<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Vasant Bangera Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/vasant-bangera/feed/" rel="self" type="application/rss+xml" />
	<link>https://www.justkannada.in/tag/vasant-bangera/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 21 May 2024 09:39:17 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Vasant Bangera Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/vasant-bangera/</link>
	<width>32</width>
	<height>32</height>
</image> 
	<item>
		<title>ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು- ಸಿ.ಎಂ ಸಿದ್ದರಾಮಯ್ಯ.</title>
		<link>https://www.justkannada.in/former-minister-vasant-bangera-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Tue, 21 May 2024 09:39:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[Former Minister]]></category>
		<category><![CDATA[Siddaramaiah]]></category>
		<category><![CDATA[Vasant Bangera]]></category>
		<guid isPermaLink="false">https://www.justkannada.in/?p=123791</guid>

					<description><![CDATA[<p>ಬೆಳ್ತಂಗಡಿ ಏಪ್ರಿಲ್, 21,2024 (www.justkannada.in): ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಮಾಜಿ ಸಚಿವ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೇ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ [&#8230;]</p>
<p>The post <a href="https://www.justkannada.in/former-minister-vasant-bangera-cm-siddaramaiah/">ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು- ಸಿ.ಎಂ ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳ್ತಂಗಡಿ ಏಪ್ರಿಲ್, 21,2024 (<a href="http://www.justkannada.in">www.justkannada.in</a>):</strong> ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಮಾಜಿ ಸಚಿವ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೇ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದರು.</p>
<p>ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡವರು ಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ ಎಂದರು.<img decoding="async" class="aligncenter size-full wp-image-123792" src="https://www.justkannada.in/wp-content/uploads/2024/05/vasanth.jpg" alt="" width="500" height="333" srcset="https://www.justkannada.in/wp-content/uploads/2024/05/vasanth.jpg 500w, https://www.justkannada.in/wp-content/uploads/2024/05/vasanth-300x200.jpg 300w, https://www.justkannada.in/wp-content/uploads/2024/05/vasanth-150x100.jpg 150w" sizes="(max-width: 500px) 100vw, 500px" /></p>
<p>ಬಂಗೇರ ಅವರು ತಮ್ಮ ಬದುಕಿನುದ್ದಕ್ಕೂ ವಿಶ್ವ ಮಾನವ ಮೌಲ್ಯವನ್ನು ಪಾಲಿಸಿದರು. ಬಂಗೇರ ಅವರು ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. ಐದು ಬಾರಿ ಶಾಸಕರಾದರೂ ಮಂತ್ರಿ ಆಗಲು ಯಾವತ್ತೂ ಸಣ್ಣ ಲಾಬಿ ಕೂಡ ನಡೆಸಿದವರಲ್ಲ. ಹೀಗಾಗಿ ಇವರು ಅತ್ಯಂತ ಮಾದರಿ ರಾಜಕೀಯ ನಾಯಕರಾಗಿದ್ದರು ಎಂದು ಬಣ್ಣಿಸಿದರು.</p>
<p>2023ರಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಈ ಬಾರಿ ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು ಎಂದು ವಿವರಿಸಿದರು.</p>
<p>ವಸಂತ ಬಂಗೇರ ಅವರ ಸಾವಿನಿಂದ ರಾಜ್ಯ ರಾಜಕಾರಣ ಅತ್ಯಂತ ಬಡವಾಗಿದೆ. ಇವರ ಆರೋಗ್ಯ ಚೇತರಿಸಿಕೊಳ್ಳುತ್ತದೆ ಮತ್ತಷ್ಟು ಕಾಲ ನಮ್ಮ ಜೊತೆಗೆ ಇರುತ್ತಾರೆ ಎನ್ನುವ ಆಸೆ ಇತ್ತು. ಆದರೆ ನಮ್ಮನ್ನು ಅಗಲಿಬಿಟ್ಟಿರುವುದು ನನ್ನ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>
<p>ಮಾಜಿ ಸಚಿವ ಜನಾರ್ಧನ ಪೂಜಾರಿ, ಸ್ಪೀಕರ್ ಯು.ಟಿ.ಖಾದರ್ ಮತ್ತು ವಸಂತ ಬಂಗೇರ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.</p>
<p><strong>ಬಸ್ ಸ್ಟ್ಯಾಂಡ್ ಗೆ ಬಂಗೇರ ಹೆಸರಿಡಲು ಸರ್ಕಾರ ಸಿದ್ದ</strong></p>
<p>ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಗೆ ವಸಂತ ಬಂಗೇರ ಅವರ ಹೆಸರಿಡಲು ಸರ್ಕಾರ ಸಿದ್ದವಿದೆ. ಜೊತೆಗೆ ಅವರ ಪ್ರತಿಮೆಯನ್ನ ವೃತ್ತದಲ್ಲಿ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು.</p>
<p>Key words: Former minister, Vasant Bangera, CM Siddaramaiah</p>
<p>The post <a href="https://www.justkannada.in/former-minister-vasant-bangera-cm-siddaramaiah/">ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು- ಸಿ.ಎಂ ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
