಆಡಳಿತ ಸಮಿತಿ ರಚಿಸಿದರೆ ಕೊರೋನದಂತಹ ಭೀಕರ ಬಿಕ್ಕಟ್ಟನ್ನು ನಿಭಾಯಿಸಲು ಕಷ್ಟವಾಗುತ್ತದೆ. ಇದರಿಂದ ಗ್ರಾಮೀಣ ಕರ್ನಾಟಕ ತೀವ್ರ ಅನ್ಯಾಯಕ್ಕೆ ತುತ್ತಾಗುತ್ತದೆ.</p>
<p>ಆದ್ದರಿಂದ ಯಾವುದೇ ಕಾರಣಕ್ಕೂ ಹೊಸ ಆಡಳಿತ ಸಮಿತಿ ರಚಿಸುವ , ಆಡಳಿತಾಧಿಕಾರಿ ನೇಮಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು. ಒಂದು ವೇಳೆ ತಾತ್ಕಾಲಿಕ ವ್ಯವಸ್ಥೆ ಮಾಡಲೇಬೇಕೆಂದಿದ್ದರೆ 1987 ರಲ್ಲಿ ಮಾಡಿದ್ದಂತೆ, ಪ್ರಸ್ತುತ ಅಧಿಕಾರದಲ್ಲಿರುವ ಎಲ್ಲ ಗ್ರಾಮ ಪಂಚಾಯಿತಿಗಳನ್ನು ಮತ್ತು ಸದಸ್ಯರನ್ನು ಮುಂದಿನ ಚುನಾವಣೆ ನಡೆಸುವವರೆಗೆ ಮುಂದುವರೆಸಬೇಕು. ಅದರ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.</p>
<p>key words : karnataka-grama.panchayath-election-postpone-siddu-oppose-cm</p>
<p>The post <a href="https://www.justkannada.in/siddaramaiha-karnataka-grama-panchayath-election-postpone-siddu-oppose-cm/">ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡುವ ಬದಲು ಸದಸ್ಯರನ್ನೇ ಮುಂದುವರೆಸಿ : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
