<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Victory -Karnataka - 4th -Industrial Revolution. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/victory-karnataka-4th-industrial-revolution/feed/" rel="self" type="application/rss+xml" />
	<link>https://www.justkannada.in/tag/victory-karnataka-4th-industrial-revolution/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 18 Nov 2021 10:26:51 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Victory -Karnataka - 4th -Industrial Revolution. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/victory-karnataka-4th-industrial-revolution/</link>
	<width>32</width>
	<height>32</height>
</image> 
	<item>
		<title>4ನೇ ಕೈಗಾರಿಕಾ ಕ್ರಾಂತಿಯಲ್ಲಿ ಕರ್ನಾಟಕಕ್ಕೆ ಗೆಲುವು- ಆಪಲ್ ಕಂಪನಿ ಉಪಾಧ್ಯಕ್ಷೆ ಪ್ರಿಯಾ ಬಾಲಸುಬ್ರಮಣ್ಯಂ ವಿಶ್ವಾಸ.</title>
		<link>https://www.justkannada.in/victory-karnataka-4th-industrial-revolution-priya-balasubramaniam-vice-president-apple-company/</link>
		
		<dc:creator><![CDATA[JK Desk]]></dc:creator>
		<pubDate>Thu, 18 Nov 2021 10:26:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Apple Company]]></category>
		<category><![CDATA[ice president]]></category>
		<category><![CDATA[Priya Balasubramaniam-]]></category>
		<category><![CDATA[Victory -Karnataka - 4th -Industrial Revolution.]]></category>
		<guid isPermaLink="false">https://www.justkannada.in/?p=80541</guid>

					<description><![CDATA[<p>ಬೆಂಗಳೂರು,ನವೆಂಬರ್,18,2021(www.justkannada.in):  ಉನ್ನತ ಶಿಕ್ಷಣ ಕ್ಷೇತ್ರದ ಗುಣಾತ್ಮಕ ಸುಧಾರಣೆಗೆ ಹತ್ತಾರು ಉಪಕ್ರಮಗಳನ್ನು ತಂದಿರುವ ಕರ್ನಾಟಕ ರಾಜ್ಯವು ನಾಲ್ಕನೇ ಕೈಗಾರಿಕಾ ಕ್ರಾಂತಿಯಲ್ಲಿ ಮಹತ್ತರ ಪಾತ್ರ ವಹಿಸುವುದರಲ್ಲಿ ಅನುಮಾನವಿಲ್ಲ ಎಂದು ಆಪಲ್ ಕಂಪನಿ ಉಪಾಧ್ಯಕ್ಷೆ ಪ್ರಿಯಾ ಬಾಲಸುಬ್ರಮಣ್ಯಂ ವಿಶ್ವಾಸ ವ್ಯಕ್ತಪಡಿಸಿದರು. ಅಮೆರಿಕದ ಕ್ಯಾಲಿಫೋರ್ನಿಯಾದಿಂದ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ವರ್ಚ್ಯುಯಲ್ ಆಗಿ ಪಾಲ್ಗೊಂಡು ಗುರುವಾರ ಮಾತನಾಡಿದ ಅವರು, ನಾಸ್ಕಾಂನಂತಹ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು 10 ಸಾವಿರ ನವೋದ್ಯಮಗಳ ಮೂಲಕ ವಿದ್ಯಾರ್ಥಿಗಳಿಗೆ ಸಮಕಾಲೀನ ಉದ್ಯೋಗಗಳಿಗೆ ಬೇಕಾದ ಕೌಶಲ್ಯಗಳನ್ನು ಒದಗಿಸುತ್ತಿರುವುದು ಶ್ಲಾಘನೀಯ ಬೆಳವಣಿಗೆ ಎಂದರು. ಈಗಿನ [&#8230;]</p>
