ಕಾಂಗ್ರೆಸ್ ಮುಖಂಡನ ಹತ್ಯೆ: ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ,ಏಪ್ರಿಲ್,11,2026 (www.justkannada.in):  ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಹತ್ಯೆಯಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಗಂಭೀರವಾಗಿ ಸಮಸ್ಯೆಯಾಗಿದೆ. ಪೊಲೀಸರ ವರ್ಗಾವಣೆಯಲ್ಲಿ ಸರ್ಕಾರ ಭ್ರಷ್ಟಾಚಾರ ಮಾಡಿದೆ.  ಹೀಗಾಗಿ ಇಂತಹ ಕೃತ್ಯಗಳು ನಡೆಯುತ್ತಿರುವುದು ಸಹಜವಾಗಿದೆ ಎಂದು ಹರಿಹಾಯ್ದರು.

ಕಾಂಗ್ರೆಸ ಮುಖಂಡನ ಹತ್ಯೆ ಬಗ್ಗೆ ಮಾಧ್ಯಮದಲ್ಲಿ ಗಮನಿಸಿದ್ದೇನೆ  ಓರ್ವ ಕಾಂಗ್ರೆಸ್ ಮುಖಂಡ ಮತ್ತೊಬ್ಬ ಮುಖಂಡನನ್ನ ಕೊಂದಿದ್ದಾನೆ.  ಧಾರವಾಡದ ಹಾಶ್ಮಿನಗರದಲ್ಲಿ ಪೈರೂಜ್ ಪಠಾಣ್ ಎಂಬುವವನ ಹತ್ಯೆಯಾಗಿದೆ.  ಕಾಂಗ್ರೆಸ್ ಆಡಳಿತದಲ್ಲಿ ಕಾಂಗ್ರೆಸ್ ಮುಖಂಡನಿಗೆ  ರಕ್ಷಣೆ ಇಲ್ಲವೆನ್ನುವ ಸ್ಥಿತಿಯಿದೆ ಎಂದು ಕಿಡಿಕಾರಿದರು.

Key words: Congress leader, murder, Law and order, situation, Union Minister, Pralhad Joshi