<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ST Somashekhar –announces Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/st-somashekhar-announces/feed/" rel="self" type="application/rss+xml" />
	<link>https://www.justkannada.in/tag/st-somashekhar-announces/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 02 Jun 2020 07:14:54 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>ST Somashekhar –announces Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/st-somashekhar-announces/</link>
	<width>32</width>
	<height>32</height>
</image> 
	<item>
		<title>ಚಿಕ್ಕಮಗಳೂರು ಎಪಿಎಂಸಿಗೆ ಸಚಿವ ಎಸ್.ಟಿ ಸೋಮಶೇಖರ್ ಭೇಟಿ: ಕೋಲ್ಡ್ ಸ್ಟೋರೇಜ್ ಘೋಷಣೆ..</title>
		<link>https://www.justkannada.in/chikkamagalore-minister-st-somashekhar-announces-cold-storage-chikmagalur/</link>
		
		<dc:creator><![CDATA[JK Desk]]></dc:creator>
		<pubDate>Tue, 02 Jun 2020 07:14:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[chikkamagalore]]></category>
		<category><![CDATA[Chikmagalur]]></category>
		<category><![CDATA[cold-storage]]></category>
		<category><![CDATA[minister]]></category>
		<category><![CDATA[ST Somashekhar –announces]]></category>
		<guid isPermaLink="false">https://www.justkannada.in/?p=28766</guid>

					<description><![CDATA[<p>ಚಿಕ್ಕಮಗಳೂರು,ಜೂ,2,2020(www.justkannada.in):  ಚಿಕ್ಕಮಗಳೂರು ಎಪಿಎಂಸಿಗೆ ಮಂಗಳವಾರ ಬೆಳಗ್ಗೆ ಭೇಟಿ ನೀಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಪರಿಶೀಲನೆ ನಡೆಸಿದರು. ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಟಿ.ರವಿ ಮತ್ತು ಅಧಿಕಾರಿಗಳು ಇದ್ದರು. ಬಳಿಕ ವರ್ತಕರು ಹಾಗೂ ರೈತರ ಬಳಿ ತೆರಳಿದ ಸಚಿವರು, ಸಮಸ್ಯೆಗಳನ್ನು ಖುದ್ದು ಆಲಿಸಿದರು. ಸೊಪ್ಪು, ತರಕಾರಿಗಳ ಬೆಳೆ, ಮಾರಾಟ ಹಾಗೂ ದರದ ಸ್ಥಿತಿಗತಿ ಬಗ್ಗೆ ವಿಚಾರಿಸಿದರು. ಸ್ಥಳೀಯ ಬೆಳೆಗಳು ಹಾಗೂ ಅವುಗಳನ್ನು ಕೆಡದಂತೆ ಯಾವ ರೀತಿ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಯಾವ ಯಾವ [&#8230;]</p>
