<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Widespread corruption by the Chancellor of KSOU says ex vc Ramegowda Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/widespread-corruption-by-the-chancellor-of-ksou-says-ex-vc-ramegowda/feed/" rel="self" type="application/rss+xml" />
	<link>https://www.justkannada.in/tag/widespread-corruption-by-the-chancellor-of-ksou-says-ex-vc-ramegowda/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 29 Aug 2021 06:38:41 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Widespread corruption by the Chancellor of KSOU says ex vc Ramegowda Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/widespread-corruption-by-the-chancellor-of-ksou-says-ex-vc-ramegowda/</link>
	<width>32</width>
	<height>32</height>
</image> 
	<item>
		<title>ದಿವಾಳಿ ಅಂಚಿಗೆ ಕರ್ನಾಟಕ ಮುಕ್ತ ವಿವಿ, ಕುಲಪತಿಯಿಂದ ವ್ಯಾಪಕ ಭ್ರಷ್ಟಾಚಾರ: ವಿಶ್ರಾಂತ ಕುಲಪತಿ ಡಾ. ಎನ್.ಎಸ್. ರಾಮೇಗೌಡ ಆರೋಪ</title>
		<link>https://www.justkannada.in/widespread-corruption-by-the-chancellor-of-ksou-says-ex-vc-ramegowda/</link>
		
		<dc:creator><![CDATA[JK Desk]]></dc:creator>
		<pubDate>Sun, 29 Aug 2021 06:38:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Widespread corruption by the Chancellor of KSOU says ex vc Ramegowda]]></category>
		<guid isPermaLink="false">https://www.justkannada.in/?p=74363</guid>

					<description><![CDATA[<p>ಬೆಂಗಳೂರು, ಆಗಸ್ಟ್, 29, 2021 (www.justkannada.in): ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಕುಲಪತಿ ಡಾ. ಎಸ್. ವಿದ್ಯಾಶಂಕರ್ ಇದೆಲ್ಲದಕ್ಕೂ ಸೂತ್ರಧಾರಿಗಳಾಗಿದ್ದಾರೆ. ಮುಕ್ತ ವಿ.ವಿ. ದಿವಾಳಿ ಅಂಚಿಗೆ ಬಂದು ನಿಂತಿದ್ದು, ಇದರ ಸಂಪೂರ್ಣ ಹೊಣೆಯನ್ನು ಅವರೇ ಹೊರಬೇಕು ಎಂದು ವಿಶ್ವವಿದ್ಯಾಲಯ ಕಟ್ಟಿ ಬೆಳೆಸಿದ ಪ್ರಮುಖರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎನ್.ಎಸ್. ರಾಮೇಗೌಡ ಹಾಗೂ ನಿವೃತ್ತ ಡೀನ್ ಡಾ. ಚಂಬಿ [&#8230;]</p>
