ಚರ್ಚೆ ಇಲ್ಲದೆ ಕಾಯ್ದೆಗಳು ಪಾಸ್, ಸೇವೆಯೇ ಇಲ್ಲದೆ ಟೋಲ್ ಸಂಗ್ರಹ: ಮೋದಿ ಏನಪ್ಪಾ ನಿಂದು ಅಂಧ ದರ್ಬಾರ್ ? ಹೆಚ್.ವಿಶ್ವನಾಥ್ ವಾಗ್ದಾಳಿ.

ಮೈಸೂರು,ಮಾರ್ಚ್,17,2023(www.justkannada.in): ಏ ಮೋದಿ ಏನಪ್ಪಾ ನಿಂದು ಅಂಧ ದರ್ಬಾರ್ ? ಚರ್ಚೆ ಇಲ್ಲದೆ ಕಾಯ್ದೆಗಳು ಪಾಸ್ ಆಗುತ್ತೆ ಸೇವೆಯೇ ಇಲ್ಲದೆ ಟೋಲ್ ಸಂಗ್ರಹ ಮಾಡ್ತೀರಾ ? ನಿಮ್ಮ ಸರ್ಕಾರದಿಂದ ಪ್ರಜಾಪ್ರಭುತ್ವ ಹಾಳಾಗುತ್ತಿದೆ. ಹೀಗೆಂದು ವಾಗ್ದಾಳಿ ನಡೆಸಿದ್ದು ಬಿಜೆಪಿ ಪರಿಷತ್ ಸದಸ್ಯ ಎಚ್.ವಿಶ್ವನಾಥ್.

ಮೈಸೂರು -ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಅವೈಜ್ಞಾನಿಕ ಟೋಲ್ ದರ ಸಂಗ್ರಹ ವಿರುದ್ಧ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ , ಮೈಸೂರಿನ ಮಣಿಪಾಲ್ ವೃತ್ತದ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಹಿನ್ನೆಲೆ  2600 ಎಕರೆ ರೈತರ ಜಮೀನು ಹೋಯ್ತು. ಮಂಡ್ಯ ಭಾಗದ ನೂರಾರು ಕುಟುಂಬಗಳು‌ ಬೀದಿಗೆ ಬಂದಿದೆ ಜನ ವಿರೋಧಿ ಯೋಜನೆ ಮಾಡಿ ಟೋಲ್ ಸಂಗ್ರಹ ನೆಪದಲ್ಲಿ ಹಗಲು ದರೋಡೆಗೆಳಿದಿದ್ದೀರಿ ರಸ್ತೆ ಬೇಕು ಅಂಥಾ ಯಾರು ಕೇಳಿದ್ರು ? ನಾಲ್ಕು ಪಥನೇ ಸಾಕಾಗಿತ್ತು. ಹತ್ತು ಪಥದ ರಸ್ತೆ ಮಾಡಿದ್ದೀರಾ ಆದರೆ ಬಡವರು ಓಡಾಡುವ ಸರ್ವಿಸ್ ರಸ್ತೆ ಎಲ್ಲಿದೆ ? ಅಪಘಾತವಾದರೆ ಚಿಕಿತ್ಸೆ ನೀಡಲು ಟ್ರಾಮಾ ಸೆಂಟರ್ ಎಲ್ಲಿದೆ ಎಂದು ಪ್ರಶ್ನಿಸಿದರು.

