ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್, ಮಾ.2ಕ್ಕೆ ಡೆಡ್ ಲೈನ್: ಮುಖಂಡರ ನಡೆಗೆ ಆಕ್ರೋಶ

ಬೆಂಗಳೂರು,ಫೆಬ್ರವರಿ,19,2026 (www.justkannada.in): ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಂಟಿ ಕ್ರಿಯಾ ಸಮಿತಿ ವತಿಯಿಂದ ಮುಷ್ಕರ ನಡೆಸಲಾಗುತ್ತಿತ್ತು. ಈ ಮಧ್ಯೆ ಸರ್ಕಾರದ ವತಿಯಿಂದ ಕೆಎಸ್ ಆರ್ ಟಿಸಿ ಎಂಡಿ ಅಕ್ರಂ ಪಾಷ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೇಡಿಕೆ ಆಲಿಸಿ ಭರವಸೆ ನೀಡಿದ್ದರು.

ಈ ಮಧ್ಯೆ ಜಂಟಿ ಕ್ರಿಯಾ ಸಮಿತಿ ಮುಖಂಡರು  ಮುಷ್ಕರವನ್ನು ತಾತ್ಕಾಲಿಕವಾಗಿ ವಾಪಸ್ ಪಡೆದಿದ್ದು ಬೇಡಿಕೆಗಳನ್ನ ಈಡೇರಿಸಲು ಸರ್ಕಾರಕ್ಕೆ ಮಾರ್ಚ್ 2ರವರೆಗೆ ಗಡುವು ನೀಡಿದ್ದಾರೆ. ಮಾರ್ಚ್ 2ರೊಳಗೆ ಬೇಡಿಕೆ ಈಡೇರಿಸದಿದ್ದರೇ ಮತ್ತೆ ಮುಷ್ಕರ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

 ಮುಖಂಡ ನಿರ್ಧಾರಕ್ಕೆ ಪ್ರತಿಭಟನಾನಿರತ ಸಾರಿಗೆ ನೌಕರರ ಆಕ್ರೋಶ

ಜಂಟಿ ಕ್ರಿಯಾ ಸಮಿತಿ ಮುಖಂಡರು ತೆಗೆದುಕೊಂಡ ಈ ನಿರ್ಧಾರಕ್ಕೆ ಪ್ರತಿಭಟನಾನಿರತ ಸಾರಿಗೆ ನೌಕರರ ಆಕ್ರೋಶ ವ್ಯಕ್ತಪಡಿಸಿದ್ದು ಮುಷ್ಕರ ನಿಲ್ಲಿಸದಂತೆ ಆಗ್ರಹಿಸಿದ್ದಾರೆ. ವೇದಿಕೆಯ ಮೇಲೆಯೇ ಆಗಮಿಸಿ ಸಾರಿಗೆ ನೌಕರರು ಕಿಡಿಕಾರಿದ್ದಾರೆ.

Key words: Transport workers, strike, deadline, March 2