<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>TR Chandrasekhar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/tr-chandrasekhar/feed/" rel="self" type="application/rss+xml" />
	<link>https://www.justkannada.in/tag/tr-chandrasekhar/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 07 May 2026 12:59:22 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>TR Chandrasekhar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/tr-chandrasekhar/</link>
	<width>32</width>
	<height>32</height>
</image> 
	<item>
		<title>ಆಧಾರ ರಹಿತ ಆರೋಪ: ಟಿ.ಆರ್ ಚಂದ್ರಶೇಖರ್ ವಿರುದ್ದ ಕ್ರಮಕ್ಕೆ ಮೈಸೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ</title>
		<link>https://www.justkannada.in/mysore-university-syndicate-meeting/</link>
		
		<dc:creator><![CDATA[prashanth]]></dc:creator>
		<pubDate>Thu, 07 May 2026 12:59:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Baseless allegation]]></category>
		<category><![CDATA[Mysore University]]></category>
		<category><![CDATA[syndicate-meeting]]></category>
		<category><![CDATA[TR Chandrasekhar]]></category>
		<guid isPermaLink="false">https://www.justkannada.in/?p=154586</guid>

					<description><![CDATA[<p>ಮೈಸೂರು,ಮೇ,5,2026 (www.justkannada.in): ಮೈಸೂರು ವಿಶ್ವವಿದ್ಯಾನಿಲಯದ ಆಡಳಿತ, ಟೆಂಡರ್ ಪ್ರಕ್ರಿಯೆ ಮತ್ತು ಆರ್ಥಿಕ ವಿಚಾರಗಳಿಗೆ ಸಂಬಂಧಿಸಿದಂತೆ ಸಿಂಡಿಕೇಟ್ ಸದಸ್ಯ ಟಿ.ಆರ್. ಚಂದ್ರಶೇಖರ್  ಆಧಾರ ರಹಿತ ಆರೋಪ ಮಾಡುತ್ತಿದ್ದಾರೆಂದು ಸಿಂಡಿಕೇಟ್‌ ನ 3ನೇ ಸಾಮಾನ್ಯ ಸಭೆಯಲ್ಲಿ ಖಂಡಿಸಿ ಈ ಸಂಬಂಧ ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ. ಸಿಂಡಿಕೇಟ್‌ನ 3ನೇ ಸಾಮಾನ್ಯ ಸಭೆ ಮೈಸೂರಿನ ಕ್ರಾಫರ್ಡ್ ಭವನದಲ್ಲಿ ನಡೆಯಿತು. ಸಭೆಯಲ್ಲಿ ವಿಶ್ವವಿದ್ಯಾನಿಲಯದ ಪ್ರತಿಷ್ಠೆ ಹಾಗೂ ಆಡಳಿತಕ್ಕೆ ಧಕ್ಕೆ ತರುತ್ತಿರುವ ಕೆಲವು ಗಂಭೀರ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಸಿಂಡಿಕೇಟ್ ಸದಸ್ಯ ಟಿ.ಆರ್. ಚಂದ್ರಶೇಖರ್ [&#8230;]</p>