<p>The post <a href="https://www.justkannada.in/victory-karnataka-4th-industrial-revolution-priya-balasubramaniam-vice-president-apple-company/">4ನೇ ಕೈಗಾರಿಕಾ ಕ್ರಾಂತಿಯಲ್ಲಿ ಕರ್ನಾಟಕಕ್ಕೆ ಗೆಲುವು- ಆಪಲ್ ಕಂಪನಿ ಉಪಾಧ್ಯಕ್ಷೆ ಪ್ರಿಯಾ ಬಾಲಸುಬ್ರಮಣ್ಯಂ ವಿಶ್ವಾಸ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,18,2021(<a href="https://www.justkannada.in">www.justkannada.in</a>):</strong>  ಉನ್ನತ ಶಿಕ್ಷಣ ಕ್ಷೇತ್ರದ ಗುಣಾತ್ಮಕ ಸುಧಾರಣೆಗೆ ಹತ್ತಾರು ಉಪಕ್ರಮಗಳನ್ನು ತಂದಿರುವ ಕರ್ನಾಟಕ ರಾಜ್ಯವು ನಾಲ್ಕನೇ ಕೈಗಾರಿಕಾ ಕ್ರಾಂತಿಯಲ್ಲಿ ಮಹತ್ತರ ಪಾತ್ರ ವಹಿಸುವುದರಲ್ಲಿ ಅನುಮಾನವಿಲ್ಲ ಎಂದು ಆಪಲ್ ಕಂಪನಿ ಉಪಾಧ್ಯಕ್ಷೆ ಪ್ರಿಯಾ ಬಾಲಸುಬ್ರಮಣ್ಯಂ ವಿಶ್ವಾಸ ವ್ಯಕ್ತಪಡಿಸಿದರು.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಅಮೆರಿಕದ ಕ್ಯಾಲಿಫೋರ್ನಿಯಾದಿಂದ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ವರ್ಚ್ಯುಯಲ್ ಆಗಿ ಪಾಲ್ಗೊಂಡು ಗುರುವಾರ ಮಾತನಾಡಿದ ಅವರು, ನಾಸ್ಕಾಂನಂತಹ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು 10 ಸಾವಿರ ನವೋದ್ಯಮಗಳ ಮೂಲಕ ವಿದ್ಯಾರ್ಥಿಗಳಿಗೆ ಸಮಕಾಲೀನ ಉದ್ಯೋಗಗಳಿಗೆ ಬೇಕಾದ ಕೌಶಲ್ಯಗಳನ್ನು ಒದಗಿಸುತ್ತಿರುವುದು ಶ್ಲಾಘನೀಯ ಬೆಳವಣಿಗೆ ಎಂದರು.</p>
<p>ಈಗಿನ ಉದ್ಯಮರಂಗದಲ್ಲಿ ಕೃತಕ ಬುದ್ಧಿಮತ್ತೆ, ಮಶೀನ್ ಲರ್ನಿಂಗ್, ಆಗ್ಮೆಂಟೆಡ್ ವರ್ಚುಯಲ್ ರಿಯಾಲಿಟಿ, ರೋಬೋಟಿಕ್ಸ್ ಮುಂತಾದ ತಂತ್ರಜ್ಞಾನದ ಧಾರೆಗಳು ಮುಂಚೂಣಿಗೆ ಬಂದಿದ್ದು, ನಿರ್ಣಾಯಕ ಪಾತ್ರ ವಹಿಸುತ್ತಿವೆ. ಭಾರತದಲ್ಲಿ ಯುವಜನರಿಗೆ ಈ ಕಲಿಕೆಗಳನ್ನು ಶಿಕ್ಷಣದ ಅವಿಭಾಜ್ಯ ಅಂಗವಾಗಿಸಬೇಕು ಎಂದು ಅಭಿಪ್ರಾಯಪಟ್ಟರು.</p>
<p>ಆಪಲ್ ಕಂಪನಿಯು 2017ರಿಂದಲೂ ಬೆಂಗಳೂರಿನಲ್ಲೇ ತನ್ನ ಐ-ಫೋನುಗಳನ್ನು ಉತ್ಪಾದಿಸುತ್ತಿದ್ದು, ಇತ್ತೀಚೆಗಷ್ಟೇ ಇದನ್ನು ಚೆನ್ನೈಗೆ ವಿಸ್ತರಿಸಿದೆ. ವಿಶೇಷವಾಗಿ ಬೆಂಗಳೂರು ಮತ್ತು ಒಟ್ಟಾರೆಯಾಗಿ ಭಾರತದೊಂದಿಗೆ ವ್ಯಾಪಕ ಸಹಭಾಗಿತ್ವ ಹೊಂದಿರುವ ಕಂಪನಿಯು ದೇಶದಲ್ಲಿ 10 ಲಕ್ಷ ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಿದೆ ಎಂದು ಪ್ರಿಯಾ ವಿವರಿಸಿದರು.<img decoding="async" class="aligncenter size-full wp-image-80543" src="https://www.justkannada.in/wp-content/uploads/2021/11/apple.jpg" alt="" width="696" height="696" /></p>
