ಈ ಬಾರಿ ಆಗಸ್ಟ್ ನಿಂದ ಶಿಕ್ಷಕರ‌ ವರ್ಗಾವಣೆ ಅನುಷ್ಠಾನ-ಶಿಕ್ಷಣ ಸಚಿವ ಸುರೇಶ್ ಕುಮಾರ್…

ಬೆಂಗಳೂರು,ಜು,31,2020(www.justkannada.in): ಶಿಕ್ಷಕ ಸ್ನೇಹಿಯಾದ, ಶಿಕ್ಷಣ ಸ್ನೇಹಿಯಾದ ವರ್ಗಾವಣಾ ನೀತಿಯು ಅನುಷ್ಠಾನಗೊಳ್ಳುವ ಸಮಯ ಸನ್ನಿಹಿತವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.jk-logo-justkannada-logo

ಶಿಕ್ಷಕರ‌ ವರ್ಗಾವಣೆ ಸಂಬಂಧ ಇಂದು ಅಧಿಕಾರಿಗಳ ಜತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿ ಚರ್ಚಿಸಿದರು. ಕೂಡಲೇ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಕುರಿತು ಫೇಸ್ ಬುಕ್ ನಲ್ಲಿ ವಿಷಯ ಹಂಚಿಕೊಂಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಕರ‌ ವರ್ಗಾವಣಾ ನಿಯಮಗಳನ್ನು ಶಿಕ್ಷಣ‌ ಇಲಾಖೆಯು ಅಂತಿಮಗೊಳಿಸಿದೆ. ಕಳೆದ ಅಧಿವೇಶನದಲ್ಲಿ ಈ ಕಾಯ್ದೆಗೆ ಅನುಮೋದನೆ ದೊರಕಿತ್ತು. ಶಿಕ್ಷಕ ಸ್ನೇಹಿಯಾದ, ಶಿಕ್ಷಣ ಸ್ನೇಹಿಯಾದ ವರ್ಗಾವಣಾ ನೀತಿಯು ಅನುಷ್ಠಾನಗೊಳ್ಳುವ ಸಮಯ ಸನ್ನಿಹಿತವಾಗಿದೆ ಎಂದು ಹೇಳಿದ್ದಾರೆ.teacher-transfer-implementation-education-minister-suresh-kumar

ಇಂದು ಅಧಿಕಾರಿಗಳ‌ ಸಭೆ‌ ನಡೆಸಿ ಕೂಡಲೇ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಬೇಕೆಂದು ಸೂಚನೆ ನೀಡಿದ್ದೇನೆ. ಕಳೆದ ಬಾರಿ ಕಡ್ಡಾಯ   ವರ್ಗಾವಣೆಯಿಂದ ತೊಂದರೆಗೀಡಾಗಿದ್ದ  ಶಿಕ್ಷಕರು ಈ‌ ಬಾರಿಯ ಮೊದಲ ಆದ್ಯತೆಯ ವರ್ಗಾವಣೆಯನ್ನು ಪಡೆಯಲಿದ್ದಾರೆ.  ಈ ಬಾರಿ ಆಗಸ್ಟ್ 2020 ರ ಮಾಹೆಯಿಂದ ಶಿಕ್ಷಕರ‌ ವರ್ಗಾವಣೆಯು ಅನುಷ್ಠಾನಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Key words: Teacher- Transfer -Implementation-Education Minister -Suresh Kumar