<p>The post <a href="https://www.justkannada.in/mysore-university-syndicate-meeting/">ಆಧಾರ ರಹಿತ ಆರೋಪ: ಟಿ.ಆರ್ ಚಂದ್ರಶೇಖರ್ ವಿರುದ್ದ ಕ್ರಮಕ್ಕೆ ಮೈಸೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,5,2026 (<a href="http://www.justkannada.in">www.justkannada.in</a>):</strong> ಮೈಸೂರು ವಿಶ್ವವಿದ್ಯಾನಿಲಯದ ಆಡಳಿತ, ಟೆಂಡರ್ ಪ್ರಕ್ರಿಯೆ ಮತ್ತು ಆರ್ಥಿಕ ವಿಚಾರಗಳಿಗೆ ಸಂಬಂಧಿಸಿದಂತೆ ಸಿಂಡಿಕೇಟ್ ಸದಸ್ಯ ಟಿ.ಆರ್. ಚಂದ್ರಶೇಖರ್  ಆಧಾರ ರಹಿತ ಆರೋಪ ಮಾಡುತ್ತಿದ್ದಾರೆಂದು ಸಿಂಡಿಕೇಟ್‌ ನ 3ನೇ ಸಾಮಾನ್ಯ ಸಭೆಯಲ್ಲಿ ಖಂಡಿಸಿ ಈ ಸಂಬಂಧ ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸಿಂಡಿಕೇಟ್‌ನ 3ನೇ ಸಾಮಾನ್ಯ ಸಭೆ ಮೈಸೂರಿನ ಕ್ರಾಫರ್ಡ್ ಭವನದಲ್ಲಿ ನಡೆಯಿತು. ಸಭೆಯಲ್ಲಿ ವಿಶ್ವವಿದ್ಯಾನಿಲಯದ ಪ್ರತಿಷ್ಠೆ ಹಾಗೂ ಆಡಳಿತಕ್ಕೆ ಧಕ್ಕೆ ತರುತ್ತಿರುವ ಕೆಲವು ಗಂಭೀರ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.</p>
<p>ಸಿಂಡಿಕೇಟ್ ಸದಸ್ಯ ಟಿ.ಆರ್. ಚಂದ್ರಶೇಖರ್ ಅವರು ವಿಶ್ವವಿದ್ಯಾನಿಲಯದ ಆಡಳಿತ, ಟೆಂಡರ್ ಪ್ರಕ್ರಿಯೆ ಮತ್ತು ಆರ್ಥಿಕ ವಿಚಾರಗಳಿಗೆ ಸಂಬಂಧಿಸಿದಂತೆ ಮಾಡುತ್ತಿರುವ ಆರೋಪಗಳು ಆಧಾರರಹಿತ, ದುರುದ್ದೇಶಪೂರಿತ ಹಾಗೂ ಅಧಿಕೃತ ದಾಖಲೆಗಳಿಲ್ಲದವು ಎಂದು ಸಭೆ ಅಭಿಪ್ರಾಯಪಟ್ಟಿತು. ವಿಶ್ವವಿದ್ಯಾನಿಲಯದ ಅಧಿಕಾರಿಗಳ ಬಳಿ ಸ್ಪಷ್ಟನೆ ಪಡೆಯದೆ, ಮಾಧ್ಯಮಗಳು ಮತ್ತು ಜಾಲತಾಣಗಳ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವುದನ್ನು ಸಭೆ ಖಂಡಿಸಿತು.</p>
<p>ವಿಶ್ವವಿದ್ಯಾನಿಲಯದ ಅಧಿಕೃತ ಲೋಗೋ ಮತ್ತು ಹೆಸರಿನ ದುರ್ಬಳಕೆ ಮೂಲಕ ಸಂಸ್ಥೆಯ ಘನತೆಗೆ ಧಕ್ಕೆ ಉಂಟಾಗುತ್ತಿದೆ ಎಂದು ಸಭೆ ಆತಂಕ ವ್ಯಕ್ತಪಡಿಸಿತು. ಇಂತಹ ಹೇಳಿಕೆಗಳಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುತ್ತಿದ್ದು, ವಿಶ್ವವಿದ್ಯಾನಿಲಯದ ಪ್ರತಿಷ್ಠೆಗೆ ಹಾನಿಯಾಗಿದೆ ಎಂದು ತಿಳಿಸಲಾಯಿತು.</p>
<p>ಈ ಹಿನ್ನೆಲೆಯಲ್ಲಿ, ಟಿ.ಆರ್. ಚಂದ್ರಶೇಖರ್ ಅವರ ನಡವಳಿಕೆಯನ್ನು ಸರ್ವಾನುಮತದಿಂದ ಖಂಡಿಸಿ, ಕರ್ನಾಟಕ ಸರ್ಕಾರ ಹಾಗೂ ಕುಲಾಧಿಪತಿಗಳಿಗೆ ವರದಿ ಸಲ್ಲಿಸಿ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಸಿಂಡಿಕೇಟ್ ಸಭೆ ತೀರ್ಮಾನಿಸಿದೆ.</p>
<p>ಇದೇ ವೇಳೆ, ಟಿ.ಆರ್. ಚಂದ್ರಶೇಖರ್ ಅವರು ವಿಶ್ವವಿದ್ಯಾನಿಲಯದ ಅಧಿಕೃತ ಕಾರ್ಯನಿರ್ವಾಹಕ ಅಧಿಕಾರಿಯಲ್ಲ ಎಂದು ಸ್ಪಷ್ಟಪಡಿಸಿರುವ ಕುಲಸಚಿವರು, ಅವರು ನೀಡುತ್ತಿರುವ ಹೇಳಿಕೆಗಳು ವಿಶ್ವವಿದ್ಯಾನಿಲಯದ ಅಧಿಕೃತ ನಿಲುವಲ್ಲ ಎಂದು ಸಾರ್ವಜನಿಕರು ಮತ್ತು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.</p>
<p>ENGLISH SUMMARY..</p>
<p>University of Mysore Syndicate’s 3rd General Meeting was held on May 6 at Crawford Hall in Mysuru. The meeting strongly condemned Syndicate member T.R. Chandrashekhar for allegedly making baseless and unverified allegations against the university administration and statutory officials through media platforms.</p>
