<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>SP Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/sp/feed/" rel="self" type="application/rss+xml" />
	<link>https://www.justkannada.in/tag/sp/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 16 Jun 2026 11:26:11 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>SP Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/sp/</link>
	<width>32</width>
	<height>32</height>
</image> 
	<item>
		<title>ಧರ್ಮಸ್ಥಳ ಬುರುಡೆ ಕೇಸ್ ತನಿಖೆ ನಡೆಸುತ್ತಿದ್ದ SIT ಎಸ್ ಪಿ ಕಾರು ಪಲ್ಟಿ</title>
		<link>https://www.justkannada.in/car-accident-sit-sp/</link>
		
		<dc:creator><![CDATA[prashanth]]></dc:creator>
		<pubDate>Tue, 16 Jun 2026 11:26:11 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Burude case]]></category>
		<category><![CDATA[Car accident]]></category>
		<category><![CDATA[Dharmasthala]]></category>
		<category><![CDATA[sit]]></category>
		<category><![CDATA[SP]]></category>
		<guid isPermaLink="false">https://www.justkannada.in/?p=156126</guid>

					<description><![CDATA[<p>ಮಂಗಳೂರು,ಜೂನ್,16,2026 (www.justkannada.in): ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿ ಪೊಲೀಸ್ ವರಿಷ್ಠಾಧಿಕಾರಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದೆ. ಎಸ್ ಐಟಿ ಎಸ್.ಪಿ ಸೈಮನ್ ಇನ್ಸ್‌ಪೆಕ್ಟರ್ ಕುಸುಮಾಧರ್ , ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಹಾಗೂ ವಾಹನದ ಚಾಲಕನಿಗೆ  ಸಣ್ಣಪುಟ್ಟ ಗಾಯಗಳಾಗಿದ್ದು ಸದ್ಯ ಅಪಾಯದಿಂದ ಪಾರಾಗಿದ್ದಾರೆ. ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ [&#8230;]</p>
<p>The post <a href="https://www.justkannada.in/car-accident-sit-sp/">ಧರ್ಮಸ್ಥಳ ಬುರುಡೆ ಕೇಸ್ ತನಿಖೆ ನಡೆಸುತ್ತಿದ್ದ SIT ಎಸ್ ಪಿ ಕಾರು ಪಲ್ಟಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಗಳೂರು,ಜೂನ್,16,2026 (<a href="http://www.justkannada.in">www.justkannada.in</a>):</strong> ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿ ಪೊಲೀಸ್ ವರಿಷ್ಠಾಧಿಕಾರಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದೆ. ಎಸ್ ಐಟಿ ಎಸ್.ಪಿ ಸೈಮನ್ ಇನ್ಸ್‌ಪೆಕ್ಟರ್ ಕುಸುಮಾಧರ್ , ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಹಾಗೂ ವಾಹನದ ಚಾಲಕನಿಗೆ  ಸಣ್ಣಪುಟ್ಟ ಗಾಯಗಳಾಗಿದ್ದು ಸದ್ಯ ಅಪಾಯದಿಂದ ಪಾರಾಗಿದ್ದಾರೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಎಸ್ ಪಿ ಸೈಮನ್ ಅವರು ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್ ಐಟಿ ತನಿಖಾಧಿಖಾರಿಯಾಗಿರುವ ಜೀತೇಂದ್ರ ಕುಮಾರ್ ದಯಾಮ ಅವರನ್ನ ಭೇಟಿಯಾಗಿ ಚರ್ಚಿಸಲು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಕಾರು ಪಲ್ಟಿ ಸಂಬಂಧ ಎಸ್ ಪಿ ಸೈಮನ್ ಅವರು  ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>
<p>Key words:  car Accident, SIT, SP, Dharmasthala, Burude case</p>
<p>The post <a href="https://www.justkannada.in/car-accident-sit-sp/">ಧರ್ಮಸ್ಥಳ ಬುರುಡೆ ಕೇಸ್ ತನಿಖೆ ನಡೆಸುತ್ತಿದ್ದ SIT ಎಸ್ ಪಿ ಕಾರು ಪಲ್ಟಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಡಿತರ ಅಕ್ಕಿ ಅಕ್ರಮ ಸಾಗಣೆದಾರರಿದ 3 ಲಕ್ಷ ವಸೂಲಿ ಆರೋಪ: SP ಗನ್ ಮ್ಯಾನ್ ಬಂಧನ</title>
		<link>https://www.justkannada.in/%e0%b2%aa%e0%b2%a1%e0%b2%bf%e0%b2%a4%e0%b2%b0-%e0%b2%85%e0%b2%95%e0%b3%8d%e0%b2%95%e0%b2%bf-%e0%b2%85%e0%b2%95%e0%b3%8d%e0%b2%b0%e0%b2%ae-%e0%b2%b8%e0%b2%be%e0%b2%97%e0%b2%a3%e0%b3%86%e0%b2%a6/</link>
		
		<dc:creator><![CDATA[prashanth]]></dc:creator>
		<pubDate>Fri, 08 May 2026 05:07:57 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[arrests]]></category>
		<category><![CDATA[Gunman.]]></category>
		<category><![CDATA[illegal]]></category>
		<category><![CDATA[Ration]]></category>
		<category><![CDATA[Rice]]></category>
		<category><![CDATA[Rs 3 lakh]]></category>
		<category><![CDATA[SP]]></category>
		<category><![CDATA[transporter]]></category>
		<guid isPermaLink="false">https://www.justkannada.in/?p=154590</guid>

					<description><![CDATA[<p>ಬಳ್ಳಾರಿ,ಮೇ,8,2026 (www.justkannada.in): ಪಡಿತರ ಅಕ್ಕಿ ಅಕ್ರಮ ಸಾಗಣೆದಾರರಿದ 3 ಲಕ್ಷ ವಸೂಲಿ ಮಾಡಿದ ಆರೋಪದ ಮೇಲೆ ಬಳ್ಳಾರಿ  ಎಸ್ ಪಿ ಸುಮನ ಪನ್ನೇಕರ್ ಅವರ  ಗನ್ ಮ್ಯಾನ್ ನನ್ನು ಮೋಕಾ ಪೊಲೀಸರು ಬಂಧಿಸಿದ್ದಾರೆ. ಗನ್ ಮ್ಯಾನ್ ದೇವರಾಜ್ ಮತ್ತು ಸಹಚರ ಬಂಧಿತರು. ಶರಬಯ್ಯ ಎಂಬ ಪಡಿತರ ಅಕ್ಕಿ ಸಾಗಣೆದಾರನಿಂದ 3 ಲಕ್ಷ ರೂ. ಪಡೆದಿದ್ದರು ಎನ್ನಲಾಗಿದೆ. ಮೋಕಾ ಪೊಲೀಸ್ ಠಾಣೆಗೆ ಅಕ್ಕಿ ಸಾಗಣೆದಾರ ಶರಬಯ್ಯ ದೂರು ನೀಡಿದ್ದರು. ದೂರು ಆಧರಿಸಿ ಎಸ್ ಪಿ ಸುಮನ ಪನ್ನೇಕರ್ ಅವರ [&#8230;]</p>
<p>The post <a href="https://www.justkannada.in/%e0%b2%aa%e0%b2%a1%e0%b2%bf%e0%b2%a4%e0%b2%b0-%e0%b2%85%e0%b2%95%e0%b3%8d%e0%b2%95%e0%b2%bf-%e0%b2%85%e0%b2%95%e0%b3%8d%e0%b2%b0%e0%b2%ae-%e0%b2%b8%e0%b2%be%e0%b2%97%e0%b2%a3%e0%b3%86%e0%b2%a6/">ಪಡಿತರ ಅಕ್ಕಿ ಅಕ್ರಮ ಸಾಗಣೆದಾರರಿದ 3 ಲಕ್ಷ ವಸೂಲಿ ಆರೋಪ: SP ಗನ್ ಮ್ಯಾನ್ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬಳ್ಳಾರಿ,ಮೇ,8,2026 (<a href="http://www.justkannada.in">www.justkannada.in</a>): ಪಡಿತರ ಅಕ್ಕಿ ಅಕ್ರಮ ಸಾಗಣೆದಾರರಿದ 3 ಲಕ್ಷ ವಸೂಲಿ ಮಾಡಿದ ಆರೋಪದ ಮೇಲೆ ಬಳ್ಳಾರಿ  ಎಸ್ ಪಿ ಸುಮನ ಪನ್ನೇಕರ್ ಅವರ  ಗನ್ ಮ್ಯಾನ್ ನನ್ನು ಮೋಕಾ ಪೊಲೀಸರು ಬಂಧಿಸಿದ್ದಾರೆ. <img loading="lazy" decoding="async" class="alignnone size-medium wp-image-124029" src="https://www.justkannada.in/wp-content/uploads/2024/05/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w, https://www.justkannada.in/wp-content/uploads/2024/05/jk-logo.jpg 936w" sizes="auto, (max-width: 300px) 100vw, 300px" /></p>
<p>ಗನ್ ಮ್ಯಾನ್ ದೇವರಾಜ್ ಮತ್ತು ಸಹಚರ ಬಂಧಿತರು. ಶರಬಯ್ಯ ಎಂಬ ಪಡಿತರ ಅಕ್ಕಿ ಸಾಗಣೆದಾರನಿಂದ 3 ಲಕ್ಷ ರೂ. ಪಡೆದಿದ್ದರು ಎನ್ನಲಾಗಿದೆ. ಮೋಕಾ ಪೊಲೀಸ್ ಠಾಣೆಗೆ ಅಕ್ಕಿ ಸಾಗಣೆದಾರ ಶರಬಯ್ಯ ದೂರು ನೀಡಿದ್ದರು. ದೂರು ಆಧರಿಸಿ ಎಸ್ ಪಿ ಸುಮನ ಪನ್ನೇಕರ್ ಅವರ  ಗನ್ ಮ್ಯಾನ್ ದೇವರಾಜು ಎಂಬುವವರನ್ನ ಪೊಲೀಸರು ಬಂಧಿಸಿದ್ದಾರೆ.</p>
<p>2 ಲಾರಿಗಳು ಪಡಿತರ ಅಕ್ಕಿ ತುಂಬಿಕೊಂಡು ಅಂಧ್ರಪ್ರದೇಶಕ್ಕೆ ಹೊರಟಿದ್ದವು. ಲಾರಿ ಅಡ್ಡಗಟ್ಟಿ ಎಸ್ ಪಿ ಸ್ಕ್ವಾಡ್ ಅಂತಾ 5 ಲಕ್ಷ ಕೇಳಿ 3 ಲಕ್ಷ ಪಡೆದಿದ್ದ. ಹಣ ನೀಡದಿದ್ದರೆ ಅಕ್ಕಿ ಸೀಜ್ ಮಾಡಿ ಜೈಲಿಗೆ ಕಳಿಸುವುದಾಗಿ ಬೆದರಿಕೆ ಗನ್ ಮ್ಯಾನ್ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.  ನಂತರ ಗನ್ ಮ್ಯಾನ್ ಸೇರಿ ಮೂವರ ವಿರುದ್ದ ಶರಬಯ್ಯ ದೂರು ನೀಡಿದ್ದರು. ಇದೀಗ ಮೋಕಾ ಪೊಲೀಸ್  ಠಾಣೆಯಲ್ಲಿ ಗನ್ ಮ್ಯಾನ್ ನನ್ನು ಎಸ್ ಪಿ ಸುಮನ ಪನ್ನೇಕರ್ ವಿಚಾರಣೆ ನಡೆಸುತ್ತಿದ್ದಾರೆ.</p>
<p>Key words: SP, gunman, , arrests, Rs 3 lakh, illegal, ration, rice, transporter</p>
<p>&nbsp;</p>
<p>The post <a href="https://www.justkannada.in/%e0%b2%aa%e0%b2%a1%e0%b2%bf%e0%b2%a4%e0%b2%b0-%e0%b2%85%e0%b2%95%e0%b3%8d%e0%b2%95%e0%b2%bf-%e0%b2%85%e0%b2%95%e0%b3%8d%e0%b2%b0%e0%b2%ae-%e0%b2%b8%e0%b2%be%e0%b2%97%e0%b2%a3%e0%b3%86%e0%b2%a6/">ಪಡಿತರ ಅಕ್ಕಿ ಅಕ್ರಮ ಸಾಗಣೆದಾರರಿದ 3 ಲಕ್ಷ ವಸೂಲಿ ಆರೋಪ: SP ಗನ್ ಮ್ಯಾನ್ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು, ಸುದೀರ್ಘ ಪಯಣ: ಸಮಗ್ರ ಓದಿಗೆ ಒತ್ತು ನೀಡಿ-SP ಮಲ್ಲಿಕಾರ್ಜುನ ಬಾಲದಂಡಿ</title>
		<link>https://www.justkannada.in/competitive-exams-ksou/</link>
		
