ಹಾವೇರಿಯ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ- ಡಿ.ಕೆ ಶಿವಕುಮಾರ್

ಬೆಂಗಳೂರು,ಜನವರಿ,20,2023(www.justkannada.in): ಹಾವೇರಿಯ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಆದರೆ ಸ್ಥಳ ಇಲ್ಲ ಅಂತ ನಾನೇ ಇಬ್ಬರು ಬಿಜೆಪಿ ಶಾಸಕರನ್ನ ಪಕ್ಷಕ್ಕೆ ಕರೆಸಿಕೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ  ಡಿ.ಕೆ ಶಿವಕುಮಾರ್  ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್, ಇನ್ನು ಹೆಚ.ವಿಶ್ವನಾಥ್ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ. ಬಿಜೆಪಿಯಿಂದ ಯಾರು ಸೇರ್ತಾರೆ ಅನ್ನೋದು ಈಗ ಹೇಳಲ್ಲ ಎಂದರು.

ಉಚಿತ ವಿದ್ಯುತ್  ಘೋಷಣೆಗೆ ಹಣ ಹೇಗೆ ಹೊಂದಿಸುತ್ತೀರಾ ಎಂಬ ಬಿಜೆಪಿ ಟೀಕೆಗೆ ಟಾಂಗ್ ನೀಡಿದ ಡಿ.ಕೆ ಶಿವಕುಮಾರ್,  ಹಣ ಹೇಗೆ ಹೊಂದಿಸಬೇಕು ಅಂತಾ ನಮಗೆ ಗೊತ್ತಿದೆ. ಸಿದ್ಧರಾಮಯ್ಯ 13 ಬಾರಿ ಬಜೆಟ್ ಮಂಡಿಸಿದ್ದಾರೆ. 2 ಯೋಜನೆ ಸೇರಿ 42 ಸಾವಿರ ಕೋಟಿ ಆಗುತ್ತೆ . ಸಿದ್ಧರಾಮಯ್ಯ 10 ಕೆಜಿ ಕೊಡುವುದಾಗಿ ಹೇಳಿದ್ದಾರೆ. ನಾವು ಘೋಷಣೆ ಮಾಡಿದ ಮೇಲೆ ನಾವು ಕೊಡುತ್ತೇವೆ ಎನ್ನುತ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಅಂತಿದ್ದರು. ಈಗ ಮೋದಿ ನೇತೃತ್ವದಲ್ಲಿ ಅಂತಾರೆ.  ಬಿಜೆಪಿಗೆ ಭವಿಷ್ಯ ಇಲ್ಲ. ಹೀಗಾಗಿ ಹಲವರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

Key words: Two –BJP- MLAs – join – Congress-DK Shivakumar