ಮನೆಯಲ್ಲಿ ಯಾರು ಇಲ್ಲದ ವೇಳೆ ನವವಿವಾಹಿತೆ ನೇಣಿಗೆ ಶರಣು.

ಕೋಲಾರ,ನವೆಂಬರ್,7,2022(www.justkannada.in): ಮನೆಯಲ್ಲಿ ಯಾರು ಇಲ್ಲದ ವೇಳೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಡಿ.ಕೆ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಗೀತಾ(25) ಆತ್ಮಹತ್ಯೆಗೆ ಶರಣಾದ ವಿವಾಹಿತೆ. ಗೀತಾ ಕಳೆದ ಮೂರು ತಿಂಗಳ ಹಿಂದೆ ಪ್ರವೀಣ್ ಎಂಬುವವರನ್ನ ಪ್ರೀತಿಸಿ ವಿವಾಹವಾಗಿದ್ದು ಈ ಮಧ್ಯೆ ಇಂದು ಮನೆಯಲ್ಲಿ ಯಾರು ಇಲ್ಲದಿರುವಾಗ ನೇಣಿಗೆ ಕೊರಳೊಡ್ಡಿರುವ ಘಟನೆ ನಡೆದಿದೆ.

ಇನ್ನು ಪತಿ ಪ್ರವೀಣ್ ಊಟಕ್ಕೆಂದು ಮನೆಗೆ ಬಂದ ವೇಳೆ ಪತ್ನಿ ಗೀತಾ ನೇಣಿಗೆ ಶರಣಾಗಿರುವುದು ಕಂಡು ಬಂದಿದೆ. ಸ್ಥಳಕ್ಕೆ ಬಂಗಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

Key words: women-surrender – suicide –kolar