		<dc:creator><![CDATA[prashanth]]></dc:creator>
		<pubDate>Mon, 09 Feb 2026 10:31:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Competitive Exams]]></category>
		<category><![CDATA[ksou]]></category>
		<category><![CDATA[Mallikarjuna Baladandi]]></category>
		<category><![CDATA[SP]]></category>
		<guid isPermaLink="false">https://www.justkannada.in/?p=151230</guid>

					<description><![CDATA[<p>ಮೈಸೂರು,ಫೆಬ್ರವರಿ,9,2026 (www.justkannada.in): ಯುಪಿಎಸ್‌ ಸಿ ಮತ್ತು ಕೆಪಿಎಸ್‌ ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ ವಿಷಯದ ಕಡೆ ಗಮನಹರಿಸದೆ ಸಮಗ್ರ ಓದಿಗೆ ಒತ್ತು ನೀಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು. ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಏರ್ಪಡಿಸಿದ್ದ ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು [&#8230;]</p>
<p>The post <a href="https://www.justkannada.in/competitive-exams-ksou/">ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು, ಸುದೀರ್ಘ ಪಯಣ: ಸಮಗ್ರ ಓದಿಗೆ ಒತ್ತು ನೀಡಿ-SP ಮಲ್ಲಿಕಾರ್ಜುನ ಬಾಲದಂಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,9,2026 (<a href="http://www.justkannada.in">www.justkannada.in</a>):</strong> ಯುಪಿಎಸ್‌ ಸಿ ಮತ್ತು ಕೆಪಿಎಸ್‌ ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ ವಿಷಯದ ಕಡೆ ಗಮನಹರಿಸದೆ ಸಮಗ್ರ ಓದಿಗೆ ಒತ್ತು ನೀಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಏರ್ಪಡಿಸಿದ್ದ ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿದರು.</p>
<p>ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಮತ್ತು ಇಂಟರ್ನೆಟ್‌ನಿಂದ ಎಲ್ಲ ಮಾಹಿತಿ ಸುಲಭವಾಗಿ ಸಿಗುತ್ತಿದ್ದರೂ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ, ತಾಳ್ಮೆ ಮತ್ತು ನಿರಂತರ ಪ್ರಯತ್ನ ಅಗತ್ಯ. ಎಷ್ಟೇ ಬುದ್ಧಿವಂತಿಕೆ ಇದ್ದರೂ ನಿರಂತರ ಓದು ಇರಬೇಕು. ಯುವಕರು ಮನಸ್ಸಿಟ್ಟು ಪ್ರಯತ್ನ ಮಾಡಿದಾಗ ಎಂತಹದ್ದೇ ಹುದ್ದೆಯಾದರೂ ಪಡೆಯಬಹುದು. ಹೀಗಾಗಿ ನಿಮ್ಮ ಸಮಯವನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಂಡು ಯಶಸ್ಸುಗಳಿಸಿ ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.</p>
<p>ಹಿಂದಿನ ದಿನಗಳಿಗೆ ಹೋಲಿಸಿದರೆ ಇಂದು ಸ್ಪರ್ಧೆ ತೀವ್ರವಾಗಿದ್ದು, ಒಂದು ಹುದ್ದೆಗೆ ಅನೇಕ ಅಭ್ಯರ್ಥಿಗಳು ಅರ್ಜಿ ಹಾಕುತ್ತಾರೆ. ಕಳೆದ ಅನೇಕ ವರ್ಷಗಳಿಂದ ರಾಜ್ಯ ಸರ್ಕಾರ ಅನೇಕ ಪರೀಕ್ಷೆಗಳನ್ನು ನಡೆಸದಿದ್ದರೂ, ಇದೀಗ ಎಲ್ಲವನ್ನೂ ಆಯೋಜಿಸಲು ತೀರ್ಮಾನಿಸಿದೆ. ಒಳಮೀಸಲಾತಿ ಗೊಂದಲಗಳು ಬಹುತೇಕ ಪರಿಹಾರವಾಗಿವೆ. ಅಭ್ಯರ್ಥಿಗಳು ಸಾಮಾಜಿಕ ಮಾಧ್ಯಮ ಮತ್ತು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ, ಓದಿಗೆ ಗಮನ ಹರಿಸಬೇಕು. ಶ್ರೀಮಂತರು ಅಥವಾ ದುಡ್ಡು ಇರುವವರಿಗೆ ಮಾತ್ರ ಸರ್ಕಾರಿ ಕೆಲಸ ಸಿಗುತ್ತದೆ ಎಂಬ ನಕಾರಾತ್ಮಕ ಚಿಂತನೆ ಬೇಡ. ಕುರಿ ಕಾಯುವವರು, ಬಡ ಕಾರ್ಮಿಕರೂ ಮತ್ತು ಅವರ ಮಕ್ಕಳು ಸಹ ಯುಪಿಎಸ್‌ ಸಿ ಪಾಸ್ ಮಾಡಿರುವ ಉದಾಹರಣೆಗಳಿವೆ ಎಂದು ಸಕಾರಾತ್ಮಕ ಸಂದೇಶ ನೀಡಿದರು.</p>
<p>ಕಾಲೇಜಿನ ಯುವಕರು ಕ್ಯಾಂಪಸ್ ಗಳಲ್ಲಿ ಇನ್ನಿತರ ಕೆಟ್ಟ ಚಟುವಟಿಕೆಗಳಿಗೆ ಬಲಿಯಾಗದೆ ಓದಿನ ಕಡೆ ಗಮನ ಹರಿಸಿ. ಸಾಮಾಜಿಕ ಮಾಧ್ಯಮದ ಹಿಂದೆ ಓಡದೆ ನಿಮ್ಮ ಗುರಿ ಹಿಂದೆ ಓಡಿ ಎಂದರು.</p>
<p>ಆಡಳಿತ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕಿ ಸಾಧನಾ ಎ.ಪೋಟೆ ಅವರು ಮಾತನಾಡಿ, ಯುಪಿಎಸ್‌ ಸಿ ಅಂತಹ ಪರೀಕ್ಷೆಗಳಲ್ಲಿ ಕನ್ನಡದ ಯುವಕ, ಯುವತಿಯರು ಹೆಚ್ಚೆಚ್ಚು ಪಾಲ್ಗೊಂಡು ಕೆಲಸ ಗಿಟ್ಟಿಸಿ, ರಾಜ್ಯದ ಹಿರಿಮೆಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಬೇಕು ಎಂದು ಕರೆ ನೀಡಿದರು.</p>
<p>ಸಾರ್ವಜನಿಕ ವಲಯ, ಖಾಸಗಿ ವಲಯ ಮತ್ತು ಸ್ವಯಂ ಉದ್ಯೋಗಗಳು ಯುವಕರನ್ನು ಕೈಬೀಸಿ ಕರೆಯುತ್ತಿವೆ. ಆದರೂ ಸಹ ಮಧ್ಯಮ ವರ್ಗದ ಯುವ ಜನತೆ ಸರ್ಕಾರಿ ಕೆಲಸದ ಕಡೆ ಹೆಚ್ಚು ಮುಖ ಮಾಡುತ್ತಿದೆ. ಇದಕ್ಕೆ ಕಾರಣ ಸರ್ಕಾರಿ ಉದ್ಯೋಗದ ಭದ್ರತೆ, ಖಾಸಗಿ ವಲಯದಂತೆ ಇಲ್ಲ ಯಾವಾಗ ಕೆಲಸ ಹೋಗುತ್ತದೆ ಎಂಬ ಭಯವಿರುವುದಿಲ್ಲ. ಸ್ಥಿರ ಸಂಬಳ ಮತ್ತು ಭತ್ಯೆಗಳು, ವೈದ್ಯಕೀಯ ಸೌಲಭ್ಯಗಳು ಸಿಗುತ್ತವೆ, ಪಿಂಚಣಿ ಸೌಲಭ್ಯ, ಜೊತೆಗೆ ಸಾಫ್ಟ್‌ ವೇರ್ ಅಥವಾ ಕಾರ್ಪೊರೇಟ್ ಕಂಪನಿಗಳಿಗೆ ಹೋಲಿಸಿದರೆ ಇಲ್ಲಿ ಕೆಲಸ ಮತ್ತು ವೈಯಕ್ತಿಕ ಜೀವನದ ನಡುವೆ ಉತ್ತಮ ಸಮತೋಲನ ಕಾಯ್ದುಕೊಳ್ಳಬಹುದು ಎಂಬ ದೃಷ್ಟಿಯಿಂದ ಸರ್ಕಾರಿ ಕೆಲಸದ ಕಡೆ ಹೆಚ್ಚು ಗಮನ ಹರಿಸಿದೆ. ಈ ಕಲ್ಪನೆ ತಪ್ಪು. ಇಲ್ಲಿ ಕೇವಲ ಸ್ಪರ್ಧಾತ್ಮಕ ಅಷ್ಟೆ. ಆದರೆ ಖಾಸಗಿ ವಲಯದಲ್ಲಿ ಸೃಜನಾತ್ಮಕತೆಗೆ ಹೆಚ್ಚು ಅವಕಾಶವಿದೆ. ಹೀಗಾಗಿ ಖಾಸಗಿ ಕೆಲಸಗಳ ಕಡೆಗೂ ಹೆಚ್ಚು ಗಮನ ಹರಿಸಿ ಎಂದು ಸಲಹೆ ನೀಡಿದರು.</p>
<p>ಆದರೂ ಸ್ಮರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುವವರು ಮುಖ್ಯವಾಗಿ ಶ್ರದ್ಧೆಯಿಂದ ಕಠಿಣವಾಗಿ ನಿರಂತರವಾಗಿ ಅಭ್ಯಸಿಸಿ. ಪಠ್ಯಕ್ರಮದ ಎಲ್ಲ ಅಂಶಗಳನ್ನು ತಿಳಿದಿರಬೇಕು. ಮೊದಲು ಪೂರ್ವಭಾವಿ ಪರೀಕ್ಷೆಗೆ ಒತ್ತು ನೀಡಿ, ಬಳಿಕ ಮುಖ್ಯ ಪರೀಕ್ಷೆಗೆ ಗಮನ ಹರಿಸಿ. ಎನ್‌ಸಿಆರ್‌ಟಿ ಪುಸ್ತಕದ 7,8,9ನೇ ತರಗತಿಯ ಪಠ್ಯಕ್ರಮವನ್ನು ಪೂರ್ಣಪಟ್ಟಿಯಾಗಿ ಓದಿಕೊಳ್ಳಿ. ಅದೇ ನಿಮಗೆ ತಳಮಟ್ಟದ ಅಡಿಪಾಯ. ಇದು ನಿಮಗೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು.</p>
<p>ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಷಾ ವೈವಿಧ್ಯತೆಯನ್ನು ಸಮರ್ಥವಾಗಿ ಬಳಸುವುದು ಅಭ್ಯರ್ಥಿಯ ಯಶಸ್ಸಿಗೆ ಪ್ರಮುಖ ಅಡಿಪಾಯ. ಕರ್ನಾಟಕದಲ್ಲಿ ಪರೀಕ್ಷೆಗಳು ಕೇವಲ ಜ್ಞಾನವನ್ನಷ್ಟೇ ಅಲ್ಲದೆ, ಅಭ್ಯರ್ಥಿಯ ಭಾಷಾ ಪ್ರಾವೀಣ್ಯತೆಯನ್ನೂ ಒರೆಗೆ ಹಚ್ಚುತ್ತವೆ. ಮೊದಲನೆಯದಾಗಿ, ದ್ವಿಭಾಷಾ ಪ್ರಶ್ನೆಪತ್ರಿಕೆಗಳು (ಕನ್ನಡ ಮತ್ತು ಇಂಗ್ಲಿಷ್) ಇರುವುದರಿಂದ, ಅಭ್ಯರ್ಥಿಯು ಪಾರಿಭಾಷಿಕ ಶಬ್ದಗಳ ಮೇಲೆ ಹಿಡಿತ ಸಾಧಿಸುವುದು ಅವಶ್ಯಕ. ಎರಡನೆಯದಾಗಿ, ಕಡ್ಡಾಯ ಕನ್ನಡ ಪತ್ರಿಕೆಯು ಆಡಳಿತಾತ್ಮಕ ಕೆಲಸಕ್ಕೆ ಅಗತ್ಯವಿರುವ ಭಾಷಾ ಕೌಶಲವನ್ನು ಪರೀಕ್ಷಿಸುತ್ತದೆ. ಪ್ರಾದೇಶಿಕ ಭಾಷೆಗಳ ವೈವಿಧ್ಯತೆಯು ಸಂದರ್ಶನದ ಹಂತದಲ್ಲಿ ಸ್ಥಳೀಯ ಸಮಸ್ಯೆಗಳನ್ನು ವಿವರಿಸಲು ಮತ್ತು ಜನರೊಂದಿಗೆ ಸಂವಹನ ನಡೆಸಲು ಪೂರಕವಾಗಿರುತ್ತದೆ. ಭಾಷಾ ವೈವಿಧ್ಯತೆಯು ವಿವಿಧ ಸಾಹಿತ್ಯಕ ಮತ್ತು ಐತಿಹಾಸಿಕ ಹಿನ್ನೆಲೆಗಳನ್ನು ಅರಿಯಲು ಸಹಾಯ ಮಾಡುತ್ತದೆ, ಇದು ಸಾಮಾನ್ಯ ಜ್ಞಾನ ಪತ್ರಿಕೆಯಲ್ಲಿ ಹೆಚ್ಚಿನ ಅಂಕ ಗಳಿಸಲು ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದರು.</p>
<p>ಕೆಎಸ್ ಒಯು ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ ಮಾತನಾಡಿ, ನಿಮ್ಮನ್ನು ನೀವು ನಂಬಿ ಓದಿನ ಕಡೆ ಗಮನ ಹರಿಸಿ, ನಾನು ಐಪಿಎಸ್,ಐಎಎಸ್ /ಕೆಎಎಸ್ ಆಗಬೇಕು ಎಂದು ಕನಸು ಇಟ್ಟುಕೊಂಡು ಅದರ ಕಡೆ ಹೆಚ್ಚು ಹೊತ್ತು ಗಮಹ ಹರಿಸಿ. ನೀವು ನಮ್ಮ ವಿವಿಗೆ ತರಬೇತಿ ಪಡೆಯಲು ಬಂದಿದ್ದೀರಿ ಪರೀಕ್ಷೆಯಲ್ಲಿ ಯಶಸ್ಸುಗಳಿಸೆ ಹೋಗಿ ಎಂದು ಕಿವಿಮಾತು ಹೇಳಿದರು.</p>
<p>ಕಾರ್ಯಕ್ರಮದಲ್ಲಿ ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಸಿ.ಎಸ್. ಆನಂದ್‌ ಕುಮಾರ್, ಹಣಕಾಸು ಅಧಿಕಾರಿ ಡಾ. ಎಸ್. ನಿರಂಜನ್‌ ರಾಜ್, ಅಧ್ಯಯನ ಕೇಂದ್ರದ ಡೀನ್ ಡಾ. ಎನ್.ಆರ್. ಚಂದ್ರೇಗೌಡ, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿದ್ದೇಶ್ ಹೊನ್ನೂ‌ರ್, ಗಣೇಶ್ ಕೆ.ಜಿ.ಕೊಪ್ಪಲ್ ಇದ್ದರು.</p>
<p>Key words: Competitive exams, KSOU, SP, Mallikarjuna Baladandi</p>
<p>The post <a href="https://www.justkannada.in/competitive-exams-ksou/">ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು, ಸುದೀರ್ಘ ಪಯಣ: ಸಮಗ್ರ ಓದಿಗೆ ಒತ್ತು ನೀಡಿ-SP ಮಲ್ಲಿಕಾರ್ಜುನ ಬಾಲದಂಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ಬಳ್ಳಾರಿ SP ಪವನ್‌ ನಜ್ಜೂರ್‌ ಆತ್ಮಹತ್ಯೆ ಯತ್ನ ವದಂತಿ: ಆಪ್ತರ ಸ್ಪಷ್ಟನೆ</title>
		<link>https://www.justkannada.in/ballari-sp-pawan-najjoor/</link>
		