<p>The Syndicate stated that the corruption and tender irregularity allegations lacked official evidence and were damaging the university’s reputation. It also accused him of misusing the university’s name and logo and spreading misinformation without following official procedures.</p>
<p>The Syndicate unanimously resolved to submit a detailed report to the Karnataka government and the Chancellor, seeking appropriate legal action against him. The Registrar clarified that T.R. Chandrashekhar is not an official executive authority of the university, and his statements do not represent the university’s official stand.</p>
<p>Key words: Baseless allegation, TR Chandrasekhar, Mysore University, Syndicate meeting</p>
<p>The post <a href="https://www.justkannada.in/mysore-university-syndicate-meeting/">ಆಧಾರ ರಹಿತ ಆರೋಪ: ಟಿ.ಆರ್ ಚಂದ್ರಶೇಖರ್ ವಿರುದ್ದ ಕ್ರಮಕ್ಕೆ ಮೈಸೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ವಿವಿ ಟೆಂಡರ್, ಖರೀದಿ ಪ್ರಕ್ರಿಯೆಯಲ್ಲಿ ಅಕ್ರಮ- ವಿಶೇಷ ತನಿಖೆಗೆ  ಡಾ. ಟಿ.ಆರ್ ಚಂದ್ರಶೇಖರ್ ಒತ್ತಾಯ</title>
		<link>https://www.justkannada.in/mysore-university-tender/</link>
		
		<dc:creator><![CDATA[prashanth]]></dc:creator>
		<pubDate>Mon, 15 Sep 2025 05:48:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[illegal]]></category>
		<category><![CDATA[Mysore University]]></category>
		<category><![CDATA[tender]]></category>
		<category><![CDATA[TR Chandrasekhar]]></category>
		<guid isPermaLink="false">https://www.justkannada.in/?p=145296</guid>

					<description><![CDATA[<p>ಮೈಸೂರು,ಸೆಪ್ಟಂಬರ್,15,2025 (www.justkannada.in): ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಟೆಂಡರ್, ಖರೀದಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದ್ದು,  2023ರಿಂದ ಸತತವಾಗಿ ಪದೇಪದೇ ಕಾಯ್ದೆಗಳ ಉಲ್ಲಂಘನೆ ಮಾಡಿ ಟೆಂಡರ್ ಹೆಸರಿನಲ್ಲಿ ವಸ್ತುಗಳ ಖರೀದಿ ಮತ್ತು ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಈ ಬಗ್ಗೆ ತಕ್ಷಣವೇ  ವಿಶೇಷ ತನಿಖೆ ನಡೆಸಬೇಕು ಎಂದು ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಡಾ. ಟಿ.