ಅನವಶ್ಯಕ ಹೇಳಿಕೆಯಿಂದ ತನಿಖೆಯ ಗಂಭೀರತೆ ಹಾಳು ಮಾಡಬೇಡಿ : ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು,ಮಾರ್ಚ್,31,2021(www.justkannada.in): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವ ನೈತಿಕತೆ ಇದೆ. ಅನವಶ್ಯಕವಾಗಿ ಮಾತನಾಡಿ ಪ್ರಕರಣದ ತನಿಖೆಯ ಗಾಂಭೀರ್ಯತೆಯನ್ನು ಹಾಳು ಮಾಡಬೇಡಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿರು.

Government,Social,Economic,Educational,survey,Report,Should,receive,Former CM,Siddaramaiah ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಟಿ ತನಿಖೆ ಕ್ರಮಬದ್ಧವಾಗಿ ಕಾನೂನು ಪ್ರಕಾರ ನ್ಯಾಯಸಮ್ಮತವಾಗಿ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಪ್ರತಿಭಟನೆ, ಸಾಮಾಜಿಕ ಜಾಲತಾಣಗಳ ಮೂಲಕ  ಇಲ್ಲಸಲ್ಲದ ಹೇಳಿಕೆ ನೀಡಬೇಡಿ. ತನಿಖೆಯ ಪ್ರಗತಿಗೆ ಅಡ್ಡ ಪಡಿಸಬೇಡಿ ಎಂದು ಪ್ರತಿ ಪಕ್ಷಗಳಿಗೆ ವಿನಂತಿ ಮಾಡಿದರು.

ಕಾಂಗ್ರೆಸ್ ಗೆ ಎಲ್ಲಿದೆ ನೈತಿಕತೆ?

ಜಾರಕಿಹೊಳಿ ಪ್ರಕರಣದಲ್ಲಿ ನಮ್ಮನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ನೈತಿಕ ಅಧಿಕಾರ ಎಲ್ಲಿದೆ? ಮಾಜಿ ಸಚಿವ ಹುಲ್ಲಪ್ಪ ಮೇಟಿ ಸಿಡಿ ಪ್ರಕರಣದಲ್ಲಿ ಇವರು ತನಿಖೆ ಮಾಡಿಸಿದ್ರಾ?  ಯಾರ ವಿರುದ್ಧ ಆದರೂ, ಎಫ್ಐಆರ್ ದಾಖಲು ಮಾಡಿದ್ದರ? ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿ ಆರೋಪಿಗೆ ಕ್ಲೀನ್ ಚಿಟ್ ಕೊಟ್ಟರು. ಒಂದು ಬಾರಿ ಯಾರನ್ನು ಕರೆದು ವಿಚಾರಣೆ ಮಾಡಲಿಲ್ಲ. ಸಿಡಿ ಮಾಡಿದವರನ್ನು ಕೂಡ ಕಂಡುಹಿಡಿಯಲಿಲ್ಲ. ಇದನ್ನೆಲ್ಲಾ ಮರೆತಿರುವ ಕಾಂಗ್ರೆಸ್ ಯಾವ ನೈತಿಕತೆಯಿಂದ ನಮ್ಮ ಎಸ್ಐಟಿ ತನಿಖೆಯನ್ನು ಪ್ರಶ್ನಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಎಸ್ಐಟಿ ತನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದೆ.  ಕ್ರಿಮಿನಲ್ ಪ್ರೊಸೀಜರ್ ಕೋಡ್ ಪ್ರಕಾರ ತನಿಖೆ ಮಾಡಬೇಕಾಗುತ್ತದೆ.  ಎಲ್ಲ ಅಂಶಗಳನ್ನು ಕೋರ್ಟ್ ಆಫ್ ಲಾ ದಲ್ಲಿ ನಾವು ಸಾಬೀತು ಮಾಡಬೇಕಾಗುತ್ತದೆ. ಹೀಗಾಗಿ, ಈ ಪ್ರಕರಣದಲ್ಲಿ ಯಾರು ಮಧ್ಯಪ್ರವೇಶ ಮಾಡಬಾರದು. ಆ ಕಾರಣಕ್ಕೆ ನಾನು ಕೂಡ ತನಿಖೆ ಕುರಿತು ಹೆಚ್ಚು ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದರು.

Unnecessary-statement-investigation-seriousness-Don't ruin-Minister-Basavaraja Bommai

ಎಸ್ ಐ ಟಿ ತನಿಖಾ  ತಂಡ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಎಂಥಹ ಅಡೆತಡೆಗಳಿಗೂ ಮಣೆ ಹಾಕುವುದಿಲ್ಲ. ಸತ್ಯ ಸಂಗತಿ ಹೊರಬರಬೇಕಾದರೆ ಎಸ್ಐಟಿ ತನಿಖೆ ಅಗತ್ಯ. ಅದಕ್ಕಾಗಿಯೇ ತನಿಖೆಗೆ ದಕ್ಷ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

key words : Unnecessary-statement-investigation-seriousness-Don’t ruin-Minister-Basavaraja Bommai