<p>The post <a href="https://www.justkannada.in/widespread-corruption-by-the-chancellor-of-ksou-says-ex-vc-ramegowda/">ದಿವಾಳಿ ಅಂಚಿಗೆ ಕರ್ನಾಟಕ ಮುಕ್ತ ವಿವಿ, ಕುಲಪತಿಯಿಂದ ವ್ಯಾಪಕ ಭ್ರಷ್ಟಾಚಾರ: ವಿಶ್ರಾಂತ ಕುಲಪತಿ ಡಾ. ಎನ್.ಎಸ್. ರಾಮೇಗೌಡ ಆರೋಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಆಗಸ್ಟ್, 29, 2021 (www.justkannada.in)</strong>: ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಕುಲಪತಿ ಡಾ. ಎಸ್. ವಿದ್ಯಾಶಂಕರ್ ಇದೆಲ್ಲದಕ್ಕೂ ಸೂತ್ರಧಾರಿಗಳಾಗಿದ್ದಾರೆ. ಮುಕ್ತ ವಿ.ವಿ. ದಿವಾಳಿ ಅಂಚಿಗೆ ಬಂದು ನಿಂತಿದ್ದು, ಇದರ ಸಂಪೂರ್ಣ ಹೊಣೆಯನ್ನು ಅವರೇ ಹೊರಬೇಕು ಎಂದು ವಿಶ್ವವಿದ್ಯಾಲಯ ಕಟ್ಟಿ ಬೆಳೆಸಿದ ಪ್ರಮುಖರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>
<p>ನಗರದ ಪ್ರೆಸ್ ಕ್ಲಬ್ ನಲ್ಲಿ ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎನ್.ಎಸ್. ರಾಮೇಗೌಡ ಹಾಗೂ ನಿವೃತ್ತ ಡೀನ್ ಡಾ. ಚಂಬಿ ಪುರಾಣಿಕ್, ವಿಶ್ವ ವಿದ್ಯಾಲಯದ ಭವಿಷ್ಯದ ಬಗ್ಗೆ ತೀವ್ರ ಆತಂಕ ತೋಡಿಕೊಂಡರು. ಸಾಮಾಜಿಕ ನ್ಯಾಯದ ಬಗ್ಗೆ ಅಪಾರ ಕಾಳಜಿ, ಕಳಕಳಿ ಹೊಂದಿರುವ, ಶಿಕ್ಷಣ ಕ್ಷೇತ್ರದ ಸುಧಾರಣೆ ಕುರಿತು ಒಲವು ಹೊಂದಿರುವ ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ಕೂಡಲೇ ಮಧ್ಯ ಪ್ರವೇಶಿಸಿ, ವಿಶ್ವ ವಿದ್ಯಾಲಯವನ್ನು ರಕ್ಷಿಸಬೇಕು. ವಿವಿಯನ್ನು ಲೂಟಿ ಮಾಡುತ್ತಿರುವ, ದಿವಾಳಿ ಅಂಚಿಗೆ ತಂದು ನಿಲ್ಲಿಸುತ್ತಿರುವ ಅವೈಜ್ಞಾನಿಕ ನಿರ್ಧಾರಗಳಿಗೆ ತಡೆ ನೀಡಬೇಕು ಎಂದು ಒತ್ತಾಯಿಸಿದರು.</p>
<p>ವಿಶ್ವವಿದ್ಯಾಲಯದಲ್ಲಿ ಕೆಲವೇ ವರ್ಷಗಳ ಹಿಂದೆ 1.15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದರು. ಇದೀಗ ಈ ಸಂಖ್ಯೆ ಕೇವಲ 20 ರಿಂದ 25 ಸಾವಿರಕ್ಕೆ ಕುಸಿತ ಕಂಡಿದೆ. ಈ ಹಿಂದೆ 50 ಜನ ಖಾಯಂ ಮತ್ತು 20 ಮಂದಿ ಅರೆ ಕಾಲಿಕ ಬೋಧಕ ಸಿಬ್ಬಂದಿ ಸಂಖ್ಯೆ ಇತ್ತು. ಈಗ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದರೂ ಸಹ ಈಗಲೂ ಇದೇ ಪ್ರಮಾಣದ ಸಿಬ್ಬಂದಿ ಮುಂದುರೆದಿದ್ದಾರೆ. ಇದರ ಜತೆಗೆ ವಿ.ವಿ. ಕುಲಪತಿ ಅವರು ಮತ್ತೆ ಹೊಸಗಾಗಿ 40 ಮಂದಿ ಪ್ರಾಧ್ಯಾಪಕರನ್ನು ನೇಮಿಸಿಕೊಳ್ಳಲು ಹೊರಟಿದ್ದಾರೆ. ಇದೊಂದು ಬಹುದೊಡ್ಡ ಅಕ್ರಮಕ್ಕೆ ನಾಂದಿಯಾಗುತ್ತದೆ. ಈಗ ನೇಮಕಾತಿ ಅಗತ್ಯವಿಲ್ಲ. ಇದರಿಂದ ವಿನಾಕಾರಣ ಆರ್ಥಿಕ ಹೊರೆ ಉಂಟಾಗುತ್ತದೆ ಎಂದು ಆರೋಪಿಸಿದರು.<br />
ವಿಶ್ವವಿದ್ಯಾಲಯದಲ್ಲಿ 20 ಕ್ಕೂ ಹೆಚ್ಚು ವಿಸ್ತರಣಾ ಕೇಂದ್ರಗಳಿವೆ. ಈ ಪೈಕಿ ಕೆಲವು ಕೇಂದ್ರಗಳು ಮುಚ್ಚಿವೆ.</p>