ಬೆಂಗಳೂರು ಮೈಸೂರು ಟೋಲ್ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ ಎಚ್‌.ವಿಶ್ವನಾಥ್,  ಸಂಸದ ಪ್ರತಾಪ ಸಿಂಹ ಮಿನಿ ಕಂಟ್ರ್ಯಾಕ್ಟರ್. ನಿನ್ನ ಕೆಲಸ ಏನು? ಹೆದ್ದಾರಿ ವಿಚಾರದಲ್ಲಿ ನೀನು ಮಾಡಿದ್ದೇನು ? ರಸ್ತೆಗೆ ಮೆಟಿರೀಯಲ್ ಸಪ್ಲೈ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ದಿನ ಬೆಳಗಾದರೆ ಹೈವೇ ಫೇಸ್ ಬುಕ್ ಲೈವ್ ಚೆಲುವಾಂಬ ಆಸ್ಪತ್ರೆಯಲ್ಲಿ ಬಾಣಂತಿ ಮಕ್ಕಳು ಸಾಯುತ್ತಿದ್ದಾರೆ. ಅವರನ್ನ ನೋಡಪ್ಪ, ಅಲ್ಲಿಯೂ ಪ್ರೆಸ್ ಮೀಟ್ ಮಾಡಪ್ಪ. ಅವನು ಯಾರೋ ಶ್ರೀಧರ್ ಅನ್ನೋ ಅಧಿಕಾರಿ ಸರ್ವಿಸ್ ರಸ್ತೆ ಮಾಡುವ ಕಾನೂನು ಎಲ್ಲಿದೆ ಅಂತಾನೆ. ಏನಪ್ಪ ಮೋದಿ ನಿಮ್ಮ ಸರ್ಕಾರದಲ್ಲಿ ಅಧಿಕಾರಿ ಶಾಹಿ ಆಡಳಿತ ನಡೆತಾ ಇದೆಯಾ ? ಎಂದು ಹರಿಹಾಯ್ದರು.

ಮೈಸೂರು ಕೊಡಗು ಸಂಸದರು ಎಲ್ಲವೂ ಸರಿಯಾಗಿದೆ. ಸುಮ್ಮನೆ ಜನ ಗಲಾಟೆ ಮಾಡ್ತಾರೆ. ಜೊತೆಗೆ ಪಂಥಾಹ್ವಾನ ಕೊಟ್ಟಿದ್ದಾರೆ ಬರಲಿ ಬೇಕಾದರೆ ಯಾವಾಗ ಅಂತ ಒಂದು ದಿನಾಂಕ ನಿಗದಿ ಮಾಡಿ ನಾವು ಬರಲು ಸಿದ್ದವಿದ್ದೇವೆ. ರಸ್ತೆ ಸಂಪೂರ್ಣ ಕಂಪ್ಲೀಟ್ ಆಗಿ ಪ್ರಯಾಣಿಕರಿಗೆ ಮೂಲಭೂತ ಸೌಕರ್ಯಗಳ ಕೊಟ್ಟ ಮೇಲೆ ಟೋಲ್ ದರ ನಿಗದಿಮಾಡಿ ಯಾರು ಬೇಡ ಅಂದ್ರು. ಈಗಾಗಲೇ ಕೆಎಸ್ಆರ್ಟಿಸಿ ಬಸ್ ದರ ಕೂಡ ಹೆಚ್ಚಿಸಿದ್ದಾರೆ. ನಮಗೆ ಗೊತ್ತಿಲ್ಲದೆ ನಮ್ಮ ಜೇಬು ಪಿಕ್ ಪ್ಯಾಕೆಟ್ ಆಗುತ್ತಿದೆ. 118 ಕಿ.ಮಿ ಸಂಪೂರ್ಣ ಮುಗಿದ ಮೇಲೆ ಸರ್ವಿಸ್ ರಸ್ತೆ ಕಾಮಗಾರಿಯು ಮುಗಿದ ಮೇಲೆ ಎಲ್ಲಾ ಸೇರಿ ಒಂದು ದರ ನಿಗದಿ ಮಾಡಿದರೆ ಸರಿ.  ಅದನ್ನ ಬಿಟ್ಟು ಜನ ಸಾಮಾನ್ಯರ ಮೇಲೆ ಬರೆ ಎಳೆಯುವ ಕೆಲಸ ಮಾಡಬೇಡಿ ಎಂದು ಎಚ್ ವಿಶ್ವನಾಥ್ ಗುಡುಗಿದರು.

Key words: mysore-bangalore- toll –collection-MLC-H. Vishwanath