ನಾವೆಲ್ಲರೂ ಒಟ್ಟಿಗೆ ಇದ್ದೇವೆ: ಸರ್ಕಾರ ಉರುಳಿಸುವುದು  ಹಗಲು ಗನಸು- ಸಚಿವ ಎಂ.ಬಿ ಪಾಟೀಲ್.

ವಿಜಯಪುರ,ಜುಲೈ,25,2023(www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರವನ್ನ ಬೀಳಿಸಲು ಸಿಂಗಾಪುರದಲ್ಲಿ ತಂತ್ರ ರೂಪಿಸಲಾಗುತ್ತಿದೆ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ನಾವೆಲ್ಲರೂ ಒಟ್ಟಿಗೆ ಇದ್ದೇವೆ. ಸರ್ಕಾರ ಉರುಳಿಸುವುದು ಹಗಲು ಗನಸು ಎಂದಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಸರ್ಕಾರ ಕೆಡವಲು 60 ಶಾಸಕರು ಬೇಕಾಗುತ್ತೆ. ಯಾವೊಬ್ಬ ಶಾಸಕರು ಕಾಂಗ್ರೆಸ್ ಬಿಟ್ಟು ಹೋಗಲ್ಲ. ಆ ರೀತಿ ಏನು ಆಗಲ್ಲ. 136 ಶಾಸಕರು ನಾವೆಲ್ಲರೂ ಒಟ್ಟಿಗೆ ಇದ್ದೇವೆ. ನಮ್ಮ ಸರ್ಕಾರ ಕೆಡುವುದು ಹಗಲು ಕನಸು.  ನಾವು ಐದು ವರ್ಷ ಪೂರೈಸಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: Toppling -government – daydream – Minister -MB Patil.