ಇಂದಿನಿಂದ ಬೆಂಗಳೂರಿನಲ್ಲಿ ಜಿ-20 ಶೃಂಗಸಭೆ ಆರಂಭ

ಬೆಂಗಳೂರು, ಡಿಸೆಂಬರ್ 13, 2022 (www.justkannada.in): ಬೆಂಗಳೂರಿನಲ್ಲಿ ಇಂದಿನಿಂದ ಜಿ 20 ಶೃಂಗಸಭೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಬೆಂಗಳೂರು ಹೊರವಲಯದಲ್ಲಿರುವ ದೇವನಹಳ್ಳಿಯ ಪ್ರೆಸ್ಟಿಜ್ ಗಾಲ್ಪ್ ಶೈರ್ ಜೆಡಬ್ಯ್ಲೂ ಮ್ಯಾರಿಯಟ್ ಹೋಟೆಲ್ನಲ್ಲಿಶೃಂಗಸಭೆ ನಡೆಯಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಹಲವು ದೇಶಗಳ ಹಣಕಾಸು ಕಾರ್ಯದರ್ಶಿ ಗಳು ಸೇರಿದಂತೆ ಹಲವು ಗಣ್ಯರು ಜಿ20 ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಅತಿಥಿಗಳ ಭದ್ರತೆಗೆ 6 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಸುಮಾರು 700 ಮಂದಿ ಪೊಲೀಸರನ್ನು

ಭದ್ರತೆಗೆ ನಿಯೋಜಿಸಲಾಗಿದೆ.  ಐದು ದಿನ ಈ ಸಭೆ ನಡೆಯಲಿದೆ.