ಕೃಷಿ ಹೊಂಡದಲ್ಲಿ ಈಜಲು ಹೋದ ಇಬ್ಬರು ಯುವಕರು ಸಾವು.

ಚಾಮರಾಜನಗರ, ಜೂನ್,9,2025 (www.justkannada.in): ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಹನೂರು ತಾಲ್ಲೂಕಿನ ಆನೆಗುಂದಿ ಗ್ರಾಮದಲ್ಲಿ ನಡೆದಿದೆ.

ಪಿ.ಜಿ ಪಾಳ್ಯ ಗ್ರಾಮದ ಚಾಮರಾಜು(25) ಆಕಾಶ್(22) ಮೃತಪಟ್ಟ ಯುವಕರು. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಯುವಕರು ಸಂಬಂಧಿಕರ ಗೃಹಪ್ರವೇಶಕ್ಕೆಂದು ತವರಿಗೆ ಆಗಮಿಸಿದ್ದರು. ಈ ಮಧ್ಯೆ ದೊಡ್ಡಪ್ಪ ಕೆಂಪರಾಜು ಅವರ ಜಮೀನಿನ ಕೃಷಿ ಹೊಂಡದಲ್ಲಿ ಚಾಮರಾಜು, ಆಕಾಶ್  ಈಜಲು ಹೋಗಿದ್ದಾರೆ.

ಈ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದು ಸ್ಥಳಕ್ಕೆ ಹನೂರು ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.vtu

Key words: Two, young men, died , swimming, Chamarajanagar