33 ಡಿವೈಎಸ್ಪಿಗಳು, 132 ಇನ್ಸ್ ಪೆಕ್ಟರ್ ಗಳ ವರ್ಗಾವಣೆ: ಸರ್ಕಾರ ಆದೇಶ.

ಬೆಂಗಳೂರು, ಜನವರಿ,30,2024(www.justkannada.in):   ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು 33 ಡಿವೈಎಸ್ಪಿಗಳು, 132 ಇನ್ಸ್ ಪೆಕ್ಟರ್​ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಜೊತೆಗೆ ಹೊಸದಾಗಿ ಸೃಷ್ಟಿಯಾದ ಹುದ್ದೆಗಳಿಗೂ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಯು.ಡಿ.ಕೃಷ್ಣಕುಮಾರ್-ಡಿವೈಎಸ್​ಪಿ, ಬಿಡಿಎ, ಬೆಂಗಳೂರು. ಟಿ.ಎಂ.ಶಿವಕುಮಾರ್-ಎಸಿಪಿ, ಮಡಿವಾಳ ಉಪವಿಭಾಗ. ಹೆಚ್.ಬಿ.ರಮೇಶ್ ಕುಮಾರ್-ACP, ವಿವಿ ಪುರಂ ಉಪವಿಭಾಗ. ಎಂ.ಎನ್.ನಾಗರಾಜ್-ಎಸಿಪಿ, ಸಿಸಿಬಿ ಬೆಂಗಳೂರು. ಅನುಷಾರಾಣಿ-ACP, ಡಿಸಿಆರ್ ​ಇ, ಮೈಸೂರು ಸೇರಿದಂತೆ ಒಟ್ಟು 33 ಡಿವೈಎಸ್ಪಿ ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕಾಟನ್​ಪೇಟೆ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ನರೇಂದ್ರ ಬಾಬು, ಸಿಸಿಬಿ ಬೆಂಗಳೂರು ಇನ್ಸ್​ಪೆಕ್ಟರ್ ಕೆ.ಲಕ್ಷ್ಮೀ ನಾರಾಯಣ್, ಹಲಸೂರು ಪೊಲೀಸ್ ಠಾಣೆ ಇನ್ಸ್ ​ಪೆಕ್ಟರ್  ಸಂತೋಷ್ ಕೆ, ಸಂಪಂಗಿರಾಮನಗರ ಪೊಲೀಸ್​ ಠಾಣೆ ಇನ್ಸ್​ಪೆಕ್ಟರ್ ರವಿಕಿರಣ್, ರಾಮನಗರ ಕುಂಬಳಗೋಡು ಠಾಣೆ ಇನ್ಸ್​​ಪೆಕ್ಟರ್ ಮಂಜುನಾಥ್ ಜಿ ಹೂಗಾರ್, ಜಯನಗರ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ದೀಪಕ್ ಆರ್ ಸೇರಿ ಒಟ್ಟು 132 ಇನ್ಸ್​ಪೆಕ್ಟರ್​ ಗಳ ವರ್ಗಾವಣೆಯಾಗಿದೆ.

Key words: Transfer – 33 DYSP- 132 Inspectors-Govt.