		<dc:creator><![CDATA[prashanth]]></dc:creator>
		<pubDate>Sat, 03 Jan 2026 10:22:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[attempt]]></category>
		<category><![CDATA[ballari]]></category>
		<category><![CDATA[clarification.]]></category>
		<category><![CDATA[Pawan Najjoor]]></category>
		<category><![CDATA[rumour]]></category>
		<category><![CDATA[SP]]></category>
		<category><![CDATA[suicide.]]></category>
		<guid isPermaLink="false">https://www.justkannada.in/?p=149849</guid>

					<description><![CDATA[<p>ಬೆಂಗಳೂರು, ಜನವರಿ, 3,2026 (www.justkannada.in): ಬಳ್ಳಾರಿಯಲ್ಲಿ ನಡೆದ ಗಲಾಟೆ ಫೈರಿಂಗ್ ನಡೆದ ಹಿಂಸಾಚಾರದ ಬೆನ್ನಲ್ಲೇ ಅಮಾನತುಗೊಂಡಿದ್ದ ಎಸ್‌ ಪಿ ಪವನ್ ನಜ್ಜೂರ್ ಅವರು ತುಮಕೂರಿನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ  ಎಂಬ ಸುದ್ದಿಗಳು ಹರಿದಾಡಿದ್ದು ಈ ವದಂತಿ ಬಗ್ಗೆ ಅವರ ಆಪ್ತರು ಸ್ಪಷ್ಟನೆ ನೀಡಿದ್ದಾರೆ. ಇದೀಗ ಬಳ್ಳಾರಿ ಎಸ್‌ಪಿ ಪವನ್‌ ನಿಜ್ಜೂರ್‌ ಅವರು ಆತ್ಮಹತ್ಯೆಗೆ ಯತ್ನಿಸಿಲ್ಲ. ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಅವರ ಸ್ನೇಹಿತ, ಬೆಂಗಳೂರು ಸಿಸಿಬಿ ಡಿಸಿಪಿ ಶ್ರೀಹರಿಬಾಬು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಆರೋಗ್ಯದಲ್ಲಿ [&#8230;]</p>
<p>The post <a href="https://www.justkannada.in/ballari-sp-pawan-najjoor/"> ಬಳ್ಳಾರಿ SP ಪವನ್‌ ನಜ್ಜೂರ್‌ ಆತ್ಮಹತ್ಯೆ ಯತ್ನ ವದಂತಿ: ಆಪ್ತರ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜನವರಿ, 3,2026 (<a href="http://www.justkannada.in">www.justkannada.in</a>):</strong> ಬಳ್ಳಾರಿಯಲ್ಲಿ ನಡೆದ ಗಲಾಟೆ ಫೈರಿಂಗ್ ನಡೆದ ಹಿಂಸಾಚಾರದ ಬೆನ್ನಲ್ಲೇ ಅಮಾನತುಗೊಂಡಿದ್ದ ಎಸ್‌ ಪಿ ಪವನ್ ನಜ್ಜೂರ್ ಅವರು ತುಮಕೂರಿನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ  ಎಂಬ ಸುದ್ದಿಗಳು ಹರಿದಾಡಿದ್ದು ಈ ವದಂತಿ ಬಗ್ಗೆ ಅವರ ಆಪ್ತರು ಸ್ಪಷ್ಟನೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇದೀಗ ಬಳ್ಳಾರಿ ಎಸ್‌ಪಿ ಪವನ್‌ ನಿಜ್ಜೂರ್‌ ಅವರು ಆತ್ಮಹತ್ಯೆಗೆ ಯತ್ನಿಸಿಲ್ಲ. ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಅವರ ಸ್ನೇಹಿತ, ಬೆಂಗಳೂರು ಸಿಸಿಬಿ ಡಿಸಿಪಿ ಶ್ರೀಹರಿಬಾಬು ಸ್ಪಷ್ಟಪಡಿಸಿದ್ದಾರೆ.</p>
<p>ಈ ಕುರಿತು ಮಾತನಾಡಿರುವ ಅವರು, ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈಗ ಶಿರಾ ಬಳಿಯ ಫಾರ್ಮ್‌ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಪವನ್‌ ಆತ್ಮಹತ್ಯೆಗೆ ಯತ್ನಿಸಿಲ್ಲ ಅದು ಸುಳ್ಳು ಎಂದು ತಿಳಿಸಿದ್ದಾರೆ.</p>
<p>ಪವನ್ ನೆಜ್ಜೂರ ಅವರು ಜ.1 ರಂದು ಅಧಿಕಾರ ಸ್ವೀಕರಿಸಿದ್ದರು. ಇದಾದ ಬಳಿಕ ಬಳ್ಳಾರಿಯಲ್ಲಿ ಗಲಾಟೆ ನಡೆದು ಫೈರಿಂಗ್ ನಿಂದಾಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಬಲಿಯಾಗಿದ್ದರು.  ಇದಾದ ನಂತರ ನಿರ್ಲಕ್ಷ್ಯದ ಆರೋಪದ ಮೇಲೆ ಬಳ್ಳಾರಿ ಎಸ್‌ಪಿ ಪವನ್‌ ನಿಜ್ಜೂರ್‌ ಅವರನ್ನು ಅಮಾನತು ಮಾಡಿತ್ತು. ಈ ಹಿನ್ನೆಲೆಯಲ್ಲಿ  ಪವನ್‌ ನಿಜ್ಜೂರ್‌  ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿತ್ತು.</p>
<p>Key words: Ballari, SP, Pawan Najjoor, suicide, attempt, rumour, Clarification</p>
<p>The post <a href="https://www.justkannada.in/ballari-sp-pawan-najjoor/"> ಬಳ್ಳಾರಿ SP ಪವನ್‌ ನಜ್ಜೂರ್‌ ಆತ್ಮಹತ್ಯೆ ಯತ್ನ ವದಂತಿ: ಆಪ್ತರ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಳ್ಳಾರಿ ಗಲಾಟೆ ವಿಚಾರದಲ್ಲಿ SP ಸಸ್ಪೆಂಡ್ : ಸರ್ಕಾರದ ವಿರುದ್ದ ಬಿವೈ ವಿಜಯೇಂದ್ರ ಕಿಡಿ</title>
		<link>https://www.justkannada.in/bellary-riot-case-by-vijayendra/</link>
		
		<dc:creator><![CDATA[prashanth]]></dc:creator>
		<pubDate>Sat, 03 Jan 2026 08:01:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bellary]]></category>
		<category><![CDATA[BY Vijayendra]]></category>
		<category><![CDATA[government]]></category>
		<category><![CDATA[riot case]]></category>
		<category><![CDATA[SP]]></category>
		<category><![CDATA[suspended..]]></category>
		<guid isPermaLink="false">https://www.justkannada.in/?p=149841</guid>

