<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>title deeds Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/title-deeds/feed/" rel="self" type="application/rss+xml" />
	<link>https://www.justkannada.in/tag/title-deeds/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 14 Feb 2026 10:37:11 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>title deeds Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/title-deeds/</link>
	<width>32</width>
	<height>32</height>
</image> 
	<item>
		<title>ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-408/</link>
		
		<dc:creator><![CDATA[prashanth]]></dc:creator>
		<pubDate>Sat, 14 Feb 2026 10:37:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[2.20 lakh]]></category>
		<category><![CDATA[CM Siddaramaiah]]></category>
		<category><![CDATA[families]]></category>
		<category><![CDATA[issued]]></category>
		<category><![CDATA[Till now]]></category>
		<category><![CDATA[title deeds]]></category>
		<guid isPermaLink="false">https://www.justkannada.in/?p=151466</guid>

					<description><![CDATA[<p>ಹಾವೇರಿ ಫೆಬ್ರವರಿ, 14,2026 (www.justkannada.in):  ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಸಹಸ್ರ ದಿನಾಚರಣೆ ಮತ್ತು ಒಂದು ಲಕ್ಷ ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ [&#8230;]</p>
<p>The post <a href="https://www.justkannada.in/cm-siddaramaiah-408/">ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾವೇರಿ ಫೆಬ್ರವರಿ, 14,2026 (<a href="http://www.justkannada.in">www.justkannada.in</a>):</strong>  ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಸಹಸ್ರ ದಿನಾಚರಣೆ ಮತ್ತು ಒಂದು ಲಕ್ಷ ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.</p>
<p>ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಸರ್ಕಾರದಲ್ಲಿ ಕ್ರಾಂತಿಕಾರಿ ಪ್ರಗತಿ ಆಗಿದೆ ಎಂದು ಸಚಿವರ ಸಾಧನೆಗೆ ಸಿಎಂ ಸಿದ್ದರಾಮಯ್ಯ ವೇದಿಕೆಯಲ್ಲೇ ಮೆಚ್ಚುಗೆ ವ್ಯಕ್ತಪಡಿಸಿದರು.‌<img decoding="async" class="aligncenter size-full wp-image-151468" src="https://www.justkannada.in/wp-content/uploads/2026/02/congress-samavesha.jpg" alt="" width="500" height="333" srcset="https://www.justkannada.in/wp-content/uploads/2026/02/congress-samavesha.jpg 500w, https://www.justkannada.in/wp-content/uploads/2026/02/congress-samavesha-300x200.jpg 300w, https://www.justkannada.in/wp-content/uploads/2026/02/congress-samavesha-150x100.jpg 150w" sizes="(max-width: 500px) 100vw, 500px" /></p>
