ಮರ ಕಡಿಯುವ ವೇಳೆ ಮರ ಬಿದ್ದು ಮೂವರು ದುರ್ಮರಣ….

ದಕ್ಷಿಣ ಕನ್ನಡ,ಮಾರ್ಚ್,9,2021(www.justkannada.in):  ಮರ ಕತ್ತರಿಸುತ್ತಿದ್ದ ವೇಳೆ ಮರ ಬಿದ್ದು ಮೂವರು  ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನಲ್ಲಿ ನಡೆದಿದೆ.jk

ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆ ಗ್ರಾಮದ ಅನಾರು ಬಳಿ ಈ ಘಟನೆ ನಡೆದಿದೆ. ಪ್ರಶಾಂತ್(21), ಸ್ವಸ್ತಿಕ್(23) ಗಣೇಶ್ (38) ಮೃತಪಟ್ಟವರು ಎಂದು ಹೇಳಲಾಗಿದೆ. ಕಾಯಿಲ ಸಮೀಪ ಧೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ ಮರದ ಅಡಿಗೆ ಸಿಲುಕಿ ಮೂವರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.tree- falls- three –death-dakshina kannada

ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ., ಧರ್ಮಸ್ಥಳ ಪೊಲೀಸ್ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words tree- falls- three –death-dakshina kannada