ನಾನು ಯಡಿಯೂರಪ್ಪರ ಹಳೆ ಕೇಸ್ ಬಗ್ಗೆ ಮಾತಾಡ್ಲಾ…? ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ತಿರುಗೇಟು …

ಮೈಸೂರು, ಆ,1,2020(www.justkannada.in): ಹೂಬ್ಲೋಟ್ ವಾಚ್ ವಿವಾದ‌ದ ಬಗ್ಗೆ ಪ್ರಸ್ತಾಪಿಸಿದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ ನಾನು ಯಡಿಯೂರಪ್ಪರ ಹಳೆ ಕೇಸ್ ಬಗ್ಗೆ ಮಾತಾಡ್ಲಾ.? ಎಂದು ಚಾಟಿ ಬೀಸಿದ್ದಾರೆ.jk-logo-justkannada-logo

ಮೈಸೂರುನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಹೂಬ್ಲೋಟ್ ವಾಚ್ ವಿವಾದ‌, ಅದು ಮುಗಿದು ಹೋದ ಕಥೆ ಮತ್ಯಾಕೆ ಅದು.? ವಾಚ್ ವಿಚಾರ ಮುಗಿದು ಹೋಗಿದೆ. ನಾನು ಸರ್ಕಾರಕ್ಕೆ ಆ ವಾಚ್ ವಾಪಸ್ಸು ಕೊಟ್ಟಿದ್ದೇನೆ. ಈ ಬಗ್ಗೆ ಎಸಿಬಿ ತನಿಖೆ ಆಗಿ ಕ್ಲೀನ್ ಚಿಟ್ ಸಿಕ್ಕಿದೆ. ನಾನೇನು ವಾಚ್ ಸರ್ಕಾರದ ದುಡ್ಡಿನಿಂದ ತೆಗೆದುಕೊಂಡಿದ್ನಾ. ಸರ್ಕಾರದಿಂದ ಲೂಟಿ ಮಾಡಿದ ದುಡ್ದಿನಿಂದ ವಾಚ್ ಖರೀದಿಸಿದ್ನಾ. ಅದನ್ನ ಯಾರೋ ಕೊಟ್ಟಿದ್ರು ಅದಕ್ಕೆ ಅವರು ಅಫಿಡೇವಿಟ್ ಕೊಟ್ಟಿದ್ದಾರೆ. ಈಗ ಅದನ್ನ ಮತ್ಯಾಕೆ ತೆಗಿದಿದ್ದಾರೆ. ಇದು ಜನರನ್ನ ದಾರಿ ತಪ್ಪಿಸುವ ಕೆಲಸ. ನಾನು ವಾಚ್ ಪ್ರಕರದ ಬಗ್ಗೆ ಮಾತನಾಡೋಲ್ಲ ಎಂದರು.talking-about-old-case-bs-yeddyurappa-former-cm-siddaramaiah

ಇವರಿಗೇನು ಬಹಳ ನೈತಿಕತೆ ಇದ್ಯಾ..?

ಜೈಲಿಗೆ ಹೋಗಿ ಬಂದ ಡಿಕೆಶಿ ಪಕ್ಕದಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರ ಕುರಿತು ಗರಂ ಆದ ಮಾಜಿ ಸಿಎಂ ಸಿದ್ಧರಾಮಯ್ಯ,  ಇವರಿಗೇನು ಬಹಳ ನೈತಿಕತೆ ಇದೆಯಾ..? ಡಿಕೆಶಿ ತಪ್ಪಿತಸ್ಥ ಅಂತ ಕೋರ್ಟ್ ನಲ್ಲಿ ತೀರ್ಮಾನ ಆಗಿದ್ಯಾ? ಅದು ರಾಜಕೀಯ ದುರುದ್ದೇಶದಿಂದ ಹಾಕಿರುವ ಕೇಸ್. ಅವರಿಗೆ ಜಾಮೀನು ಕೊಟ್ಟಿದ್ದಾರೆ. ಆ ಬಗ್ಗೆ ನಾನು ಮಾತನಾಡೋಲ್ಲ. ಈ ಸಂದರ್ಭದಲ್ಲಿ ಅದರ ಅವಶ್ಯಕತೆ ಇಲ್ಲ ಎಂದು ಹೇಳೀದರು.

ನೋಟಿಸ್ ಬಂಡವಾಳ ಏನು ನನಗೆ ಗೊತ್ತಿಲ್ವಾ?.

ಇದೇ ವೇಳೇ ಭ್ರಷ್ಟಾಚಾರ ಆರೋಪಕ್ಕೆ ಬಿಜೆಪಿ ನೋಟಿಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ಧರಾಮಯ್ಯ,  ನೋಟಿಸ್ ಬಂಡವಾಳ ಏನು ನನಗೆ ಗೊತ್ತಿಲ್ವಾ? ನಾನು ಲಾಯರ್  ನೋಟಿಸ್ ಬಗ್ಗೆ ನನಗೆ ಗೊತ್ತಿಲ್ವಾ? ನಾನೇನು ನೋಟೀಸ್ ಗೆ ಹೆದರಿಕೊಳ್ತೀನಾ..? ಎಂದು ಟಾಂಗ್ ನೀಡಿದರು.

ಅವನ್ಯಾರೋ ನೋಟಿಸ್ ಕೊಟ್ಟಿದ್ದಾನೆ. ನಾನು ಆರೋಪ ಮಾಡಿರೋದು ಸರ್ಕಾರದ ಮೇಲೆ. ಯಾರೋ ನೋಟಿಸ್ ಕೊಟ್ಟರೆ ಏನ್ ಪ್ರಯೋಜನ…? ಎಂದು ಸಿದ್ಧರಾಮಯ್ಯ ಬಿಜೆಪಿ ವಿರುದ್ದ  ಹರಿಹಾಯ್ದರು.

Key words: talking -about -old case –BS  Yeddyurappa -Former CM- Siddaramaiah