<p>ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು  GST ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ. ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ.  ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ‌ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.</p>
<p>ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಯ್ತು.  ಇಲ್ಲಿಯವರೆಗೂ ಗ್ಯಾರಂಟಿಗಳ ಮೂಲಕ 118000 ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಖಾತೆಗೆ ಹಾಕಿದ್ದೇವೆ. ಅಮಾರ್ತ್ಯಸೇನ್,  ಅಭಿಜಿತ್ ಬ್ಯಾನರ್ಜಿ ಮುಂತಾದ ಆರ್ಥಿಕ ತಜ್ಞರ ಜೊತೆಗೆ ದಿನ ಪತ್ರಿಕೆಗಳು ಮತ್ತು ವಿಶ್ವ ವಿದ್ಯಾಲಯಗಳ ಅಧ್ಯಯನಗಳು ವ್ಯಕ್ತಪಡಿಸಿದ್ದ ಸದಾಭಿಪ್ರಾಯಗಳನ್ನು ಸಿಎಂ ಸಿದ್ದರಾಮಯ್ಯ ಓದಿ ವಿವರಿಸಿ,  ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ ಎಂದರು.</p>
<p>ಕೇಂದ್ರಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ. ನಮ್ಮ ಸರ್ಕಾರ 1000 ದಿನಗಳನ್ನು ಯಶಸ್ವಿಯಾಗಿ ಆಡಳಿತ ನಡೆಸಿದ್ದು, ನಾವು ಎಲ್ಲ ಜಾತಿ ಧರ್ಮ ಭಾಷೆಯ ಜನರಿಗೆ ಸೇರಿದಂತಹ ಎಲ್ಲರನ್ನೊಳಗೊಂಡ ಅಭಿವೃದ್ಧಿಯಲ್ಲಿ  ನಮ್ಮ ಸರ್ಕಾರ ನಂಬಿಕೆಯಿರಿಸಿದೆ. ನಾವು ಅಸಮಾನತೆ ನೀಗಿಸುವ ಕಾಯಕದಲ್ಲಿ ತೊಡಗಿದ್ದೇವೆ. ಬಿಜೆಪಿಯವರು 4 ವರ್ಷ ಏನು ಮಾಡಿಲ್ಲ. ಅವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ.  ಬಿಜೆಪಿಯವರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದರು.</p>
<p>ಸರ್ಕಾರ ನಿನ್ನೆಗೆ ಒಂದು ಸಾವಿರ ದಿನ ಪೂರೈಸಿದ್ದು, ಈ ಸಾವಿರ ದಿನಗಳಲ್ಲಿ ನಮ್ಮ ಸಾಧನಾ ಸಮಾವೇಶ  ನಮ್ಮ ಬದ್ಧತೆಯಾಗಿದೆ. ಬಡವರು, ದಲಿತರು, ಹಿಂದುಳಿದ ವರ್ಗದವರು,ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಮತ್ತೊಮ್ಮೆ ತಿಳಿಸುತ್ತೇನೆ ಎಂದು ಪುನರುಚ್ಚರಿಸಿದರು.</p>
<p>ಕೇಂದ್ರ ಸರ್ಕಾರ, ರಾಜ್ಯಕ್ಕೆ ಅನ್ಯಾಯ ಮಾಡಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ಕೊರತೆಯಾಗಿದ್ದು, ರಾಜ್ಯಕ್ಕೆ 12 – 15 ಸಾವಿರ ಕೋಟಿ ನಷ್ಟವಾಗಿದೆ. ನಮಗೆ ಬರುವ ನ್ಯಾಯಯುತ ಪಾಲು ಸಿಗುತ್ತಿಲ್ಲ. ಜೆಜೆಎಂ ನಲ್ಲಿ 15 ಸಾವಿರ ಕೋಟಿ ಇನ್ನೂ ಕೊಟ್ಟಿಲ್ಲ. ಈ ಅನುದಾನ ನೀಡಿದರೆ, ರಾಜ್ಯದ ಬಹಳಷ್ಟು ರಾಜ್ಯದಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತವೆ ಎಂದರು.</p>
<p>ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ಪರಿಶೀಲಿಸಿ, ಜಿಲ್ಲೆಯ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.</p>
<p>ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ&#8221; ಕಾರ್ಯಕ್ರಮದಲ್ಲಿ ಉತ್ತಮ ಕಾರ್ಯಕ್ಷಮತೆ  ತೋರಿದ ಅಧಿಕಾರಿಗಳನ್ನೂ ಗುರುತಿಸಿ ಸನ್ಮಾನಿಸಲಾಯಿತು.</p>
