ವಾರಂತ್ಯ ಕರ್ಪ್ಯೂ: ಐತಿಹಾಸಿಕ ಬಾದಾಮಿ ಬನಶಂಕರಿ ದೇವಿ ಜಾತ್ರೆ ರದ್ದು

ಬೆಂಗಳೂರು, ಜನವರಿ 09, 2021 (www.justkannada.in): ವಾರಂತ್ಯ ಕರ್ಪ್ಯೂ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಬನಶಂಕರಿ ದೇವಿ ಜಾತ್ರಾ ಮಹೋತ್ಸವ ರದ್ದಾಗಿದೆ.

ಈ ಬಾರಿ ಸೋಂಕು ಮತ್ತೆ ಹೆಚ್ಚಿರುವ ಹಿನ್ನಲೆ ಈ ಜಾತ್ರೆ ರದ್ದು ಮಾಡುವುದು ಅನಿವಾರ್ಯವಾಗಲಿದೆ’ ಎಂದು ದೇವಸ್ಥಾನದ ಪ್ರಧಾನ ಅರ್ಚಕರು ಮಾಹಿತಿ ನೀಡಿದ್ದಾರೆ.

ಈ ಜಾತ್ರೆ ಮಹೋತ್ಸವವನ್ನ ಜನವರಿ 09 ರಿಂದ 19ರ ವರೆಗೆ ನಡೆಸಲು ನಿರ್ಧರಿಸಲಾಗಿತ್ತು.  ಆದರೆ ಈ ಬಾರಿಯೂ ಸೋಂಕು ಮತ್ತೆ ಹೆಚ್ಚಿರುವ ಹಿನ್ನಲೆ ಈ ಜಾತ್ರೆ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೊರೊನಾ ಸೋಂಕಿನ ಹವಾಳಿ ಹೆಚ್ಚುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಕಠಿಣ ನಿಯಮಗಳನ್ನ ಜಾರಿ ಮಾಡಿದೆ. ಅದ್ರಂತೆ, ವಾರಂತ್ಯ ಕರ್ಪ್ಯೂ ಹಿನ್ನೆಲೆಯಲ್ಲಿ ಸಾಕಷ್ಟು ಜಾತ್ರಾ ಮಹೋತ್ಸವಗಳು ರದ್ದಾಗುತ್ತಿವೆ.