<p>The post <a href="https://www.justkannada.in/chikkamagalore-minister-st-somashekhar-announces-cold-storage-chikmagalur/">ಚಿಕ್ಕಮಗಳೂರು ಎಪಿಎಂಸಿಗೆ ಸಚಿವ ಎಸ್.ಟಿ ಸೋಮಶೇಖರ್ ಭೇಟಿ: ಕೋಲ್ಡ್ ಸ್ಟೋರೇಜ್ ಘೋಷಣೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಚಿಕ್ಕಮಗಳೂರು,ಜೂ,2,2020(<a href="https://www.justkannada.in">www.justkannada.in</a>):  ಚಿಕ್ಕಮಗಳೂರು ಎಪಿಎಂಸಿಗೆ ಮಂಗಳವಾರ ಬೆಳಗ್ಗೆ ಭೇಟಿ ನೀಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಪರಿಶೀಲನೆ ನಡೆಸಿದರು. ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಟಿ.ರವಿ ಮತ್ತು ಅಧಿಕಾರಿಗಳು ಇದ್ದರು.</p>
<p>ಬಳಿಕ ವರ್ತಕರು ಹಾಗೂ ರೈತರ ಬಳಿ ತೆರಳಿದ ಸಚಿವರು, ಸಮಸ್ಯೆಗಳನ್ನು ಖುದ್ದು ಆಲಿಸಿದರು. ಸೊಪ್ಪು, ತರಕಾರಿಗಳ ಬೆಳೆ, ಮಾರಾಟ ಹಾಗೂ ದರದ ಸ್ಥಿತಿಗತಿ ಬಗ್ಗೆ ವಿಚಾರಿಸಿದರು. ಸ್ಥಳೀಯ ಬೆಳೆಗಳು ಹಾಗೂ ಅವುಗಳನ್ನು ಕೆಡದಂತೆ ಯಾವ ರೀತಿ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಯಾವ ಯಾವ ಪ್ರದೇಶಗಳಿಗೆ ಸಾಗಾಟವಾಗುತ್ತದೆ ಎಂಬಿತ್ಯಾದಿ ಮಾಹಿತಿಯನ್ನು ಪಡೆದುಕೊಂಡರು.</p>
<p><strong>ಪತ್ರ ಕೊಟ್ಟರೆ ಕೋಲ್ಡ್ ಸ್ಟೋರೇಜ್ ಮಂಜೂರು&#8230;..</strong></p>
<p>ಬಳಿಕ ಮಾತನಾಡಿದ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ಎಲ್ಲ ಜಿಲ್ಲೆಗಳಲ್ಲಿರುವ ಎಪಿಎಂಸಿಗಳಿಗೆ ಭೇಟಿ ಮಾಡುತ್ತಿದ್ದೇನೆ. ಇಲ್ಲಿಗೆ ಒಂದು ಕೋಲ್ಡ್ ಸ್ಟೋರೇಜ್ ಹಾಗೂ ಜಾಗ ಬೇಕು ಎಂದು ಸಚಿವರಾದ ಸಿ.ಟಿ.ರವಿ ಅವರು ಕೇಳಿಕೊಂಡಿದ್ದಾರೆ. ಅವರು ಪತ್ರ ಕೊಟ್ಟ 2 ದಿನಗಳಲ್ಲಿ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.</p>
<p>ಇಲ್ಲಿ ಇನ್ನೊಂದು ಖುಷಿ ವಿಚಾರವೆಂದರೆ ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿದೆ. ಟೊಮ್ಯಾಟೊ ಕೆಜಿಗೆ 16 ರೂಪಾಯಿ ಇದೆ ಎಂದು ತಿಳಿದು ಸಂತಸವಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.<img fetchpriority="high" decoding="async" class="aligncenter size-medium wp-image-28767" src="https://www.justkannada.in/wp-content/uploads/2020/06/st-soa-251x300.jpg" alt=" chikkamagalore- Minister -ST Somashekhar –announces- cold storage - Chikmagalur." width="251" height="300" /></p>
