ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಶುರು

ಬೆಂಗಳೂರು, ಡಿಸೆಂಬರ್ 04, 2023 (www.justkannada.in): ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಲಿದೆ.

ಸುಗಮ ಕಲಾಪಕ್ಕೆ ಮನವಿ ಮಾಡಿರುವ ಪ್ರಧಾನಿ ಮೋದಿ, ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶಗಳು ಹೊರಬಂದಿದ್ದು . ಫಲಿತಾಂಶಗಳು ತುಂಬಾ ಪ್ರೋತ್ಸಾಹದಾಯಕವಾಗಿವೆ ಎಂದಿದ್ದಾರೆ.

ಇನ್ನು ವಿಧಾನಸಭಾ ಚುನಾವಣೆಯಲ್ಲಿನ ವಿಜಯದಿಂದ ಸಂಭ್ರಮದಲ್ಲಿರುವ ಕಮಲ ನಾಯಕರು ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳಿಗೆ ಸವಾಲು ಹಾಕಲು ಸಜ್ಜಾಗಿದ್ದಾರೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಉಚ್ಚಾಟಿಸಲು ಶಿಫಾರಸು ಮಾಡುವ ವರದಿಯನ್ನು ಮಂಡಿಸುವತ್ತ ಬಿಜೆಪಿ ಗಮನ ಹರಿಸಿದೆ.