ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ

ಬೆಂಗಳೂರು,ಜುಲೈ,13,2026 (www.justkannada.in): ರಾಮನಗರದ ಬಿಡದಿಯ ಟೌನ್ ಶಿಪ್ ವಿರುದ್ದ ರೈತರ ಆಕ್ರೋಶದ ಕಿಚ್ಚು ಮತ್ತಷ್ಟು ಹೆಚ್ಚಾಗಿದ್ದು ಇಂದು ಸರ್ವೇ ಮಾಡಲು ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರು ಪೊರಕೆ ಸೇವೆ ಮಾಡಿ ಕಾರುಗಳಿಗೆ ಕಲ್ಲು ಇಟ್ಟಿಗೆಯಿಂದ ದಾಳಿ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ  ರೈತರಿಗೆ ವಿಡಿಯೋ ಸಂದೇಶದಲ್ಲಿ ಮನವಿಯೊಂದನ್ನ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ರೈತರು ಶಾಂತಿಯುತವಾಗಿ ಹೋರಾಟ ಮಾಡಿ ಎಂದು ಸಂದೇಶ ನೀಡಿದ್ದಾರೆ.

ಅಧಿಕಾರಿಗಳು ಏಕಾಏಕಿ ಈ ಸರ್ವೆಕಾರ್ಯಕ್ಕೆ ಬಂದಿದ್ದಾರೆ.  ಇದಕ್ಕೆ ರಾಜ್ಯ ಸರ್ಕಾರದ ಚಿತಾವಣೆಯೇ ಕಾರಣ. ರಾಜ್ಯ ಸರ್ಕಾರ ಪೊಲೀಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ.. ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬಾರದು. ಎಲ್ಲರೂ ಶಾಂತಿಯುತವಾಗಿ  ಹೋರಾಟ ಮಾಡಿ ಎಂದು ತಿಳಿಸಿದ್ದಾರೆ.

Key words: Attack, Bidadi Township,  survey, Union Minister, HDK, farmers