<p>ತಮ್ಮ ಸಂಸ್ಥೆಯು ಬೆಂಗಳೂರಿನಲ್ಲಿರುವ `ಎನೇಬಲ್ ಇಂಡಿಯಾ’ ಸಂಸ್ಥೆಯೊಂದಿಗೂ ಕೈಜೋಡಿಸಿದ್ದು, 2 ಸಾವಿರ ಮನೆಗಳಿಗೆ ಸೌರದೀಪಗಳನ್ನು ಒದಗಿಸಿದೆ. ಜತೆಗೆ ಬಡಕುಟುಂಬಗಳ ಸಾವಿರಾರು ಮಕ್ಕಳಿಗೆ ಕಲಿಕೆಗೆ ಅಗತ್ಯವಾದ ಡಿಜಿಟಲ್ ಸಾಧನಗಳನ್ನು ಪೂರೈಸಿದ್ದು, ಅವರ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿದೆ ಎಂದು ತಿಳಿಸಿದರು.</p>
<p>ಕಂಪನಿಯ ಆಪ್ ಗಳಿಂದ ಚಿಲ್ಲರೆ ವ್ಯಾಪಾರ ಕೂಡ ಮುಂಬರುವ ದಿನಗಳಲ್ಲಿ ಸುಲಭವಾಗಲಿದೆ. ಇನ್ನೊಂದೆಡೆ, ಭಾರತದ ಮಕ್ಕಳು ಸಂಗೀತ, ನೃತ್ಯ, ಭಾಷೆ ಇತ್ಯಾದಿಗಳನ್ನು ತಮ್ಮ ಆಪ್ ಗಳಿಂದ ಕಲಿಯುತ್ತಿದ್ದಾರೆ. ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಶಕ್ತಿಯಾಗಿರುವ ಕರ್ನಾಟಕ ಮತ್ತು ಭಾರತಗಳು ತಂತ್ರಜ್ಞಾನದ ವರ್ಗಾವಣೆಯನ್ನು ಸಮರ್ಥವಾಗಿ ಮಾಡಬಲ್ಲವು ಎಂದರು.</p>
<p>`ಸ್ಮಾರ್ಟ್ ಮ್ಯಾನಫ್ಯಾಕ್ಚರಿಂಗ್’ ವಿಧಾನದ ಮೂಲಕ ಕಂಪನಿಯು ಶೂನ್ಯ ತ್ಯಾಜ್ಯ ಹಾಗೂ ಸುಸ್ಥಿರತೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ. ಭಾರತದ ಅಭಿವೃದ್ಧಿಯಲ್ಲಿ ಆಪಲ್ ಕಂಪನಿಯು ಮಹತ್ತರ ಪಾತ್ರ ವಹಿಸಲು ಸದಾ ಬದ್ಧತೆಯಿಂದ ಸಿದ್ಧವಾಗಿರುತ್ತದೆ ಎಂದು ಭರವಸೆ ನೀಡಿದರು.</p>
<p><strong>‘ನಾನು ಕರ್ನಾಟಕದ ಹೆಮ್ಮೆಯ ಪುತ್ರಿ!’</strong></p>
<p>ಕನ್ನಡದಲ್ಲೇ ತಮ್ಮ ಮಾತು ಆರಂಭಿಸಿದ ಪ್ರಿಯಾ ಬಾಲಸುಬ್ರಮಣ್ಯಂ `ನಾನು ಹುಟ್ಟಿ ಬೆಳೆದಿದ್ದೆಲ್ಲ ಬೆಂಗಳೂರಿನಲ್ಲೇ. ನಾನು ಓದಿದ್ದು ಬೆಂಗಳೂರು ವಿವಿಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ. ಬೆಂಗಳೂರು ತಂತ್ರಜ್ಞಾನ ಶೃಂಗವನ್ನು ಏರ್ಪಡಿಸಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲರಿಗೂ ಅಭಿನಂದನೆಗಳು,’ ಎಂದು ಹರ್ಷದಿಂದ ನುಡಿದರು. ಕೊನೆಯಲ್ಲಿ ಅವರು ತಮ್ಮ ಭಾಷಣವನ್ನು `ನಾನು ಕರ್ನಾಟಕದ ಹೆಮ್ಮೆಯ ಪುತ್ರಿ!’ ಎಂದು ಮುಗಿಸಿದರು.</p>
<p><strong>ಆಗ ‘ಆಪಲ್’ ಹೆಸರೂ ಗೊತ್ತಿರಲಿಲ್ಲ!</strong></p>
<p>ನಾನು ಬೆಂಗಳೂರಿನ ಯುವಿಇಸಿಯಲ್ಲಿ ಓದುತ್ತಿದ್ದಾಗ ಯಾರಿಗೂ ಆಪಲ್ ಕಂಪನಿಯ ಹೆಸರೂ ಗೊತ್ತಿರಲಿಲ್ಲ. ಈ ಕಂಪನಿಯ ಬಗ್ಗೆ ನಾನು ಪ್ರಾಜೆಕ್ಟ್ ತೆಗೆದುಕೊಂಡಾಗ ನಮ್ಮ ಗುರುಗಳು ಹುಬ್ಬೇರಿಸಿದ್ದರು. ಆದರೆ ಬೆಂಗಳೂರಿನವಳಾದ ನಾನು ಕ್ಯಾಲಿಫೋರ್ನಿಯಾಗೆ ಬಂದು ಆಪಲ್ ಕಂಪನಿಯ ಉನ್ನತ ಹುದ್ದೆ ಅಲಂಕರಿಸಿದ್ದೇನೆ ಎಂದರು.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Victory -Karnataka &#8211; 4th -Industrial Revolution.-Priya Balasubramaniam-vice president -Apple Company</p>
<p>The post <a href="https://www.justkannada.in/victory-karnataka-4th-industrial-revolution-priya-balasubramaniam-vice-president-apple-company/">4ನೇ ಕೈಗಾರಿಕಾ ಕ್ರಾಂತಿಯಲ್ಲಿ ಕರ್ನಾಟಕಕ್ಕೆ ಗೆಲುವು- ಆಪಲ್ ಕಂಪನಿ ಉಪಾಧ್ಯಕ್ಷೆ ಪ್ರಿಯಾ ಬಾಲಸುಬ್ರಮಣ್ಯಂ ವಿಶ್ವಾಸ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