<p>ಡಿಸಿಎಂ ಡಿ.ಕೆ. ಶಿವಕುಮಾರ್,  ಸಚಿವರಾದ ಕೃಷ್ಣ ಭೈರೇಗೌಡ, ಶಿವಾನಂದ ಪಾಟೀಲ್, ಹೆಚ್.ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ವಿಧಾನ ಪರಿಷತ್ತಿನಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹಾಗೂ 20 ಕ್ಕೂ ಹೆಚ್ಚು ಮಂದಿ ಶಾಸಕರುಗಳು ಮತ್ತು ಮುಖಂಡರುಗಳು, ನಾಯಕರು ಉಪಸ್ಥಿತರಿದ್ದರು.</p>
<p>Key words: Till now, 2.20 lakh, families, issued, title deeds, CM Siddaramaiah</p>
<p>The post <a href="https://www.justkannada.in/cm-siddaramaiah-408/">ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊರಚ ಸಮುದಾಯದ ಕುಟುಂಬಗಳಿಗೆ ತ್ವರಿತವಾಗಿ ಹಕ್ಕು ಪತ್ರ ವಿತರಣೆಗೆ ಕ್ರಮವಹಿಸಿ- ಪಲ್ಲವಿ ಜಿ</title>
		<link>https://www.justkannada.in/title-deeds-koracha-community/</link>
		
		<dc:creator><![CDATA[prashanth]]></dc:creator>
		<pubDate>Sat, 10 Jan 2026 11:54:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[families]]></category>
		<category><![CDATA[Koracha community]]></category>
		<category><![CDATA[Mysore.]]></category>
		<category><![CDATA[Pallavi]]></category>
		<category><![CDATA[title deeds]]></category>
		<guid isPermaLink="false">https://www.justkannada.in/?p=150148</guid>

					<description><![CDATA[<p>ಮೈಸೂರು,ಜನವರಿ,10,2026 (www.justkannada.in): ಟಿ.ನರಸೀಪುರ ಟೌನ್ ನಲ್ಲಿರುವ ಶಿವಪಾರ್ವತಿ ನಗರದಲ್ಲಿ ತಾತ್ಕಾಲಿಕ ಗುಡಿಸಲುಗಳಲ್ಲಿ ನೆಲೆಸಿರುವ 40 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಅಲೆಮಾರಿ ಕೊರಚ ಸಮುದಾಯದ ಕುಟುಂಬಗಳಿಗೆ ತ್ವರಿತವಾಗಿ ಹಕ್ಕು ಪತ್ರ ವಿತರಣೆಗೆ ಕ್ರಮವಹಿಸಬೇಕು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಟಿ.ನರಸೀಪುರ ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು [&#8230;]</p>
<p>The post <a href="https://www.justkannada.in/title-deeds-koracha-community/">ಕೊರಚ ಸಮುದಾಯದ ಕುಟುಂಬಗಳಿಗೆ ತ್ವರಿತವಾಗಿ ಹಕ್ಕು ಪತ್ರ ವಿತರಣೆಗೆ ಕ್ರಮವಹಿಸಿ- ಪಲ್ಲವಿ ಜಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,10,2026 (<a href="http://www.justkannada.in">www.justkannada.in</a>):</strong> ಟಿ.ನರಸೀಪುರ ಟೌನ್ ನಲ್ಲಿರುವ ಶಿವಪಾರ್ವತಿ ನಗರದಲ್ಲಿ ತಾತ್ಕಾಲಿಕ ಗುಡಿಸಲುಗಳಲ್ಲಿ ನೆಲೆಸಿರುವ 40 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಅಲೆಮಾರಿ ಕೊರಚ ಸಮುದಾಯದ ಕುಟುಂಬಗಳಿಗೆ ತ್ವರಿತವಾಗಿ ಹಕ್ಕು ಪತ್ರ ವಿತರಣೆಗೆ ಕ್ರಮವಹಿಸಬೇಕು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಟಿ.ನರಸೀಪುರ ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಆಯೊಜಿಸಿದ್ದ ಟಾರ್ಪಲ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜ.26 ರರೊಳಗೆ ಹಕ್ಕು ಪತ್ರ ವಿತರಣೆಯಾಗಬೇಕು. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ತರಲಾಗುವುದು. ಅಧಿಕಾರಿಗಳು ಹಕ್ಕುಪತ್ರ ನೀಡಲು ಕ್ರಮಕೈಗೊಳ್ಳಬೇಕು ಎಂದರು.</p>
