ಪಶುವೈದ್ಯೆ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್  ವಿಚಾರ: ಕಾನೂನಿನ ಪ್ರಕಾರವೇ ಕ್ರಮ ಆಗಿದೆ-ಡಿಸಿಎಂ ಗೋವಿಂದ ಕಾರಜೋಳ…

ಬೆಂಗಳೂರು,ಡಿ,6,2019(www.justkannada.in):  ಪಶುವೈದ್ಯೆ ಮೇಲೆ ಅತ್ಯಾಚಾರ ಪ್ರಕರಣದ ಆರೋಪಿಗಳನ್ನ ಎನ್ ಕೌಂಟರ್ ಮಾಡಿದ ಪೊಲೀಸರ ಕಾರ್ಯವನ್ನ ಡಿಸಿಎಂ ಗೋವಿಂದ ಕಾರಜೋಳ ಸ್ವಾಗತಿಸಿದ್ದಾರೆ.

ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿರುವ ಡಿಸಿಎಂ ಗೋವಿಂದ ಕಾರಜೋಳ, ಕಾನೂನಿನ ಪ್ರಕಾರವೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ.  ಮಾಹಿತಿ ಪ್ರಕಾರ. ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪೊಲೀಸರ ವಿರುದ್ದವೇ ಆರೋಪಿಗಳು ತಿರುಗಿ ಬಿದ್ದಿದ್ದು, ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಅನಿವಾರ್ಯವಾಗಿ ಎನ್ ಕೌಂಟರ್ ಮಾಡಿದ್ದಾರೆ. ಇದು ಅತ್ಯಾಚಾರಿಗಳಿಗೆ ತಕ್ಕ ಪಾಠವಾಗಲಿ ಎಂದು ನುಡಿದರು.

Key words: veterinary doctor-rape –accused- enCounter –reaction-DCM Govinda Karajola