ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿಅವೈಜ್ಞಾನಿಕ ಕಾಮಗಾರಿ: ಗಡ್ಕರಿಗೆ ದೂರು ನೀಡುವೆ ಎಂದ ಮಾಜಿ ಸಿಎಂ ಎಚ್ಡಿಕೆ

ಬೆಂಗಳೂರು, ಆಗಸ್ಟ್ 28, 2022 (www.justkannada.in): ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಳೆದ ಒಂದು ತಿಂಗಳಿನಿಂದ ಮಳೆ ನೀರು ನಿಂತು ಅನಾಹುತಗಳಾಗಿವೆ. ಇದಕ್ಕೆ ಅವೈಜ್ಞಾನಿಕವಾದ ಹೆದ್ದಾರಿ ಕಾಮಗಾರಿಯೇ ಕಾರಣ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ.

ಅನಾಹುತಗಳಿಗೆ ಅವೈಜ್ಞಾನಿಕವಾದ ಹೆದ್ದಾರಿ ಕಾಮಗಾರಿಯೇ ಕಾರಣ. ಇದರ ಸಂಪೂರ್ಣ ಮಾಹಿತಿಯನ್ನ ಅಧಿಕಾರಿಗಳಿಂದ ಪಡೆದುಕೊಂಡಿದ್ದೇನೆ. ಕೇಂದ್ರ ಸಚಿವ ಗಡ್ಕರಿ ಅವರನ್ನ ಭೇಟಿ ಮಾಡಿ ಅವೈಜ್ಞಾನಿಕ ಕಾಮಗಾರಿ ವಿಚಾರ ತಿಳಿಸುವೆ ಎಂದು ಹೇಳಿದ್ದಾರೆ.

ಸರ್ವಿಸ್ ರಸ್ತೆಯ ಅನಾಹುತಗಳನ್ನ ನಮ್ಮ ಕಣ್ಣಾರೆ ಕಾಣುತ್ತಿದ್ದೇವೆ. ಸರ್ವಿಸ್ ರಸ್ತೆಯಲ್ಲಿ ನೀರು ಸರಾಗವಾಗಿ ಹರಿಯುತ್ತಿಲ್ಲ, ಅಂಡರ್ ಪಾಸ್ ಗಳಲ್ಲಿ ಮೂರು, ನಾಲ್ಕು ಅಡಿ ಮಳೆ ನೀರು ನಿಂತು ತೊಂದರೆಯಾಗುತ್ತಿದೆ. ಇವೆಲ್ಲಾ ಸಮಸ್ಯೆ ಆಗೋದಕ್ಕೆ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಒಂದು ಭಾಗ ಎಂದು ಆರೋಪಿಸಿದ್ದಾರೆ.