					<description><![CDATA[<p>ಬೆಂಗಳೂರು,ಜನವರಿ,3,2026 (www.justkannada.in): ಬಳ್ಳಾರಿಯಲ್ಲಿ ನಡೆದ ಗಲಾಟೆ ಪೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನಜ್ಜೂರ ಅವರನ್ನು ಅಮಾನತು ಮಾಡಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ, ಬಳ್ಳಾರಿಯಲ್ಲಿ ಕಾಂಗ್ರೆಸ್ ನಡೆಸಿದ ನಿರ್ಲಜ್ಜ ಗೂಂಡಾಗಿರಿ, ನಮ್ಮ ಪಕ್ಷದ ಶಾಸಕರ ಹಾಗೂ ಕಾರ್ಯಕರ್ತರ ಮೇಲಿನ ಹತ್ಯೆ ಪ್ರಯತ್ನ, ಹಲ್ಲೆ, ಕಾನೂನು ಸುವ್ಯವಸ್ಥೆಯ ಸಂಪೂರ್ಣ ಕುಸಿತ, ಓರ್ವನ ಪ್ರಾಣಹಾನಿಯ ಗಂಭೀರ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು, ಈ ಭ್ರಷ್ಟ [&#8230;]</p>
<p>The post <a href="https://www.justkannada.in/bellary-riot-case-by-vijayendra/">ಬಳ್ಳಾರಿ ಗಲಾಟೆ ವಿಚಾರದಲ್ಲಿ SP ಸಸ್ಪೆಂಡ್ : ಸರ್ಕಾರದ ವಿರುದ್ದ ಬಿವೈ ವಿಜಯೇಂದ್ರ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,3,2026 (<a href="http://www.justkannada.in">www.justkannada.in</a>):</strong> ಬಳ್ಳಾರಿಯಲ್ಲಿ ನಡೆದ ಗಲಾಟೆ ಪೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನಜ್ಜೂರ ಅವರನ್ನು ಅಮಾನತು ಮಾಡಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ, ಬಳ್ಳಾರಿಯಲ್ಲಿ ಕಾಂಗ್ರೆಸ್ ನಡೆಸಿದ ನಿರ್ಲಜ್ಜ ಗೂಂಡಾಗಿರಿ, ನಮ್ಮ ಪಕ್ಷದ ಶಾಸಕರ ಹಾಗೂ ಕಾರ್ಯಕರ್ತರ ಮೇಲಿನ ಹತ್ಯೆ ಪ್ರಯತ್ನ, ಹಲ್ಲೆ, ಕಾನೂನು ಸುವ್ಯವಸ್ಥೆಯ ಸಂಪೂರ್ಣ ಕುಸಿತ, ಓರ್ವನ ಪ್ರಾಣಹಾನಿಯ ಗಂಭೀರ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು, ಈ ಭ್ರಷ್ಟ ಕಾಂಗ್ರೆಸ್ ಸರ್ಕಾರ ಕೇವಲ 1 ದಿನದ ಹಿಂದಷ್ಟೇ ಅಧಿಕಾರ ಸ್ವೀಕರಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಅಮಾನತು ಮಾಡಿರುವುದು, ತನ್ನ ಅಪ್ರಬುದ್ಧತೆ, ವೈಫಲ್ಯ ಮುಚ್ಚಿಕೊಳ್ಳಲು ನಡೆಸುತ್ತಿರುವ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.</p>
<p>ಮಾನ್ಯ ಮುಖ್ಯಮಂತ್ರಿಗಳೇ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ನಿಮ್ಮದೇ ಶಾಸಕರ ಪ್ರಚೋದನಾಕಾರಿ ನಡವಳಿಕೆ ಹಾಗೂ ಆಡಳಿತ ಪಕ್ಷದ ಕಾರ್ಯಕರ್ತರ ಪುಂಡಾಟಿಕೆಯನ್ನು ನಿಯಂತ್ರಿಸುವ ಬದಲು, ಓರ್ವ ಅಧಿಕಾರಿಯನ್ನು ‘ಬಲಿಪಶು’ ಮಾಡುವುದು ಎಷ್ಟು ಸರಿ? ಅಧಿಕಾರಿಗೆ ಕನಿಷ್ಠ ಪರಿಸ್ಥಿತಿಯನ್ನು ಅವಲೋಕಿಸಲು ಕಾಲಾವಕಾಶವನ್ನೇ ನೀಡದೆ ಅಮಾನತು ಮಾಡಿರುವುದು ನಿಮ್ಮ ಆಡಳಿತದ ದಿವಾಳಿತನವನ್ನು ತೋರಿಸುತ್ತಿದೆ. ಸಾರ್ವಜನಿಕವಾಗಿ ಗುಂಡು ಹಾರಿಸಿ ಭಯೋತ್ಪಾದನೆ ನಡೆಸಿದ ಶಾಸಕರ ಬೆಂಬಲಿಗರ ಮೇಲೆ ಕ್ರಮ ಕೈಗೊಳ್ಳುವ ಧೈರ್ಯ ನಿಮಗಿದೆಯೇ? ಕೇವಲ ಅಧಿಕಾರಿಗಳ ತಲೆದಂಡದಿಂದ ಸತ್ಯವನ್ನು ಮುಚ್ಚಿ ಹಾಕಲು ಸಾಧ್ಯವಿಲ್ಲ.</p>
<p>ಬಳ್ಳಾರಿಯಲ್ಲಿ ಗುಂಡು ಹಾರಿಸಿದ್ದು ಯಾರು ಮತ್ತು ಯಾರ ಪ್ರಚೋದನೆಯಿಂದ ಈ ಘಟನೆ ನಡೆದಿದೆ ಎಂಬ ಸತ್ಯ ಹೊರಬರಲು, ನಿಮ್ಮ ಮುಲಾಜಿನಲ್ಲಿ ಇರುವ ತನಿಖೆಯಿಂದ ಸಾಧ್ಯವಿಲ್ಲ. ಸ್ವಲ್ಪವಾದರೂ ನೈತಿಕತೆ ಇದ್ದರೆ, ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ಪ್ರಕರಣದ ನಿಷ್ಪಕ್ಷಪಾತ ತನಿಖೆ ಮಾಡಿಸಿ, ರಾಜ್ಯವೇ ತಲೆತಗ್ಗಿಸುವಂತಹ ಇಂತಹ ಗೂಂಡಾ ವರ್ತನೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.</p>
<p>ಹಾಗೆಯೇ ನಿಮ್ಮ ವೈಫಲ್ಯ ಮರೆಮಾಚಲು ಪ್ರಾಮಾಣಿಕ ಅಧಿಕಾರಿಗಳನ್ನು ಬಲಿಪಶು ಮಾಡುವ, ಅವರ ಸ್ಥೈರ್ಯ ಕುಗ್ಗಿಸುವ ಈ ಕೆಟ್ಟ ಕಾಂಗ್ರೆಸ್ ಪ್ರವೃತ್ತಿ ಈ ಕೂಡಲೇ ನಿಲ್ಲಲಿ ಎಂದು ಬಿವೈ ವಿಜಯೇಂದ್ರ ಹರಿಹಾಯ್ದಿದ್ದಾರೆ.</p>
<p>Key words: Bellary, riot case, SP, suspended, BY Vijayendra, government</p>
<p>The post <a href="https://www.justkannada.in/bellary-riot-case-by-vijayendra/">ಬಳ್ಳಾರಿ ಗಲಾಟೆ ವಿಚಾರದಲ್ಲಿ SP ಸಸ್ಪೆಂಡ್ : ಸರ್ಕಾರದ ವಿರುದ್ದ ಬಿವೈ ವಿಜಯೇಂದ್ರ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>JK EDITORIAL; ಏಳು ಗಂಟೆಯ ಎಸ್‌ಪಿ: ಶಿಸ್ತು ಆಡಳಿತವೇ, ರಾಜಕೀಯ ಆತುರವೇ?</title>
		<link>https://www.justkannada.in/bellary-sp-pavan/</link>
		
		<dc:creator><![CDATA[mahesh]]></dc:creator>
		<pubDate>Fri, 02 Jan 2026 15:25:40 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[administration]]></category>
		<category><![CDATA[bellary]]></category>
		<category><![CDATA[Disciplined]]></category>
		<category><![CDATA[pavan]]></category>
		<category><![CDATA[political haste]]></category>
		<category><![CDATA[Seven hours SP]]></category>
		<category><![CDATA[SP]]></category>
		<category><![CDATA[Valmiki]]></category>
		<guid isPermaLink="false">https://www.justkannada.in/?p=149817</guid>

