ನಾವು ಸುಖ ಸಂಸಾರ ನಡೆಸುತ್ತಿದ್ದೇವೆ, ವಿಚ್ಛೇದನ ಪ್ರಶ್ನೆ ಇಲ್ಲ: ಗಾಳಿ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ ಪ್ರಿಯಾಮಣಿ

ಬೆಂಗಳೂರು, ಆಗಸ್ಟ್ 19, 2022 (www.justkannada.in): ನಟಿ ಪ್ರಿಯಾಮಣಿ ತಮ್ಮ ಪತಿ ಮುಸ್ತಫಾರಿಂದ ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ವದಂತಿ ಹರಿದಾಡುತ್ತಿದ್ದು, ಈ ಕುರಿತು ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.

ದಾಂಪತ್ಯದಲ್ಲಿ ಬಿರುಕು ಬಂದಿರುವ ಕಾರಣ ಪ್ರಿಯಾಮಣಿ ವಿಚ್ಛೇದನ ಪಡೆಯುತ್ತಿದ್ದಾರೆ. ಅಲ್ಲದೆ ದಂಪತಿ ವಿವಾಹವಾಗಿ ಹಲವು ವರ್ಷಗಳಾದರೂ ಮಕ್ಕಳಾಗದೇ ಇರುವುದು ಮತ್ತೊಂದು ಕಾರಣ ಎಂಬ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದವು.

ದಾಂಪತ್ಯ ಜೀವನದಲ್ಲಿ ನಾವುಗಳು ಸುಖವಾಗಿದ್ದೇವೆ. ವಿಚ್ಛೇದನ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಪ್ರಿಯಾಮಣಿ ತಿಳಿಸಿದ್ದಾರೆ.

ಈ ವದಂತಿ ಕುರಿತು ಪ್ರಿಯಾಮಣಿ ಸ್ಪಷ್ಟನೆ ನೀಡಿದ್ದು, ವಿಚ್ಛೇದನ ವಿಚಾರವನ್ನು ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ. ನಾವುಗಳು ಸುಖವಾಗಿದ್ದೇವೆ. ವಿಚ್ಛೇದನ ಪಡೆಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.