ಯುಪಿ ಹತ್ರಾಸ್ ನಲ್ಲಿ ಯುವತಿ ಮೇಲಿನ ಅತ್ಯಾಚಾರ ಖಂಡಿಸಿ ಮೌನ ಪ್ರತಿಭಟನೆ…..

ಮೈಸೂರು,ಅಕ್ಟೋಬರ್,11,2020(www.justkannada.in): ಉತ್ತರ ಪ್ರದೇಶದಲ್ಲಿ ಯುವತಿ ಮೇಲಿನ ಅತ್ಯಾಚಾರ ಖಂಡಿಸಿ  ಮೈಸೂರು ವಿವಿ ವಿಶ್ವಮಾನವ ನೌಕರರ ವೇದಿಕೆಯಿಂದ ಮೌನ ಪ್ರತಿಭಟನೆ ನಡೆಯಿತು.jk-logo-justkannada-logo

ನಗರದ ಟೌನ್ ಹಾಲ್ ಮುಂಭಾಗ ಜಮಾಯಿಸಿದ ಮೈಸೂರು ವಿವಿ ವಿಶ್ವಮಾನವ ನೌಕರರ ವೇದಿಕೆಯ ಸದಸ್ಯರು, ಘಟನೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಈ ಘಟನೆ ಖಂಡನೀಯ. ಮನೀಷಾಳ ಸಾವಿಗೆ ಕಾರಣರಾದವರಿಗೆ ಕಾನೂನಿನ ಮೂಲಕ ಆದಷ್ಟು ಬೇಗ ಶಿಕ್ಷೆಯಾಗಬೇಕು. ಹೆಣ್ಣು ಮಕ್ಕಳ ರಕ್ಷಣೆಗೆ ಸರ್ಕಾರಗಳು ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಪ್ರತಿಭಟನಕಾರರು ಆಗ್ರಹಿಸಿದರು.uttar Pradesh- hatras-rape case- condemning -mysore -Silent protests

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಇಡೀ ದೇಶದಲ್ಲೇ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ಪ್ರಕರಣ ಕುರಿತು ಸಿಬಿಐ ತನಿಖೆ ಆರಂಭವಾಗಿದೆ.

Key words:  uttar Pradesh- hatras-rape case- condemning -mysore -Silent protests