					<description><![CDATA[<p>&#160; ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಪವನ್ ಅವರು ಅಧಿಕಾರ ಸ್ವೀಕರಿಸಿದ ಕೇವಲ ಏಳು ಗಂಟೆಗಳಲ್ಲೇ ಅಮಾನತುಗೊಂಡ ಘಟನೆ, ರಾಜ್ಯದ ಆಡಳಿತ ವ್ಯವಸ್ಥೆಗೆ ಕನ್ನಡಿ ಹಿಡಿದಂತಿದೆ. ವಾಲ್ಮೀಕಿ ಮಹರ್ಷಿ ಪ್ರತಿಮೆ ಸ್ಥಾಪನೆ ಕಾರ್ಯಕ್ರಮದ ಪೋಸ್ಟರ್ ವಿವಾದ ತಕ್ಷಣದ ಕಾರಣವಾಗಿದ್ದರೂ, ಈ ಕ್ರಮದ ಹಿಂದೆ ಇರುವ ತ್ವರಿತತೆ ಹಾಗೂ ರಾಜಕೀಯ ಸ್ಪಂದನೆ ಹಲವು ಪ್ರಶ್ನೆಗಳನ್ನು ಎಬ್ಬಿಸುತ್ತದೆ. ವಾಲ್ಮೀಕಿ ಮಹರ್ಷಿ ಕೇವಲ ಒಂದು ಸಮುದಾಯದ ಪ್ರತೀಕವಲ್ಲ; ಅವರು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂಕೇತ. ಆದರೆ, ಇಂತಹ ಮಹಾನ್ ಪರಂಪರೆಯನ್ನು ರಾಜಕೀಯ [&#8230;]</p>
<p>The post <a href="https://www.justkannada.in/bellary-sp-pavan/">JK EDITORIAL; ಏಳು ಗಂಟೆಯ ಎಸ್‌ಪಿ: ಶಿಸ್ತು ಆಡಳಿತವೇ, ರಾಜಕೀಯ ಆತುರವೇ?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಪವನ್ ಅವರು ಅಧಿಕಾರ ಸ್ವೀಕರಿಸಿದ ಕೇವಲ ಏಳು ಗಂಟೆಗಳಲ್ಲೇ ಅಮಾನತುಗೊಂಡ ಘಟನೆ, ರಾಜ್ಯದ ಆಡಳಿತ ವ್ಯವಸ್ಥೆಗೆ ಕನ್ನಡಿ ಹಿಡಿದಂತಿದೆ. ವಾಲ್ಮೀಕಿ ಮಹರ್ಷಿ ಪ್ರತಿಮೆ ಸ್ಥಾಪನೆ ಕಾರ್ಯಕ್ರಮದ ಪೋಸ್ಟರ್ ವಿವಾದ ತಕ್ಷಣದ ಕಾರಣವಾಗಿದ್ದರೂ, ಈ ಕ್ರಮದ ಹಿಂದೆ ಇರುವ ತ್ವರಿತತೆ ಹಾಗೂ ರಾಜಕೀಯ ಸ್ಪಂದನೆ ಹಲವು ಪ್ರಶ್ನೆಗಳನ್ನು ಎಬ್ಬಿಸುತ್ತದೆ.</p>
<p>ವಾಲ್ಮೀಕಿ ಮಹರ್ಷಿ ಕೇವಲ ಒಂದು ಸಮುದಾಯದ ಪ್ರತೀಕವಲ್ಲ; ಅವರು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂಕೇತ. ಆದರೆ, ಇಂತಹ ಮಹಾನ್ ಪರಂಪರೆಯನ್ನು ರಾಜಕೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುವ ಪ್ರಯತ್ನವೇ ಈ ವಿವಾದದ ಮೂಲವಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ರಾಜಕೀಯ ವೇದಿಕೆಯಾಗುವಾಗ, ಕಾನೂನು ಸುವ್ಯವಸ್ಥೆಯ ಮೇಲೆ ಬರುವ ಒತ್ತಡ ಸಹಜ.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪೊಲೀಸ್ ವರಿಷ್ಠಾಧಿಕಾರಿ ಎಂಬ ಹುದ್ದೆ ತಟಸ್ಥತೆ ಮತ್ತು ದೃಢತೆಯ ಪ್ರತೀಕವಾಗಬೇಕು. ಆದರೆ, ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಎದುರಾದ ವಿವಾದಕ್ಕೆ ತಕ್ಷಣವೇ ಅಮಾನತು ಎಂಬ ಉತ್ತರ ನೀಡಿರುವುದು, ಸಮಸ್ಯೆಯ ಮೂಲಕ್ಕೆ ಪರಿಹಾರವೋ ಅಥವಾ ರಾಜಕೀಯ ಒತ್ತಡಕ್ಕೆ ತಲೆಬಾಗಿದ ನಿರ್ಧಾರವೋ ಎಂಬ ಅನುಮಾನವನ್ನು ಹುಟ್ಟುಹಾಕುತ್ತದೆ. ಆಡಳಿತ ವೈಫಲ್ಯಕ್ಕೆ ಕ್ರಮ ಅಗತ್ಯವೇ ಸರಿ, ಆದರೆ ಕ್ರಮಕ್ಕೂ ನ್ಯಾಯಯುತ ಪ್ರಕ್ರಿಯೆ ಬೇಕು.</p>
<figure id="attachment_149818" aria-describedby="caption-attachment-149818" style="width: 300px" class="wp-caption alignnone"><img loading="lazy" decoding="async" class="size-medium wp-image-149818" src="https://www.justkannada.in/wp-content/uploads/2026/01/mahesh-300x290.jpg" alt="" width="300" height="290" srcset="https://www.justkannada.in/wp-content/uploads/2026/01/mahesh-300x290.jpg 300w, https://www.justkannada.in/wp-content/uploads/2026/01/mahesh-435x420.jpg 435w, https://www.justkannada.in/wp-content/uploads/2026/01/mahesh-150x145.jpg 150w, https://www.justkannada.in/wp-content/uploads/2026/01/mahesh.jpg 500w" sizes="auto, (max-width: 300px) 100vw, 300px" /><figcaption id="caption-attachment-149818" class="wp-caption-text">Editor Pic</figcaption></figure>
<p>ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ — ಈ ಅಮಾನತು ಪೊಲೀಸ್ ಅಧಿಕಾರಿಗಳಿಗೆ ನೀಡುವ ಸಂದೇಶ. ತಪ್ಪು ಮಾಡಿದರೆ ಕ್ರಮ ಅನಿವಾರ್ಯ. ಆದರೆ, ತ್ವರಿತ ಹಾಗೂ ಸ್ಪಷ್ಟ ತನಿಖೆಯಿಲ್ಲದ ಕ್ರಮಗಳು ಅಧಿಕಾರಿಗಳ ನಿರ್ಧಾರಶಕ್ತಿಯನ್ನು ಕುಗ್ಗಿಸಬಹುದು. ‘ಪರಿಸ್ಥಿತಿ ನಿಭಾಯಿಸುವುದಕ್ಕಿಂತ, ರಾಜಕೀಯ ತಾಳಮೇಳ ನೋಡಿಕೊಳ್ಳುವುದೇ ಮುಖ್ಯವೇ?’ ಎಂಬ ಭಾವನೆ ಅಧಿಕಾರಿಗಳಲ್ಲಿ ಮೂಡಿದರೆ ಅದು ವ್ಯವಸ್ಥೆಗೆ ಅಪಾಯಕಾರಿ.</p>
<p>ಈ ಘಟನೆ ಕಾಂಗ್ರೆಸ್–ಬಿಜೆಪಿ ನಡುವಿನ ರಾಜಕೀಯ ಗಲಾಟೆಗೆ ಮಾತ್ರ ಸೀಮಿತವಾಗಿಲ್ಲ. ಇದು ಪೊಲೀಸ್ ವ್ಯವಸ್ಥೆಯ ಸ್ವಾಯತ್ತತೆ, ಆಡಳಿತದ ಸ್ಥಿರತೆ ಮತ್ತು ರಾಜಕೀಯ ಸಂವೇದನೆಗಳ ನಡುವಿನ ಸಮತೋಲನದ ಪ್ರಶ್ನೆಯಾಗಿದೆ. ಸರ್ಕಾರ ಶಿಸ್ತು ಪಾಲನೆಗಾಗಿ ಕ್ರಮ ತೆಗೆದುಕೊಂಡಿದೆಯೇ ಅಥವಾ ರಾಜಕೀಯ ತುರ್ತುಪಡೆಯಿಂದ ನಿರ್ಧಾರ ಕೈಗೊಂಡಿದೆಯೇ ಎಂಬುದು ಸ್ಪಷ್ಟವಾಗಬೇಕು.</p>
<p>ಬಳ್ಳಾರಿ ಪ್ರಕರಣ ಒಂದು ಎಚ್ಚರಿಕೆ. ಕಾನೂನು ಸುವ್ಯವಸ್ಥೆ ರಾಜಕೀಯದ ನೆರಳಲ್ಲಿ ಅಲ್ಲ, ಸಂವಿಧಾನದ ಬೆಳಕಿನಲ್ಲಿ ನಡೆಯಬೇಕು. ಆಡಳಿತದ ತೀರ್ಮಾನಗಳು ಶೀಘ್ರವಾಗಿರಬಹುದು, ಆದರೆ ಅವು ನ್ಯಾಯಸಮ್ಮತವಾಗಿಯೂ ಇರಬೇಕು. ಇಲ್ಲವಾದರೆ, ‘ಏಳು ಗಂಟೆಯ ಎಸ್‌ಪಿ’ ಎಂಬುದು ಕೇವಲ ಒಂದು ಘಟನೆ ಅಲ್ಲ, ಆಡಳಿತದ ಆತುರದ ಸಂಕೇತವಾಗಿ ಉಳಿಯುತ್ತದೆ.</p>
<p>ಶಿಸ್ತು ಅಗತ್ಯ. ಆದರೆ ಶಿಸ್ತು, ನ್ಯಾಯವನ್ನು ಮೀರಬಾರದು.</p>
<p>KEY WORDS: Seven hours SP, disciplined, administration, political haste, Bellary, Valmiki, pavan, SP,</p>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>SUMMARY:</strong></p>
<p>Seven hours SP: Is it disciplined administration or political haste?</p>
<p><img loading="lazy" decoding="async" class="alignnone size-full wp-image-149819" src="https://www.justkannada.in/wp-content/uploads/2026/01/bellary-sp.jpg" alt="" width="500" height="461" srcset="https://www.justkannada.in/wp-content/uploads/2026/01/bellary-sp.jpg 500w, https://www.justkannada.in/wp-content/uploads/2026/01/bellary-sp-300x277.jpg 300w, https://www.justkannada.in/wp-content/uploads/2026/01/bellary-sp-456x420.jpg 456w, https://www.justkannada.in/wp-content/uploads/2026/01/bellary-sp-150x138.jpg 150w" sizes="auto, (max-width: 500px) 100vw, 500px" /></p>
<p>The incident of suspension of Bellary Superintendent of Police Pawan just seven hours after he took charge is a reflection on the state&#8217;s governance system. While the immediate cause was the poster controversy of the Valmiki Maharshi statue installation program, the haste and political reaction behind this move raises many questions.</p>
<p>The post <a href="https://www.justkannada.in/bellary-sp-pavan/">JK EDITORIAL; ಏಳು ಗಂಟೆಯ ಎಸ್‌ಪಿ: ಶಿಸ್ತು ಆಡಳಿತವೇ, ರಾಜಕೀಯ ಆತುರವೇ?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿಲ್ಲ- ಬೆಳಗಾವಿ ಎಸ್ ಪಿ ಸ್ಪಷ್ಟನೆ</title>
		<link>https://www.justkannada.in/olice-farmers/</link>
		
		<dc:creator><![CDATA[prashanth]]></dc:creator>
		<pubDate>Fri, 07 Nov 2025 11:57:32 +0000</pubDate>
				<category><![CDATA[Cinema]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[Sports]]></category>
		<category><![CDATA[Belgaum]]></category>
		<category><![CDATA[did not]]></category>
		<category><![CDATA[Farmers]]></category>
		<category><![CDATA[lathicharge]]></category>
		<category><![CDATA[police]]></category>
		<category><![CDATA[SP]]></category>
		<guid isPermaLink="false">https://www.justkannada.in/?p=147473</guid>

					<description><![CDATA[<p>ಬೆಂಗಳೂರು,ನವೆಂಬರ್,7,2025 (www.justkannada.in):  ಪ್ರತಿಟನ್ ಕಬ್ಬಿಗೆ 3500 ರೂ. ನಿಗದಿ ಮಾಡುವಂತೆ ಆಗ್ರಹಿಸಿ ರೈತರ ಹೋರಾಟ ಮುಂದುವರೆದಿದ್ದು ಈ ನಡುವೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕು ಹತ್ತರಗಿ ಬಳಿ ರೈತರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಬೆಳಗಾವಿ ಎಸ್.ಪಿ ಭೀಮಾಶಂಕರ್ ಗುಳೇದ್ ಸ್ಪಷ್ಟಪಡಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹತ್ತರಗಿ ಸ್ಥಳಕ್ಕೆ ಭೇಟಿ ನೀಡಿ ಈ ಕುರಿತು ಮಾತನಾಡಿರುವ ಬೆಳಗಾವಿ ಎಸ್.ಪಿ ಭೀಮಾಶಂಕರ್ ಗುಳೇದ್, ಪ್ರತಿಭಟನೆ ವೇಳೆ ಕೆಲವು ವಾಹನಗಳ ಮೇಲೆ ಕಲ್ಲು ತೂರಿದ್ದಾರೆ ಹತ್ತರಗಿ ಕ್ರಾಸ್ [&#8230;]</p>
<p>The post <a href="https://www.justkannada.in/olice-farmers/">ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿಲ್ಲ- ಬೆಳಗಾವಿ ಎಸ್ ಪಿ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,7,2025 (<a href="http://www.justkannada.in">www.justkannada.in</a>): </strong> ಪ್ರತಿಟನ್ ಕಬ್ಬಿಗೆ 3500 ರೂ. ನಿಗದಿ ಮಾಡುವಂತೆ ಆಗ್ರಹಿಸಿ ರೈತರ ಹೋರಾಟ ಮುಂದುವರೆದಿದ್ದು ಈ ನಡುವೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕು ಹತ್ತರಗಿ ಬಳಿ ರೈತರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಬೆಳಗಾವಿ ಎಸ್.ಪಿ ಭೀಮಾಶಂಕರ್ ಗುಳೇದ್ ಸ್ಪಷ್ಟಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹತ್ತರಗಿ ಸ್ಥಳಕ್ಕೆ ಭೇಟಿ ನೀಡಿ ಈ ಕುರಿತು ಮಾತನಾಡಿರುವ ಬೆಳಗಾವಿ ಎಸ್.ಪಿ ಭೀಮಾಶಂಕರ್ ಗುಳೇದ್, ಪ್ರತಿಭಟನೆ ವೇಳೆ ಕೆಲವು ವಾಹನಗಳ ಮೇಲೆ ಕಲ್ಲು ತೂರಿದ್ದಾರೆ ಹತ್ತರಗಿ ಕ್ರಾಸ್ ನಲ್ಲಿ ಕಲ್ಲು ತೂರಾಟದಿಂದ ಕೆಲವು ಸಿಬ್ಬಂದಿಗೆ ಗಾಯವಾಗಿದೆ. ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಮುಂದಾದಾಗ ಕೆಲವು ಕಿಡಗೇಡಿಗಳು ಕಲ್ಲು ತೂರಿದ್ದಾರೆ  ಎಂದರು.<img loading="lazy" decoding="async" class="aligncenter size-full wp-image-147462" src="https://www.justkannada.in/wp-content/uploads/2025/11/farmer-protest.jpg" alt="" width="500" height="190" srcset="https://www.justkannada.in/wp-content/uploads/2025/11/farmer-protest.jpg 500w, https://www.justkannada.in/wp-content/uploads/2025/11/farmer-protest-300x114.jpg 300w, https://www.justkannada.in/wp-content/uploads/2025/11/farmer-protest-150x57.jpg 150w" sizes="auto, (max-width: 500px) 100vw, 500px" /></p>
<p>ಪ್ರತಿಭಟನಾರೈತರ ಮೇಲೆ ನಮ್ಮ ಪೊಲೀಸರು ಲಾಠಿಚಾರ್ಜ್ ಮಾಡಿಲ್ಲ ಕಲ್ಲು ತೂರಾಟ ಪ್ರಕರಣ ಸಂಬಂಧ ಯಾವುದೇ ಕೇಸ್ ದಾಲಾಗಿಲ್ಲ ಎಂದು  ಎಸ್ ಪಿ ಭೀಮಾಶಂಕರ್ ಗುಲೇದ್ ತಿಳಿಸಿದರು.</p>
<p>Key words: Police, did not, lathicharge, farmers, Belgaum, SP</p>
<p>The post <a href="https://www.justkannada.in/olice-farmers/">ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿಲ್ಲ- ಬೆಳಗಾವಿ ಎಸ್ ಪಿ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಡಿಸಿ, ಎಸ್ ಪಿಗಳೇ ನೇರ ಹೊಣೆ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ</title>
		<link>https://www.justkannada.in/cm-siddaramaiah-168/</link>
		
		<dc:creator><![CDATA[prashanth]]></dc:creator>
		<pubDate>Fri, 30 May 2025 06:56:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CEO]]></category>
		<category><![CDATA[CM Siddaramaiah]]></category>
		<category><![CDATA[DC]]></category>
		<category><![CDATA[meeting]]></category>
		<category><![CDATA[SP]]></category>
		<guid isPermaLink="false">https://www.justkannada.in/?p=140879</guid>

