‘ವಿಕ್ರಾಂತ್ ರೋಣ’ ಚಿತ್ರದ ಮತ್ತೊಂದು ಲಿರಿಕಲ್ ಹಾಡು ರಿಲೀಸ್

ಬೆಂಗಳೂರು, ಜುಲೈ 13, 2022 (www.justkannada.in): ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ‘ವಿಕ್ರಾಂತ್ ರೋಣ’ ಚಿತ್ರದ ಮತ್ತೊಂದು ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ.

ಈ ಸಾಂಗ್ ನಲ್ಲಿ ಮಾಲಾಶ್ರೀ ಕೂಡಾ ಕಾಣಿಸಿಕೊಂಡಿದ್ದು, ಅಭಿಮಾನಿಗಳ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಅನೂಪ್ ಭಂಡಾರಿ ಸಾಹಿತ್ಯವಿರುವ ಈ ಸಾಂಗ್ ಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ಶಾಲಿನಿ ಆರ್ಟ್ಸ್ ಬ್ಯಾನರ್​ ಅಡಿ ಜಾಕ್​ ಮಂಜು ಚಿತ್ರ ನಿರ್ಮಾಣ ಮಾಡಿದ್ದಾರೆ.

ವಿಕ್ರಾಂತ್ ರೋಣ ಸಿನಿಮಾ ಜುಲೈ 28ರಂದು ತೆರೆಗೆ ಬರುತ್ತಿದೆ. ಚಿತ್ರ ಬಿಡುಗಡೆಯಾಗಿ ಕಿಚ್ಚನ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಚಿತ್ರದಲ್ಲಿ ಸುದೀಪ್‌ ಜತೆಗೆ ಜಾಕ್ವೆಲಿನ್‌ ಫರ್ನಾಂಡೀಸ್‌, ನಿರೂಪ್​ ಭಂಡಾರಿ, ನೀತಾ ಅಶೋಕ್ ನಟಿಸಿದ್ದು 3ಡಿ ಅವತರಣಿಕೆಯಲ್ಲಿ ಈ ಚಿತ್ರ ಮೂಡಿಬರುತ್ತಿದೆ.