Thursday, September 17, 2026

BDA Apartments

ಮಂಗಳಮುಖಿಯಿಂದ ಟಾರ್ಚರ್: ಅಪ್ರಾಪ್ತ ಬಾಲಕ ಆತ್ಮಹತ್ಯೆ BDA JK_Adv BDA Adv
Home Crime ಮಂಗಳಮುಖಿಯಿಂದ ಟಾರ್ಚರ್: ಅಪ್ರಾಪ್ತ ಬಾಲಕ ಆತ್ಮಹತ್ಯೆ

ಮಂಗಳಮುಖಿಯಿಂದ ಟಾರ್ಚರ್: ಅಪ್ರಾಪ್ತ ಬಾಲಕ ಆತ್ಮಹತ್ಯೆ

ಮೈಸೂರು,ಜೂನ್,24,2024 (www.justkannada.in): ಮಂಗಳಮುಖಿಯ ಟಾರ್ಚರ್ ಅಪ್ರಾಪ್ತ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.

ರಾಹುಲ್ ಮೌರ್ಯ (17) ಮೃತಪಟ್ಟ ಬಾಲಕ. ಹುಣಸೂರಿನ ಕಿರಾಜಾಜಿ ಸರ್ಕಲ್ ಬಳಿ ಎಳೆನೀರು ವ್ಯಾಪಾರ ಮಾಡುತ್ತಿದ್ದ ರಾಹುಲ್ ಮೌರ್ಯಗೆ ಮಂಗಳಮುಖಿ ಜೊತೆ ಸ್ನೇಹವಾಗಿತ್ತು.  ಆಗಾಗ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ರಾಹುಲ್ ಮೌರ್ಯ ಕಳೆದ ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದನು. ಈ ನಡುವೆ ತಾಯಿ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದ. ಆದರೆ ತಾನು ಇರುವ ಜಾಗ ತಿಳಿಸಿರಲಿಲ್ಲ.ಮಂಗಳಮುಖಿಯಿಂದ ಟಾರ್ಚರ್ succide

ಜೂನ್ 21 ರಂದು ರಾಹುಲ್ ಮೌರ್ಯ ಊರಿಗೆ ಹಿಂದುರುಗಿದ್ದನು. ಈ ಮಧ್ಯೆ  ನಿನ್ನೆ ಮಂಗಳ ಮುಖಿಯರು ಈತನ ಮನೆಗೆ ಬಂದು, ನಮ್ಮ ಹುಡುಗಿಯೊಬ್ಬಳನ್ನು ಕರೆದು ಹೋಗಿದ್ದಾನೆ ಎಂದು ಜಗಳವಾಡಿದ್ದಾರೆ. ಇದರಿಂದ ನೊಂದ ರಾಹುಲ್ ಮೌರ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಾಗಿದೆ.

Key words: Torture, minor boy, commits suicide