<p>ಡಾ.ಬಿ.ಆರ್.ಅಂಬೇಡ್ಕರ್ ಅವರು ನಿಡಿರುವ ಸಂವಿಧಾನದಡಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಪಡೆದುಕೊಳ್ಳುವ ಹಕ್ಕು ನೀಡಲಾಗಿದೆ. ಆದರೆ, ಹಕ್ಕುಗಳನ್ನು ಪಡೆದುಕೊಳ್ಳಲು ಸಂವಿಧಾನದ ಅರಿವು ಮುಖ್ಯವಾಗಿದ್ದು, ಪ್ರತಿಯೊಬ್ಬರು ಶಿಕ್ಷಣ ಪಡೆಯಬೇಕು.  ಕುಲ ಕಸುಬು ಜೊತೆಗೆ ಕಡ್ಡಾಯವಾಗಿ ಶಿಕ್ಷಣ ಪಡೆದುಕೊಳ್ಳಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ಮಕ್ಕಳಿಗೆ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲಾಗಿದೆ. ಯಾವುದೇ ಪ್ರವೇಶ ಪರೀಕ್ಷೆ ಬರೆಯದಿದ್ದರೂ ಶಾಲೆಗೆ ಸೇರಿಸಬಹುದಾಗಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು. ಮುಂದಿನ ಬಾರಿ ಶಿವಪಾರ್ವತಿ ನಗರಕ್ಕೆ ಬರುವಾಗ ಹಕ್ಕು ಪತ್ರ ವಿತರಣೆಯಾಗಿ, ದೊಡ್ಡ ಕಾರ್ಯಕ್ರಮವೇ ಆಯೋಜನೆಯಾಗಬೇಕು. ರಾಜ್ಯ  ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಧ್ವನಿ ಇಲ್ಲದ, ಅವಕಾಶ ವಂಚಿತ ಕೊರಮ-ಕೊರಚ ಸಮುದಾಯಗಳಿಗೆ ನ್ಯಾಯ ದೊರಕಿಸಿ ಕೊಡುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.</p>
<p>ಶಿವಪಾರ್ವತಿನಗರದ ನಿವಾಸಿಗಳಿಗೆ ಶಾಶ್ವತ ನೆಲೆ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ವಿಶೇಷ ಕಾಳಜಿಯ ತೋರಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ಅನುದಾನ ನಿಡುವ ಭರವಸೆ ನೀಡಿದ್ದಾರೆ.</p>
<p>ಟಾರ್ಪಲ್ ಹಂಚಿಕೆ ಮುಖ್ಯವಲ್ಲ. ಶಾಶ್ವತ ನೆಲೆ ಸಿಕ್ಕಿ, ಹಕ್ಕು ಪತ್ರಗಳನ್ನು ನೀಡುವಂತಾಗಬೇಕು. ಗುಡಿಸಲು ಮುಕ್ತವಾಗಿ ಬದುಕು ನಡೆಸುವಂತಾಗಬೇಕು. ಈ ನಿಟ್ಟಿನಲ್ಲಿ ಟಿ.ನರಸೀಪುರ ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕಾರ್ಯ ನಿರ್ವಹಿಸಬೇಕು. ಆದಷ್ಟು ಬೇಗ ಯಾವುದೇ ವಿಳಂಬವನ್ನು ಮಾಡದೆ ಹಕ್ಕು ಪತ್ರವನ್ನು ನಿಡುವ ಕೆಲಸ ಮಾಡಬೇಕು ಸೂಚಿಸಿದರು.</p>
<p>ಜ.26 ರೊಳಗೆ ಹಕ್ಕು ಪತ್ರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>
<p>ಅಖಿಲ ಕರ್ನಾಟಕ ಕುಳುವ ಮಹಾಸಂಘದ ಪ್ರಧಾನ ಕಾರ್ಯದರ್ಶಿ ಆನಂದ್ ಕುಮಾರ್ ಏಕಲವ್ಯ, ರಾಜ್ಯ ಸಂಘಟನಾ ಕಾರ್ಯದರ್ಶಿ ರಂಗಸ್ವಾಮಿ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಅಲಗೂಡು ಶಿವಕುಮಾರ್, ಮೈಸೂರು ಜಿಲ್ಲಾ ಕೊರಮ-ಕೊರಚ ಮಹಾಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್ ಕಾಯಕ, ಜಂಟಿ ಕಾರ್ಯದರ್ಶಿ ಎನ್.ಕುಮಾರ್, ಉಪಾಧ್ಯಕ್ಷ ಸಿ.ರಾಜು, ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಯಾಚೇನಹಳ್ಳಿ ಸೋಮಶೇಖರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿನೂತನ್ ಮತ್ತಿತರರು ಉಪಸ್ಥಿತರಿದ್ದರು.</p>
<p>Key words: title deeds, Koracha community, families,Mysore, Pallavi</p>
<p>The post <a href="https://www.justkannada.in/title-deeds-koracha-community/">ಕೊರಚ ಸಮುದಾಯದ ಕುಟುಂಬಗಳಿಗೆ ತ್ವರಿತವಾಗಿ ಹಕ್ಕು ಪತ್ರ ವಿತರಣೆಗೆ ಕ್ರಮವಹಿಸಿ- ಪಲ್ಲವಿ ಜಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
