ಒಡಿಶಾದ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ.

ಒಡಿಶಾ,ಜೂನ್,3,2023(www.justkannada.in): ಒಡಿಶಾದ ಬಾಲಸೋರ್‌ ನ ಬಹನಾಗ ರೈಲ್ವೆ ನಿಲ್ದಾಣದ್ಲಿ  ಸಂಭವಿಸಿದ ರೈಲು ಅಪಘಾತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಾಲಸೋರ್ ನ ಬಹನಾಗದಲ್ಲಿನ ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ  ಭೇಟಿ ನೀಡಿ ರೈಲ್ಚೆ ಅಧಿಕಾರಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದರು.  ಬಳಿಕ ಕಟಕ್ ಆಸ್ಪತ್ರೆಗೆ  ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ತೆರಳುತ್ತಿದ್ದು, ಗಾಯಾಳುಗಳ ಯೋಗಕ್ಷೇಮ ವಿಚಾರಿಸಲಿದ್ದಾರೆ.

Key words: Prime Minister- Narendra Modi -visited – train accident – Odisha