<p><strong>ಎಪಿಎಂಸಿ ಕಾಯ್ದೆಯಿಂದ ರೈತರಿಗೆ ಅನುಕೂಲ&#8230;</strong></p>
<p>ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ಸಮಸ್ಯೆ ಇಲ್ಲ. ಇದು ಕೇಂದ್ರ ಸರ್ಕಾರ ಮಾಡಿರುವ ಉತ್ತಮ ಯೋಜನೆಯಾಗಿದೆ. ಇದು ರೈತರಿಗೆ ಅನುಕೂಲವಾಗಲು ಮಾತ್ರ ತಂದಿರುವ ಕಾಯ್ದೆಯಾಗಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.</p>
<p>ಎಪಿಎಂಸಿ ಬೋರ್ಡ್ ಗೆ ಸಂಪೂರ್ಣ ಅಧಿಕಾರವಿದೆ. ಪರವಾನಗಿ ಕೊಡುವ ರದ್ದು ಮಾಡುವ ಅಧಿಕಾರ ಎಪಿಎಂಸಿ ಬೋರ್ಡ್ ಗೆ ಇದೆ. ಹೀಗಾಗಿ ಯಾವುದೇ ಖಾಸಗಿ ಸಂಸ್ಥೆಗಳಿಗೆ ಪರವಾನಗಿ ಕೊಡಬೇಕಿದ್ದರೆ ರೈತರ ಹಿತದೃಷ್ಟಿ ನೋಡಲಾಗುವುದು ಎಂದು ಸಚಿವ ಎಸ್.ಟಿ ಸೋಮಶೇಖರ್  ಹೇಳಿದರು.</p>
<p><strong>ಅವ್ಯವಹಾರ ತನಿಖೆಗೆ ಪ್ರತ್ಯೇಕ ತಂಡ&#8230;.</strong></p>
<p>ಡಿಸಿಸಿ ಬ್ಯಾಂಕ್ ಸಹಿತ ಸಹಕಾರ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ಆಗಿರುವ ಬಗ್ಗೆ ಗಮನಕ್ಕೆ ಬಂದಿದೆ. ಇದಕ್ಕಾಗಿ 25 ಬೇರೆ ಬೇರೆ ಕಡೆ ನಿಯೋಜನೆಗೊಂಡಿರುವ ಆಡಿಟ್ ಅಧಿಕಾರಿಗಳನ್ನು ಮರಳಿ ಸಹಕಾರ ಇಲಾಖೆಗೆ ಕರೆಸಿಕೊಳ್ಳಲಾಗಿದೆ. ಎಲ್ಲ ಡಿಸಿಸಿ ಬ್ಯಾಂಕ್ ಹಾಗೂ ವಿಎಸ್ಎಸ್ಎನ್ ಸೊಸೈಟಿಗಳಲ್ಲಿ ನಡೆದಿರುವ ವ್ಯವಹಾರಗಳ ಪ್ರತ್ಯೇಕ ತಂಡ ರಚಿಸಿ ತನಿಖೆ ನಡೆಸಲಾಗುವುದು ಎಂದು ಸಹಕಾರ ಸಚಿವರಾದ ಸೋಮಶೇಖರ್ ತಿಳಿಸಿದರು.</p>
<p>ನಂತರ ಸಚಿವ  ಸಿ.ಟಿ.ರವಿ ಮಾತನಾಡಿ, ರೈತರಿಗೆ ಇದು ಅನುಕೂಲ. ರೈತರು ಎಲ್ಲಿ ಬೇಕಾದರೂ ಮಾರಾಟ ಮಾಡಲಿ, ಅವರೇ ಬೇಕಿದ್ದರೆ ಪ್ರತ್ಯೇಕ ಸೊಸೈಟಿ ಮಾದರಿಯಲ್ಲಿ ತಂಡ ಕಟ್ಟಿಕೊಂಡು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಬಹುದು. ಜೊತೆಗೆ ರೈತರ ಬೆಳೆಗೆ ಮೊದಲೇ ಬೆಲೆ ಖಾತ್ರಿಯಾಗುವುದರಿಂದ ಅನ್ಯಾಯವಾಗದು ಎಂದು ತಿಳಿಸಿದರು. ಬಳಿಕ ಎಪಿಎಂಸಿ ಆಡಳಿತ ಮಂಡಳಿ ಜೊತೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದರು.</p>
<p>Key words: chikkamagalore- Minister -ST Somashekhar –announces- cold storage</p>
<p>The post <a href="https://www.justkannada.in/chikkamagalore-minister-st-somashekhar-announces-cold-storage-chikmagalur/">ಚಿಕ್ಕಮಗಳೂರು ಎಪಿಎಂಸಿಗೆ ಸಚಿವ ಎಸ್.ಟಿ ಸೋಮಶೇಖರ್ ಭೇಟಿ: ಕೋಲ್ಡ್ ಸ್ಟೋರೇಜ್ ಘೋಷಣೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
