Friday, September 18, 2026

BDA Apartments

ಪತಿಯನ್ನು ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿದ ಪತ್ನಿ BDA JK_Adv BDA Adv
Home Crime ಪತಿಯನ್ನು ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿದ ಪತ್ನಿ

ಪತಿಯನ್ನು ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿದ ಪತ್ನಿ

ಮೈಸೂರು,ಸೆಪ್ಟಂಬರ್,12,2025 (www.justkannada.in): ಪರಿಹಾರದ ಆಸೆಗಾಗಿ ಪತ್ನಿಯು ಪತಿಯನ್ನೇ ಕೊಂದು  ನಂತರ ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಈಗ ಸಿಕ್ಕಿಬಿದ್ದಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.

ಚಿಕ್ಕ ಹೆಜ್ಜೂರು ಗ್ರಾಮದ ನಿವಾಸಿ ವೆಂಕಟಸ್ವಾಮಿ ಹತ್ಯೆಯಾದವರು  ಎಂದು ಗುರುತಿಸಲಾಗಿದೆ. ಪತ್ನಿ ಸಲ್ಲಾಪುರಿ ಎಂಬಾಕೆಯೇ ತನ್ನ ಗಂಡ ವೆಂಕಟಸ್ವಾಮಿಯನ್ನ ಹತ್ಯೆಗೈದು ನಂತರ ಹುಲಿ ಕೊಂದಿದೆ ಎಂದು ನಾಟಕವಾಗಿ ಇದೀಗ ಸಿಕ್ಕಿಬಿದ್ದಿರುವುದು.

ಕಳೆದ ಕೆಲ ವರ್ಷಗಳಿಂದ ಅಡಿಕೆ ತೋಟದಲ್ಲಿ ಕೆಲಸ ಮಾಡಿಕೊಂಡು ಅಲ್ಲೇ ಸಣ್ಣ ಮನೆಯೊಂದನ್ನು ಕಟ್ಟಿಕೊಂಡು ದಂಪತಿಗಳು ವಾಸವಾಗಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಪತಿ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ಸಲ್ಲಾಪುರಿ ಪೊಲೀಸರಿಗೆ ದೂರು ನೀಡಿದ್ದಳು. ಅಷ್ಟೇ ಅಲ್ಲದೆ ಪತಿಯನ್ನು ಹುಲಿ ಎಳೆದುಕೊಂಡು ಹೋಗಿರಬಹುದು ಎಂದು ಅನುಮಾನ ಕೂಡ ವ್ಯಕ್ತಪಡಿಸಿದ್ದಳು

ಈ ಮಧ್ಯೆ ಕೆಲ ದಿನಗಳ ಹಿಂದೆ ಹೆಜ್ಜೂರು ಗ್ರಾಮದ ಬಳಿಯಲ್ಲಿ ಹುಲಿ ಓಡಾಡಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಪತ್ನಿ ಸಲ್ಲಾಪುರಿ ಹುಲಿ ಕೊಂದಿದೆ ಎಂದು ದೂರು ನೀಡಿದ್ದಳು. ದೂರು ಸ್ವೀಕರಿಸಿದ್ದ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ವೆಂಕಟಸ್ವಾಮಿಗೆ ಹುಡುಕಾಡಿದ್ದಾರೆ. ಪರಿಶೀಲನೆ ವೇಳೆ ಪ್ರಾಣಿ ಹೆಜ್ಜೆ ಗುರುತು ಪ್ತತೆಯಾಗಿತ್ತು. ಆದರೇ ಹುಲಿ ಎಲ್ಲೂ ಕಂಡಿರಲಿಲ್ಲ. ಮನೆ ಹಿಂದಿನ ತಿಪ್ಪೆಗುಂಡಿಯಲ್ಲೇ ವೆಂಕಟಸ್ವಾಮಿ ಶವ ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸ್ ವರಸೆಯಲ್ಲಿ ಸಲ್ಲಾಪುರಿ ವಿಚಾರಿಸಿದಾಗ, ಪರಿಹಾರದ ಆಸೆಗೆ ಪತಿಯನ್ನು ಕೊಂದು, ಈ ನಾಟಕ ಆಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಮುದ್ದೆಯಲ್ಲಿ ವಿಷ ಬೆರೆಸಿ ಕೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Key words: Mysore, wife, husband, killed, tiger