ಆರ್ ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಈ ಕುರಿತು ಮೈಸೂರು ವಿವಿ ಕುಲಪತಿಗಳಿಗೆ ಪತ್ರ ಬರೆದಿರುವ ಡಾ.ಟಿ.ಆರ್ ಚಂದ್ರಶೇಖರ್, 2023 ರಿಂದ ಮೈಸೂರು ವಿಶ್ವವಿದ್ಯಾಲಯದಲ್ಲಿ ಟೆಂಡರ್ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ [&#8230;]</p>
<p>The post <a href="https://www.justkannada.in/mysore-university-tender/">ಮೈಸೂರು ವಿವಿ ಟೆಂಡರ್, ಖರೀದಿ ಪ್ರಕ್ರಿಯೆಯಲ್ಲಿ ಅಕ್ರಮ- ವಿಶೇಷ ತನಿಖೆಗೆ  ಡಾ. ಟಿ.ಆರ್ ಚಂದ್ರಶೇಖರ್ ಒತ್ತಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,15,2025 (www.justkannada.in):</strong> ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಟೆಂಡರ್, ಖರೀದಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದ್ದು,  2023ರಿಂದ ಸತತವಾಗಿ ಪದೇಪದೇ ಕಾಯ್ದೆಗಳ ಉಲ್ಲಂಘನೆ ಮಾಡಿ ಟೆಂಡರ್ ಹೆಸರಿನಲ್ಲಿ ವಸ್ತುಗಳ ಖರೀದಿ ಮತ್ತು ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಈ ಬಗ್ಗೆ ತಕ್ಷಣವೇ  ವಿಶೇಷ ತನಿಖೆ ನಡೆಸಬೇಕು ಎಂದು ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಡಾ. ಟಿ.ಆರ್ ಚಂದ್ರಶೇಖರ್ ಒತ್ತಾಯಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮೈಸೂರು ವಿವಿ ಕುಲಪತಿಗಳಿಗೆ ಪತ್ರ ಬರೆದಿರುವ ಡಾ.ಟಿ.ಆರ್ ಚಂದ್ರಶೇಖರ್, 2023 ರಿಂದ ಮೈಸೂರು ವಿಶ್ವವಿದ್ಯಾಲಯದಲ್ಲಿ ಟೆಂಡರ್ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಗಂಭೀರ ಅಕ್ರಮಗಳನ್ನು, ನಾನು ಅನೇಕ ಸಿಂಡಿಕೇಟ್ ಸಭೆಗಳಲ್ಲಿ ಆಕ್ಷೇಪಿಸುತ್ತಾ ಬಂದಿದ್ದೇನೆ. ಟೆಂಡರ್‌ ಗಳನ್ನು ನೀಡುವಲ್ಲಿ ಕೆಟಿಟಿಪಿ ಕಾಯ್ದೆ, 1999 (ವಿಧಿ 9) ಹಾಗೂ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ, 2000 (ವಿಧಿ 29 (1) &amp; (2b))ಗಳನ್ನು 2023ರಿಂದ ಸತತವಾಗಿ ಪದೇಪದೇ ಕಾಯ್ದೆಗಳ ಉಲ್ಲಂಘನೆ ಮಾಡಿ ಟೆಂಡರ್ ಹೆಸರಿನಲ್ಲಿ ವಸ್ತುಗಳ ಖರೀದಿ ಮತ್ತು ಕಾಮಗಾರಿಗಳನ್ನು ನಡೆಸುವ ಮುಖೇನ ಆರ್ಥಿಕ ಸಂಕಷ್ಟದಲ್ಲಿರುವ ನಮ್ಮ ವಿವಿಯ ಹಣಕಾಸು ನಿಧಿಗಳ ದುರುಪಯೋಗವಾಗಿದೆ ಎಂಬುದು ಸ್ಪಷ್ಟವಾಗಿದೆ.</p>
<p>ಇದರ ಮುಂದುವರಿದ ಭಾಗವಾಗಿ ಮತ್ತೆ ತಾವುಗಳು, 2025ರ ಆಗಸ್ಟ್ 5 ರಂದು ರಾಜ್ಯ ಸಾರ್ವಜನಿಕ ಖರೀದಿ ಪೋರ್ಟಲ್‌ ನಲ್ಲಿ ಕೆಳಗಿನ ಶೀರ್ಷಿಕೆಯಲ್ಲಿ ಟೆಂಡರ್ ಆಹ್ವಾನಿಸಿ ಆಯ್ಕೆ ಮಾಡಿ ಚಾಲನೆ ನೀಡಿರುವುದು ಕಂಡುಬಂದಿದಿದೆ.</p>
