ಜಿಂಕೆ ಮಾಂಸ ಸಾಗಣೆ: ಅರಣ್ಯಾಧಿಕಾರಿಗಳಿಂದ ಕಾಡುಗಳ್ಳರಿಬ್ಬರ ಬಂಧನ.

ಹನೂರು,ಜುಲೈ,20,2023(www.justkannada.in): ಜಿಂಕೆ ಮಾಂಸ ಸಾಗಣೆ ಮಾಡುತ್ತಿದ್ದ  ಇಬ್ಬರು ಕಾಡುಗಳ್ಳರನ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ಕೃಷ್ಣಮೂರ್ತಿ ಮತ್ತು ಓರ್ವ ಬಾಲಕ ಬಂಧಿತ ಆರೋಪಿಗಳು. ಅರಣ್ಯ ಪ್ರದೇಶಕ್ಕೆ ಅತಿಕ್ರಮ ಪ್ರವೇಶಿಸಿ ಜಿಂಕೆಯನ್ನ ಬೇಟೆಯಾಡಿ ಕೊಂದು ಮಾಂಸ ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ  ಕೌದಳ್ಳಿ ವಲಯ ಅರಣ್ಯಾಧಿಕಾರಿ ಸುಂದರ್ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರನ್ನ ಬಂಧಿಸಿದ್ದಾರೆ.

ಜಿಂಕೆ ಬೇಟೆಗೆ ಬಳಸಿದ್ದ ಪರಿಕರಗಳ ವಶಕ್ಕೆ ಪಡೆಯಲಾಗಿದ್ದು,  ರಾಮಾಪುರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬಂಧಿತ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Key words: venison-Arrest – two -thieves -forest officials.