					<description><![CDATA[<p>ಬೆಂಗಳೂರು,ಮೇ,30,2025 (www.justknnada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ, ಅಭಿವೃದ್ಧಿ ಕುಂಠಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದರು. ಇಂದು ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳುಗೆ ಹತ್ತಾರು ಖಡಕ್ ಸೂಚನೆಗಳನ್ನ ನೀಡಿದರು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ನೀಡಿದ ಸೂಚನೆಗಳು ಈ ಕೆಳಕಂಡಂತಿವೆ.. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. [&#8230;]</p>
<p>The post <a href="https://www.justkannada.in/cm-siddaramaiah-168/">ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಡಿಸಿ, ಎಸ್ ಪಿಗಳೇ ನೇರ ಹೊಣೆ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,30,2025 (<a href="http://www.justknnada.in">www.justknnada.in</a>):</strong> ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ, ಅಭಿವೃದ್ಧಿ ಕುಂಠಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳುಗೆ ಹತ್ತಾರು ಖಡಕ್ ಸೂಚನೆಗಳನ್ನ ನೀಡಿದರು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ನೀಡಿದ ಸೂಚನೆಗಳು ಈ ಕೆಳಕಂಡಂತಿವೆ..</p>
<p>ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ,  ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ, ಸಿಇಒ, ಎಸ್ಪಿಗಳ ಜವಾಬ್ದಾರಿ ತಾನೇ ಎಂದು ಮುಖ್ಯಮಂತ್ರಿಗಳು ಖಾರವಾಗಿ  ಪ್ರಶ್ನಿಸಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳು, ತೆಗೆದುಕೊಂಡ ನಿರ್ಣಯಗಳಲ್ಲಿ ಕೆಲವು ಇಲಾಖೆಗಳು ಶೇ100 ರಷ್ಟು ಪ್ರಗತಿ ತೋರಿಸಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ರಾಜಿ ಇಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರವಾಗಿ ಕ್ರಮ ಕೈಗೊಳ್ಳುವುದು ನಮಗೆ ಅನಿವಾರ್ಯ ಆಗುತ್ತದೆ.  ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒ ಗಳು ತಮ್ಮ ಅಹಂ ಬದಿಗೊಟ್ಟಿ ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ಉದ್ದೇಶಕ್ಕೇ  ನೀವುಗಳು ಐಎಎಸ್‌ ಮಾಡಿರುವುದು. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.<img loading="lazy" decoding="async" class="aligncenter size-full wp-image-140882" src="https://www.justkannada.in/wp-content/uploads/2025/05/siddaramaiah.jpg12.jpg" alt="" width="500" height="331" srcset="https://www.justkannada.in/wp-content/uploads/2025/05/siddaramaiah.jpg12.jpg 500w, https://www.justkannada.in/wp-content/uploads/2025/05/siddaramaiah.jpg12-300x199.jpg 300w, https://www.justkannada.in/wp-content/uploads/2025/05/siddaramaiah.jpg12-150x99.jpg 150w" sizes="auto, (max-width: 500px) 100vw, 500px" /></p>
<p>10-10-1949 ರಂದು ಸಂವಿಧಾನ ಜಾರಿ ಸಭೆಯಲ್ಲಿ ಇಂಡಿಯನ್‌ ಸಿವಿಲ್‌ ಸರ್ವೀಸ್‌ ಬೇಕಾ ಎಂದು ಚರ್ಚೆ ಆಗಿ ಐಎಎಸ್‌ ಬೇಕು ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಆ ಸಭೆಯಲ್ಲಿ ವಲ್ಲಭಾಬಾಯಿ ಪಟೇಲರು &#8220;ದೇಶವನ್ನು ನೈಜ ಸ್ವಾತಂತ್ರ್ಯ ಹೋರಾಟಗಳ ಆಶಯದಲ್ಲಿ ಮುನ್ನಡೆಸಲು ಐಎಎಸ್‌ ಸೇವೆ ಇರಬೇಕು, ಇದರ ನೈಜ ಕಾಳಜಿಯನ್ನು ನೀವು ಅರ್ಥ ಮಾಡಿಕೊಳ್ಳಬೇಕು. ವಲ್ಲಭಬಾಯಿ ಅವರ ಮಾತನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರ ವಿರುದ್ಧ ಮತ್ತು ಜನಪರ ಆಶಯಗಳಿಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನೀವೆಲ್ಲಾ ಸಂವಿಧಾನ ಓದಿದ್ದೀರಿ, ಅದರ ಆಶಯಗಳಿಗೆ, ಧ್ಯೇಯೋದ್ದೇಶಗಳಿಗೆ ಬದ್ದರಾಗಿದ್ದೀರಿ ಎಂದು ನಂಬಿದ್ದೇನೆ. ಇದನ್ನು ಕಾರ್ಯ ರೂಪಕ್ಕೆ ತರುವುದರಲ್ಲಿ ವಿಫಲರಾದವರ ವಿರುದ್ಧ ನಾನು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ನಿರ್ಧಿರಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು.</p>
<p>ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿ ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.</p>
<p>ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇವೆರಡಕ್ಕೂ ನೇರಾ ನೇರಾ ಸಂಬಂಧವಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ, ಅಭಿವೃದ್ಧಿ ಕುಂಟಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆ ಎಂದು ಎಚ್ಚರಿಸಿದರು.</p>
<p>ನಾವು ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ನಾವು ಮತ್ತು ನೀವು ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದು ಜನರ ತೆರಿಗೆ ಹಣದಿಂದ ಎನ್ನುವುದನ್ನು ಮರೆಯಬಾರದು. ಕಾರು, ಮನೆ ಸೇರಿ ಎಲ್ಲಾ ಸವಲತ್ತುಗಳನ್ನು ನಾವು ಕೊಟ್ಟಿರುವುದು ತೆರಿಗೆ ಹಣದಲ್ಲಿ. ಆದ್ದರಿಂದ ಜನಪರ ಧೋರಣೆಯಲ್ಲಿ ಕೆಲಸ ಮಾಡಬೇಕು. ಇದೇ ಪ್ರಜಾಪ್ರಭುತ್ವದ ಮೂಲ ಆಶಯ. ಜಿಲ್ಲಾ ಮಟ್ಟದ ಶಾಂತಿ ಸಮಿತಿ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಆಗಿರ್ತಾರೆ. ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಶಾಂತಿಭಂಗ ಆದ ಮೇಲೆ ಪೋಸ್ಟ್‌ ಮಾರ್ಟಂ ಮಾಡುತ್ತಾ ಕೂರಬಾರದು. ಮೊದಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಏನು ಸಮಸ್ಯೆ ನಿಮಗೆ ಎಂದು ಪ್ರಶ್ನಿಸಿದರು.</p>
<p>ಬಾಲ್ಯ ವಿವಾಹ ಆಗುವುದು ಜಿಲ್ಲಾಧಿಕಾರಿಗಳ ಗಮನಕ್ಕೆ ಏಕೆ ಬರುವುದಿಲ್ಲ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ಕೆಳಗಿನವರು ನಿಮಗೆ ಹೇಳದಿದ್ದರೆ ನಿಮಗೆ ದಕ್ಷತೆ ಇಲ್ಲ ಎಂದು ಅರ್ಥ. ನಿಮಗೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ನಿಮ್ಮ ಬಗ್ಗೆ ಅವರಿಗೆ ಭಯ ಇಲ್ಲ ಎಂದೇ ಅರ್ಥ ಎಂದು ತರಾಟೆಗೆ ತೆಗೆದುಕೊಂಡರು.</p>
<p>ಈ ವರ್ಷ 700 ಬಾಲ್ಯ ವಿವಾಹ ನಡೆದಿದೆ, ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್‌ ಐಆರ್‌ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟ ವರ್ಷಗಳಾದರೂ 7೦೦ ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಹೇಗೆ? ಬಾಲ್ಯವಿವಾಹ ತಡೆಗೆ ಕಾಯ್ದೆ, ಕಾನೂನುಗಳಿವೆ. ಆದರೂ ಇದನ್ನು ಪರಿಣಾಮಕಾರಿಯಾಗಿ ಕೆಲವು ಕಡೆ ಬಳಸಿಲ್ಲ. ಇದು ತಪ್ಪಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.</p>
<p><strong>ಜಿಲ್ಲೆಯ ಶಾಲೆಗಳು, ಹಾಸ್ಟೆಲ್ ಗಳು , ವಸತಿ ಶಾಲೆಗಳಿಗೆ ಭೇಟಿ ನೀಡಿ</strong></p>
<p>ಜಿಲ್ಲಾಧಿಕಾರಿಗಳು, ಸಿಇಒಗಳು ತಮ್ಮ ಪ್ರವಾಸ ಕಾರ್ಯಕ್ರಮ ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು. ತಪಾಸಣಾ ವರದಿಗಳನ್ನು ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಲೆಗಳು, ಹಾಸ್ಟೆಲ್ ಗಳು , ವಸತಿ ಶಾಲೆಗಳು, ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ನಿರಂತರವಾಗಿ ಭೇಟಿ ನೀಡಬೇಕು. ಮುನ್ಸೂಚನೆ ಇಲ್ಲದೇ ಇಂತಹ ಭೇಟಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದು ಪದೇ ಪದೇ ಸೂಚನೆ ನೀಡಿದ್ದೇನೆ. ಆದರೂ ಕೆಲವರು ಇದನ್ನು ಪಾಲಿಸಿಲ್ಲ ಎನ್ನುವ ವರದಿ ನನಗೆ ಬಂದಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.</p>
<p>ನಿಮ್ಮ ಅಧೀನದಲ್ಲಿರುವ ಇಲಾಖೆಗಳು, ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸುವುದು ನಿಮ್ಮ ಜವಾಬ್ದಾರಿ. ನೀವು ದಕ್ಷತೆಯಿಂದ ಕಾರ್ಯನಿರ್ವಹಿಸದಿದ್ದರೆ ಅಧೀನ ಅಧಿಕಾರಿಗಳು ಕಾರ್ಯನಿರ್ವಹಿಸುವುದನ್ನು ಹೇಗೆ ನಿರೀಕ್ಷಿಸಬಹುದು? ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಆರೋಗ್ಯ, ಸಾರಿಗೆ ಸಂಚಾರದಂತಹ ಮೂಲಭೂತ ಸೌಕರ್ಯಗಳು ಲಭಿಸದಿದ್ದರೆ ಅದನ್ನು ಆಡಳಿತದ ವೈಫಲ್ಯವೆಂದೇ ಪರಿಗಣಿಸಬೇಕಾಗಿದೆ. ಹಾಡಿಗಳಲ್ಲಿ ಶಾಲೆ, ರಸ್ತೆ, ಆಸ್ಪತ್ರೆಯಂತಹ ಮೂಲಸೌಲಭ್ಯ ಒದಗಿಸಲು ಇಂದಿಗೂ ಸರಿಯಾಗಿ ಯಾಕೆ ಸಾಧ್ಯವಾಗಿಲ್ಲ; ಅವರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಸರಿಯಾಗಿ ಹಕ್ಕು ಒದಗಿಸಲು ಯಾಕೆ ಸಾಧ್ಯವಾಗಿಲ್ಲ. ಜಿಲ್ಲಾಧಿಕಾರಿಗಳು, ಸಿಇಒಗಳು ಇಂತಹ ಹಾಡಿಗಳಿಗೆ ನಿರಂತರ ಭೇಟಿ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.</p>
<p>ಕೆಲವು ಜಿಲ್ಲಾಧಿಕಾರಿಗಳು, ಸಿಇಒಗಳು ಸರಿಯಾಗಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗದಿರುವ ಬಗ್ಗೆ ದೂರುಗಳು ಬಂದಿವೆ. ಸಾರ್ವಜನಿಕ ಭೇಟಿಯ ಅವಧಿಯನ್ನು ಮೊದಲೇ ಪ್ರಕಟಿಸಬೇಕು. ಶೋಷಿತರು, ಬಡವರು, ಜನಸಾಮಾನ್ಯರು ಸಾಮಾನ್ಯವಾಗಿ ಜಿಲ್ಲಾಧಿಕಾರಿ ಅವರ ಕಚೇರಿಗೆ ಬರುತ್ತಾರ. ಅಂತವರ ಸಂಕಷ್ಟಗಳನ್ನು ನೀವೇ ಆಲಿಸದಿದ್ದರೆ ಅದನ್ನು ಬಗೆಹರಿಸುವವರು ಯಾರು? ಯಾರ ಬಳಿ ಅವರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಬೇಕು?</p>
<p>ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ವಾಸವಿರಬೇಕು. ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು, ಜನರಿಗೆ ಲಭ್ಯವಿರಬೇಕು. ಇದನ್ನು ಜಿಲ್ಲಾಧಿಕಾರಿಗಳು ಖಾತ್ರಿಪಡಿಸಬೇಕು. ಕೇಂದ್ರ ಸ್ಥಾನದಲ್ಲಿರದ ಅಧಿಕಾರಿಗಳ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ನನಗೆ ವರದಿ ನೀಡಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಲ್ಲಿ ಕನಿಷ್ಟ ಎರಡು ಬಾರಿ ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಬೇಕು. ಅದರೊಂದಿಗೆ ಶಾಲೆ, ಹಾಸ್ಟೆಲ್, ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ವರದಿಯನ್ನು ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.</p>
<p><strong>ಕೆರೆಗಳ ಒತ್ತುವರಿ ವಿಷಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಜಿಲ್ಲಾಧಿಕಾರಿಗಳ ವಿರುದ್ದ ಕ್ರಮಕ್ಕೆ ಸೂಚನೆ</strong></p>
<p>ರಾಜ್ಯದಲ್ಲಿ 10931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ. ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಕಳೆದ ಸಭೆಯಲ್ಲಿ ತಿಳಿಸಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ. ಕೂಡಲೇ ಇದರ ಬಗ್ಗೆ ಗಮನಹರಿಸಿ, ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ, ಒತ್ತುವರಿ ತೆರವುಗೊಳಿಸಿ, ಮಳೆ ನೀರು ಸರಾಗವಾಗಿ ಕೆರೆಗೆ ಹರಿದು ಬರುವಂತೆ ವ್ಯವಸ್ಥೆ ಮಾಡಬೇಕು. ಕೆರೆಗಳ ಒತ್ತುವರಿ ವಿಷಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.</p>
<p>ರಾಜ್ಯದಲ್ಲಿ ಈ ವರ್ಷ 1395 ಪೋಕ್ಸೋ ಪ್ರಕರಣಗಳು ದಾಖಲಾಗಿವೆ.  ಪೋಕ್ಸೋ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗುವಂತೆ ನೋಡಿಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸರಿಯಾದ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.</p>
<p>ಸಿಂಧುತ್ವ ಪ್ರಮಾಣ ಪತ್ರವನ್ನು ನಿಗದಿತವಾಗಿ ಒಂದು ತಿಂಗಳ ಒಳಗಾಗಿ ನೀಡಬೇಕಿದ್ದರೂ, ಅದನ್ನು ಕೆಲವು ಜಿಲ್ಲೆಗಳಲ್ಲಿ ತಿಂಗಳುಗಟ್ಟಲೆ ವಿಲೇವಾರಿ ಮಾಡದೆ ಸತಾಯಿಸುವ ಬಗ್ಗೆ ದೂರುಗಳು ಬರುತ್ತಿವೆ. ಅಂತಹ ವಿಳಂಬ ಪ್ರವೃತ್ತಿಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಚಾಟಿ ಬೀಸಿದರು.</p>
<p>ಸರ್ಕಾರಿ ಶಾಲೆಗಳಿಗೆ ಎಲ್ಲಾ ಸವಲತ್ತುಗಳನ್ನು ನೀಡದರೂ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶ ಕಳಪೆಯಾಗಿರಲು ಕಾರಣವೇನು? ಈ ಬಗ್ಗೆ ಆತ್ಮಾವಲೋಕನ ನಡೆಸಬೇಕು. ತಮ್ಮ ಜಿಲ್ಲೆಗಳಲ್ಲಿ ಫಲಿತಾಂಶ ಸುಧಾರಿಸುವುದು ಆಯಾ ಜಿಲ್ಲಾಧಿಕಾರಿ ಹಾಗೂ ಸಿಇಒಗಳ ಜವಾಬ್ದಾರಿ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಸುಧಾರಣೆಗೆ ಹೆಚ್ಚಿನ ಅನುದಾನ ಒದಗಿಸುತ್ತಿದ್ದರೂ, ಫಲಿತಾಂಶದಲ್ಲಿ ಯಾವಾಗಲೂ ಹಿಂದಿರಲು ಕಾರಣವೇನು? ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ, ಸಿಇಒಗಳು ನಿರಂತರ ಗಮನ ಹರಿಸಬೇಕು ಎಂದು ತಿಳಿಸಿದರು.</p>
<p>ರಾಜ್ಯದಲ್ಲಿ ಕಂದಾಯ ಗ್ರಾಮಗಳ ಘೋಷಣೆ ದಾಖಲೆ ಪ್ರಮಾಣದಲ್ಲಿ ಆಗಿದೆ. ಆದರೆ ಇನ್ನೂ ಬಾಕಿಯುಳಿದಿರುವ ಕಂದಾಯ ಗ್ರಾಮಗಳನ್ನು ಘೋಷಿಸುವ ಕಾರ್ಯ ಮುಂದಿನ 6ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಬಗರ್ ಹುಕುಂ ಅರ್ಜಿಗಳ ವಿಲೇವಾರಿ ತ್ವರಿತಗೊಳಿಸಬೇಕು. ಇದು ಯಾಕೆ ಕಡಿಮೆಯಾಗುತ್ತಿದೆ? ಪೋಡಿಮುಕ್ತ ಅಭಿಯಾನ ನಿರಂತರವಾಗಿ ಮುಂದುವರೆಸಬೇಕು. ಶೇ.63 ಪೋಡಿಮುಕ್ತ ಆಗಿದ್ದು, ಇದರಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು.</p>
<p>ಶಾಲೆ, ಆಸ್ಪತ್ರೆ, ಅಂಗನವಾಡಿ, ಸ್ಮಶಾನ, ಕಬರಸ್ತಾನಗಳಿಗೆ ನಿವೇಶನ ಒದಗಿಸುವುದನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ರುದ್ರಭೂಮಿ, ಕಬರಸ್ಥಾನಗಳಿಗೆ ಜಮೀನು ಒದಗಿಸುವುದನ್ನು ವಿಳಂಬ ಮಾಡಬಾರದು. ನಿವೇಶನಗಳು ಅಗತ್ಯವಿರುವ ಇಲಾಖೆಗಳಿಗೆ ನಿವೇಶನಗಳನ್ನು ಆದ್ಯತೆ ಮೇರೆಗೆ ಒದಗಿಸಬೇಕು.  1858 ಗ್ರಾಮೀಣ ಅಂಗನವಾಡಿಗಳಿಗೆ 5187 ನಗರ ಅಂಗನವಾಡಿಗಳಿಗೆ ನಿವೇಶನ ಅಗತ್ಯವಿದೆ. 14 ಸರ್ಕಾರಿ ಕಾಲೇಜು ನಿವೇಶನ ಹಂಚಿಕೆಯಾಗಿಲ್ಲ.  ಅರಣ್ಯ ಹಕ್ಕುಗಳಿಗಾಗಿ 295176 ಅರ್ಜಿಗಳು ಸಲ್ಲಿಕೆಯಾಗಿದ್ದು, 16700 ಮಾತ್ರ ಅರಣ್ಯ ಹಕ್ಕು ಪತ್ರ ಒದಗಿಸಲಾಗಿದೆ. ಇದನ್ನು ಸರಿಯಾಗಿ ವಿಲೇವಾರಿ ಮಾಡಬೇಕು. ಜಿಲ್ಲಾಧಿಕಾರಿ, ತಹಶೀಲ್ದಾರ್, ಎಸಿ ಕೋರ್ಟ್ ಗಳಲ್ಲಿ ಪ್ರಕರಣಗಳನ್ನು ಸರಿಯಾಗಿ ವಿಲೇವಾರಿ ಮಾಡಬೇಕು. ಮೆರಿಟ್ ಮೇಲೆ ತೀರ್ಮಾನ ಮಾಡಬೇಕು. ಪ್ರಕರಣಗಳನ್ನು ಮುಂದಕ್ಕೆ ಹಾಕುವ ಪ್ರವೃತ್ತಿ ಇರಬಾರದು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.</p>
<p>Key words:  CM Siddaramaiah, Meeting, DC, CEO, SP</p>
<p>The post <a href="https://www.justkannada.in/cm-siddaramaiah-168/">ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಡಿಸಿ, ಎಸ್ ಪಿಗಳೇ ನೇರ ಹೊಣೆ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊಲೆಗೆ ಯತ್ನ ಆರೋಪ: ಎಸ್ಪಿಗೆ ದೂರು ನೀಡಿದ MLC ರಾಜೇಂದ್ರ ರಾಜಣ್ಣ</title>
		<link>https://www.justkannada.in/mlc-rajendra-rajanna/</link>
		