<p>ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಈ ಸುಧೀರ್ಘಕಾಲದ ಅವ್ಯವಹಾಗಳ ಹಿನ್ನೆಲೆಯಲ್ಲಿ, ಮೈಸೂರು ವಿಶ್ವವಿದ್ಯಾಲಯದ ಕೆಲವು ಅಧಿಕಾರಿಗಳಿಗೆ ಹಣಕಾಸು ನಿಧಿಗಳ ದುರುಪಯೋಗ ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ಕೆಟಿಟಿಪಿ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ &#8220;ಕರ್ನಾಟಕ ಲೋಕಾಯುಕ್ತ&#8221; ದಲ್ಲಿ ಸಾರ್ವಜನಿಕರು ಈಗಾಗಲೇ ದೂರು ನೀಡಿರುವ ಕಾರಣ, ಲೋಕಾಯುಕ್ತರು ಸದರಿ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಗಮನಕ್ಕೆ ಬಂದಿದೆ.</p>
<p>ತಾವುಗಳು, ಈ ರೀತಿ ಕಾನೂನು ಬಾಹಿರವಾಗಿ ಹಲವು ವರ್ಷಗಳಿಂದ ನಡೆಸುತ್ತಿರುವ ಸದರಿ ಟೆಂಡರ್ ಪ್ರಕ್ರಿಯೆಗಳ ಬಗ್ಗೆ, ನಾನು ಹಲವಾರು ಸಿಂಡಿಕೇಟ್ ಸಭೆಗಳಲ್ಲಿ ಆಕ್ಷೇಪಿಸುತ್ತಾ ಬಂದಿದ್ದೇನೆ. ಅಂತಹ ಸಂದರ್ಭಗಳಲ್ಲಿ, ನೀವು ಸದರಿ ಟೆಂಡರ್ ಗಳಿಗೆ ಸಿಂಡಿಕೇಟ್ ಸಭೆಯ ಅನುಮತಿ ಅಗತ್ಯವಿಲ್ಲವೆಂದು ಸಮರ್ಥಿಸುತ್ತಾ ಬಂದಿರುತ್ತೀರಿ..! ಕೆಲವೊಮ್ಮೆ ಸದಸ್ಯರುಗಳಿಂದ ವಿರೋಧಗಳು ತೀವ್ರವಾದಾಗ ಮುಂದಿನ ದಿನಗಳಲ್ಲಿ ನಿಯಮಗಳನ್ನು ಪಾಲಿಸುವುದಾಗಿ ಭರವಸೆ ನೀಡುತ್ತಾ ಬಂದಿರುತ್ತೀರಿ..!</p>
<p>ಇದಕ್ಕೆ ಪೂರಕವಾಗಿ ಕಳೆದ ಸಿಂಡಿಕೇಟ್ ಸಭೆಯಲ್ಲಿ ಅಂದರೆ ದಿನಾಂಕ 20.08.2025 ರಂದು ನಾನು ಸಲ್ಲಿಸಿದ ಪತ್ರಕ್ಕೆ, ಇಂದಿನವರೆಗೂ ನೀವು ಯಾವುದೇ ಲಿಖಿತ ಉತ್ತರ ನೀಡದೇ ಇರುವುದು ಅತ್ಯಂತ ದುರದಷ್ಟಕರ ಸಂಗತಿಯಾಗಿದೆ. ಇದರ ಅರ್ಥ, ಟೆಂಡ‌ರ್ ಪ್ರಕ್ರಿಯೆ ಪೂರ್ಣಗೊಳಿಸಲು ಹಣಕಾಸು ದುರುಪಯೋಗ ಮಾಡುವ ಸಲುವಾಗಿಯೇ, ನೀವುಗಳು ಕೆಟಿಟಿಪಿ ಕಾಯ್ದೆ 1999 ಮತ್ತು ಕೆಎಸ್‌ಯು ಕಾಯ್ದೆ 2000 ರ ನಿಯಮಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಲಾಗಿದೆ ಎಂಬುದನ್ನು ತೋರಿಸುತ್ತದೆ.</p>
<p>ಆದ್ದರಿಂದ &#8221;ಕಾಯ್ದೆಗಳ ವಿರುದ್ಧವಾಗಿ ಹಾಗೂ ಸಿಂಡಿಕೇಟ್ ಒಪ್ಪಿಗೆ ಇಲ್ಲದೆ, ನಿಯಮ ಮೀರಿ ಪ್ರಸ್ತುತ ಚಾಲ್ತಿಯಲ್ಲಿರುವ ಎಲ್ಲಾ ಟೆಂಡರ್ ಪ್ರಕ್ರಿಯೆಗಳನ್ನು ಮತ್ತು ಯಾವುದೇ ಟೆಂಡ‌ರ್ ರಹಿತವಾಗಿ ಮಾಡಿಕೊಂಡಿರುವ ಎಲ್ಲಾ ಕರಾರುಗಳನ್ನು ತಕ್ಷಣ ಸ್ಥಗಿತಗೊಳಿಸಿ ರದ್ದುಗೊಳಿಸಬೇಕು ಎಂದು ಚಂದ್ರಶೇಖರ್ ಒತ್ತಾಯಿಸಿದ್ದಾರೆ.</p>
<p>ತಮ್ಮ ಈ ಕಾನೂನುಬಾಹಿರ ಆಡಳಿತ ಮತ್ತು ಹಣಕಾಸು ದುರುಪಯೋಗ ಹಾಗೂ ಭ್ರಷ್ಟಾಚಾರ ನಡೆಸುತ್ತಿರುವ ಬಗ್ಗೆ ತಕ್ಷಣ ವಿಶೇಷ ತನಿಖೆ ನಡೆಸಬೇಕೆಂದು  ಚಂದ್ರಶೇಖರ್ ಒತ್ತಾಯಿಸಿದ್ದಾರೆ.</p>
<p>Key words: Mysore University, Tender, Illegal, TR Chandrasekhar</p>
<p>The post <a href="https://www.justkannada.in/mysore-university-tender/">ಮೈಸೂರು ವಿವಿ ಟೆಂಡರ್, ಖರೀದಿ ಪ್ರಕ್ರಿಯೆಯಲ್ಲಿ ಅಕ್ರಮ- ವಿಶೇಷ ತನಿಖೆಗೆ  ಡಾ. ಟಿ.ಆರ್ ಚಂದ್ರಶೇಖರ್ ಒತ್ತಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