<p>ಹೀಗಿದ್ದರೂ ಧಾರವಾಡ, ಕಲಬುರಗಿ ಸೇರಿ ಮೂರು ಕಡೆಗಳಲ್ಲಿ ಪ್ರಾದೇಶಿಕ ಕೇಂದ್ರಗಳ ಕಟ್ಟ ನಿರ್ಮಿಸಲು ಟೆಂಡರ್ ಕರೆದಿದ್ದಾರೆ. ಇದಕ್ಕೆ ಸುಮಾರು 75 ರಿಂದ 80 ಕೋಟಿ ರೂ ವೆಚ್ಚವಾಗಲಿದ್ದು, ಈಗಿರುವ ವಿಸ್ತರಣಾ ಕೇಂದ್ರಗಳೇ ಕಾರ್ಯನಿರ್ವಹಿಸುತ್ತಿಲ್ಲ. ಇದೀಗ ಮತ್ತೆ ಮೂರು ಕಟ್ಟಡಗಳನ್ನು ನಿರ್ಮಿಸುತ್ತಿರುವ ಔಚಿತ್ಯ ಅರ್ಥವಾಗುತ್ತಿಲ್ಲ. ಇದೀಗ ವಿಶ್ವವಿದ್ಯಾಲಯದ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕುಲಪತಿ ಅವರು ಆದ್ಯತೆ ನೀಡಬೇಕು. ಆದರೆ ಕಟ್ಟಡ ನಿರ್ಮಿಸವಲು ಆದ್ಯತೆ ನೀಡುವ ಮೂಲಕ ಗುತ್ತಿಗೆದಾರರ ಕೆಲಸ ಮಾಡಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>
<p>ಕೆಲ ವರ್ಷಗಳ ಹಿಂದೆ ವಿವಿಯಲ್ಲಿ 800 ಕೋಟಿ ರೂಪಾಯಿ ಹಣ ಇತ್ತು. ಇಂತಹ ಅವೈಜ್ಞಾನಿಕ ಮತ್ತು ಯೋಗ್ಯವಲ್ಲದ ತೀರ್ಮಾನಗಳಿಂದ ಶೇ 50 ರಷ್ಟು ಆರ್ಥಿಕ ಸಂಪನ್ಮೂಲ ಕರಗಿ ಹೋಗಿದೆ. ಇದಲ್ಲದೇ ವಾರ್ಷಿಕ 35 ರಿಂದ 40 ಕೋಟಿ ರೂ ಮೊತ್ತವನ್ನು ಸಂಬಳ, ಸಾರಿಗೆ ಮತ್ತಿತರ ಆಡಳಿತಾತ್ಮಕ ಉದ್ದೇಶಗಳಿಗಾಗಿ ವಿನಿಯೋಗಿಸಲಾಗುತ್ತಿದೆ. ಆದರೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿರುವುದರಿಂದ ವಿವಿಗೆ ಆದಾಯ ಬರುತ್ತಿಲ್ಲ. ಇಷ್ಟೊಂದು ಸಂಕಷ್ಟ ಪರಿಸ್ಥಿತಿ ಇರುವಾಗಲೂ ವಿವಿ ಕುಲಪತಿ ಅವರು ಹಣ ಕರಗಿಸುವ ವಿವಿಧ ಮಾರ್ಗಗಳನ್ನೇ ಹುಡುಕುತ್ತಿದ್ದಾರೆ. ನಿಜಕ್ಕೂ ಇದು ಆತಂಕಕಾರಿ ಬೆಳವಣಿಗೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.</p>
<p>ಹಾಲಿ ಕುಲಪತಿ ಡಾ. ಎಸ್. ವಿದ್ಯಾಶಂಕರ್ ಅವರ ಆಡಳಿತ ಅವಧಿಯಲ್ಲಿ ಮಾಡಿರುವ ಖರ್ಚುವೆಚ್ಚಗಳು, ತೀರ್ಮಾನಗಳ ಕುರಿತಂತೆ ಶ್ವೇತಪತ್ರ ಹೊರಡಿಸಬೇಕು. ವಿವಿಯ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಹಾಗೊಂದು ವೇಳೆ ತನಿಖಾ ಸಮಿತಿ ರಚಿಸಿದ್ದೇ ಆದಲ್ಲಿ ಖುದ್ದಾಗಿ ನಾವೇ ಹಾಜರಾಗಿ ಅಕ್ರಮ ಕುರಿತಾದ ಎಲ್ಲಾ ದಾಖಲೆಗಳನ್ನು ನೀಡುತ್ತೇವೆ ಎಂದು ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎನ್.ಎಸ್. ರಾಮೇಗೌಡ ಹಾಗೂ ನಿವೃತ್ತ ಡೀನ್ ಡಾ. ಚಂಬಿ ಪುರಾಣಿಕ್ ಹೇಳಿದರು.</p>
<p>The post <a href="https://www.justkannada.in/widespread-corruption-by-the-chancellor-of-ksou-says-ex-vc-ramegowda/">ದಿವಾಳಿ ಅಂಚಿಗೆ ಕರ್ನಾಟಕ ಮುಕ್ತ ವಿವಿ, ಕುಲಪತಿಯಿಂದ ವ್ಯಾಪಕ ಭ್ರಷ್ಟಾಚಾರ: ವಿಶ್ರಾಂತ ಕುಲಪತಿ ಡಾ. ಎನ್.ಎಸ್. ರಾಮೇಗೌಡ ಆರೋಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