		<dc:creator><![CDATA[prashanth]]></dc:creator>
		<pubDate>Fri, 28 Mar 2025 07:29:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[attempt]]></category>
		<category><![CDATA[complaint]]></category>
		<category><![CDATA[MLC]]></category>
		<category><![CDATA[murder]]></category>
		<category><![CDATA[Rajendra Rajanna]]></category>
		<category><![CDATA[SP]]></category>
		<guid isPermaLink="false">https://www.justkannada.in/?p=138279</guid>

					<description><![CDATA[<p>ತುಮಕೂರು,ಮಾರ್ಚ್,28,2025 (www.justkannada.in): ಕಳೆದ 2024 ನವೆಂಬರ್ ತಿಂಗಳಿನಲ್ಲಿ ನನ್ನ ಕೊಲೆ ಯತ್ನಕ್ಕೆ ಸುಪಾರಿ ನೀಡಲಾಗಿತ್ತು ಎಂದು ಆರೋಪಿಸಿ  ಸಚಿವ ಕೆ.ಎನ್ ರಾಜಣ್ಣಪುತ್ರ ಹಾಗೂ  ಎಂಎಲ್ಸಿ ರಾಜೇಂದ್ರ ರಾಜಣ್ಣ ಅವರು ತುಮಕೂರಿನ ಎಸ್ ಪಿಗೆ ದೂರು ನೀಡಿದ್ದಾರೆ. ಎಂಎಲ್ ಸಿ ರಾಜೇಂದ್ರ ರಾಜಣ್ಣ ಅವರು ತುಮಕೂರು ಎಸ್ಪಿ ಅಶೋಕ್ ವೆಂಕಟ್ ಅವರಿಗೆ ದೂರು ನೀಡಿದ್ದಾರೆ. ತುಮಕೂರಿನ ಎಸ್ಪಿ ಕಚೇರಿಗೆ ಭೇಟಿ ನೀಡಿ ರಾಜೇಂದ್ರ ದೂರು ಸಲ್ಲಿಸಿದ್ದಾರೆ. 2024ರ ನವೆಂಬರ್ ನಲ್ಲಿ ಕೊಲೆಗೆ ಯತ್ನ ನಡೆದಿತ್ತು ಎಂದು ಆರೋಪಿಸಿದ್ದಾರೆ. ಆಡಿಯೋ [&#8230;]</p>
<p>The post <a href="https://www.justkannada.in/mlc-rajendra-rajanna/">ಕೊಲೆಗೆ ಯತ್ನ ಆರೋಪ: ಎಸ್ಪಿಗೆ ದೂರು ನೀಡಿದ MLC ರಾಜೇಂದ್ರ ರಾಜಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಮಾರ್ಚ್,28,2025 (www.justkannada.in):</strong> ಕಳೆದ 2024 ನವೆಂಬರ್ ತಿಂಗಳಿನಲ್ಲಿ ನನ್ನ ಕೊಲೆ ಯತ್ನಕ್ಕೆ ಸುಪಾರಿ ನೀಡಲಾಗಿತ್ತು ಎಂದು ಆರೋಪಿಸಿ  ಸಚಿವ ಕೆ.ಎನ್ ರಾಜಣ್ಣಪುತ್ರ ಹಾಗೂ  ಎಂಎಲ್ಸಿ ರಾಜೇಂದ್ರ ರಾಜಣ್ಣ ಅವರು ತುಮಕೂರಿನ ಎಸ್ ಪಿಗೆ ದೂರು ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಎಂಎಲ್ ಸಿ ರಾಜೇಂದ್ರ ರಾಜಣ್ಣ ಅವರು ತುಮಕೂರು ಎಸ್ಪಿ ಅಶೋಕ್ ವೆಂಕಟ್ ಅವರಿಗೆ ದೂರು ನೀಡಿದ್ದಾರೆ. ತುಮಕೂರಿನ ಎಸ್ಪಿ ಕಚೇರಿಗೆ ಭೇಟಿ ನೀಡಿ ರಾಜೇಂದ್ರ ದೂರು ಸಲ್ಲಿಸಿದ್ದಾರೆ. 2024ರ ನವೆಂಬರ್ ನಲ್ಲಿ ಕೊಲೆಗೆ ಯತ್ನ ನಡೆದಿತ್ತು ಎಂದು ಆರೋಪಿಸಿದ್ದಾರೆ. ಆಡಿಯೋ ಸಾಕ್ಷಿ ಸಹಿತ ದೂರು ನೀಡಿದ್ದಾರೆ ಎನ್ನಲಾಗಿದೆ.</p>
<p>ದೂರು ನೀಡಿದ ಬಳಿಕ ಮಾತನಾಡಿದ ಎಂಎಲ್ ಸಿ ರಾಜೇಂದ್ರ ರಾಜಣ್ಣ,  ಸುಪಾರಿ ಟೀಮ್ ನಲ್ಲಿ 20 ಮಂದಿ ಇದ್ದಾರೆ. 70 ಲಕ್ಷಕ್ಕೆ ಸುಫಾರಿ ಪಡೆದಿದ್ದಾರೆ. 5 ಲಕ್ಷ ಮುಂಗಡವಾಗಿ ಪಡೆದಿದ್ದಾರೆ.   ನನ್ನ ಮಗಳ ಬರ್ತಡೆ ದಿನ ಹತ್ಯೆಗೆ ಯತ್ನಿಸಿದ್ದರು. ಈ ಸಂಬಂಧ ನಿನ್ನ ಡಿಜಿ &amp;ಐಜಿಪಿಗೆ ದೂರು ನೀಡಿದ್ದೇನೆ.  ಇಂದು ತುಮಕೂರು ಎಸ್ಪಿಗೆ ದೂರು ನೀಡಿದ್ದೇನೆ ಎಂದರು.</p>
<p>Key words: Attempt, murder, MLC,  Rajendra Rajanna, complaint, SP</p>
<p>The post <a href="https://www.justkannada.in/mlc-rajendra-rajanna/">ಕೊಲೆಗೆ ಯತ್ನ ಆರೋಪ: ಎಸ್ಪಿಗೆ ದೂರು ನೀಡಿದ MLC ರಾಜೇಂದ್ರ ರಾಜಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾಧನೆಗೆ ಗುರಿ ಮುಖ್ಯ: ಇಂದಿನಿಂದಲೇ ಗುರಿ ಇಟ್ಟುಕೊಂಡು ನಿಮ್ಮ ದಾರಿ ಸ್ಪಷ್ಟಪಡಿಸಿಕೊಳ್ಳಿ- ಎಸ್ಪಿ ಎನ್. ವಿಷ್ಣುವರ್ಧನ</title>
		<link>https://www.justkannada.in/mysore-ksou/</link>
		
