ಮಂಡ್ಯ,ಆಗಸ್ಟ್,19,2023(www.justkannada.in): ರಾಜ್ಯ ಸರ್ಕಾರ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸಿದ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 107 ಅಡಿಗೆ ಕುಸಿದಿದೆ.![]()
ರಾಜ್ಯ ಸರ್ಕಾರ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುತ್ತಿದೆ. ಕೆಆರ್ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ. ಸದ್ಯ ಈಗ 107 ಅಡಿಗೆ ಕುಸಿದಿದೆ. ಕೆಆರ್ ಎಸ್ ಜಲಾಶಯ ಭರ್ತಿಯಾಗುವ ಮುನ್ನವೇ ತಮಿಳುನಾಡಿಗೆ ಸರ್ಕಾರ ನೀರು ಹರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಮಂಡ್ಯದ ವಿವಿಧ ಕಡೆಗಳಲ್ಲಿ ಸರ್ಕಾರದ ನಡೆ ಖಂಡಿಸಿ ರೈತರ ಪ್ರತಿಭಟನೆಗಳು ನಡೆಯುತ್ತಿದೆ. ಇತ್ತ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ವಿಪಕ್ಷಗಳ ನಾಯಕರುಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Key words: Tamil Nadu- caveri water -KRS Reservoir -107 feet.