		<dc:creator><![CDATA[prashanth]]></dc:creator>
		<pubDate>Wed, 29 Jan 2025 12:25:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Goals]]></category>
		<category><![CDATA[important]]></category>
		<category><![CDATA[ksou]]></category>
		<category><![CDATA[Mysore.]]></category>
		<category><![CDATA[N. Vishnuvardhana]]></category>
		<category><![CDATA[SP]]></category>
		<category><![CDATA[success]]></category>
		<guid isPermaLink="false">https://www.justkannada.in/?p=135574</guid>

					<description><![CDATA[<p>ಮೈಸೂರು,ಜನವರಿ,29,2025 (www.justkannada.in):  ಸಾಧನೆಗೆ ಗುರಿ ಮುಖ್ಯ.  ಹೀಗಾಗಿ ಇಂದಿನಿಂದಲೇ ಗುರಿ ಇಟ್ಟುಕೊಂಡು ನಿಮ್ಮ ದಾರಿ ಸ್ಪಷ್ಟಪಡಿಸಿಕೊಳ್ಳಿ. ಬಳಿಕ ಗುರಿಯ ಕಡೆ ನಿರಂತರ ಗಮನ ಹರಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ ಅವರು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಏರ್ಪಡಿಸಲಾಗಿದ್ದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಹುದ್ದೆಗಿಂತಲೂ ಮಾನವೀಯ ಮೌಲ್ಯ ಮುಖ್ಯ. ಹೀಗಾಗಿ ಜೀವನದಲ್ಲಿ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಿ ಜೊತೆಗೆ [&#8230;]</p>
<p>The post <a href="https://www.justkannada.in/mysore-ksou/">ಸಾಧನೆಗೆ ಗುರಿ ಮುಖ್ಯ: ಇಂದಿನಿಂದಲೇ ಗುರಿ ಇಟ್ಟುಕೊಂಡು ನಿಮ್ಮ ದಾರಿ ಸ್ಪಷ್ಟಪಡಿಸಿಕೊಳ್ಳಿ- ಎಸ್ಪಿ ಎನ್. ವಿಷ್ಣುವರ್ಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,29,2025 (<a href="http://www.justkannada.in">www.justkannada.in</a>): </strong> ಸಾಧನೆಗೆ ಗುರಿ ಮುಖ್ಯ.  ಹೀಗಾಗಿ ಇಂದಿನಿಂದಲೇ ಗುರಿ ಇಟ್ಟುಕೊಂಡು ನಿಮ್ಮ ದಾರಿ ಸ್ಪಷ್ಟಪಡಿಸಿಕೊಳ್ಳಿ. ಬಳಿಕ ಗುರಿಯ ಕಡೆ ನಿರಂತರ ಗಮನ ಹರಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ ಅವರು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.<img loading="lazy" decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಏರ್ಪಡಿಸಲಾಗಿದ್ದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.</p>
<p>ಹುದ್ದೆಗಿಂತಲೂ ಮಾನವೀಯ ಮೌಲ್ಯ ಮುಖ್ಯ. ಹೀಗಾಗಿ ಜೀವನದಲ್ಲಿ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಿ ಜೊತೆಗೆ ಶಿಸ್ತು, ಹಿರಿಯ ಮೇಲೆ ಗೌರವ, ಪ್ರೀತಿ ಇಟ್ಟುಕೊಳ್ಳಬೇಕು ಆವಾಗಲೇ ಜೀವನದಲ್ಲಿ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದರು.</p>
<p>ನಿಮ್ಮ ಬೌದ್ಧಿಕ ಬುದ್ಧಿ ಶಕ್ತಿ ಬಲವಾಗಿರುವುದರಿಂದ ಈ ನಿಟ್ಟಿನಲ್ಲಿ ನೀವು ಯಾವುದೇ ಹಾದಿಯನ್ನು ಸುಗಮವಾಗಿ ಸಾಧಿಸಬಹುದು. ಬ್ಯಾಂಕಿಂಗ್, ಯುಪಿಎಸ್ಸಿ, ಐಎಎಸ್ ಐಎಫ್ಎಸ್, ಕೆಎಎಸ್ ಸೇರಿದಂತೆ ಎಲ್ಲಾ ಪರೀಕ್ಷೆ ತೆಗೆದುಕೊಳ್ಳಿ ಪ್ರಯತ್ನಂ ಸರ್ವ ಸಾಧನಂ ಎನ್ನುವಂತೆ ಎಂದಾದರೂ ಪ್ರಯತ್ನಕ್ಕೆ ಫಲ ಸಿಕ್ಕೆ ಸಿಗುತ್ತದೆ ಎಂದು ಕಿವಿಮಾತು ಹೇಳಿದರು.</p>
<p>ಶಾಲೆಯಿಂದಲೇ ನಾನು ಗುರಿ ನಿಗದಿಪಡಿಸಿಕೊಂಡಿದ್ದೆ. ಅಂದಿನಿಂದಲೇ ಸತತ ಪ್ರಯತ್ನಿಸಿದೆ. ನಮ್ಮ ತಂದೆ ಕೂಡ ಪೊಲೀಸ್ ಇಲಾಖೆಯ ಅಧಿಕಾರಿಗಳಾಗಿದ್ದರು ಅವರೇ ನನಗೆ ಮಾದರಿ. ನಾನು ನನ್ನ ಗುರಿ ಕಡೆ ಗಮನ ಹರಿಸಿದೆ. ಪೊಲೀಸ್ ಇಲಾಖೆಗೆ ಸೇರಿದೆ ಎಂದು ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿಕೊಂಡರು. ಹುದ್ದೆ ಸೇರಿದ ಮೇಲೆ ಪೋಷಕರನ್ನು ಮರೆಯಬಾರದು. ಸಾರ್ವಜನಿಕ ಸೇವೆಯೆ ನಮ್ಮ ಗುರಿ ಎನ್ನುವ ಅಂಶವನ್ನು ಮರೆಯಬಾರದು ಎಂದು ಹೇಳಿದರು.</p>
<p>ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಬೌದ್ಧಿಕ ಸಾಮರ್ಥ್ಯವನ್ನು ಗಟ್ಟಿಕೊಳಿಸಿ ನಮ್ಮ ಕೆಲಸಗಳನ್ನು ಚುರುಕುಗೊಳಿಸಬೇಕು ಎಂದು ಹೇಳಿದರು.</p>
<p>ಕುಲಸಚಿವ ಪ್ರೊ.ಕೆ. ಬಿ.ಪ್ರವೀಣ ಅವರು ಮಾತನಾಡಿ ಬ್ಯಾಂಕಿಂಗ್ ಹುದ್ದೆಗಳ ತರಬೇತಿಗೆ ಬಂದಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳು ತಮ್ಮ ಗುರಿ ಸ್ಪಷ್ಟಪಡಿಸಿಕೊಂಡು ಆ ಹಾದಿಯತ್ತ ಗಮನ ಹರಿಸಬೇಕು. ನಿರಂತರ ಪರಿಶ್ರಮ ನಿಮ್ಮನ್ನು ಗೆಲುವಿನ ದಡ ಸೇರಿಸಲಿದೆ. ವಿದ್ಯಾರ್ಥಿಗಳಲ್ಲಿ ಛಲ ಮತ್ತು ಗುರಿಯಿರಬೇಕು. ಆ ಗುರಿ ದೊಡ್ಡದಾಗಿರಲಿ ಎಂದರು.</p>
<p>ತರಬೇತಿ ಪಡೆಯಲು ಬಂದಿರುವ ನಿಮಗೆ ವಿವಿಯು ಎಲ್ಲಾ ಸಹಕಾರ ನೀಡಲಿದೆ. ಇಲ್ಲಿರುವ ಗ್ರಂಥಾಲಯ ಹಾಗೂ ವಿವಿಧ ವಿಭಾಗಗಳ ಪ್ರಾಧ್ಯಾಪಕರ ನೆರೆವು ಪಡೆದುಕೊಳ್ಳಿ ಎಂದು ಹೇಳಿದರು.</p>
<p>ಕಾರ್ಯಕ್ರಮದಲ್ಲಿ ಅಧ್ಯಯನ ಕೇಂದ್ರದ ಡೀನ್ ಪ್ರೊ. ರಾಮನಾಥಂ ನಾಯ್ಡು, ಹಣಕಾಸು ಅಧಿಕಾರಿಗಳಾದ ಪ್ರೊ. ನಿರಂಜನ್ ರಾಜ್, ಸಂಯೋಜನಾಧಿಕಾರಿಗಳಾದ, ಜೈನಹಳ್ಳಿ ಸತ್ಯನಾರಾಯಣಗೌಡ, ಸಿದ್ದೇಶ್ ಹೊನ್ನೂರ್, ಗಣೇಶ್ ಕೆ. ಜಿ ಕೊಪ್ಪಲ್. ಅವರು ಉಪಸ್ಥಿತರಿದ್ದರು.</p>
<p><img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: Goals, important, success, mysore, KSOU, SP,  N. Vishnuvardhana</p>
<p>The post <a href="https://www.justkannada.in/mysore-ksou/">ಸಾಧನೆಗೆ ಗುರಿ ಮುಖ್ಯ: ಇಂದಿನಿಂದಲೇ ಗುರಿ ಇಟ್ಟುಕೊಂಡು ನಿಮ್ಮ ದಾರಿ ಸ್ಪಷ್ಟಪಡಿಸಿಕೊಳ್ಳಿ- ಎಸ್ಪಿ ಎನ್. ವಿಷ್ಣುವರ್ಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
